ದಿನದ ಸುದ್ದಿ
ಭಾಗ-2 | ದೆಹಲಿ ಹೋರಾಟದ ಕೆಲವು ಅಸಲೀ ಸಂಗತಿಗಳು; ಕಿಸಾನ್ ಮೋರ್ಚಾ ಏನು ಹೇಳುತ್ತಿದೆ..?
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2021/01/suddidina_red-fort_778.jpg&description=ಭಾಗ-2 | ದೆಹಲಿ ಹೋರಾಟದ ಕೆಲವು ಅಸಲೀ ಸಂಗತಿಗಳು; ಕಿಸಾನ್ ಮೋರ್ಚಾ ಏನು ಹೇಳುತ್ತಿದೆ..?', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2021/01/suddidina_red-fort_778.jpg&description=ಭಾಗ-2 | ದೆಹಲಿ ಹೋರಾಟದ ಕೆಲವು ಅಸಲೀ ಸಂಗತಿಗಳು; ಕಿಸಾನ್ ಮೋರ್ಚಾ ಏನು ಹೇಳುತ್ತಿದೆ..?', 'pinterestShare', 'width=750,height=350'); return false;" title="Pin This Post">
ಮುಂದುವರಿದ ಭಾಗ
ಪ್ರಶ್ನೆ: ಜನವರಿ 26ರಂದು ದೆಹಲಿಯೊಳಕ್ಕೆ ನುಗ್ಗಿ ಹೋದವರ ಕುರಿತು ಸಂಯುಕ್ತ್ ಕಿಸಾನ್ ಮೋರ್ಚ ನೆಗೆಟಿವ್ ಆಗಿ ಏಕೆ ಮಾತಾಡಿತು? ಕೆಂಪುಕೋಟೆಯ ಮೇಲೆ ಬಾವುಟ ಹಾರಿಸಿದರೆ ಏನು ತಪ್ಪು? ಇದರಲ್ಲಿ ಹುನ್ನಾರವಿದೆ ಎಂದು ಏಕೆ ಹೇಳಿದರು?
60 ದಿನಗಳ ಕಾಲ ಕೊರೆಯುವ ಚಳಿಯಲ್ಲಿ ಬೀದಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ನಿಭಾಯಿಸುತ್ತಾ ಹೋರಾಟವೊಂದನ್ನು ನಡೆಸುತ್ತಾ ಹೋಗುವುದು ಬಹಳ ಸಂಕೀರ್ಣವಾದ ಜವಾಬ್ದಾರಿ. ಇದರ ಜೊತೆಗೆ ಕನಿಷ್ಠ ಒಂದೂವರೆ ಲಕ್ಷ ಟ್ರ್ಯಾಕ್ಟರ್ಗಳ, ಅಂದರೆ ಸುಮಾರು 5 ಲಕ್ಷ ಜನರು ಬಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ಯೋಜಿಸಿದ್ದು ಇದೇ ಸಂಯುಕ್ತ್ ಕಿಸಾನ್ ಮೋಚರ್ಾ. ಸುಪ್ರೀಂಕೋರ್ಟ್ ಸೇರಿದಂತೆ ಯಾರೂ ಅದಕ್ಕೆ ಹಸಿರು ನಿಶಾನೆ ತೋರಿಸಿರಲಿಲ್ಲ.
ಒಂದು ಹಂತದಲ್ಲಿ ಸುಪ್ರೀಂಕೋರ್ಟ್ ಇದರ ಬಗ್ಗೆ ಉಲ್ಟಾ ಮಾತಾಡಿತ್ತು. ಆದರೆ ಅಂತಿಮವಾಗಿ ದೆಹಲಿ ಪೊಲೀಸರ ಜೊತೆ ನಡೆದ ಮಾತುಕತೆಯಲ್ಲಿ ಕೆಲವು ನಿರ್ದಿಷ್ಟ ಮಾರ್ಗಗಳ ಕುರಿತು ಪರಸ್ಪರ ಒಪ್ಪಿಗೆಗೆ ಬರಲಾಯಿತು. ಒಂದು ವೇಳೆ ಈ ಟ್ರ್ಯಾಕ್ಟರ್ ಮಾಚರ್್ ಸಂಪೂರ್ಣ ಅಂದುಕೊಂಡ ಹಾಗೆ ನಡೆದಿದ್ದರೆ 26ರ ಹಗಲು, ರಾತ್ರಿ ಅಷ್ಟೇ ಅಲ್ಲದೇ 27ರ ಬೆಳಿಗ್ಗೆಯವರೆಗೂ ಟ್ರ್ಯಾಕ್ಟರ್ ಸಾಲು ಮುಗಿಯುತ್ತಿರಲಿಲ್ಲ.
ಇದಲ್ಲದೇ ಫೆಬ್ರವರಿ 1ಕ್ಕೆ ಶಾಂತಿಯುತವಾಗಿ ಪಾಲರ್ಿಮೆಂಟ್ ಚಲೋವನ್ನೂ, ಜನವರಿ 25ರಂದು ಘೋಷಿಸಲಾಗಿತ್ತು. ಬಜೆಟ್ ಅಧಿವೇಶನ ಶುರುವಾಗುವ ದಿನ (26ಕ್ಕೆ ಬಂದವರಲ್ಲೂ ಲಕ್ಷಾಂತರ ಜನರು ಉಳಿದುಕೊಂಡು) ಪಾರ್ಲಿಮೆಂಟ್ ಚಲೋ ನಡೆಸುವುದು ಅವರ ಉದ್ದೇಶವಾಗಿತ್ತು. ಆದರೆ, ಈ ಮಧ್ಯೆ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿಯ ಕಡೆಯಿಂದ ಜನವರಿ 25ರಂದೇ ವಿಡಿಯೋ ಬಿಡುಗಡೆ ಮಾಡಿ ತಾವು ಜನವರಿ 26ರಂದು ಪೂರ್ವನಿಗದಿತ ಮಾರ್ಗದಲ್ಲಿ ಹೋಗುವುದಿಲ್ಲವೆಂದು ಘೋಷಿಸಿಯಾಗಿತ್ತು.
ಜೊತೆಗೆ ತಾವು ರಿಂಗ್ ರಸ್ತೆಯಲ್ಲೇ ಹೋಗುತ್ತೇವೆಂತಲೂ, ಕೆಂಪುಕೋಟೆಯ ಮೇಲೆ ಬಾವುಟ ಹಾರಿಸುತ್ತೇವೆಂತಲೂ ಹೇಳಿದ್ದರು. ಅವರು ಹಿಂದಿನಿಂದಲೂ ಸಂಯುಕ್ತ್ ಕಿಸಾನ್ ಮೋರ್ಚಾದಲ್ಲಿರಲಿಲ್ಲ. ಜೊತೆಗೆ ದೀಪ್ ಸಿಧುವೂ ಸಂಯುಕ್ತ್ ಕಿಸಾನ್ ಮೋರ್ಚಾದ ಭಾಗವಲ್ಲ.
ಆತ ಸದಾಕಾಲ ಇಲ್ಲಿನ ಸುಸಂಘಟಿತ ವಿಧಾನವನ್ನು ಹಾಳುಮಾಡುವ ಕೆಲಸ ಮಾಡುತ್ತಲೇ ಇದ್ದರು. ಒಂದು ಹಂತದಲ್ಲಿ ರೈತ ನಾಯಕರೊಬ್ಬರು ಈತ ಮತ್ತು ಈತನ ಗೆಳೆಯ ಲಖಾ ಸಿಧಾನಾ (ಈತ ಹಿಂದೆ ಗ್ಯಾಂಗ್ಸ್ಟರ್ ಆಗಿದ್ದು, ಈಗ ಸಾಮಾಜಿಕ ಕಾರ್ಯಕರ್ತನೆಂದು ಹೇಳಿಕೊಳ್ಳುತ್ತಾನೆ) ಇಬ್ಬರೂ ಈ ಹೋರಾಟದ ಶತ್ರುಗಳು ಎಂದು ಘೋಷಿಸಿದ್ದರು.
ಇದಕ್ಕೆ ಕಾರಣ, ಬಿಜೆಪಿ ಜೊತೆಗೂ ಇದ್ದ ಈ ಇಬ್ಬರು ಖಲಿಸ್ತಾನದ ಪರವಾಗಿ ಮಾತನಾಡುವುದು, ಭಿಂದ್ರನ್ವಾಲೆಯ ಮಾತುಗಳನ್ನು ಉಲ್ಲೇಖಿಸುವುದನ್ನು ಮಾಡುತ್ತಲಿದ್ದರು. ಪತ್ರಕತರ್ೆ ಬಖರ್ಾದತ್ ನಡೆಸಿದ ಸಂದರ್ಶನವೊಂದರಲ್ಲೂ ಈತ ಆ ಮಾತುಗಳನ್ನಾಡಿರುವುದನ್ನು ಕೇಳಬಹುದು. ಜೊತೆಗೆ ಲಕ್ಷಾಂತರ ಜನರ ಮನಸ್ಥಿತಿ, ತಯಾರಿ ಹಾಗೂ ಗೆದ್ದುಕೊಂಡೇ ವಾಪಸ್ಸು ಹೋಗಬೇಕು ಎಂಬ ಸರ್ವಾನುಮತದ ಅಭಿಪ್ರಾಯಗಳಿಗೆ ವ್ಯತಿರಿಕ್ತವಾಗಿ ನಿರಂತರವಾಗಿ ವ್ಯಕ್ತಿಗತ ಅನಿಸಿಕೆಗಳನ್ನು ಮುಂದಿಡುವುದು ದೀಪ್ ಸಿಧು ಪ್ರವೃತ್ತಿಯಾಗಿತ್ತು. ಸಂಯುಕ್ತ್ ಕಿಸಾನ್ ಮೋಚರ್ಾದ ಸರ್ವಾನುಮತದಿಂದ ಅಭಿಪ್ರಾಯಕ್ಕೆ ವಿರುದ್ಧವಾಗಿ ಈ ವ್ಯಕ್ತಿ ಜನವರಿ 25ರಂದೂ ಜನರನ್ನು ಉದ್ರೇಕಗೊಳಿಸಲು ಪ್ರಯತ್ನಿಸಿದ್ದರು.
ದೀಪ್ ಸಿಧುವಷ್ಟೇ ಅಲ್ಲದೇ, ಮೇಲೆ ಹೇಳಲಾದ ಇನ್ನೊಂದು ಸಂಘಟನೆಯ ಜನರು ಸಿಂಘು ಬಾರ್ಡರ್ನಲ್ಲಿ ಸೇರಿಕೊಂಡಿದ್ದ ನಿದರ್ಿಷ್ಟ ಸ್ಥಳವೂ ಅನುಮಾನಾಸ್ಪದವಾಗಿತ್ತು. ಸಂಯುಕ್ತ್ ಕಿಸಾನ್ ಮೋಚರ್ಾದ ಅಡಿಯಲ್ಲಿ ಸಂಘಟಿತರಾಗಿರುವ ಲಕ್ಷಾಂತರ ರೈತರಿಗೂ ದೆಹಲಿಗೂ ಮಧ್ಯೆ ಬ್ಯಾರಿಕೇಡ್ಗಳಿದ್ದವು. ಆ ಬ್ಯಾರಿಕೇಡ್ಗಳೀಚೆ ದೆಹಲಿ ಪೊಲೀಸರಿದ್ದರು.
ಅವರಿಗೂ ಈಚೆ ಈ ಸಂಘಟನೆಗೆ ಪ್ರತಿಭಟನೆ ಶುರುವಾದ 13 ದಿನಗಳ ನಂತರ ವಿಶೇಷ ಟೆಂಟ್ಗಳ ಸೌಲಭ್ಯದೊಂದಿಗೆ ಇರಲು ಅವಕಾಶ ಕಲ್ಪಿಸಲಾಗಿತ್ತು. ಅವರ ಪಕ್ಕ ಸುಲಭದಲ್ಲಿ ತೆಗೆಯಬಹುದಾದ ಬ್ಯಾರಿಕೇಡ್ಗಳಿದ್ದವು. ಇವರು ಜನವರಿ 26ರಂದು ನಿಗದಿತ ಸಮಯಕ್ಕಿಂತ ಮುಂಚೆಯೇ ದೆಹಲಿಯೊಳಗೆ ಹೋದಂತೆ ಅಲ್ಲಲ್ಲಿ ಪೊಲೀಸರು ತಡೆದರಾದರೂ, ಅತ್ಯಂತ ಬಿಗಿ ಬಂದೋಬಸ್ತಿನ ಬದಲು ನಿಧಾನಕ್ಕೆ ಇವರನ್ನು ಒಳಕ್ಕೆ ಬಿಟ್ಟುಕೊಂಡಂತೆಯೇ ಕಂಡುಬಂದಿತು.
ಎಲ್ಲಕ್ಕಿಂತ ಮುಖ್ಯವಾಗಿ ಜನವರಿ 26ರಂದು ಸಾಮಾನ್ಯವಾಗಿಯೇ ಹೆಚ್ಚಿನ ಭದ್ರತೆ ಇರುವ ಕೆಂಪುಕೋಟೆಯ ಸುತ್ತ ಭದ್ರತೆ ಕಡಿಮೆ ಇತ್ತು. 50 ಜನರ ಗುಂಪು ಒಳಗೆ ಸುಲಭದಲ್ಲಿ ಪ್ರವೇಶಿಸಿ ಬಾವುಟ ಕಟ್ಟಲು ಅವರನ್ನು ಬಿಟ್ಟುಕೊಳ್ಳಲಾಯಿತು ಎಂಬುದು ಮೇಲ್ನೋಟಕ್ಕೇ ಕಂಡುಬರುತ್ತದೆ.
ಬಿಜೆಪಿ ಮತ್ತು ಈ ಜನರು ಮಾತಾಡಿಕೊಂಡು ಇದನ್ನು ಯೋಜಿಸಿದ್ದಾರಾ ಇಲ್ಲವಾ ಈಗಲೇ ಹೇಳಲು ಸಾಂದಭರ್ಿಕ ಸಾಕ್ಷ್ಯಗಳಿವೆಯೇ ಹೊರತು ಪುರಾವೆಗಳಿಲ್ಲ; ಆದರೆ ಅನುಮಾನಗಳಿವೆ. ಒಂದಂತೂ ಸ್ಪಷ್ಟ. ಸಂಯುಕ್ತ್ ಕಿಸಾನ್ ಮೋಚರ್ಾದ ಹೊರತಾದ ಒಂದು ಗುಂಪು ದೆಹಲಿಯೊಳಗೆ ಪೂರ್ವನಿಗದಿತವಲ್ಲದ ಮಾರ್ಗದಲ್ಲಿ ನುಗ್ಗಲಿದೆ ಎಂಬುದು ದೆಹಲಿ ಪೊಲೀಸರಿಗೆ ಗೊತ್ತಿತ್ತು. ಅವರ ಜೊತೆ ಮಾತಾಡುವ ಅಥವಾ ನಿಗ್ರಹಿಸುವ ಪ್ರಯತ್ನವನ್ನು ಅವರು ಮಾಡಲಿಲ್ಲ. ಅದು ಆಗಲಿ ಎಂದು ಬಿಟ್ಟುಕೊಂಡಿದ್ದು ಎದ್ದು ಕಾಣುತ್ತಿದೆ.
ಜನವರಿ 26ರ ಇಡೀ ಹೋರಾಟದ ಲಾಂಛನವಾಗಿ ತ್ರಿವರ್ಣಧ್ವಜ ಇರಲಿದೆ ಎಂದು ಸಂಯುಕ್ತ್ ಕಿಸಾನ್ ಮೋಚರ್ಾ ಮುಂಚೆಯೇ ಘೋಷಿಸಿತ್ತು. ಹಾಗೆಯೇ ಲಕ್ಷಾಂತರ ತ್ರಿವರ್ಣಧ್ವಜಗಳು ಹಾರಾಡಿದವು. ಆದರೆ ನಿದರ್ಿಷ್ಟವಾಗಿ ಬಾವುಟವನ್ನೇ ಬದಲಿಸಿ ಅದನ್ನು ಕೆಂಪುಕೋಟೆಯಲ್ಲೇ ಹೋಗಿ ಕಟ್ಟಿರುವುದರಲ್ಲಿ ಹುನ್ನಾರವಲ್ಲದೇ ಇನ್ನೇನೂ ಅಲ್ಲ ಎಂಬುದು ಸಂಯುಕ್ತ್ ಕಿಸಾನ್ ಮೋರ್ಚಾದ ಅಭಿಪ್ರಾಯ.
ಪ್ರಶ್ನೆ: ಜನವರಿ 26ರಂದು ಪೊಲೀಸರ ಜೊತೆಗೆ ನಿಗದಿಯಾದ ಸಮಯ ಹಾಗೂ ಮಾರ್ಗವನ್ನು ಬಿಟ್ಟು ದೆಹಲಿಯ ಕೇಂದ್ರ ಭಾಗ ಮತ್ತು ಕೆಂಪುಕೋಟೆಗೆ ಹೋದವರಲ್ಲಿ ಸಾಮಾನ್ಯ ರೈತರು ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದವರಿರಲಿಲ್ಲವೇ?
ಉತ್ತರ: ಇದ್ದಿರಲು ಸಾಧ್ಯ. ಏಕೆಂದರೆ ಸದರಿ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ಅಥವಾ ದೀಪ್ ಸಿಧುಗೆ ಇಷ್ಟೊಂದು ಬೆಂಬಲಿಗರಿಲ್ಲ. ಹಾಗಾಗಿ ಕೆಲವರು ಸಲೀಸಾಗಿ ರ್ಯಾಲಿ ಶುರು ಮಾಡಿದ್ದು ಮತ್ತು ಪೊಲೀಸರು ತಡೆಯದೇ ಇದ್ದದ್ದು ನೋಡಿ ಇನ್ನೊಂದಿಷ್ಟು ಜನರೂ ಹೊರಟಿರಬಹುದು. ಹಾಗೆ ಹೊರಟವರಿಗೆ ಕಳೆದ 60 ದಿನಗಳಿಂದ ಸರ್ಕಾರ ಪ್ರತಿಕ್ರಿಯಿಸದೇ ಇದ್ದುದನ್ನು ನೋಡಿ ಆಕ್ರೋಶವೂ ಇದ್ದಿರಬಹುದು. ಹಾಗಾಗಿ ಅವರುಗಳೂ ಇವರನ್ನು ಹಿಂಬಾಲಿಸಿ ಮುಂದಕ್ಕೆ ಹೋಗಿದ್ದಾರೆ. ಆದರೆ ಸಂಯುಕ್ತ್ ಕಿಸಾನ್ ಮೋರ್ಚಾ, ಹಿಂದೆ ನಿಗದಿಯಾಗಿದ್ದಂತೆ 12 ಗಂಟೆಗೆ ಪೆರೇಡ್ ಶುರು ಮಾಡಿತು ಮತ್ತು ಅದರಲ್ಲಿ ಲಕ್ಷಾಂತರ ಟ್ರ್ಯಾಕ್ಟರ್ಗಳಿದ್ದವು.
ಕೆಂಪುಕೋಟೆಯ ಬಳಿ ಒಳಗೆ ಹೋಗಿ ಧ್ವಜ ಹಾರಿಸಿದವರು ಮಾತ್ರ ಬಹಳ ಕಡಿಮೆ ಜನ. ಆ ಧ್ವಜ ಹಾರಿಸಿದ ರೀತಿಯು ಅಲ್ಲೇ ಹೊರಗೆ ಕೆಂಪುಕೋಟೆಯ ಆಚೆ ನಿಂತವರಿಗೂ ಇಷ್ಟವಾಗಿರಲಿಲ್ಲ ಎಂಬುದನ್ನೂ ಇಲ್ಲಿ ದಾಖಲಿಸಬೇಕು.
ಆದರೂ ಹುನ್ನಾರದ ಸಾಧ್ಯತೆ ಇದ್ದುದರಿಂದಲೇ ಜನವರಿ 26ರಂದು ಶಾಂತಿಯುತವಾಗಿ ರಾಷ್ಟ್ರಧ್ವಜದೊಂದಿಗೆ ಪೊಲೀಸರೊಂದಿಗೂ ಮಾತುಕತೆ ನಡೆಸಿ ಒಪ್ಪಿದ ಮಾರ್ಗದಲ್ಲಿ ಇತಿಹಾಸದಲ್ಲೇ ಬೃಹತ್ತಾದ ಟ್ರ್ಯಾಕ್ಟರ್ ರ್ಯಾಲಿಗೆ ಸಂಘಟಕರು ಮುಂದಾಗಿದ್ದರು.
ಪ್ರಶ್ನೆ: ಈಗ ಮರ್ಯಾದೆ ಹೋಗಿಬಿಟ್ಟಿತಲ್ಲವೇ? ಜನರು ಈಗ ನಂಬುತ್ತಾರಾ?
ಉತ್ತರ: ಯಾವ ಮರ್ಯಾದೆಯೂ ಹೋಗಿಲ್ಲ. ಸಂಯುಕ್ತ್ ಕಿಸಾನ್ ಮೋಚರ್ಾವು ಈ ವಿಚಾರದಲ್ಲಿ ಯಾವುದೇ ತಪ್ಪುಗಳನ್ನು ಎಸಗಿಲ್ಲ. ಮುಂಚಿನಿಂದಲೂ ಹೋರಾಟದ ಜೊತೆಗಿದ್ದವರು ಈಗಲೂ ಜೊತೆಗಿದ್ದಾರೆ. ಅನುಮಾನಗಳು, ಅರೆಬರೆ ಪಾಲ್ಗೊಳ್ಳುವಿಕೆ ಇದ್ದವರು ಮಾತ್ರ ಹೊರ ಹೋಗಿದ್ದಾರೆ. ಮಯರ್ಾದೆ ಹೋಗಿರುವುದು ಸಕರ್ಾರದ್ದು, ಮೀಡಿಯಾಗಳದ್ದು. ಅವರು ಹೇಳಿದ್ದನ್ನು ನಂಬುವ ಜನ ಹಿಂದೆಯೂ ನಂಬುತ್ತಿದ್ದರು.
ಅಲ್ಲಿರುವ ಜನರು ಈಗಲೂ ದೃಢ ಸಂಕಲ್ಪದಿಂದ ಹೋರಾಟವನ್ನು ಮುಂದುವರೆಸುತ್ತಿದ್ದಾರೆ. ಈ ವಿಚಾರದಲ್ಲಿ ಯಾವುದೇ ಹಿಂಜರಿಕೆಯಿಲ್ಲದೇ, ಈ ಶತಮಾನದ ಮಹಾನ್ ಹೋರಾಟದ ಜೊತೆಗೆ ಮತ್ತು ಅದನ್ನು ಮುನ್ನಡೆಸುತ್ತಿರುವವರ ಜೊತೆಗೆ ಗಟ್ಟಿಯಾಗಿ ನಿಲ್ಲುವ ಕೆಲಸವನ್ನು ಪ್ರಜ್ಞಾವಂತರು ಮಾಡಿದರೆ ಇನ್ನೂ ಬೃಹತ್ತಾಗಿ ಬೆಳೆದು ನಿಲ್ಲುತ್ತದೆ.
ನಾವೇನು ಮಾಡಬಹುದು?
ಈ ಸಂದರ್ಭದಲ್ಲಿ ಇಂತಹ ಐತಿಹಾಸಿಕ ಹೋರಾಟವನ್ನು ದಿಕ್ಕುತಪ್ಪಿಸುವ, ದಮನ ಮಾಡುವ ಒಕ್ಕೂಟ ಸಕರ್ಾರದ ಹುನ್ನಾರಕ್ಕೆ ನಾವು ಬಲಿಬೀಳಬಾರದು. ಮಾಧ್ಯಮಗಳು ಜೋರಾಗಿ ಕೂಗಿಕೊಂಡರೆ ಅದೇ ಸತ್ಯವಲ್ಲ. ಮಾರಿಕೊಂಡ ಮಾಧ್ಯಮಗಳಿಗೆ ಈಗ ಗೋದಿ ಮೀಡಿಯಾ ಎಂಬ ಹೆಸರಿದೆ. ಗೋದಿ ಮೀಡಿಯಾಕ್ಕಿಂತ ಜೋರಾಗಿ ಮಿಕ್ಕವರೂ ಅಬ್ಬರಿಸುವುದು ಮತ್ತು ಸರ್ಕಾರದ ಹುನ್ನಾರವನ್ನು ಬಯಲಿಗೆಳೆಯಲು ಕ್ರಿಯಾಶೀಲರಾಗಿರುವುದು ಬಹಳ ಮುಖ್ಯ. ಎಲ್ಲಕ್ಕಿಂತ ಮುಖ್ಯವಾಗಿ ಕನರ್ಾಟಕದಲ್ಲಿ ಹೋರಾಟ ವಿಸ್ತಾರವಾಗುವಂತೆ ಮಾಡಲು ಏನು ಮಾಡಬೇಕೋ ಆ ನಿಟ್ಟಿನತ್ತ ನಾವು ಕೇಂದ್ರೀಕರಿಸಬೇಕು.
ಮುಕ್ತಾಯ
ಕೃಪೆ | ಈ ಸುದ್ದಿ/ವಿಶ್ಲೇಷಣೆ ಮಾಸ್ ಮೀಡಿಯಾ ಫೌಂಡೇಷನ್ ನೆರವಿನೊಂದಿಗೆ ಪ್ರಕಟಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.
ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.
ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.
ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.
ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.
ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.
ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ7 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ6 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
-
ಅಂಕಣ3 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ17 hours agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ3 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ2 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

