ರಾಜಕೀಯ
ಕಾಂಗ್ರೆಸ್-ಜೆಡಿಎಸ್ ಮುಖಂಡರಿಗೆ ವಾರ್ನಿಂಗ್ ಕೊಟ್ಟ ಪರಂ..!
ಸುದ್ದಿದಿನ, ಬೆಂಗಳೂರು : ನಾನು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಮಾತ್ರ ಸಮ್ಮಿಶ್ರ ಸರ್ಕಾರದ ಅವಧಿ ಬಗ್ಗೆ ಮಾತನಾಡುತ್ತಾರೆ. ಆದರೆ ನಮ್ಮನ್ನು ಬಿಟ್ಟು ಕಾಂಗ್ರೆಸ್ ಮತ್ತು ಜೆಡಿಎಸ್ ನ ಮುಖಂಡರು ಯಾವುದೇ ಕಾರಣಕ್ಕೂ ಈ ವಿಚಾರವನ್ನು ಮಾತನಾಡುವಂತಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಖಡಕ್ಕಾಗಿ ವಾರ್ನಿಂಗ್ ಕೊಟ್ಟಿದ್ದಾರೆ.
ಭಾನುವಾರ (ನಿನ್ನೆ) ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ’ ಇನ್ನು ಐದು ವರ್ಷ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ’ ಎಂದು ಹೇಳಿಕೆ ಕೊಟ್ಟಿರುವ ಹಿನ್ನೆಲೆ ಹಾಗೂ ವಿಧಾನ ಪರಿಷತ್ ನ ಹಿರಿಯ ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಸಮ್ಮಿಶ್ರ ಸರ್ಕಾರದ ಬಗ್ಗೆ ಒಬ್ಬೊಬ್ಬರು ಒಂದೊಂದು ಹೇಳಿಕೆ ಕೊಡುವುದು ತೀವ್ರ ಮುಜುಗರಕ್ಕೀಡು ಮಾಡಿದೆ. ಒಬ್ಬರು ಒಂದು ವರ್ಷ, ಇನ್ನೊಬ್ನರು ಆರುತಿಂಗಳು ಮಾತ್ರ ಸರ್ಕಾರ ಅಸ್ತಿತ್ವದಲ್ಲಿರುತ್ತೆ, ಆಮೇಲೆ ಸರ್ಕಾರ ಪತನವಾಗಿತ್ತೆ ಎಂಬ ಹೇಳಿಕೆಗಳನ್ನು ಇನ್ನು ಮುಂದೆಯಾದರೂ ಕೊಡುವುದನ್ನು ನಿಲ್ಲಿಸ ಬೇಕು ಎಂದು ಗಂಭೀರವಾಗಿ ತಿಳಿಸಿದ್ದಾರೆ.