ದಿನದ ಸುದ್ದಿ
ಮಾಧ್ಯಮ ಉದ್ಯಮವಾಗಿರುವ ಈ ಕಾಲಘಟ್ಟದಲ್ಲಿ ಜನರೇ ಜನಾಭಿಪ್ರಾಯ ರೂಪಿಸುವ ಹೊಣೆ ಹೊರಬೇಕು : ಹಿರಿಯ ಪತ್ರಕರ್ತ ಬಸವರಾಜ್ ದೊಡ್ಮನಿ
ಸುದ್ದಿದಿನ,ಹರಪನಹಳ್ಳಿ: ಮಾಧ್ಯಮರಂಗ ಕಾವಲು ನಾಯಿಯಾಗಿ ಕೆಲಸ ಮಾಡುವಂತಹ ಕಾಲವಿತ್ತು, ಆದ್ರೆ ಈಗ ಯಾರ ಮನೆಯ ನಾಯಿ ಎಂದು ಜನರೇ ಕೇಳುವ ಮಟ್ಟಕ್ಕೆ ಮಾಧ್ಯಮರಂಗ ತನ್ನ ನೈತಿಕ ಅಂಧ ಪತನ ಕಾಣುತ್ತಿದೆ ಎಂದು ಹಿರಿಯ ಪತ್ರಕರ್ತ ಬಸವರಾಜ ದೊಡ್ಮನಿ ಬೇಸರ ವ್ಯಕ್ತಪಡಿಸಿದ್ರು.
ಹರಪನಹಳ್ಳಿಯಲ್ಲಿ ಎರಡು ದಿನಗಳ ಕಾಲ ನಡೆಯುತ್ತಿರುವ “ಬುಡಕಟ್ಟು ಸಮುದಾಯಗಳ ಐಕ್ಯತಾ ವೇದಿಕೆ ಹಾಗೂ ಪೆರಿಯರ್ ಮತ್ತು ಎಂ ಪಿ ಪ್ರಕಾಶ್ ಸೇವಾ ಸಂಸ್ಥೆ ಆಯೋಜಿಸಿರುವ ಯುವಜನರ ಸವಾಲುಗಳು ಹಾಗೂ ನಾಯಕತ್ವ ಶಿಬಿರದ “ಮಾಧ್ಯಮ ಮತ್ತು ಯುವಜನ” ಗೋಷ್ಠಿ ಉದ್ದೇಶಿಸಿ ಮಾತ್ನಾಡಿದ್ರು.
ಇದನ್ನೂ ಓದಿ | ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ
ಜನಾಭಿಪ್ರಾಯ ರೂಪಿಸಬೇಕಾದ ಮಾಧ್ಯಮ ಇಂದು ಸುದ್ದಿ ಹಪಾಹಪಿತನದಿಂದ ಜನರನ್ನೇ ದಾರಿ ತಪ್ಪಿಸುವಂತಹ ಹಂತಕ್ಕೆ ಬಂದು ತಲುಪಿದೆ. ಸುದ್ದಿ ಪ್ರಮಾಖ್ಯತೆಗಳನ್ನ ಆಯ್ಕೆ ಮಾಡುವಾಗ ಜನರ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಂಡ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ಆಳುವ ಜನರ ಕಪಿಮುಷ್ಠಿಯಿಂದ ಮಾಧ್ಯಮ ರಂಗವನ್ನ ಜನರೇ ಬಿಡಸಬೇಕಾದ ಅನಿವಾರ್ಯತೆ ಹಾಗೂ ಜವಾಬ್ದಾರಿ ನಮ್ಮ ಮೇಲಿದೆ. ಮಾಧ್ಯಮಗಳಿಗೆ ಈಗ ಸೆಕ್ಸ್, ಕ್ರೈಂ, ಫಿಲ್ಮ್ ಮಾತ್ರವೇ ಸುದ್ದಿಯ ಮೂಲವಾಗಿರುವುದು ನಿಜಕ್ಕೂ ದುರಂತ ಎಂದು ಅಭಿಪ್ರಾಯಿಸಿದ್ರು.
ಸುದ್ದಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಡಾ ವರದರಾಜ್ ಮಾತ್ನಾಡಿ, ಸ್ವಾತಂತ್ರ್ಯ ಚಳುವಳಿಯಲ್ಲಿ ಬಹುದೊಡ್ಡ ಪಾತ್ರವಹಿಸಿದೆ. ಸಮಾಜದ ಓರೆಕೋರೆಗಳನ್ನ ತಿದ್ದುವಲ್ಲಿ ಹಾಗೂ ಸಮಾಜದ ಜ್ವಲಂತ ಸಮಸ್ಯೆಗಳನ್ನ ಬೆಳಕಿಗೆ ತರುವಲ್ಲಿ ಮಾಧ್ಯಮಗಳು ಪಾತ್ರವಹಿಸಿದೆ. ಕಟ್ಟಕಡೆಯ ಹಳ್ಳಿಗಳ ಸಮಸ್ಯೆಗಳನ್ನ ಸರ್ಕಾರದ ಅಧಿಕಾರಿಗಳ ಗಮನಕ್ಕೆ ತಂದು ಕಿವಿ ಹಿಂಡುವ ಕೆಲಸಗಳು ಇವೆ. ಇಂತಹ ದೊಡ್ಡ ಶಕ್ತಿ ಇರುವ ಮಾಧ್ಯಮ ಎಲ್ಲೋ ಒಂದು ಕಡೆ ದಾರಿ ತಪ್ಪುತ್ತಿರುವುದು ವಿಷಾದ. ರಾಜಕೀಯ ನಾಯಕರೇ ಮಾಧ್ಯಮಗಳನ್ನ ನಿಯಂತ್ರಿಸುತ್ತಿರುವುದರಿಂದ ಜನರು ಮಾಧ್ಯಮದ ಮೇಲೆ ನಂಬಿಕೆ ಕಳೆದುಕೊಳ್ಳಲು ಕಾರಣ ಎಂದು ಅಭಿಪ್ರಾಯಿಸಿದ್ರು.
ಸತೀಶ್ ನಾಯಕ್ ಮಾತ್ನಾಡಿ ಪ್ರಭುತ್ವವನ್ನ ಪ್ರಶ್ನೆ ಮಾಡುವಂತಹ ಪತ್ರಕರ್ತರ ಮೇಲೆ ಬಹುದೊಡ್ಡ ದಾಳಿಗಳು ನಡೆಯುತ್ತಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಯುವಜನರು ಮಾಧ್ಯಮದ ಸವಾಲುಗಳ ಬಗ್ಗೆ ಚರ್ಚೆ ನಡೆಸುತ್ತಿರುವುದು ಆಶಾದಾಯಕ ಬೆಳವಣಿಗೆ. ಭವಿಷ್ಯತ್ತಿನಲ್ಲಿ ಯುವಜನರೇ ಮಾಧ್ಯಮದ ಜವಬ್ದಾರಿ ಹೊರಬೇಕಿದೆ ಎಂದು ಕರೆ ನೀಡಿದ್ರು.
ಕಾರ್ಯಕ್ರಮದಲ್ಲಿ ಕೋಡಿಹಳ್ಳಿ ಭೀಮಣ್ಣ, ಈಶ್ವರ್ ನಾಯಕ್ ಸೇರಿದಂತೆ ನೂರಾರು ಯುವಜನರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243