ದಿನದ ಸುದ್ದಿ
ಭಾಗ-1 | ದೆಹಲಿ ಹೋರಾಟದ ಕೆಲವು ಅಸಲೀ ಸಂಗತಿಗಳು; ಕಿಸಾನ್ ಮೋರ್ಚಾ ಏನು ಹೇಳುತ್ತಿದೆ..?
ದೆಹಲಿಯ ಸುತ್ತ ನಡೆಯುತ್ತಿರುವ ರೈತ ಹೋರಾಟದ ಎಲ್ಲಾ ವಿವರಗಳೂ, ಅದನ್ನು ಅಭಿಮಾನದಿಂದ ಬೆಂಬಲಿಸುವ ನಮ್ಮೆಲ್ಲರಿಗೆ ಗೊತ್ತಿರುವುದು ಸಾಧ್ಯವಿಲ್ಲ. ನಿಜ ಏನೆಂದರೆ, ಅಲ್ಲೇ ಹತ್ತಿರದಲ್ಲಿರುವವರಿಗೂ ಎಲ್ಲವೂ ಗೊತ್ತಾಗಿರುತ್ತದೆಂದು ಹೇಳುವುದು ಸಾಧ್ಯವಿಲ್ಲ. ಹೀಗಿರುವಾಗ ಮೊನ್ನೆ 26ರಂದು ನಡೆದ ಘಟನೆಯ ಕುರಿತೂ ಹಲವರಿಗೆ ಅನುಮಾನಗಳು, ಪ್ರಶ್ನೆಗಳು ಬರುವುದು ಸಹಜ.
ಹಾಗಾಗಿ ಕೆಲವು ಪ್ರಶ್ನೋತ್ತರಗಳ ಮುಖಾಂತರ ಸಂಪೂರ್ಣ ಮಾಹಿತಿಯನ್ನು ತಿಳಿಸಲು ಇಲ್ಲಿ ಪ್ರಯತ್ನಿಸಲಾಗಿದೆ. ಕಳೆದ ಒಂದು ತಿಂಗಳಿಂದ ದೆಹಲಿಯಲ್ಲಿರುವ ನಮ್ಮ ಮೂವರು ಮಾಧ್ಯಮ ಕಾರ್ಯಕರ್ತರು ನೀಡಿದ ಮಾಹಿತಿ, ಜನವರಿ 26ರಂದು ರೈತರ ಒಂದು ಗುಂಪು ಸಿಂಘು ಗಡಿಯಿಂದ ಪೂರ್ವನಿಗದಿತ ಸಮಯಕ್ಕಿಂತ ಮುಂಚೆಯೇ ಹೊರಟಾಗಿನಿಂದ ಕೆಂಪು ಕೋಟೆಯ ಬಳಿ ಧ್ವಜ ಹಾರಿಸುವತನಕವೂ ಅದನ್ನು ಫಾಲೋ ಮಾಡಿದ ಮೂವರು ಪತ್ರಕರ್ತರು ನೀಡಿದ ಮಾಹಿತಿ ಮತ್ತು ಈ ಹೋರಾಟದ ಮುಂಚೂಣಿಯಲ್ಲಿರುವ ದರ್ಶನ್ ಪಾಲ್, ಯೋಗೇಂದ್ರ ಯಾದವ್, ಜಗಮೋಹನ್ ಮುಂತಾದವರು ಹಾಗೂ ಅವರ ಸಂಗಾತಿಗಳಿಂದ ಪಡೆದ ಮಾಹಿತಿಯು ಇದಕ್ಕೆ ಆಧಾರವಾಗಿದೆ.
ಪ್ರಶ್ನೆ: ದೆಹಲಿಯಲ್ಲಿ ಬಂದು ಕುಳಿತ ಈ ರೈತ ಹೋರಾಟಕ್ಕೆ ಕರೆ ನೀಡಿದವರಾರು? ಇದರ ನೇತೃತ್ವ ಯಾರದ್ದು?
ಉತ್ತರ: 2018ರಿಂದಲೇ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಎಐಕೆಎಸ್ಸಿಸಿ-ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿ (ಆರಂಭವಾದಾಗಲೇ 170 ರೈತ ಸಂಘಟನೆಗಳು ಇದರ ಭಾಗವಾಗಿದ್ದವು, ಈಗ 300ಕ್ಕೂ ಹೆಚ್ಚಿವೆ) ನವೆಂಬರ್ 25 & 26ಕ್ಕೆ ದೆಹಲಿ ಚಲೋ ಎಂದು ಕರೆ ನೀಡಿತ್ತು. ಈ ಸಮನ್ವಯ ಸಮಿತಿಯ ಪ್ರಕ್ರಿಯೆಯನ್ನು ಆರಂಭಿಸಿದ್ದು ಯೋಗೇಂದ್ರ ಯಾದವ್ ಅವರಾದರೂ, ಇದರಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಎರಡೂ ಗುಂಪುಗಳು, ಹಲವು ಬಿಕೆಯುಗಳು (ಭಾರತೀಯ ಕಿಸಾನ್ ಯೂನಿಯನ್), ಎಡಪಕ್ಷಗಳ ರೈತಸಂಘಗಳು ಸೇರಿದಂತೆ ಹಲವಾರು ಸಂಘಟನೆಗಳು ಇವೆ.
ಎಐಕೆಎಸ್ಸಿಸಿ ಕರೆ ನೀಡುವ ಹೊತ್ತಿಗೆ ಪಂಜಾಬಿನಲ್ಲಿ ಜೂನ್ ತಿಂಗಳಿಂದ ಶುರುವಾಗಿ ತೀವ್ರಗೊಳ್ಳುತ್ತಿದ್ದ ರೈತ ಹೋರಾಟವು ಆ ರಾಜ್ಯದ ಮಟ್ಟಿಗೆ ತಾರ್ಕಿಕ ಅಂತ್ಯ ಕಂಡಿತ್ತು. ಏಕೆಂದರೆ ಅಲ್ಲಿನ ರಾಜ್ಯ ಸಕರ್ಾರವು ವಿಧಾನಸಭೆಯಲ್ಲಿ ಒಕ್ಕೂಟ ಸಕರ್ಾರದ ಕಾಯ್ದೆಗಳಿಗೆ ವಿರುದ್ಧವಾಗಿ ಸರ್ವಾನುಮತದಿಂದ ಬೇರೆ ಕಾಯ್ದೆಗಳನ್ನು ಅಂಗೀಕರಿಸಿಯಾಗಿತ್ತು. ಹಾಗಾಗಿ ಇನ್ನು ಒಕ್ಕೂಟ ಸಕರ್ಾರದ ಮೇಲೆ ಒತ್ತಡ ತಂದರೆ ಮಾತ್ರ ಪರಿಹಾರ ಎಂಬುದು ಅವರಿಗೆ ಖಚಿತವಾಗಿತ್ತು.
ಜೂನ್ ತಿಂಗಳಿಂದ ನಡೆದ ಹೋರಾಟದಲ್ಲಿ ಪಂಜಾಬಿನ ಬಹುತೇಕ (32) ರೈತ ಸಂಘಟನೆಗಳು ಸಮನ್ವಯಕ್ಕೆ ಬಂದಾಗಿತ್ತು. ಅವರೆಲ್ಲರೂ ಇದೇ ನವೆಂಬರ್ 25, 26ಕ್ಕೇ ದೆಹಲಿಗೆ ದೊಡ್ಡ ಸಂಖ್ಯೆಯಲ್ಲಿ ಹೋಗಬೇಕು ಮತ್ತು ದೆಹಲಿಯಲ್ಲೇ ಉಳಿಯಲು ಬೇಕಾದ ವ್ಯವಸ್ಥೆ ಮಾಡಿಕೊಂಡೇ ಹೋಗಬೇಕೆಂದು ತೀಮರ್ಾನ ಮಾಡಿದರು. ಪಂಜಾಬಿನ ಸಮನ್ವಯ ಹಾಗೂ ಅಖಿಲ ಭಾರತ ರೈತ ಹೋರಾಟಗಳ ಸಮನ್ವಯದ ಮಧ್ಯೆ (ಏನೇ ಕೊರತೆಗಳಿದ್ದರೂ) ಮಾತುಕತೆ, ಸಮನ್ವಯ ಸಮಿತಿಯೂ ಏರ್ಪಾಟಾಗಿತ್ತು.
ಆದರೆ ಏಐಕೆಎಸ್ಸಿಸಿಯ ಭಾಗವಾಗಿರದ ಹಲವು ಸಂಘಟನೆಗಳೂ ಪಂಜಾಬಿನಿಂದ ಬಂದಿದ್ದರಿಂದ, ಅಂತಿಮವಾಗಿ ಎಲ್ಲರನ್ನೂ ಪ್ರತಿನಿಧಿಸುವ ಸಂಯುಕ್ತ್ ಕಿಸಾನ್ ಮೋಚರ್ಾ ರೂಪಿತವಾಯಿತು. ಉತ್ತರ ಪ್ರದೇಶದ ಇನ್ನೊಂದು ದೊಡ್ಡ ಸಂಘಟನೆಯಾದ ಬಿಕೆಯು (ಟಿಕಾಯತ್) ಇದರಲ್ಲಿ ಇರಲಿಲ್ಲ. ಹಾಗೆಯೇ ಈಗ ಜನವರಿ 26ರಂದು ದೆಹಲಿಯ ಕೇಂದ್ರಭಾಗ ಮತ್ತು ಕೆಂಪುಕೋಟೆಯ ಬಳಿ ಹೋದ ಸಂಘಟನೆಯೂ ಸಂಯುಕ್ತ್ ಕಿಸಾನ್ ಮೋರ್ಚಾದ ಭಾಗ ಆಗಿರಲಿಲ್ಲ.
ಪ್ರಶ್ನೆ: ಹಾಗಾದರೆ ಈ ರೈತರು ದೆಹಲಿಗೆ ಬಂದಾಗ ಪೊಲೀಸರು ಸೂಚಿಸಿದ ಮೈದಾನಕ್ಕೆ ಹೋಗುವ ವಿಚಾರದಲ್ಲಿ ಗೊಂದಲವೇರ್ಪಟ್ಟಿದ್ದೇಕೆ?
ಉತ್ತರ: ಈ ಹೋರಾಟದ ನಾಯಕರು ಅತ್ಯಂತ ವಿನಮ್ರವಾಗಿ ಹೇಳುವುದೇನೆಂದರೆ ನಾಯಕತ್ವ ತಪ್ಪು ನಿರ್ಧಾರ ತೆಗೆದುಕೊಂಡಿತ್ತು, ಜನರು ದಾರಿ ತೋರಿಸಿದರು. ಹೌದು, ಪಂಜಾಬಿನಿಂದ ಹೊರಟ ರೈತರು ದಾರಿಯಲ್ಲಿ ಹಾಕಿದ್ದ ಬ್ಯಾರಿಕೇಡ್ಗಳನ್ನು ಪಕ್ಕಕ್ಕೆ ಸರಿಸಿ ಅಥವಾ ಕಂದಕಗಳನ್ನು ದಾಟಿ ಬಂದ ಚಿತ್ರ ನೀವು ನೋಡಿರುತ್ತೀರಿ. ಅದು ನಾಯಕತ್ವದ ತೀರ್ಮಾನವಾಗಿರಲಿಲ್ಲ. ಎಲ್ಲಿ ತಡೆಯುತ್ತಾರೋ ಅಲ್ಲೇ ಅನಿರ್ದಿಷ್ಟಾವಧಿ ಕೂರುವುದು ಮಾತ್ರ ಅವರ ತೀಮರ್ಾನವಾಗಿತ್ತು. ಆದರೆ ಪಂಜಾಬಿನ ರೈತರು ದೆಹಲಿಯ ಕಡೆಗೆ ಹೋಗಲೇಬೇಕೆಂದು ತೀರ್ಮಾನಿಸಿ ಅವನ್ನು ದಾಟಿದರು.
ಹಾಗೆಯೇ ಮೇಲೆ ಹೇಳಲಾದ ಸಮನ್ವಯ ಸಮಿತಿಯ ಸರ್ವಾ ನುಮತದ ತೀರ್ಮಾನವೇನೆಂದರೆ ದೆಹಲಿ ಪೊಲೀಸರು ಸೂಚಿಸಿದ ಮೈದಾನಕ್ಕೆ ಹೋಗುವುದು ಎಂದಾಗಿತ್ತು. ಟ್ರ್ಯಾಕ್ಟರ್ ಸಾಲಿನಲ್ಲಿ ಹಿಂದೆ ಉಳಿದಿದ್ದ ಪಂಜಾಬಿನ ರೈತ ನಾಯಕರ ಗಮನಕ್ಕೆ ಬಂದಂತೆ ದೆಹಲಿಯ ಗಡಿ ತಲುಪಿದ ರೈತರು ಮೈದಾನಕ್ಕೆ ಹೋಗಲು ನಿರಾಕರಿಸಿದರು. ಅವರು ದೆಹಲಿಯಲ್ಲಿದ್ದ ಯೋಗೇಂದ್ರ ಯಾದವ್ ಮತ್ತಿತರರನ್ನು ಗಡಿಗೆ ಹೋಗಿ ರೈತರ ಮನವೊಲಿಸಲು ಸೂಚಿಸಿದರು.
ಆದರೆ ಗಡಿಗೆ ಹೋದ ಅವರಿಗೆ ಗೊತ್ತಾದದ್ದೇನೆಂದರೆ ರೈತರನ್ನು ಮನವೊಲಿಸುವುದು ಸಾಧ್ಯವೇ ಇಲ್ಲ ಎಂದು. ಅಂತಿಮವಾಗಿ ರೈತರು ಹೇಳಿದ್ದೇ ಸರಿ ಎಂಬುದು ಈ ನಾಯಕರುಗಳ ಅಭಿಪ್ರಾಯ. ವಿವಿಧ ಗಡಿಗಳಲ್ಲಿ ಲಕ್ಷಗಟ್ಟಲೆ ರೈತರು ಕೂತರು. ಐತಿಹಾಸಿಕ ಹೋರಾಟವು ಆರಂಭವಾಯಿತು.
ಪ್ರಶ್ನೆ: ಬಹುತೇಕ ಪಂಜಾಬ್ ಮತ್ತು ಹರಿಯಾಣಗಳ ರೈತರೇ ಇಲ್ಲಿ ಹೆಚ್ಚಿದ್ದಾರೆ, ಆದರೆ ಇಡೀ ದೇಶದಲ್ಲಿ ಅಲ್ಲಲ್ಲಿ ಪೂರಕವಾದ ಪ್ರತಿಭಟನೆಗಳು ನಡೆಯುತ್ತಿವೆ ಎಂಬುದೇನೋ ಸರಿ. ಆದರೆ ಇಡೀ ದೇಶದ ಪರವಾಗಿ ಇದು ನಡೆಯುತ್ತಿದೆ ಎನ್ನುವುದಾದರೆ ಸರ್ಕಾರದ ಜೊತೆ ಮಾತುಕತೆಯಲ್ಲಿ ದೇಶದ ಉಳಿದ ಭಾಗಗಳ ಪ್ರತಿನಿಧಿಗಳು ಏಕಿಲ್ಲ?
ಉತ್ತರ: ಇದ್ದಾರೆ. ಈಗ ಬೆಂಗಳೂರಿನಲ್ಲಿ ವಾಸಿಸುವ, ಆಂಧ್ರದ ಆಶಾ ಕಿಸಾನ್ ಆಂದೋಲನದ ಕವಿತಾ ಕುರಗಂಟಿ ಹೆಚ್ಚಿನ ಮಾತುಕತೆಗಳ ಭಾಗವಾಗಿದ್ದಾರೆ. ಅಖಿಲ ಭಾರತ ಕಿಸಾನ್ ಸಭಾದ ಹನ್ನನ್ ಮೊಲ್ಲಾ (ಇವರು ಪಶ್ಚಿಮ ಬಂಗಾಳದವರು), ಹರಿಯಾಣಾ ಮೂಲದವರಾದ, ಆದರೆ ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿಯನ್ನು ಪ್ರತಿನಿಧಿಸುವ ಯೋಗೇಂದ್ರ ಯಾದವ್ ಈ ಹೋರಾಟದ 7 ಜನರ ಉನ್ನತ ಸಮಿತಿಯ ಭಾಗವಾಗಿದ್ದಾರೆ.
ಭಾಗ-2: ಮುಂದುವರಿದಿದೆ
ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ3 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ3 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

