Connect with us

ದಿನದ ಸುದ್ದಿ

ಭಾಗ-2 | ದೆಹಲಿ ಹೋರಾಟದ ಕೆಲವು ಅಸಲೀ ಸಂಗತಿಗಳು; ಕಿಸಾನ್ ಮೋರ್ಚಾ ಏನು ಹೇಳುತ್ತಿದೆ..?

Published

on

ಮುಂದುವರಿದ ಭಾಗ

ಪ್ರಶ್ನೆ: ಜನವರಿ 26ರಂದು ದೆಹಲಿಯೊಳಕ್ಕೆ ನುಗ್ಗಿ ಹೋದವರ ಕುರಿತು ಸಂಯುಕ್ತ್ ಕಿಸಾನ್ ಮೋರ್ಚ ನೆಗೆಟಿವ್ ಆಗಿ ಏಕೆ ಮಾತಾಡಿತು? ಕೆಂಪುಕೋಟೆಯ ಮೇಲೆ ಬಾವುಟ ಹಾರಿಸಿದರೆ ಏನು ತಪ್ಪು? ಇದರಲ್ಲಿ ಹುನ್ನಾರವಿದೆ ಎಂದು ಏಕೆ ಹೇಳಿದರು?

60 ದಿನಗಳ ಕಾಲ ಕೊರೆಯುವ ಚಳಿಯಲ್ಲಿ ಬೀದಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ನಿಭಾಯಿಸುತ್ತಾ ಹೋರಾಟವೊಂದನ್ನು ನಡೆಸುತ್ತಾ ಹೋಗುವುದು ಬಹಳ ಸಂಕೀರ್ಣವಾದ ಜವಾಬ್ದಾರಿ. ಇದರ ಜೊತೆಗೆ ಕನಿಷ್ಠ ಒಂದೂವರೆ ಲಕ್ಷ ಟ್ರ್ಯಾಕ್ಟರ್ಗಳ, ಅಂದರೆ ಸುಮಾರು 5 ಲಕ್ಷ ಜನರು ಬಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ಯೋಜಿಸಿದ್ದು ಇದೇ ಸಂಯುಕ್ತ್ ಕಿಸಾನ್ ಮೋಚರ್ಾ. ಸುಪ್ರೀಂಕೋರ್ಟ್ ಸೇರಿದಂತೆ ಯಾರೂ ಅದಕ್ಕೆ ಹಸಿರು ನಿಶಾನೆ ತೋರಿಸಿರಲಿಲ್ಲ.

ಒಂದು ಹಂತದಲ್ಲಿ ಸುಪ್ರೀಂಕೋರ್ಟ್ ಇದರ ಬಗ್ಗೆ ಉಲ್ಟಾ ಮಾತಾಡಿತ್ತು. ಆದರೆ ಅಂತಿಮವಾಗಿ ದೆಹಲಿ ಪೊಲೀಸರ ಜೊತೆ ನಡೆದ ಮಾತುಕತೆಯಲ್ಲಿ ಕೆಲವು ನಿರ್ದಿಷ್ಟ ಮಾರ್ಗಗಳ ಕುರಿತು ಪರಸ್ಪರ ಒಪ್ಪಿಗೆಗೆ ಬರಲಾಯಿತು. ಒಂದು ವೇಳೆ ಈ ಟ್ರ್ಯಾಕ್ಟರ್ ಮಾಚರ್್ ಸಂಪೂರ್ಣ ಅಂದುಕೊಂಡ ಹಾಗೆ ನಡೆದಿದ್ದರೆ 26ರ ಹಗಲು, ರಾತ್ರಿ ಅಷ್ಟೇ ಅಲ್ಲದೇ 27ರ ಬೆಳಿಗ್ಗೆಯವರೆಗೂ ಟ್ರ್ಯಾಕ್ಟರ್ ಸಾಲು ಮುಗಿಯುತ್ತಿರಲಿಲ್ಲ.

ಇದಲ್ಲದೇ ಫೆಬ್ರವರಿ 1ಕ್ಕೆ ಶಾಂತಿಯುತವಾಗಿ ಪಾಲರ್ಿಮೆಂಟ್ ಚಲೋವನ್ನೂ, ಜನವರಿ 25ರಂದು ಘೋಷಿಸಲಾಗಿತ್ತು. ಬಜೆಟ್ ಅಧಿವೇಶನ ಶುರುವಾಗುವ ದಿನ (26ಕ್ಕೆ ಬಂದವರಲ್ಲೂ ಲಕ್ಷಾಂತರ ಜನರು ಉಳಿದುಕೊಂಡು) ಪಾರ್ಲಿಮೆಂಟ್ ಚಲೋ ನಡೆಸುವುದು ಅವರ ಉದ್ದೇಶವಾಗಿತ್ತು. ಆದರೆ, ಈ ಮಧ್ಯೆ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿಯ ಕಡೆಯಿಂದ ಜನವರಿ 25ರಂದೇ ವಿಡಿಯೋ ಬಿಡುಗಡೆ ಮಾಡಿ ತಾವು ಜನವರಿ 26ರಂದು ಪೂರ್ವನಿಗದಿತ ಮಾರ್ಗದಲ್ಲಿ ಹೋಗುವುದಿಲ್ಲವೆಂದು ಘೋಷಿಸಿಯಾಗಿತ್ತು.

ಜೊತೆಗೆ ತಾವು ರಿಂಗ್ ರಸ್ತೆಯಲ್ಲೇ ಹೋಗುತ್ತೇವೆಂತಲೂ, ಕೆಂಪುಕೋಟೆಯ ಮೇಲೆ ಬಾವುಟ ಹಾರಿಸುತ್ತೇವೆಂತಲೂ ಹೇಳಿದ್ದರು. ಅವರು ಹಿಂದಿನಿಂದಲೂ ಸಂಯುಕ್ತ್ ಕಿಸಾನ್ ಮೋರ್ಚಾದಲ್ಲಿರಲಿಲ್ಲ. ಜೊತೆಗೆ ದೀಪ್ ಸಿಧುವೂ ಸಂಯುಕ್ತ್ ಕಿಸಾನ್ ಮೋರ್ಚಾದ ಭಾಗವಲ್ಲ.

ಆತ ಸದಾಕಾಲ ಇಲ್ಲಿನ ಸುಸಂಘಟಿತ ವಿಧಾನವನ್ನು ಹಾಳುಮಾಡುವ ಕೆಲಸ ಮಾಡುತ್ತಲೇ ಇದ್ದರು. ಒಂದು ಹಂತದಲ್ಲಿ ರೈತ ನಾಯಕರೊಬ್ಬರು ಈತ ಮತ್ತು ಈತನ ಗೆಳೆಯ ಲಖಾ ಸಿಧಾನಾ (ಈತ ಹಿಂದೆ ಗ್ಯಾಂಗ್ಸ್ಟರ್ ಆಗಿದ್ದು, ಈಗ ಸಾಮಾಜಿಕ ಕಾರ್ಯಕರ್ತನೆಂದು ಹೇಳಿಕೊಳ್ಳುತ್ತಾನೆ) ಇಬ್ಬರೂ ಈ ಹೋರಾಟದ ಶತ್ರುಗಳು ಎಂದು ಘೋಷಿಸಿದ್ದರು.

ಇದಕ್ಕೆ ಕಾರಣ, ಬಿಜೆಪಿ ಜೊತೆಗೂ ಇದ್ದ ಈ ಇಬ್ಬರು ಖಲಿಸ್ತಾನದ ಪರವಾಗಿ ಮಾತನಾಡುವುದು, ಭಿಂದ್ರನ್ವಾಲೆಯ ಮಾತುಗಳನ್ನು ಉಲ್ಲೇಖಿಸುವುದನ್ನು ಮಾಡುತ್ತಲಿದ್ದರು. ಪತ್ರಕತರ್ೆ ಬಖರ್ಾದತ್ ನಡೆಸಿದ ಸಂದರ್ಶನವೊಂದರಲ್ಲೂ ಈತ ಆ ಮಾತುಗಳನ್ನಾಡಿರುವುದನ್ನು ಕೇಳಬಹುದು. ಜೊತೆಗೆ ಲಕ್ಷಾಂತರ ಜನರ ಮನಸ್ಥಿತಿ, ತಯಾರಿ ಹಾಗೂ ಗೆದ್ದುಕೊಂಡೇ ವಾಪಸ್ಸು ಹೋಗಬೇಕು ಎಂಬ ಸರ್ವಾನುಮತದ ಅಭಿಪ್ರಾಯಗಳಿಗೆ ವ್ಯತಿರಿಕ್ತವಾಗಿ ನಿರಂತರವಾಗಿ ವ್ಯಕ್ತಿಗತ ಅನಿಸಿಕೆಗಳನ್ನು ಮುಂದಿಡುವುದು ದೀಪ್ ಸಿಧು ಪ್ರವೃತ್ತಿಯಾಗಿತ್ತು. ಸಂಯುಕ್ತ್ ಕಿಸಾನ್ ಮೋಚರ್ಾದ ಸರ್ವಾನುಮತದಿಂದ ಅಭಿಪ್ರಾಯಕ್ಕೆ ವಿರುದ್ಧವಾಗಿ ಈ ವ್ಯಕ್ತಿ ಜನವರಿ 25ರಂದೂ ಜನರನ್ನು ಉದ್ರೇಕಗೊಳಿಸಲು ಪ್ರಯತ್ನಿಸಿದ್ದರು.

ದೀಪ್ ಸಿಧುವಷ್ಟೇ ಅಲ್ಲದೇ, ಮೇಲೆ ಹೇಳಲಾದ ಇನ್ನೊಂದು ಸಂಘಟನೆಯ ಜನರು ಸಿಂಘು ಬಾರ್ಡರ್ನಲ್ಲಿ ಸೇರಿಕೊಂಡಿದ್ದ ನಿದರ್ಿಷ್ಟ ಸ್ಥಳವೂ ಅನುಮಾನಾಸ್ಪದವಾಗಿತ್ತು. ಸಂಯುಕ್ತ್ ಕಿಸಾನ್ ಮೋಚರ್ಾದ ಅಡಿಯಲ್ಲಿ ಸಂಘಟಿತರಾಗಿರುವ ಲಕ್ಷಾಂತರ ರೈತರಿಗೂ ದೆಹಲಿಗೂ ಮಧ್ಯೆ ಬ್ಯಾರಿಕೇಡ್ಗಳಿದ್ದವು. ಆ ಬ್ಯಾರಿಕೇಡ್ಗಳೀಚೆ ದೆಹಲಿ ಪೊಲೀಸರಿದ್ದರು.

ಅವರಿಗೂ ಈಚೆ ಈ ಸಂಘಟನೆಗೆ ಪ್ರತಿಭಟನೆ ಶುರುವಾದ 13 ದಿನಗಳ ನಂತರ ವಿಶೇಷ ಟೆಂಟ್ಗಳ ಸೌಲಭ್ಯದೊಂದಿಗೆ ಇರಲು ಅವಕಾಶ ಕಲ್ಪಿಸಲಾಗಿತ್ತು. ಅವರ ಪಕ್ಕ ಸುಲಭದಲ್ಲಿ ತೆಗೆಯಬಹುದಾದ ಬ್ಯಾರಿಕೇಡ್ಗಳಿದ್ದವು. ಇವರು ಜನವರಿ 26ರಂದು ನಿಗದಿತ ಸಮಯಕ್ಕಿಂತ ಮುಂಚೆಯೇ ದೆಹಲಿಯೊಳಗೆ ಹೋದಂತೆ ಅಲ್ಲಲ್ಲಿ ಪೊಲೀಸರು ತಡೆದರಾದರೂ, ಅತ್ಯಂತ ಬಿಗಿ ಬಂದೋಬಸ್ತಿನ ಬದಲು ನಿಧಾನಕ್ಕೆ ಇವರನ್ನು ಒಳಕ್ಕೆ ಬಿಟ್ಟುಕೊಂಡಂತೆಯೇ ಕಂಡುಬಂದಿತು.

ಎಲ್ಲಕ್ಕಿಂತ ಮುಖ್ಯವಾಗಿ ಜನವರಿ 26ರಂದು ಸಾಮಾನ್ಯವಾಗಿಯೇ ಹೆಚ್ಚಿನ ಭದ್ರತೆ ಇರುವ ಕೆಂಪುಕೋಟೆಯ ಸುತ್ತ ಭದ್ರತೆ ಕಡಿಮೆ ಇತ್ತು. 50 ಜನರ ಗುಂಪು ಒಳಗೆ ಸುಲಭದಲ್ಲಿ ಪ್ರವೇಶಿಸಿ ಬಾವುಟ ಕಟ್ಟಲು ಅವರನ್ನು ಬಿಟ್ಟುಕೊಳ್ಳಲಾಯಿತು ಎಂಬುದು ಮೇಲ್ನೋಟಕ್ಕೇ ಕಂಡುಬರುತ್ತದೆ.

ಬಿಜೆಪಿ ಮತ್ತು ಈ ಜನರು ಮಾತಾಡಿಕೊಂಡು ಇದನ್ನು ಯೋಜಿಸಿದ್ದಾರಾ ಇಲ್ಲವಾ ಈಗಲೇ ಹೇಳಲು ಸಾಂದಭರ್ಿಕ ಸಾಕ್ಷ್ಯಗಳಿವೆಯೇ ಹೊರತು ಪುರಾವೆಗಳಿಲ್ಲ; ಆದರೆ ಅನುಮಾನಗಳಿವೆ. ಒಂದಂತೂ ಸ್ಪಷ್ಟ. ಸಂಯುಕ್ತ್ ಕಿಸಾನ್ ಮೋಚರ್ಾದ ಹೊರತಾದ ಒಂದು ಗುಂಪು ದೆಹಲಿಯೊಳಗೆ ಪೂರ್ವನಿಗದಿತವಲ್ಲದ ಮಾರ್ಗದಲ್ಲಿ ನುಗ್ಗಲಿದೆ ಎಂಬುದು ದೆಹಲಿ ಪೊಲೀಸರಿಗೆ ಗೊತ್ತಿತ್ತು. ಅವರ ಜೊತೆ ಮಾತಾಡುವ ಅಥವಾ ನಿಗ್ರಹಿಸುವ ಪ್ರಯತ್ನವನ್ನು ಅವರು ಮಾಡಲಿಲ್ಲ. ಅದು ಆಗಲಿ ಎಂದು ಬಿಟ್ಟುಕೊಂಡಿದ್ದು ಎದ್ದು ಕಾಣುತ್ತಿದೆ.

ಜನವರಿ 26ರ ಇಡೀ ಹೋರಾಟದ ಲಾಂಛನವಾಗಿ ತ್ರಿವರ್ಣಧ್ವಜ ಇರಲಿದೆ ಎಂದು ಸಂಯುಕ್ತ್ ಕಿಸಾನ್ ಮೋಚರ್ಾ ಮುಂಚೆಯೇ ಘೋಷಿಸಿತ್ತು. ಹಾಗೆಯೇ ಲಕ್ಷಾಂತರ ತ್ರಿವರ್ಣಧ್ವಜಗಳು ಹಾರಾಡಿದವು. ಆದರೆ ನಿದರ್ಿಷ್ಟವಾಗಿ ಬಾವುಟವನ್ನೇ ಬದಲಿಸಿ ಅದನ್ನು ಕೆಂಪುಕೋಟೆಯಲ್ಲೇ ಹೋಗಿ ಕಟ್ಟಿರುವುದರಲ್ಲಿ ಹುನ್ನಾರವಲ್ಲದೇ ಇನ್ನೇನೂ ಅಲ್ಲ ಎಂಬುದು ಸಂಯುಕ್ತ್ ಕಿಸಾನ್ ಮೋರ್ಚಾದ ಅಭಿಪ್ರಾಯ.

ಪ್ರಶ್ನೆ: ಜನವರಿ 26ರಂದು ಪೊಲೀಸರ ಜೊತೆಗೆ ನಿಗದಿಯಾದ ಸಮಯ ಹಾಗೂ ಮಾರ್ಗವನ್ನು ಬಿಟ್ಟು ದೆಹಲಿಯ ಕೇಂದ್ರ ಭಾಗ ಮತ್ತು ಕೆಂಪುಕೋಟೆಗೆ ಹೋದವರಲ್ಲಿ ಸಾಮಾನ್ಯ ರೈತರು ಹಾಗೂ ಸಂಯುಕ್ತ್ ಕಿಸಾನ್ ಮೋರ್ಚಾದವರಿರಲಿಲ್ಲವೇ?

ಉತ್ತರ: ಇದ್ದಿರಲು ಸಾಧ್ಯ. ಏಕೆಂದರೆ ಸದರಿ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ಅಥವಾ ದೀಪ್ ಸಿಧುಗೆ ಇಷ್ಟೊಂದು ಬೆಂಬಲಿಗರಿಲ್ಲ. ಹಾಗಾಗಿ ಕೆಲವರು ಸಲೀಸಾಗಿ ರ್ಯಾಲಿ ಶುರು ಮಾಡಿದ್ದು ಮತ್ತು ಪೊಲೀಸರು ತಡೆಯದೇ ಇದ್ದದ್ದು ನೋಡಿ ಇನ್ನೊಂದಿಷ್ಟು ಜನರೂ ಹೊರಟಿರಬಹುದು. ಹಾಗೆ ಹೊರಟವರಿಗೆ ಕಳೆದ 60 ದಿನಗಳಿಂದ ಸರ್ಕಾರ ಪ್ರತಿಕ್ರಿಯಿಸದೇ ಇದ್ದುದನ್ನು ನೋಡಿ ಆಕ್ರೋಶವೂ ಇದ್ದಿರಬಹುದು. ಹಾಗಾಗಿ ಅವರುಗಳೂ ಇವರನ್ನು ಹಿಂಬಾಲಿಸಿ ಮುಂದಕ್ಕೆ ಹೋಗಿದ್ದಾರೆ. ಆದರೆ ಸಂಯುಕ್ತ್ ಕಿಸಾನ್ ಮೋರ್ಚಾ, ಹಿಂದೆ ನಿಗದಿಯಾಗಿದ್ದಂತೆ 12 ಗಂಟೆಗೆ ಪೆರೇಡ್ ಶುರು ಮಾಡಿತು ಮತ್ತು ಅದರಲ್ಲಿ ಲಕ್ಷಾಂತರ ಟ್ರ್ಯಾಕ್ಟರ್ಗಳಿದ್ದವು.

ಕೆಂಪುಕೋಟೆಯ ಬಳಿ ಒಳಗೆ ಹೋಗಿ ಧ್ವಜ ಹಾರಿಸಿದವರು ಮಾತ್ರ ಬಹಳ ಕಡಿಮೆ ಜನ. ಆ ಧ್ವಜ ಹಾರಿಸಿದ ರೀತಿಯು ಅಲ್ಲೇ ಹೊರಗೆ ಕೆಂಪುಕೋಟೆಯ ಆಚೆ ನಿಂತವರಿಗೂ ಇಷ್ಟವಾಗಿರಲಿಲ್ಲ ಎಂಬುದನ್ನೂ ಇಲ್ಲಿ ದಾಖಲಿಸಬೇಕು.

ಆದರೂ ಹುನ್ನಾರದ ಸಾಧ್ಯತೆ ಇದ್ದುದರಿಂದಲೇ ಜನವರಿ 26ರಂದು ಶಾಂತಿಯುತವಾಗಿ ರಾಷ್ಟ್ರಧ್ವಜದೊಂದಿಗೆ ಪೊಲೀಸರೊಂದಿಗೂ ಮಾತುಕತೆ ನಡೆಸಿ ಒಪ್ಪಿದ ಮಾರ್ಗದಲ್ಲಿ ಇತಿಹಾಸದಲ್ಲೇ ಬೃಹತ್ತಾದ ಟ್ರ್ಯಾಕ್ಟರ್ ರ್ಯಾಲಿಗೆ ಸಂಘಟಕರು ಮುಂದಾಗಿದ್ದರು.

ಪ್ರಶ್ನೆ: ಈಗ ಮರ್ಯಾದೆ ಹೋಗಿಬಿಟ್ಟಿತಲ್ಲವೇ? ಜನರು ಈಗ ನಂಬುತ್ತಾರಾ?

ಉತ್ತರ: ಯಾವ ಮರ್ಯಾದೆಯೂ ಹೋಗಿಲ್ಲ. ಸಂಯುಕ್ತ್ ಕಿಸಾನ್ ಮೋಚರ್ಾವು ಈ ವಿಚಾರದಲ್ಲಿ ಯಾವುದೇ ತಪ್ಪುಗಳನ್ನು ಎಸಗಿಲ್ಲ. ಮುಂಚಿನಿಂದಲೂ ಹೋರಾಟದ ಜೊತೆಗಿದ್ದವರು ಈಗಲೂ ಜೊತೆಗಿದ್ದಾರೆ. ಅನುಮಾನಗಳು, ಅರೆಬರೆ ಪಾಲ್ಗೊಳ್ಳುವಿಕೆ ಇದ್ದವರು ಮಾತ್ರ ಹೊರ ಹೋಗಿದ್ದಾರೆ. ಮಯರ್ಾದೆ ಹೋಗಿರುವುದು ಸಕರ್ಾರದ್ದು, ಮೀಡಿಯಾಗಳದ್ದು. ಅವರು ಹೇಳಿದ್ದನ್ನು ನಂಬುವ ಜನ ಹಿಂದೆಯೂ ನಂಬುತ್ತಿದ್ದರು.

ಅಲ್ಲಿರುವ ಜನರು ಈಗಲೂ ದೃಢ ಸಂಕಲ್ಪದಿಂದ ಹೋರಾಟವನ್ನು ಮುಂದುವರೆಸುತ್ತಿದ್ದಾರೆ. ಈ ವಿಚಾರದಲ್ಲಿ ಯಾವುದೇ ಹಿಂಜರಿಕೆಯಿಲ್ಲದೇ, ಈ ಶತಮಾನದ ಮಹಾನ್ ಹೋರಾಟದ ಜೊತೆಗೆ ಮತ್ತು ಅದನ್ನು ಮುನ್ನಡೆಸುತ್ತಿರುವವರ ಜೊತೆಗೆ ಗಟ್ಟಿಯಾಗಿ ನಿಲ್ಲುವ ಕೆಲಸವನ್ನು ಪ್ರಜ್ಞಾವಂತರು ಮಾಡಿದರೆ ಇನ್ನೂ ಬೃಹತ್ತಾಗಿ ಬೆಳೆದು ನಿಲ್ಲುತ್ತದೆ.

ನಾವೇನು ಮಾಡಬಹುದು?

ಈ ಸಂದರ್ಭದಲ್ಲಿ ಇಂತಹ ಐತಿಹಾಸಿಕ ಹೋರಾಟವನ್ನು ದಿಕ್ಕುತಪ್ಪಿಸುವ, ದಮನ ಮಾಡುವ ಒಕ್ಕೂಟ ಸಕರ್ಾರದ ಹುನ್ನಾರಕ್ಕೆ ನಾವು ಬಲಿಬೀಳಬಾರದು. ಮಾಧ್ಯಮಗಳು ಜೋರಾಗಿ ಕೂಗಿಕೊಂಡರೆ ಅದೇ ಸತ್ಯವಲ್ಲ. ಮಾರಿಕೊಂಡ ಮಾಧ್ಯಮಗಳಿಗೆ ಈಗ ಗೋದಿ ಮೀಡಿಯಾ ಎಂಬ ಹೆಸರಿದೆ. ಗೋದಿ ಮೀಡಿಯಾಕ್ಕಿಂತ ಜೋರಾಗಿ ಮಿಕ್ಕವರೂ ಅಬ್ಬರಿಸುವುದು ಮತ್ತು ಸರ್ಕಾರದ ಹುನ್ನಾರವನ್ನು ಬಯಲಿಗೆಳೆಯಲು ಕ್ರಿಯಾಶೀಲರಾಗಿರುವುದು ಬಹಳ ಮುಖ್ಯ. ಎಲ್ಲಕ್ಕಿಂತ ಮುಖ್ಯವಾಗಿ ಕನರ್ಾಟಕದಲ್ಲಿ ಹೋರಾಟ ವಿಸ್ತಾರವಾಗುವಂತೆ ಮಾಡಲು ಏನು ಮಾಡಬೇಕೋ ಆ ನಿಟ್ಟಿನತ್ತ ನಾವು ಕೇಂದ್ರೀಕರಿಸಬೇಕು.

ಮುಕ್ತಾಯ

ಕೃಪೆ | ಈ ಸುದ್ದಿ/ವಿಶ್ಲೇಷಣೆ ಮಾಸ್‌ ಮೀಡಿಯಾ ಫೌಂಡೇಷನ್‌ ನೆರವಿನೊಂದಿಗೆ ಪ್ರಕಟಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending