ದಿನದ ಸುದ್ದಿ
ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್
![](https://suddidina.com/wp-content/uploads/2023/09/ganesha_dc_dvg_suddidina.jpg)
ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ ಸ್ನೇಹಿ ಗಣೇಶನ ಹಬ್ಬ ಆಚರಣೆಗೆ ಮುಂದಾಗೋಣ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಪರಿಸರಕ್ಕೆ ಮಾರಕವಾದ ಪಿಓಪಿ ಗಣೇಶ ಮೂರ್ತಿಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು ಯಾರು ಸಹ ಮಾರಾಟ ಮಾಡುವಂತಿಲ್ಲ. ಮಹಾರಾಷ್ಟ್ರದಿಂದ ಪಿಓಪಿ ಗಣೇಶ ಮೂರ್ತಿಗಳನ್ನು ತಂದು ಹರಿಹರದಲ್ಲಿ ಮಾರಾಟ ಮಾಡುತ್ತಿದ್ದ ವೇಳೆ 17 ಮೂರ್ತಿಗಳನ್ನು ವಶಪಡಿಸಿಕೊಂಡು ಮಾರಾಟಗಾರರ ವಿರುದ್ದ ಕಾನೂನು ಕ್ರಮಕ್ಕೆ ಮುಂದಾಗಲಾಗಿದೆ ಎಂದರು.
ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕು ಅಥವಾ ಯಾವುದೇ ಸವಕಳಿ ಇಲ್ಲದ ಬೆಲ್ಲದ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡುವುದರಿಂದ ನಷ್ಟವಿಲ್ಲದೆ ಲಾಭವೇ ಹೆಚ್ಚಿರಲಿದೆ. ಈ ಭಾರಿ ಮೊದಲ ಭಾರಿಗೆ ಜಿಲ್ಲೆಯಲ್ಲಿ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡಲು ಪ್ರೋತ್ಸಾಹ ನೀಡಲಾಗುತ್ತಿದೆ. ಮಂಡ್ಯದಲ್ಲಿ ಈ ಹಿಂದೆ ಕೆಲಸ ಮಾಡುತ್ತಿರುವಾಗ ಅಲ್ಲಿನ ರೈತ ಉತ್ಪಾದಕ ಸಂಸ್ಥೆಯ ಮೂಲಕ ಬೆಲ್ಲದ ಗಣೇಶ ಮೂರ್ತಿ ತಯಾರಿಕೆಗೆ ಪ್ರೋತ್ಸಾಹ ನೀಡುವ ಮೂಲಕ ಉತ್ತೇಜಿಸಲಾಗಿತ್ತು. ಇಂದು ಆ ಸಂಸ್ಥೆಗೆ ಸಾಕಷ್ಟು ಬೇಡಿಕೆ ಬಂದಿದೆ ಎಂದರು.
ಶೂನ್ಯ ನಷ್ಟದ ಬೆಲ್ಲದ ಗಣಪ; ಬೆಲ್ಲದ ಗಣೇಶ ಮೂರ್ತಿಯನ್ನು ರೈತರು ಬೆಳೆದ ಕಬ್ಬಿನಿಂದ ಹಾಲನ್ನು ತೆಗೆದು ಅದರಲ್ಲಿ ಯಾವುದೇ ರಾಸಾಯನಿಕ ಬೆರಸದೇ ಪಾಕವನ್ನು ತಯಾರು ಮಾಡಿ ಈ ಪಾಕದಿಂದ ಗಣೇಶ ಮೂರ್ತಿಯ ಹಚ್ಚಿಗೆ ಬೆರೆಸಿದಾಗ ಅದು ಮೂರ್ತಿಯಾಗುತ್ತದೆ. ಒಂದು ಗಣೇಶ ಮೂರ್ತಿಯನ್ನು ಕನಿಷ್ಠ 2 ಕೆಜಿ ಬೆಲ್ಲದಿಂದ ಮಾಡಬಹುದಾಗಿದೆ. ಇದರಿಂದ ರೈತರಿಗೂ ಆರ್ಥಿಕಾಭಿವೃದ್ದಿಯಾಗಲಿದೆ ಮತ್ತು ರೈತ ಉತ್ಪಾದಕ ಕಂಪನಿಗಳಿಗೂ ಆದಾಯ ಬರಲಿದ್ದು ಆರ್ಥಿಕತೆ ಹಂಚಿಕೆಯಾಗಲಿದೆ. ಇದರಿಂದ ಎಲ್ಲರಿಗೂ ಲಾಭವಾಗಲಿದ್ದು ಖರೀದಿಸಿದ ಗ್ರಾಹಕರಿಗೂ ಯಾವುದೇ ನಷ್ಟ ಉಂಟಾಗುವುದಿಲ್ಲ. ಬೆಲ್ಲದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ವಿಸರ್ಜನೆಯ ದಿನ ಇದೇ ಮೂರ್ತಿಯನ್ನು ಪ್ರಸಾದವನ್ನಾಗಿ ಎಲ್ಲರಿಗೂ ಹಂಚಿಕೆ ಮಾಡಬಹುದಾಗಿದೆ ಎಂದರು.
ದಾವಣಗೆರೆಯಲ್ಲಿಯೇ ತಯಾರು; ಮುಂದಿನ ದಿನಗಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿಯೇ ಬೆಲ್ಲದ ಗಣೇಶ ಮೂರ್ತಿಯನ್ನು ತಯಾರು ಮಾಡಲು ಎಲ್ಲಾ ತಾಂತ್ರಿಕ ನೆರವನ್ನು ರೈತ ಉತ್ಪಾದಕ ಕಂಪನಿಗಳಿಗೆ ಮತ್ತು ಸ್ವ ಸಹಾಯ ಸಂಘಗಳಿಗೆ ಕೊಡಿಸುವ ಮೂಲಕ ಪರಿಸರ ಸ್ನೇಹಿ ಬ್ಯಾಗ್ಗಳ ಉತ್ಪಾದನೆ, ಮದುವೆ ಸಮಾರಂಭಗಳಲ್ಲಿ ನೀಡಲು ಬೆಲ್ಲದ ಹಚ್ಚುಗಳನ್ನು ಸಹ ತಯಾರು ಮಾಡಿಸುವ ಮೂಲಕ ಜಿಲ್ಲೆಯ ಜನರಿಗೆ ಆರ್ಥಿಕಾಭಿವೃದ್ದಿ ಮತ್ತು ಜಿಲ್ಲೆಯನ್ನು ಆರ್ಥಿಕಾಭಿವೃದ್ದಿಯತ್ತ ಕೊಂಡೊಯ್ಯಲು ಉದ್ದೇಶಿಸಲಾಗಿದೆ ಎಂದರು.
ಮಣ್ಣಿನ ಗಣೇಶ ಮೂರ್ತಿ ಮಾರಾಟವಾಗುವ ಸ್ಥಳದಲ್ಲಿಯೇ ಈ ಭಾರಿ ಬೆಲ್ಲದ ಮೂರ್ತಿಗಳು ಲಭಿಸುವಂತೆ ಮಾಡಲು ಮಹಾನಗರ ಪಾಲಿಕೆ ಹಾಗೂ ಪರಿಸರ ಇಲಾಖೆಯಿಂದ ಬೆಲ್ಲದ ಗಣೇಶ ಮೂರ್ತಿಗಳನ್ನು ತರಿಸಿಕೊಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಏಕಗವಾಕ್ಷಿ
ಗಣೇಶ ಮೂರ್ತಿಯನ್ನು ಸಾರ್ವಜನಿಕವಾಗಿ ಪ್ರತಿಷ್ಟಾಪನೆ ಮಾಡಲು ಅಗತ್ಯ ಅನುಮತಿಗಾಗಿ ದಾವಣಗೆರೆ ಜಿಲ್ಲೆಯಲ್ಲಿ 7 ಕಡೆ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. ದಾವಣಗೆರೆ ಬಡಾವಣೆ ಠಾಣೆ, ಹರಿಹರ ನಗರಸಭಾ ಕಾರ್ಯಾಲಯ, ಮಲೆಬೆನ್ನೂರು ಪುರಸಭಾ ಕಚೇರಿ, ಜಗಳೂರು ಪೊಲೀಸ್ ಠಾಣೆ, ಹೊನ್ನಾಳಿ ಪೊಲೀಸ್ ಠಾಣೆ, ನ್ಯಾಮತಿ ಪೊಲೀಸ್ ಠಾಣೆ, ಚನ್ನಗಿರಿ ಪೊಲೀಸ್ ಠಾಣೆ ಇಲ್ಲಿ ಅನುಮತಿ ಪಡೆಯಬಹುದಾಗಿದ್ದು ಇಲ್ಲಿಯವರೆಗೆ ನೀಡಲಾದ 239 ಪರವಾನಗಿಯಲ್ಲಿ ದಾವಣಗೆರೆಯಲ್ಲಿ 217, ಹರಿಹರ 9, ಮಲೆಬೆನ್ನೂರು 2, ಜಗಳೂರು 6, ನ್ಯಾಮತಿ 1, ಹೊನ್ನಾಳಿ 1, ಚನ್ನಗಿರಿ 3 ಪರವಾನಗಿ ನೀಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪಾಲಿಕೆ ಆಯುಕ್ತರಾದ ರೇಣುಕಾ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಮಹಂತೇಶ್, ಪರಿಸರ ಅಧಿಕಾರಿ ಲಕ್ಷ್ಮಿಕಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!