Connect with us

ದಿನದ ಸುದ್ದಿ

ಭಾಗ-1 | ದೆಹಲಿ ಹೋರಾಟದ ಕೆಲವು ಅಸಲೀ ಸಂಗತಿಗಳು; ಕಿಸಾನ್ ಮೋರ್ಚಾ ಏನು ಹೇಳುತ್ತಿದೆ..?

Published

on

ದೆಹಲಿಯ ಸುತ್ತ ನಡೆಯುತ್ತಿರುವ ರೈತ ಹೋರಾಟದ ಎಲ್ಲಾ ವಿವರಗಳೂ, ಅದನ್ನು ಅಭಿಮಾನದಿಂದ ಬೆಂಬಲಿಸುವ ನಮ್ಮೆಲ್ಲರಿಗೆ ಗೊತ್ತಿರುವುದು ಸಾಧ್ಯವಿಲ್ಲ. ನಿಜ ಏನೆಂದರೆ, ಅಲ್ಲೇ ಹತ್ತಿರದಲ್ಲಿರುವವರಿಗೂ ಎಲ್ಲವೂ ಗೊತ್ತಾಗಿರುತ್ತದೆಂದು ಹೇಳುವುದು ಸಾಧ್ಯವಿಲ್ಲ. ಹೀಗಿರುವಾಗ ಮೊನ್ನೆ 26ರಂದು ನಡೆದ ಘಟನೆಯ ಕುರಿತೂ ಹಲವರಿಗೆ ಅನುಮಾನಗಳು, ಪ್ರಶ್ನೆಗಳು ಬರುವುದು ಸಹಜ.

ಹಾಗಾಗಿ ಕೆಲವು ಪ್ರಶ್ನೋತ್ತರಗಳ ಮುಖಾಂತರ ಸಂಪೂರ್ಣ ಮಾಹಿತಿಯನ್ನು ತಿಳಿಸಲು ಇಲ್ಲಿ ಪ್ರಯತ್ನಿಸಲಾಗಿದೆ. ಕಳೆದ ಒಂದು ತಿಂಗಳಿಂದ ದೆಹಲಿಯಲ್ಲಿರುವ ನಮ್ಮ ಮೂವರು ಮಾಧ್ಯಮ ಕಾರ್ಯಕರ್ತರು ನೀಡಿದ ಮಾಹಿತಿ, ಜನವರಿ 26ರಂದು ರೈತರ ಒಂದು ಗುಂಪು ಸಿಂಘು ಗಡಿಯಿಂದ ಪೂರ್ವನಿಗದಿತ ಸಮಯಕ್ಕಿಂತ ಮುಂಚೆಯೇ ಹೊರಟಾಗಿನಿಂದ ಕೆಂಪು ಕೋಟೆಯ ಬಳಿ ಧ್ವಜ ಹಾರಿಸುವತನಕವೂ ಅದನ್ನು ಫಾಲೋ ಮಾಡಿದ ಮೂವರು ಪತ್ರಕರ್ತರು ನೀಡಿದ ಮಾಹಿತಿ ಮತ್ತು ಈ ಹೋರಾಟದ ಮುಂಚೂಣಿಯಲ್ಲಿರುವ ದರ್ಶನ್ ಪಾಲ್, ಯೋಗೇಂದ್ರ ಯಾದವ್, ಜಗಮೋಹನ್ ಮುಂತಾದವರು ಹಾಗೂ ಅವರ ಸಂಗಾತಿಗಳಿಂದ ಪಡೆದ ಮಾಹಿತಿಯು ಇದಕ್ಕೆ ಆಧಾರವಾಗಿದೆ.

ಪ್ರಶ್ನೆ: ದೆಹಲಿಯಲ್ಲಿ ಬಂದು ಕುಳಿತ ಈ ರೈತ ಹೋರಾಟಕ್ಕೆ ಕರೆ ನೀಡಿದವರಾರು? ಇದರ ನೇತೃತ್ವ ಯಾರದ್ದು?

ಉತ್ತರ: 2018ರಿಂದಲೇ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಎಐಕೆಎಸ್ಸಿಸಿ-ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿ (ಆರಂಭವಾದಾಗಲೇ 170 ರೈತ ಸಂಘಟನೆಗಳು ಇದರ ಭಾಗವಾಗಿದ್ದವು, ಈಗ 300ಕ್ಕೂ ಹೆಚ್ಚಿವೆ) ನವೆಂಬರ್ 25 & 26ಕ್ಕೆ ದೆಹಲಿ ಚಲೋ ಎಂದು ಕರೆ ನೀಡಿತ್ತು. ಈ ಸಮನ್ವಯ ಸಮಿತಿಯ ಪ್ರಕ್ರಿಯೆಯನ್ನು ಆರಂಭಿಸಿದ್ದು ಯೋಗೇಂದ್ರ ಯಾದವ್ ಅವರಾದರೂ, ಇದರಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಎರಡೂ ಗುಂಪುಗಳು, ಹಲವು ಬಿಕೆಯುಗಳು (ಭಾರತೀಯ ಕಿಸಾನ್ ಯೂನಿಯನ್), ಎಡಪಕ್ಷಗಳ ರೈತಸಂಘಗಳು ಸೇರಿದಂತೆ ಹಲವಾರು ಸಂಘಟನೆಗಳು ಇವೆ.

ಎಐಕೆಎಸ್ಸಿಸಿ ಕರೆ ನೀಡುವ ಹೊತ್ತಿಗೆ ಪಂಜಾಬಿನಲ್ಲಿ ಜೂನ್ ತಿಂಗಳಿಂದ ಶುರುವಾಗಿ ತೀವ್ರಗೊಳ್ಳುತ್ತಿದ್ದ ರೈತ ಹೋರಾಟವು ಆ ರಾಜ್ಯದ ಮಟ್ಟಿಗೆ ತಾರ್ಕಿಕ ಅಂತ್ಯ ಕಂಡಿತ್ತು. ಏಕೆಂದರೆ ಅಲ್ಲಿನ ರಾಜ್ಯ ಸಕರ್ಾರವು ವಿಧಾನಸಭೆಯಲ್ಲಿ ಒಕ್ಕೂಟ ಸಕರ್ಾರದ ಕಾಯ್ದೆಗಳಿಗೆ ವಿರುದ್ಧವಾಗಿ ಸರ್ವಾನುಮತದಿಂದ ಬೇರೆ ಕಾಯ್ದೆಗಳನ್ನು ಅಂಗೀಕರಿಸಿಯಾಗಿತ್ತು. ಹಾಗಾಗಿ ಇನ್ನು ಒಕ್ಕೂಟ ಸಕರ್ಾರದ ಮೇಲೆ ಒತ್ತಡ ತಂದರೆ ಮಾತ್ರ ಪರಿಹಾರ ಎಂಬುದು ಅವರಿಗೆ ಖಚಿತವಾಗಿತ್ತು.

ಜೂನ್ ತಿಂಗಳಿಂದ ನಡೆದ ಹೋರಾಟದಲ್ಲಿ ಪಂಜಾಬಿನ ಬಹುತೇಕ (32) ರೈತ ಸಂಘಟನೆಗಳು ಸಮನ್ವಯಕ್ಕೆ ಬಂದಾಗಿತ್ತು. ಅವರೆಲ್ಲರೂ ಇದೇ ನವೆಂಬರ್ 25, 26ಕ್ಕೇ ದೆಹಲಿಗೆ ದೊಡ್ಡ ಸಂಖ್ಯೆಯಲ್ಲಿ ಹೋಗಬೇಕು ಮತ್ತು ದೆಹಲಿಯಲ್ಲೇ ಉಳಿಯಲು ಬೇಕಾದ ವ್ಯವಸ್ಥೆ ಮಾಡಿಕೊಂಡೇ ಹೋಗಬೇಕೆಂದು ತೀಮರ್ಾನ ಮಾಡಿದರು. ಪಂಜಾಬಿನ ಸಮನ್ವಯ ಹಾಗೂ ಅಖಿಲ ಭಾರತ ರೈತ ಹೋರಾಟಗಳ ಸಮನ್ವಯದ ಮಧ್ಯೆ (ಏನೇ ಕೊರತೆಗಳಿದ್ದರೂ) ಮಾತುಕತೆ, ಸಮನ್ವಯ ಸಮಿತಿಯೂ ಏರ್ಪಾಟಾಗಿತ್ತು.

ಆದರೆ ಏಐಕೆಎಸ್ಸಿಸಿಯ ಭಾಗವಾಗಿರದ ಹಲವು ಸಂಘಟನೆಗಳೂ ಪಂಜಾಬಿನಿಂದ ಬಂದಿದ್ದರಿಂದ, ಅಂತಿಮವಾಗಿ ಎಲ್ಲರನ್ನೂ ಪ್ರತಿನಿಧಿಸುವ ಸಂಯುಕ್ತ್ ಕಿಸಾನ್ ಮೋಚರ್ಾ ರೂಪಿತವಾಯಿತು. ಉತ್ತರ ಪ್ರದೇಶದ ಇನ್ನೊಂದು ದೊಡ್ಡ ಸಂಘಟನೆಯಾದ ಬಿಕೆಯು (ಟಿಕಾಯತ್) ಇದರಲ್ಲಿ ಇರಲಿಲ್ಲ. ಹಾಗೆಯೇ ಈಗ ಜನವರಿ 26ರಂದು ದೆಹಲಿಯ ಕೇಂದ್ರಭಾಗ ಮತ್ತು ಕೆಂಪುಕೋಟೆಯ ಬಳಿ ಹೋದ ಸಂಘಟನೆಯೂ ಸಂಯುಕ್ತ್ ಕಿಸಾನ್ ಮೋರ್ಚಾದ ಭಾಗ ಆಗಿರಲಿಲ್ಲ.

ಪ್ರಶ್ನೆ: ಹಾಗಾದರೆ ಈ ರೈತರು ದೆಹಲಿಗೆ ಬಂದಾಗ ಪೊಲೀಸರು ಸೂಚಿಸಿದ ಮೈದಾನಕ್ಕೆ ಹೋಗುವ ವಿಚಾರದಲ್ಲಿ ಗೊಂದಲವೇರ್ಪಟ್ಟಿದ್ದೇಕೆ?

ಉತ್ತರ: ಈ ಹೋರಾಟದ ನಾಯಕರು ಅತ್ಯಂತ ವಿನಮ್ರವಾಗಿ ಹೇಳುವುದೇನೆಂದರೆ ನಾಯಕತ್ವ ತಪ್ಪು ನಿರ್ಧಾರ ತೆಗೆದುಕೊಂಡಿತ್ತು, ಜನರು ದಾರಿ ತೋರಿಸಿದರು. ಹೌದು, ಪಂಜಾಬಿನಿಂದ ಹೊರಟ ರೈತರು ದಾರಿಯಲ್ಲಿ ಹಾಕಿದ್ದ ಬ್ಯಾರಿಕೇಡ್ಗಳನ್ನು ಪಕ್ಕಕ್ಕೆ ಸರಿಸಿ ಅಥವಾ ಕಂದಕಗಳನ್ನು ದಾಟಿ ಬಂದ ಚಿತ್ರ ನೀವು ನೋಡಿರುತ್ತೀರಿ. ಅದು ನಾಯಕತ್ವದ ತೀರ್ಮಾನವಾಗಿರಲಿಲ್ಲ. ಎಲ್ಲಿ ತಡೆಯುತ್ತಾರೋ ಅಲ್ಲೇ ಅನಿರ್ದಿಷ್ಟಾವಧಿ ಕೂರುವುದು ಮಾತ್ರ ಅವರ ತೀಮರ್ಾನವಾಗಿತ್ತು. ಆದರೆ ಪಂಜಾಬಿನ ರೈತರು ದೆಹಲಿಯ ಕಡೆಗೆ ಹೋಗಲೇಬೇಕೆಂದು ತೀರ್ಮಾನಿಸಿ ಅವನ್ನು ದಾಟಿದರು.

ಹಾಗೆಯೇ ಮೇಲೆ ಹೇಳಲಾದ ಸಮನ್ವಯ ಸಮಿತಿಯ ಸರ್ವಾ ನುಮತದ ತೀರ್ಮಾನವೇನೆಂದರೆ ದೆಹಲಿ ಪೊಲೀಸರು ಸೂಚಿಸಿದ ಮೈದಾನಕ್ಕೆ ಹೋಗುವುದು ಎಂದಾಗಿತ್ತು. ಟ್ರ್ಯಾಕ್ಟರ್ ಸಾಲಿನಲ್ಲಿ ಹಿಂದೆ ಉಳಿದಿದ್ದ ಪಂಜಾಬಿನ ರೈತ ನಾಯಕರ ಗಮನಕ್ಕೆ ಬಂದಂತೆ ದೆಹಲಿಯ ಗಡಿ ತಲುಪಿದ ರೈತರು ಮೈದಾನಕ್ಕೆ ಹೋಗಲು ನಿರಾಕರಿಸಿದರು. ಅವರು ದೆಹಲಿಯಲ್ಲಿದ್ದ ಯೋಗೇಂದ್ರ ಯಾದವ್ ಮತ್ತಿತರರನ್ನು ಗಡಿಗೆ ಹೋಗಿ ರೈತರ ಮನವೊಲಿಸಲು ಸೂಚಿಸಿದರು.

ಆದರೆ ಗಡಿಗೆ ಹೋದ ಅವರಿಗೆ ಗೊತ್ತಾದದ್ದೇನೆಂದರೆ ರೈತರನ್ನು ಮನವೊಲಿಸುವುದು ಸಾಧ್ಯವೇ ಇಲ್ಲ ಎಂದು. ಅಂತಿಮವಾಗಿ ರೈತರು ಹೇಳಿದ್ದೇ ಸರಿ ಎಂಬುದು ಈ ನಾಯಕರುಗಳ ಅಭಿಪ್ರಾಯ. ವಿವಿಧ ಗಡಿಗಳಲ್ಲಿ ಲಕ್ಷಗಟ್ಟಲೆ ರೈತರು ಕೂತರು. ಐತಿಹಾಸಿಕ ಹೋರಾಟವು ಆರಂಭವಾಯಿತು.

ಪ್ರಶ್ನೆ: ಬಹುತೇಕ ಪಂಜಾಬ್ ಮತ್ತು ಹರಿಯಾಣಗಳ ರೈತರೇ ಇಲ್ಲಿ ಹೆಚ್ಚಿದ್ದಾರೆ, ಆದರೆ ಇಡೀ ದೇಶದಲ್ಲಿ ಅಲ್ಲಲ್ಲಿ ಪೂರಕವಾದ ಪ್ರತಿಭಟನೆಗಳು ನಡೆಯುತ್ತಿವೆ ಎಂಬುದೇನೋ ಸರಿ. ಆದರೆ ಇಡೀ ದೇಶದ ಪರವಾಗಿ ಇದು ನಡೆಯುತ್ತಿದೆ ಎನ್ನುವುದಾದರೆ ಸರ್ಕಾರದ ಜೊತೆ ಮಾತುಕತೆಯಲ್ಲಿ ದೇಶದ ಉಳಿದ ಭಾಗಗಳ ಪ್ರತಿನಿಧಿಗಳು ಏಕಿಲ್ಲ?

ಉತ್ತರ: ಇದ್ದಾರೆ. ಈಗ ಬೆಂಗಳೂರಿನಲ್ಲಿ ವಾಸಿಸುವ, ಆಂಧ್ರದ ಆಶಾ ಕಿಸಾನ್ ಆಂದೋಲನದ ಕವಿತಾ ಕುರಗಂಟಿ ಹೆಚ್ಚಿನ ಮಾತುಕತೆಗಳ ಭಾಗವಾಗಿದ್ದಾರೆ. ಅಖಿಲ ಭಾರತ ಕಿಸಾನ್ ಸಭಾದ ಹನ್ನನ್ ಮೊಲ್ಲಾ (ಇವರು ಪಶ್ಚಿಮ ಬಂಗಾಳದವರು), ಹರಿಯಾಣಾ ಮೂಲದವರಾದ, ಆದರೆ ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿಯನ್ನು ಪ್ರತಿನಿಧಿಸುವ ಯೋಗೇಂದ್ರ ಯಾದವ್ ಈ ಹೋರಾಟದ 7 ಜನರ ಉನ್ನತ ಸಮಿತಿಯ ಭಾಗವಾಗಿದ್ದಾರೆ.

ಭಾಗ-2: ಮುಂದುವರಿದಿದೆ

ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿ

https://suddidina.com/part-2-some-of-the-legitimate-facts-of-the-delhi-fight-what-is-kisan-morcha-saying/

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending