ದಿನದ ಸುದ್ದಿ
ಭಾಗ-2 | ದೆಹಲಿ ಹೋರಾಟದ ಕೆಲವು ಅಸಲೀ ಸಂಗತಿಗಳು; ಕಿಸಾನ್ ಮೋರ್ಚಾ ಏನು ಹೇಳುತ್ತಿದೆ..?
ಮುಂದುವರಿದ ಭಾಗ
ಪ್ರಶ್ನೆ: ಜನವರಿ 26ರಂದು ದೆಹಲಿಯೊಳಕ್ಕೆ ನುಗ್ಗಿ ಹೋದವರ ಕುರಿತು ಸಂಯುಕ್ತ್ ಕಿಸಾನ್ ಮೋರ್ಚ ನೆಗೆಟಿವ್ ಆಗಿ ಏಕೆ ಮಾತಾಡಿತು? ಕೆಂಪುಕೋಟೆಯ ಮೇಲೆ ಬಾವುಟ ಹಾರಿಸಿದರೆ ಏನು ತಪ್ಪು? ಇದರಲ್ಲಿ ಹುನ್ನಾರವಿದೆ ಎಂದು ಏಕೆ ಹೇಳಿದರು?
60 ದಿನಗಳ ಕಾಲ ಕೊರೆಯುವ ಚಳಿಯಲ್ಲಿ ಬೀದಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ನಿಭಾಯಿಸುತ್ತಾ ಹೋರಾಟವೊಂದನ್ನು ನಡೆಸುತ್ತಾ ಹೋಗುವುದು ಬಹಳ ಸಂಕೀರ್ಣವಾದ ಜವಾಬ್ದಾರಿ. ಇದರ ಜೊತೆಗೆ ಕನಿಷ್ಠ ಒಂದೂವರೆ ಲಕ್ಷ ಟ್ರ್ಯಾಕ್ಟರ್ಗಳ, ಅಂದರೆ ಸುಮಾರು 5 ಲಕ್ಷ ಜನರು ಬಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ಯೋಜಿಸಿದ್ದು ಇದೇ ಸಂಯುಕ್ತ್ ಕಿಸಾನ್ ಮೋಚರ್ಾ. ಸುಪ್ರೀಂಕೋರ್ಟ್ ಸೇರಿದಂತೆ ಯಾರೂ ಅದಕ್ಕೆ ಹಸಿರು ನಿಶಾನೆ ತೋರಿಸಿರಲಿಲ್ಲ.
ಒಂದು ಹಂತದಲ್ಲಿ ಸುಪ್ರೀಂಕೋರ್ಟ್ ಇದರ ಬಗ್ಗೆ ಉಲ್ಟಾ ಮಾತಾಡಿತ್ತು. ಆದರೆ ಅಂತಿಮವಾಗಿ ದೆಹಲಿ ಪೊಲೀಸರ ಜೊತೆ ನಡೆದ ಮಾತುಕತೆಯಲ್ಲಿ ಕೆಲವು ನಿರ್ದಿಷ್ಟ ಮಾರ್ಗಗಳ ಕುರಿತು ಪರಸ್ಪರ ಒಪ್ಪಿಗೆಗೆ ಬರಲಾಯಿತು. ಒಂದು ವೇಳೆ ಈ ಟ್ರ್ಯಾಕ್ಟರ್ ಮಾಚರ್್ ಸಂಪೂರ್ಣ ಅಂದುಕೊಂಡ ಹಾಗೆ ನಡೆದಿದ್ದರೆ 26ರ ಹಗಲು, ರಾತ್ರಿ ಅಷ್ಟೇ ಅಲ್ಲದೇ 27ರ ಬೆಳಿಗ್ಗೆಯವರೆಗೂ ಟ್ರ್ಯಾಕ್ಟರ್ ಸಾಲು ಮುಗಿಯುತ್ತಿರಲಿಲ್ಲ.
ಇದಲ್ಲದೇ ಫೆಬ್ರವರಿ 1ಕ್ಕೆ ಶಾಂತಿಯುತವಾಗಿ ಪಾಲರ್ಿಮೆಂಟ್ ಚಲೋವನ್ನೂ, ಜನವರಿ 25ರಂದು ಘೋಷಿಸಲಾಗಿತ್ತು. ಬಜೆಟ್ ಅಧಿವೇಶನ ಶುರುವಾಗುವ ದಿನ (26ಕ್ಕೆ ಬಂದವರಲ್ಲೂ ಲಕ್ಷಾಂತರ ಜನರು ಉಳಿದುಕೊಂಡು) ಪಾರ್ಲಿಮೆಂಟ್ ಚಲೋ ನಡೆಸುವುದು ಅವರ ಉದ್ದೇಶವಾಗಿತ್ತು. ಆದರೆ, ಈ ಮಧ್ಯೆ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿಯ ಕಡೆಯಿಂದ ಜನವರಿ 25ರಂದೇ ವಿಡಿಯೋ ಬಿಡುಗಡೆ ಮಾಡಿ ತಾವು ಜನವರಿ 26ರಂದು ಪೂರ್ವನಿಗದಿತ ಮಾರ್ಗದಲ್ಲಿ ಹೋಗುವುದಿಲ್ಲವೆಂದು ಘೋಷಿಸಿಯಾಗಿತ್ತು.
ಜೊತೆಗೆ ತಾವು ರಿಂಗ್ ರಸ್ತೆಯಲ್ಲೇ ಹೋಗುತ್ತೇವೆಂತಲೂ, ಕೆಂಪುಕೋಟೆಯ ಮೇಲೆ ಬಾವುಟ ಹಾರಿಸುತ್ತೇವೆಂತಲೂ ಹೇಳಿದ್ದರು. ಅವರು ಹಿಂದಿನಿಂದಲೂ ಸಂಯುಕ್ತ್ ಕಿಸಾನ್ ಮೋರ್ಚಾದಲ್ಲಿರಲಿಲ್ಲ. ಜೊತೆಗೆ ದೀಪ್ ಸಿಧುವೂ ಸಂಯುಕ್ತ್ ಕಿಸಾನ್ ಮೋರ್ಚಾದ ಭಾಗವಲ್ಲ.
ಆತ ಸದಾಕಾಲ ಇಲ್ಲಿನ ಸುಸಂಘಟಿತ ವಿಧಾನವನ್ನು ಹಾಳುಮಾಡುವ ಕೆಲಸ ಮಾಡುತ್ತಲೇ ಇದ್ದರು. ಒಂದು ಹಂತದಲ್ಲಿ ರೈತ ನಾಯಕರೊಬ್ಬರು ಈತ ಮತ್ತು ಈತನ ಗೆಳೆಯ ಲಖಾ ಸಿಧಾನಾ (ಈತ ಹಿಂದೆ ಗ್ಯಾಂಗ್ಸ್ಟರ್ ಆಗಿದ್ದು, ಈಗ ಸಾಮಾಜಿಕ ಕಾರ್ಯಕರ್ತನೆಂದು ಹೇಳಿಕೊಳ್ಳುತ್ತಾನೆ) ಇಬ್ಬರೂ ಈ ಹೋರಾಟದ ಶತ್ರುಗಳು ಎಂದು ಘೋಷಿಸಿದ್ದರು.
ಇದಕ್ಕೆ ಕಾರಣ, ಬಿಜೆಪಿ ಜೊತೆಗೂ ಇದ್ದ ಈ ಇಬ್ಬರು ಖಲಿಸ್ತಾನದ ಪರವಾಗಿ ಮಾತನಾಡುವುದು, ಭಿಂದ್ರನ್ವಾಲೆಯ ಮಾತುಗಳನ್ನು ಉಲ್ಲೇಖಿಸುವುದನ್ನು ಮಾಡುತ್ತಲಿದ್ದರು. ಪತ್ರಕತರ್ೆ ಬಖರ್ಾದತ್ ನಡೆಸಿದ ಸಂದರ್ಶನವೊಂದರಲ್ಲೂ ಈತ ಆ ಮಾತುಗಳನ್ನಾಡಿರುವುದನ್ನು ಕೇಳಬಹುದು. ಜೊತೆಗೆ ಲಕ್ಷಾಂತರ ಜನರ ಮನಸ್ಥಿತಿ, ತಯಾರಿ ಹಾಗೂ ಗೆದ್ದುಕೊಂಡೇ ವಾಪಸ್ಸು ಹೋಗಬೇಕು ಎಂಬ ಸರ್ವಾನುಮತದ ಅಭಿಪ್ರಾಯಗಳಿಗೆ ವ್ಯತಿರಿಕ್ತವಾಗಿ ನಿರಂತರವಾಗಿ ವ್ಯಕ್ತಿಗತ ಅನಿಸಿಕೆಗಳನ್ನು ಮುಂದಿಡುವುದು ದೀಪ್ ಸಿಧು ಪ್ರವೃತ್ತಿಯಾಗಿತ್ತು. ಸಂಯುಕ್ತ್ ಕಿಸಾನ್ ಮೋಚರ್ಾದ ಸರ್ವಾನುಮತದಿಂದ ಅಭಿಪ್ರಾಯಕ್ಕೆ ವಿರುದ್ಧವಾಗಿ ಈ ವ್ಯಕ್ತಿ ಜನವರಿ 25ರಂದೂ ಜನರನ್ನು ಉದ್ರೇಕಗೊಳಿಸಲು ಪ್ರಯತ್ನಿಸಿದ್ದರು.
ದೀಪ್ ಸಿಧುವಷ್ಟೇ ಅಲ್ಲದೇ, ಮೇಲೆ ಹೇಳಲಾದ ಇನ್ನೊಂದು ಸಂಘಟನೆಯ ಜನರು ಸಿಂಘು ಬಾರ್ಡರ್ನಲ್ಲಿ ಸೇರಿಕೊಂಡಿದ್ದ ನಿದರ್ಿಷ್ಟ ಸ್ಥಳವೂ ಅನುಮಾನಾಸ್ಪದವಾಗಿತ್ತು. ಸಂಯುಕ್ತ್ ಕಿಸಾನ್ ಮೋಚರ್ಾದ ಅಡಿಯಲ್ಲಿ ಸಂಘಟಿತರಾಗಿರುವ ಲಕ್ಷಾಂತರ ರೈತರಿಗೂ ದೆಹಲಿಗೂ ಮಧ್ಯೆ ಬ್ಯಾರಿಕೇಡ್ಗಳಿದ್ದವು. ಆ ಬ್ಯಾರಿಕೇಡ್ಗಳೀಚೆ ದೆಹಲಿ ಪೊಲೀಸರಿದ್ದರು.
ಅವರಿಗೂ ಈಚೆ ಈ ಸಂಘಟನೆಗೆ ಪ್ರತಿಭಟನೆ ಶುರುವಾದ 13 ದಿನಗಳ ನಂತರ ವಿಶೇಷ ಟೆಂಟ್ಗಳ ಸೌಲಭ್ಯದೊಂದಿಗೆ ಇರಲು ಅವಕಾಶ ಕಲ್ಪಿಸಲಾಗಿತ್ತು. ಅವರ ಪಕ್ಕ ಸುಲಭದಲ್ಲಿ ತೆಗೆಯಬಹುದಾದ ಬ್ಯಾರಿಕೇಡ್ಗಳಿದ್ದವು. ಇವರು ಜನವರಿ 26ರಂದು ನಿಗದಿತ ಸಮಯಕ್ಕಿಂತ ಮುಂಚೆಯೇ ದೆಹಲಿಯೊಳಗೆ ಹೋದಂತೆ ಅಲ್ಲಲ್ಲಿ ಪೊಲೀಸರು ತಡೆದರಾದರೂ, ಅತ್ಯಂತ ಬಿಗಿ ಬಂದೋಬಸ್ತಿನ ಬದಲು ನಿಧಾನಕ್ಕೆ ಇವರನ್ನು ಒಳಕ್ಕೆ ಬಿಟ್ಟುಕೊಂಡಂತೆಯೇ ಕಂಡುಬಂದಿತು.
ಎಲ್ಲಕ್ಕಿಂತ ಮುಖ್ಯವಾಗಿ ಜನವರಿ 26ರಂದು ಸಾಮಾನ್ಯವಾಗಿಯೇ ಹೆಚ್ಚಿನ ಭದ್ರತೆ ಇರುವ ಕೆಂಪುಕೋಟೆಯ ಸುತ್ತ ಭದ್ರತೆ ಕಡಿಮೆ ಇತ್ತು. 50 ಜನರ ಗುಂಪು ಒಳಗೆ ಸುಲಭದಲ್ಲಿ ಪ್ರವೇಶಿಸಿ ಬಾವುಟ ಕಟ್ಟಲು ಅವರನ್ನು ಬಿಟ್ಟುಕೊಳ್ಳಲಾಯಿತು ಎಂಬುದು ಮೇಲ್ನೋಟಕ್ಕೇ ಕಂಡುಬರುತ್ತದೆ.
ಬಿಜೆಪಿ ಮತ್ತು ಈ ಜನರು ಮಾತಾಡಿಕೊಂಡು ಇದನ್ನು ಯೋಜಿಸಿದ್ದಾರಾ ಇಲ್ಲವಾ ಈಗಲೇ ಹೇಳಲು ಸಾಂದಭರ್ಿಕ ಸಾಕ್ಷ್ಯಗಳಿವೆಯೇ ಹೊರತು ಪುರಾವೆಗಳಿಲ್ಲ; ಆದರೆ ಅನುಮಾನಗಳಿವೆ. ಒಂದಂತೂ ಸ್ಪಷ್ಟ. ಸಂಯುಕ್ತ್ ಕಿಸಾನ್ ಮೋಚರ್ಾದ ಹೊರತಾದ ಒಂದು ಗುಂಪು ದೆಹಲಿಯೊಳಗೆ ಪೂರ್ವನಿಗದಿತವಲ್ಲದ ಮಾರ್ಗದಲ್ಲಿ ನುಗ್ಗಲಿದೆ ಎಂಬುದು ದೆಹಲಿ ಪೊಲೀಸರಿಗೆ ಗೊತ್ತಿತ್ತು. ಅವರ ಜೊತೆ ಮಾತಾಡುವ ಅಥವಾ ನಿಗ್ರಹಿಸುವ ಪ್ರಯತ್ನವನ್ನು ಅವರು ಮಾಡಲಿಲ್ಲ. ಅದು ಆಗಲಿ ಎಂದು ಬಿಟ್ಟುಕೊಂಡಿದ್ದು ಎದ್ದು ಕಾಣುತ್ತಿದೆ.
ಜನವರಿ 26ರ ಇಡೀ ಹೋರಾಟದ ಲಾಂಛನವಾಗಿ ತ್ರಿವರ್ಣಧ್ವಜ ಇರಲಿದೆ ಎಂದು ಸಂಯುಕ್ತ್ ಕಿಸಾನ್ ಮೋಚರ್ಾ ಮುಂಚೆಯೇ ಘೋಷಿಸಿತ್ತು. ಹಾಗೆಯೇ ಲಕ್ಷಾಂತರ ತ್ರಿವರ್ಣಧ್ವಜಗಳು ಹಾರಾಡಿದವು. ಆದರೆ ನಿದರ್ಿಷ್ಟವಾಗಿ ಬಾವುಟವನ್ನೇ ಬದಲಿಸಿ ಅದನ್ನು ಕೆಂಪುಕೋಟೆಯಲ್ಲೇ ಹೋಗಿ ಕಟ್ಟಿರುವುದರಲ್ಲಿ ಹುನ್ನಾರವಲ್ಲದೇ ಇನ್ನೇನೂ ಅಲ್ಲ ಎಂಬುದು ಸಂಯುಕ್ತ್ ಕಿಸಾನ್ ಮೋರ್ಚಾದ ಅಭಿಪ್ರಾಯ.
ಪ್ರಶ್ನೆ: ಜನವರಿ 26ರಂದು ಪೊಲೀಸರ ಜೊತೆಗೆ ನಿಗದಿಯಾದ ಸಮಯ ಹಾಗೂ ಮಾರ್ಗವನ್ನು ಬಿಟ್ಟು ದೆಹಲಿಯ ಕೇಂದ್ರ ಭಾಗ ಮತ್ತು ಕೆಂಪುಕೋಟೆಗೆ ಹೋದವರಲ್ಲಿ ಸಾಮಾನ್ಯ ರೈತರು ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದವರಿರಲಿಲ್ಲವೇ?
ಉತ್ತರ: ಇದ್ದಿರಲು ಸಾಧ್ಯ. ಏಕೆಂದರೆ ಸದರಿ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ಅಥವಾ ದೀಪ್ ಸಿಧುಗೆ ಇಷ್ಟೊಂದು ಬೆಂಬಲಿಗರಿಲ್ಲ. ಹಾಗಾಗಿ ಕೆಲವರು ಸಲೀಸಾಗಿ ರ್ಯಾಲಿ ಶುರು ಮಾಡಿದ್ದು ಮತ್ತು ಪೊಲೀಸರು ತಡೆಯದೇ ಇದ್ದದ್ದು ನೋಡಿ ಇನ್ನೊಂದಿಷ್ಟು ಜನರೂ ಹೊರಟಿರಬಹುದು. ಹಾಗೆ ಹೊರಟವರಿಗೆ ಕಳೆದ 60 ದಿನಗಳಿಂದ ಸರ್ಕಾರ ಪ್ರತಿಕ್ರಿಯಿಸದೇ ಇದ್ದುದನ್ನು ನೋಡಿ ಆಕ್ರೋಶವೂ ಇದ್ದಿರಬಹುದು. ಹಾಗಾಗಿ ಅವರುಗಳೂ ಇವರನ್ನು ಹಿಂಬಾಲಿಸಿ ಮುಂದಕ್ಕೆ ಹೋಗಿದ್ದಾರೆ. ಆದರೆ ಸಂಯುಕ್ತ್ ಕಿಸಾನ್ ಮೋರ್ಚಾ, ಹಿಂದೆ ನಿಗದಿಯಾಗಿದ್ದಂತೆ 12 ಗಂಟೆಗೆ ಪೆರೇಡ್ ಶುರು ಮಾಡಿತು ಮತ್ತು ಅದರಲ್ಲಿ ಲಕ್ಷಾಂತರ ಟ್ರ್ಯಾಕ್ಟರ್ಗಳಿದ್ದವು.
ಕೆಂಪುಕೋಟೆಯ ಬಳಿ ಒಳಗೆ ಹೋಗಿ ಧ್ವಜ ಹಾರಿಸಿದವರು ಮಾತ್ರ ಬಹಳ ಕಡಿಮೆ ಜನ. ಆ ಧ್ವಜ ಹಾರಿಸಿದ ರೀತಿಯು ಅಲ್ಲೇ ಹೊರಗೆ ಕೆಂಪುಕೋಟೆಯ ಆಚೆ ನಿಂತವರಿಗೂ ಇಷ್ಟವಾಗಿರಲಿಲ್ಲ ಎಂಬುದನ್ನೂ ಇಲ್ಲಿ ದಾಖಲಿಸಬೇಕು.
ಆದರೂ ಹುನ್ನಾರದ ಸಾಧ್ಯತೆ ಇದ್ದುದರಿಂದಲೇ ಜನವರಿ 26ರಂದು ಶಾಂತಿಯುತವಾಗಿ ರಾಷ್ಟ್ರಧ್ವಜದೊಂದಿಗೆ ಪೊಲೀಸರೊಂದಿಗೂ ಮಾತುಕತೆ ನಡೆಸಿ ಒಪ್ಪಿದ ಮಾರ್ಗದಲ್ಲಿ ಇತಿಹಾಸದಲ್ಲೇ ಬೃಹತ್ತಾದ ಟ್ರ್ಯಾಕ್ಟರ್ ರ್ಯಾಲಿಗೆ ಸಂಘಟಕರು ಮುಂದಾಗಿದ್ದರು.
ಪ್ರಶ್ನೆ: ಈಗ ಮರ್ಯಾದೆ ಹೋಗಿಬಿಟ್ಟಿತಲ್ಲವೇ? ಜನರು ಈಗ ನಂಬುತ್ತಾರಾ?
ಉತ್ತರ: ಯಾವ ಮರ್ಯಾದೆಯೂ ಹೋಗಿಲ್ಲ. ಸಂಯುಕ್ತ್ ಕಿಸಾನ್ ಮೋಚರ್ಾವು ಈ ವಿಚಾರದಲ್ಲಿ ಯಾವುದೇ ತಪ್ಪುಗಳನ್ನು ಎಸಗಿಲ್ಲ. ಮುಂಚಿನಿಂದಲೂ ಹೋರಾಟದ ಜೊತೆಗಿದ್ದವರು ಈಗಲೂ ಜೊತೆಗಿದ್ದಾರೆ. ಅನುಮಾನಗಳು, ಅರೆಬರೆ ಪಾಲ್ಗೊಳ್ಳುವಿಕೆ ಇದ್ದವರು ಮಾತ್ರ ಹೊರ ಹೋಗಿದ್ದಾರೆ. ಮಯರ್ಾದೆ ಹೋಗಿರುವುದು ಸಕರ್ಾರದ್ದು, ಮೀಡಿಯಾಗಳದ್ದು. ಅವರು ಹೇಳಿದ್ದನ್ನು ನಂಬುವ ಜನ ಹಿಂದೆಯೂ ನಂಬುತ್ತಿದ್ದರು.
ಅಲ್ಲಿರುವ ಜನರು ಈಗಲೂ ದೃಢ ಸಂಕಲ್ಪದಿಂದ ಹೋರಾಟವನ್ನು ಮುಂದುವರೆಸುತ್ತಿದ್ದಾರೆ. ಈ ವಿಚಾರದಲ್ಲಿ ಯಾವುದೇ ಹಿಂಜರಿಕೆಯಿಲ್ಲದೇ, ಈ ಶತಮಾನದ ಮಹಾನ್ ಹೋರಾಟದ ಜೊತೆಗೆ ಮತ್ತು ಅದನ್ನು ಮುನ್ನಡೆಸುತ್ತಿರುವವರ ಜೊತೆಗೆ ಗಟ್ಟಿಯಾಗಿ ನಿಲ್ಲುವ ಕೆಲಸವನ್ನು ಪ್ರಜ್ಞಾವಂತರು ಮಾಡಿದರೆ ಇನ್ನೂ ಬೃಹತ್ತಾಗಿ ಬೆಳೆದು ನಿಲ್ಲುತ್ತದೆ.
ನಾವೇನು ಮಾಡಬಹುದು?
ಈ ಸಂದರ್ಭದಲ್ಲಿ ಇಂತಹ ಐತಿಹಾಸಿಕ ಹೋರಾಟವನ್ನು ದಿಕ್ಕುತಪ್ಪಿಸುವ, ದಮನ ಮಾಡುವ ಒಕ್ಕೂಟ ಸಕರ್ಾರದ ಹುನ್ನಾರಕ್ಕೆ ನಾವು ಬಲಿಬೀಳಬಾರದು. ಮಾಧ್ಯಮಗಳು ಜೋರಾಗಿ ಕೂಗಿಕೊಂಡರೆ ಅದೇ ಸತ್ಯವಲ್ಲ. ಮಾರಿಕೊಂಡ ಮಾಧ್ಯಮಗಳಿಗೆ ಈಗ ಗೋದಿ ಮೀಡಿಯಾ ಎಂಬ ಹೆಸರಿದೆ. ಗೋದಿ ಮೀಡಿಯಾಕ್ಕಿಂತ ಜೋರಾಗಿ ಮಿಕ್ಕವರೂ ಅಬ್ಬರಿಸುವುದು ಮತ್ತು ಸರ್ಕಾರದ ಹುನ್ನಾರವನ್ನು ಬಯಲಿಗೆಳೆಯಲು ಕ್ರಿಯಾಶೀಲರಾಗಿರುವುದು ಬಹಳ ಮುಖ್ಯ. ಎಲ್ಲಕ್ಕಿಂತ ಮುಖ್ಯವಾಗಿ ಕನರ್ಾಟಕದಲ್ಲಿ ಹೋರಾಟ ವಿಸ್ತಾರವಾಗುವಂತೆ ಮಾಡಲು ಏನು ಮಾಡಬೇಕೋ ಆ ನಿಟ್ಟಿನತ್ತ ನಾವು ಕೇಂದ್ರೀಕರಿಸಬೇಕು.
ಮುಕ್ತಾಯ
ಕೃಪೆ | ಈ ಸುದ್ದಿ/ವಿಶ್ಲೇಷಣೆ ಮಾಸ್ ಮೀಡಿಯಾ ಫೌಂಡೇಷನ್ ನೆರವಿನೊಂದಿಗೆ ಪ್ರಕಟಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ3 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ3 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

