ದಿನದ ಸುದ್ದಿ
ಭಾಗ-2 | ದೆಹಲಿ ಹೋರಾಟದ ಕೆಲವು ಅಸಲೀ ಸಂಗತಿಗಳು; ಕಿಸಾನ್ ಮೋರ್ಚಾ ಏನು ಹೇಳುತ್ತಿದೆ..?
ಮುಂದುವರಿದ ಭಾಗ
ಪ್ರಶ್ನೆ: ಜನವರಿ 26ರಂದು ದೆಹಲಿಯೊಳಕ್ಕೆ ನುಗ್ಗಿ ಹೋದವರ ಕುರಿತು ಸಂಯುಕ್ತ್ ಕಿಸಾನ್ ಮೋರ್ಚ ನೆಗೆಟಿವ್ ಆಗಿ ಏಕೆ ಮಾತಾಡಿತು? ಕೆಂಪುಕೋಟೆಯ ಮೇಲೆ ಬಾವುಟ ಹಾರಿಸಿದರೆ ಏನು ತಪ್ಪು? ಇದರಲ್ಲಿ ಹುನ್ನಾರವಿದೆ ಎಂದು ಏಕೆ ಹೇಳಿದರು?
60 ದಿನಗಳ ಕಾಲ ಕೊರೆಯುವ ಚಳಿಯಲ್ಲಿ ಬೀದಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ನಿಭಾಯಿಸುತ್ತಾ ಹೋರಾಟವೊಂದನ್ನು ನಡೆಸುತ್ತಾ ಹೋಗುವುದು ಬಹಳ ಸಂಕೀರ್ಣವಾದ ಜವಾಬ್ದಾರಿ. ಇದರ ಜೊತೆಗೆ ಕನಿಷ್ಠ ಒಂದೂವರೆ ಲಕ್ಷ ಟ್ರ್ಯಾಕ್ಟರ್ಗಳ, ಅಂದರೆ ಸುಮಾರು 5 ಲಕ್ಷ ಜನರು ಬಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ಯೋಜಿಸಿದ್ದು ಇದೇ ಸಂಯುಕ್ತ್ ಕಿಸಾನ್ ಮೋಚರ್ಾ. ಸುಪ್ರೀಂಕೋರ್ಟ್ ಸೇರಿದಂತೆ ಯಾರೂ ಅದಕ್ಕೆ ಹಸಿರು ನಿಶಾನೆ ತೋರಿಸಿರಲಿಲ್ಲ.
ಒಂದು ಹಂತದಲ್ಲಿ ಸುಪ್ರೀಂಕೋರ್ಟ್ ಇದರ ಬಗ್ಗೆ ಉಲ್ಟಾ ಮಾತಾಡಿತ್ತು. ಆದರೆ ಅಂತಿಮವಾಗಿ ದೆಹಲಿ ಪೊಲೀಸರ ಜೊತೆ ನಡೆದ ಮಾತುಕತೆಯಲ್ಲಿ ಕೆಲವು ನಿರ್ದಿಷ್ಟ ಮಾರ್ಗಗಳ ಕುರಿತು ಪರಸ್ಪರ ಒಪ್ಪಿಗೆಗೆ ಬರಲಾಯಿತು. ಒಂದು ವೇಳೆ ಈ ಟ್ರ್ಯಾಕ್ಟರ್ ಮಾಚರ್್ ಸಂಪೂರ್ಣ ಅಂದುಕೊಂಡ ಹಾಗೆ ನಡೆದಿದ್ದರೆ 26ರ ಹಗಲು, ರಾತ್ರಿ ಅಷ್ಟೇ ಅಲ್ಲದೇ 27ರ ಬೆಳಿಗ್ಗೆಯವರೆಗೂ ಟ್ರ್ಯಾಕ್ಟರ್ ಸಾಲು ಮುಗಿಯುತ್ತಿರಲಿಲ್ಲ.
ಇದಲ್ಲದೇ ಫೆಬ್ರವರಿ 1ಕ್ಕೆ ಶಾಂತಿಯುತವಾಗಿ ಪಾಲರ್ಿಮೆಂಟ್ ಚಲೋವನ್ನೂ, ಜನವರಿ 25ರಂದು ಘೋಷಿಸಲಾಗಿತ್ತು. ಬಜೆಟ್ ಅಧಿವೇಶನ ಶುರುವಾಗುವ ದಿನ (26ಕ್ಕೆ ಬಂದವರಲ್ಲೂ ಲಕ್ಷಾಂತರ ಜನರು ಉಳಿದುಕೊಂಡು) ಪಾರ್ಲಿಮೆಂಟ್ ಚಲೋ ನಡೆಸುವುದು ಅವರ ಉದ್ದೇಶವಾಗಿತ್ತು. ಆದರೆ, ಈ ಮಧ್ಯೆ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿಯ ಕಡೆಯಿಂದ ಜನವರಿ 25ರಂದೇ ವಿಡಿಯೋ ಬಿಡುಗಡೆ ಮಾಡಿ ತಾವು ಜನವರಿ 26ರಂದು ಪೂರ್ವನಿಗದಿತ ಮಾರ್ಗದಲ್ಲಿ ಹೋಗುವುದಿಲ್ಲವೆಂದು ಘೋಷಿಸಿಯಾಗಿತ್ತು.
ಜೊತೆಗೆ ತಾವು ರಿಂಗ್ ರಸ್ತೆಯಲ್ಲೇ ಹೋಗುತ್ತೇವೆಂತಲೂ, ಕೆಂಪುಕೋಟೆಯ ಮೇಲೆ ಬಾವುಟ ಹಾರಿಸುತ್ತೇವೆಂತಲೂ ಹೇಳಿದ್ದರು. ಅವರು ಹಿಂದಿನಿಂದಲೂ ಸಂಯುಕ್ತ್ ಕಿಸಾನ್ ಮೋರ್ಚಾದಲ್ಲಿರಲಿಲ್ಲ. ಜೊತೆಗೆ ದೀಪ್ ಸಿಧುವೂ ಸಂಯುಕ್ತ್ ಕಿಸಾನ್ ಮೋರ್ಚಾದ ಭಾಗವಲ್ಲ.
ಆತ ಸದಾಕಾಲ ಇಲ್ಲಿನ ಸುಸಂಘಟಿತ ವಿಧಾನವನ್ನು ಹಾಳುಮಾಡುವ ಕೆಲಸ ಮಾಡುತ್ತಲೇ ಇದ್ದರು. ಒಂದು ಹಂತದಲ್ಲಿ ರೈತ ನಾಯಕರೊಬ್ಬರು ಈತ ಮತ್ತು ಈತನ ಗೆಳೆಯ ಲಖಾ ಸಿಧಾನಾ (ಈತ ಹಿಂದೆ ಗ್ಯಾಂಗ್ಸ್ಟರ್ ಆಗಿದ್ದು, ಈಗ ಸಾಮಾಜಿಕ ಕಾರ್ಯಕರ್ತನೆಂದು ಹೇಳಿಕೊಳ್ಳುತ್ತಾನೆ) ಇಬ್ಬರೂ ಈ ಹೋರಾಟದ ಶತ್ರುಗಳು ಎಂದು ಘೋಷಿಸಿದ್ದರು.
ಇದಕ್ಕೆ ಕಾರಣ, ಬಿಜೆಪಿ ಜೊತೆಗೂ ಇದ್ದ ಈ ಇಬ್ಬರು ಖಲಿಸ್ತಾನದ ಪರವಾಗಿ ಮಾತನಾಡುವುದು, ಭಿಂದ್ರನ್ವಾಲೆಯ ಮಾತುಗಳನ್ನು ಉಲ್ಲೇಖಿಸುವುದನ್ನು ಮಾಡುತ್ತಲಿದ್ದರು. ಪತ್ರಕತರ್ೆ ಬಖರ್ಾದತ್ ನಡೆಸಿದ ಸಂದರ್ಶನವೊಂದರಲ್ಲೂ ಈತ ಆ ಮಾತುಗಳನ್ನಾಡಿರುವುದನ್ನು ಕೇಳಬಹುದು. ಜೊತೆಗೆ ಲಕ್ಷಾಂತರ ಜನರ ಮನಸ್ಥಿತಿ, ತಯಾರಿ ಹಾಗೂ ಗೆದ್ದುಕೊಂಡೇ ವಾಪಸ್ಸು ಹೋಗಬೇಕು ಎಂಬ ಸರ್ವಾನುಮತದ ಅಭಿಪ್ರಾಯಗಳಿಗೆ ವ್ಯತಿರಿಕ್ತವಾಗಿ ನಿರಂತರವಾಗಿ ವ್ಯಕ್ತಿಗತ ಅನಿಸಿಕೆಗಳನ್ನು ಮುಂದಿಡುವುದು ದೀಪ್ ಸಿಧು ಪ್ರವೃತ್ತಿಯಾಗಿತ್ತು. ಸಂಯುಕ್ತ್ ಕಿಸಾನ್ ಮೋಚರ್ಾದ ಸರ್ವಾನುಮತದಿಂದ ಅಭಿಪ್ರಾಯಕ್ಕೆ ವಿರುದ್ಧವಾಗಿ ಈ ವ್ಯಕ್ತಿ ಜನವರಿ 25ರಂದೂ ಜನರನ್ನು ಉದ್ರೇಕಗೊಳಿಸಲು ಪ್ರಯತ್ನಿಸಿದ್ದರು.
ದೀಪ್ ಸಿಧುವಷ್ಟೇ ಅಲ್ಲದೇ, ಮೇಲೆ ಹೇಳಲಾದ ಇನ್ನೊಂದು ಸಂಘಟನೆಯ ಜನರು ಸಿಂಘು ಬಾರ್ಡರ್ನಲ್ಲಿ ಸೇರಿಕೊಂಡಿದ್ದ ನಿದರ್ಿಷ್ಟ ಸ್ಥಳವೂ ಅನುಮಾನಾಸ್ಪದವಾಗಿತ್ತು. ಸಂಯುಕ್ತ್ ಕಿಸಾನ್ ಮೋಚರ್ಾದ ಅಡಿಯಲ್ಲಿ ಸಂಘಟಿತರಾಗಿರುವ ಲಕ್ಷಾಂತರ ರೈತರಿಗೂ ದೆಹಲಿಗೂ ಮಧ್ಯೆ ಬ್ಯಾರಿಕೇಡ್ಗಳಿದ್ದವು. ಆ ಬ್ಯಾರಿಕೇಡ್ಗಳೀಚೆ ದೆಹಲಿ ಪೊಲೀಸರಿದ್ದರು.
ಅವರಿಗೂ ಈಚೆ ಈ ಸಂಘಟನೆಗೆ ಪ್ರತಿಭಟನೆ ಶುರುವಾದ 13 ದಿನಗಳ ನಂತರ ವಿಶೇಷ ಟೆಂಟ್ಗಳ ಸೌಲಭ್ಯದೊಂದಿಗೆ ಇರಲು ಅವಕಾಶ ಕಲ್ಪಿಸಲಾಗಿತ್ತು. ಅವರ ಪಕ್ಕ ಸುಲಭದಲ್ಲಿ ತೆಗೆಯಬಹುದಾದ ಬ್ಯಾರಿಕೇಡ್ಗಳಿದ್ದವು. ಇವರು ಜನವರಿ 26ರಂದು ನಿಗದಿತ ಸಮಯಕ್ಕಿಂತ ಮುಂಚೆಯೇ ದೆಹಲಿಯೊಳಗೆ ಹೋದಂತೆ ಅಲ್ಲಲ್ಲಿ ಪೊಲೀಸರು ತಡೆದರಾದರೂ, ಅತ್ಯಂತ ಬಿಗಿ ಬಂದೋಬಸ್ತಿನ ಬದಲು ನಿಧಾನಕ್ಕೆ ಇವರನ್ನು ಒಳಕ್ಕೆ ಬಿಟ್ಟುಕೊಂಡಂತೆಯೇ ಕಂಡುಬಂದಿತು.
ಎಲ್ಲಕ್ಕಿಂತ ಮುಖ್ಯವಾಗಿ ಜನವರಿ 26ರಂದು ಸಾಮಾನ್ಯವಾಗಿಯೇ ಹೆಚ್ಚಿನ ಭದ್ರತೆ ಇರುವ ಕೆಂಪುಕೋಟೆಯ ಸುತ್ತ ಭದ್ರತೆ ಕಡಿಮೆ ಇತ್ತು. 50 ಜನರ ಗುಂಪು ಒಳಗೆ ಸುಲಭದಲ್ಲಿ ಪ್ರವೇಶಿಸಿ ಬಾವುಟ ಕಟ್ಟಲು ಅವರನ್ನು ಬಿಟ್ಟುಕೊಳ್ಳಲಾಯಿತು ಎಂಬುದು ಮೇಲ್ನೋಟಕ್ಕೇ ಕಂಡುಬರುತ್ತದೆ.
ಬಿಜೆಪಿ ಮತ್ತು ಈ ಜನರು ಮಾತಾಡಿಕೊಂಡು ಇದನ್ನು ಯೋಜಿಸಿದ್ದಾರಾ ಇಲ್ಲವಾ ಈಗಲೇ ಹೇಳಲು ಸಾಂದಭರ್ಿಕ ಸಾಕ್ಷ್ಯಗಳಿವೆಯೇ ಹೊರತು ಪುರಾವೆಗಳಿಲ್ಲ; ಆದರೆ ಅನುಮಾನಗಳಿವೆ. ಒಂದಂತೂ ಸ್ಪಷ್ಟ. ಸಂಯುಕ್ತ್ ಕಿಸಾನ್ ಮೋಚರ್ಾದ ಹೊರತಾದ ಒಂದು ಗುಂಪು ದೆಹಲಿಯೊಳಗೆ ಪೂರ್ವನಿಗದಿತವಲ್ಲದ ಮಾರ್ಗದಲ್ಲಿ ನುಗ್ಗಲಿದೆ ಎಂಬುದು ದೆಹಲಿ ಪೊಲೀಸರಿಗೆ ಗೊತ್ತಿತ್ತು. ಅವರ ಜೊತೆ ಮಾತಾಡುವ ಅಥವಾ ನಿಗ್ರಹಿಸುವ ಪ್ರಯತ್ನವನ್ನು ಅವರು ಮಾಡಲಿಲ್ಲ. ಅದು ಆಗಲಿ ಎಂದು ಬಿಟ್ಟುಕೊಂಡಿದ್ದು ಎದ್ದು ಕಾಣುತ್ತಿದೆ.
ಜನವರಿ 26ರ ಇಡೀ ಹೋರಾಟದ ಲಾಂಛನವಾಗಿ ತ್ರಿವರ್ಣಧ್ವಜ ಇರಲಿದೆ ಎಂದು ಸಂಯುಕ್ತ್ ಕಿಸಾನ್ ಮೋಚರ್ಾ ಮುಂಚೆಯೇ ಘೋಷಿಸಿತ್ತು. ಹಾಗೆಯೇ ಲಕ್ಷಾಂತರ ತ್ರಿವರ್ಣಧ್ವಜಗಳು ಹಾರಾಡಿದವು. ಆದರೆ ನಿದರ್ಿಷ್ಟವಾಗಿ ಬಾವುಟವನ್ನೇ ಬದಲಿಸಿ ಅದನ್ನು ಕೆಂಪುಕೋಟೆಯಲ್ಲೇ ಹೋಗಿ ಕಟ್ಟಿರುವುದರಲ್ಲಿ ಹುನ್ನಾರವಲ್ಲದೇ ಇನ್ನೇನೂ ಅಲ್ಲ ಎಂಬುದು ಸಂಯುಕ್ತ್ ಕಿಸಾನ್ ಮೋರ್ಚಾದ ಅಭಿಪ್ರಾಯ.
ಪ್ರಶ್ನೆ: ಜನವರಿ 26ರಂದು ಪೊಲೀಸರ ಜೊತೆಗೆ ನಿಗದಿಯಾದ ಸಮಯ ಹಾಗೂ ಮಾರ್ಗವನ್ನು ಬಿಟ್ಟು ದೆಹಲಿಯ ಕೇಂದ್ರ ಭಾಗ ಮತ್ತು ಕೆಂಪುಕೋಟೆಗೆ ಹೋದವರಲ್ಲಿ ಸಾಮಾನ್ಯ ರೈತರು ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದವರಿರಲಿಲ್ಲವೇ?
ಉತ್ತರ: ಇದ್ದಿರಲು ಸಾಧ್ಯ. ಏಕೆಂದರೆ ಸದರಿ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ಅಥವಾ ದೀಪ್ ಸಿಧುಗೆ ಇಷ್ಟೊಂದು ಬೆಂಬಲಿಗರಿಲ್ಲ. ಹಾಗಾಗಿ ಕೆಲವರು ಸಲೀಸಾಗಿ ರ್ಯಾಲಿ ಶುರು ಮಾಡಿದ್ದು ಮತ್ತು ಪೊಲೀಸರು ತಡೆಯದೇ ಇದ್ದದ್ದು ನೋಡಿ ಇನ್ನೊಂದಿಷ್ಟು ಜನರೂ ಹೊರಟಿರಬಹುದು. ಹಾಗೆ ಹೊರಟವರಿಗೆ ಕಳೆದ 60 ದಿನಗಳಿಂದ ಸರ್ಕಾರ ಪ್ರತಿಕ್ರಿಯಿಸದೇ ಇದ್ದುದನ್ನು ನೋಡಿ ಆಕ್ರೋಶವೂ ಇದ್ದಿರಬಹುದು. ಹಾಗಾಗಿ ಅವರುಗಳೂ ಇವರನ್ನು ಹಿಂಬಾಲಿಸಿ ಮುಂದಕ್ಕೆ ಹೋಗಿದ್ದಾರೆ. ಆದರೆ ಸಂಯುಕ್ತ್ ಕಿಸಾನ್ ಮೋರ್ಚಾ, ಹಿಂದೆ ನಿಗದಿಯಾಗಿದ್ದಂತೆ 12 ಗಂಟೆಗೆ ಪೆರೇಡ್ ಶುರು ಮಾಡಿತು ಮತ್ತು ಅದರಲ್ಲಿ ಲಕ್ಷಾಂತರ ಟ್ರ್ಯಾಕ್ಟರ್ಗಳಿದ್ದವು.
ಕೆಂಪುಕೋಟೆಯ ಬಳಿ ಒಳಗೆ ಹೋಗಿ ಧ್ವಜ ಹಾರಿಸಿದವರು ಮಾತ್ರ ಬಹಳ ಕಡಿಮೆ ಜನ. ಆ ಧ್ವಜ ಹಾರಿಸಿದ ರೀತಿಯು ಅಲ್ಲೇ ಹೊರಗೆ ಕೆಂಪುಕೋಟೆಯ ಆಚೆ ನಿಂತವರಿಗೂ ಇಷ್ಟವಾಗಿರಲಿಲ್ಲ ಎಂಬುದನ್ನೂ ಇಲ್ಲಿ ದಾಖಲಿಸಬೇಕು.
ಆದರೂ ಹುನ್ನಾರದ ಸಾಧ್ಯತೆ ಇದ್ದುದರಿಂದಲೇ ಜನವರಿ 26ರಂದು ಶಾಂತಿಯುತವಾಗಿ ರಾಷ್ಟ್ರಧ್ವಜದೊಂದಿಗೆ ಪೊಲೀಸರೊಂದಿಗೂ ಮಾತುಕತೆ ನಡೆಸಿ ಒಪ್ಪಿದ ಮಾರ್ಗದಲ್ಲಿ ಇತಿಹಾಸದಲ್ಲೇ ಬೃಹತ್ತಾದ ಟ್ರ್ಯಾಕ್ಟರ್ ರ್ಯಾಲಿಗೆ ಸಂಘಟಕರು ಮುಂದಾಗಿದ್ದರು.
ಪ್ರಶ್ನೆ: ಈಗ ಮರ್ಯಾದೆ ಹೋಗಿಬಿಟ್ಟಿತಲ್ಲವೇ? ಜನರು ಈಗ ನಂಬುತ್ತಾರಾ?
ಉತ್ತರ: ಯಾವ ಮರ್ಯಾದೆಯೂ ಹೋಗಿಲ್ಲ. ಸಂಯುಕ್ತ್ ಕಿಸಾನ್ ಮೋಚರ್ಾವು ಈ ವಿಚಾರದಲ್ಲಿ ಯಾವುದೇ ತಪ್ಪುಗಳನ್ನು ಎಸಗಿಲ್ಲ. ಮುಂಚಿನಿಂದಲೂ ಹೋರಾಟದ ಜೊತೆಗಿದ್ದವರು ಈಗಲೂ ಜೊತೆಗಿದ್ದಾರೆ. ಅನುಮಾನಗಳು, ಅರೆಬರೆ ಪಾಲ್ಗೊಳ್ಳುವಿಕೆ ಇದ್ದವರು ಮಾತ್ರ ಹೊರ ಹೋಗಿದ್ದಾರೆ. ಮಯರ್ಾದೆ ಹೋಗಿರುವುದು ಸಕರ್ಾರದ್ದು, ಮೀಡಿಯಾಗಳದ್ದು. ಅವರು ಹೇಳಿದ್ದನ್ನು ನಂಬುವ ಜನ ಹಿಂದೆಯೂ ನಂಬುತ್ತಿದ್ದರು.
ಅಲ್ಲಿರುವ ಜನರು ಈಗಲೂ ದೃಢ ಸಂಕಲ್ಪದಿಂದ ಹೋರಾಟವನ್ನು ಮುಂದುವರೆಸುತ್ತಿದ್ದಾರೆ. ಈ ವಿಚಾರದಲ್ಲಿ ಯಾವುದೇ ಹಿಂಜರಿಕೆಯಿಲ್ಲದೇ, ಈ ಶತಮಾನದ ಮಹಾನ್ ಹೋರಾಟದ ಜೊತೆಗೆ ಮತ್ತು ಅದನ್ನು ಮುನ್ನಡೆಸುತ್ತಿರುವವರ ಜೊತೆಗೆ ಗಟ್ಟಿಯಾಗಿ ನಿಲ್ಲುವ ಕೆಲಸವನ್ನು ಪ್ರಜ್ಞಾವಂತರು ಮಾಡಿದರೆ ಇನ್ನೂ ಬೃಹತ್ತಾಗಿ ಬೆಳೆದು ನಿಲ್ಲುತ್ತದೆ.
ನಾವೇನು ಮಾಡಬಹುದು?
ಈ ಸಂದರ್ಭದಲ್ಲಿ ಇಂತಹ ಐತಿಹಾಸಿಕ ಹೋರಾಟವನ್ನು ದಿಕ್ಕುತಪ್ಪಿಸುವ, ದಮನ ಮಾಡುವ ಒಕ್ಕೂಟ ಸಕರ್ಾರದ ಹುನ್ನಾರಕ್ಕೆ ನಾವು ಬಲಿಬೀಳಬಾರದು. ಮಾಧ್ಯಮಗಳು ಜೋರಾಗಿ ಕೂಗಿಕೊಂಡರೆ ಅದೇ ಸತ್ಯವಲ್ಲ. ಮಾರಿಕೊಂಡ ಮಾಧ್ಯಮಗಳಿಗೆ ಈಗ ಗೋದಿ ಮೀಡಿಯಾ ಎಂಬ ಹೆಸರಿದೆ. ಗೋದಿ ಮೀಡಿಯಾಕ್ಕಿಂತ ಜೋರಾಗಿ ಮಿಕ್ಕವರೂ ಅಬ್ಬರಿಸುವುದು ಮತ್ತು ಸರ್ಕಾರದ ಹುನ್ನಾರವನ್ನು ಬಯಲಿಗೆಳೆಯಲು ಕ್ರಿಯಾಶೀಲರಾಗಿರುವುದು ಬಹಳ ಮುಖ್ಯ. ಎಲ್ಲಕ್ಕಿಂತ ಮುಖ್ಯವಾಗಿ ಕನರ್ಾಟಕದಲ್ಲಿ ಹೋರಾಟ ವಿಸ್ತಾರವಾಗುವಂತೆ ಮಾಡಲು ಏನು ಮಾಡಬೇಕೋ ಆ ನಿಟ್ಟಿನತ್ತ ನಾವು ಕೇಂದ್ರೀಕರಿಸಬೇಕು.
ಮುಕ್ತಾಯ
ಕೃಪೆ | ಈ ಸುದ್ದಿ/ವಿಶ್ಲೇಷಣೆ ಮಾಸ್ ಮೀಡಿಯಾ ಫೌಂಡೇಷನ್ ನೆರವಿನೊಂದಿಗೆ ಪ್ರಕಟಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

