ದಿನದ ಸುದ್ದಿ
ಏ. 11 ರಂದು ನೆಲಮಂಗಲದಲ್ಲಿ ಕೆ ಆರ್ ಎಸ್ ಪಕ್ಷದಿಂದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಕಾರ್ಯಕ್ರಮ
ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಜ್ಯಾದ್ಯoತ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ವಿರುದ್ದ , ಸರ್ಕಾರಿ ಅದಿಕಾರಿಗಳಿಂದ ಪ್ರಾಮಾಣಿಕ ಜನಸೇವೆ , ಹಾಗೂ ನಾಗರಿಕರ ಅಹವಾಲು ಸ್ವೀಕಾರ , ಜನಜಾಗೃತಿ , ಜನಸ್ಪಂದನ , ಕಾರ್ಯಕ್ರಮವು ಇದೇ ತಿಂಗಳ 11 ರಂದು ನೆಲಮಂಗಲ ತಾಲೂಕು ಕಚೇರಿ ಆವರಣದಲ್ಲಿ ನಡೆಯಲಿದ್ದು, ಬೆಂಗಳೂರು ಗ್ರಾ , ಜಿಲ್ಲೆ ಯ ಹಾಗೂ ನೆಲಮಂಗಲ ತಾಲೂಕಿನ ಮತದಾರರು ಇದರ ಸದುಪಯೋಗ ಪಡೆದುಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೆಲಮಂಗಲ ತಾಲೂಕು ಕಚೇರಿ ಆವರಣದಲ್ಲಿ ಸಹ ನೆಲಮಂಗಲ ತಾಲೂಕು ಘಟಕದ ವತಿಯಿಂದ ಅಧ್ಯಕ್ಷರಾದ ಶ್ರೀ ಯುತ ಅರುಣ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಅವರ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಮತ್ತು ಶ್ರೀ ರಮೇಶ್ ಜಿ ಏನ್ , ರಾಜ್ಯಜಂಟಿ ಕಾರ್ಯದರ್ಶಿಗಳು ಹಾಗೂ ಚಿಕ್ಕಬಳ್ಳಾಪುರ – ಕೋಲಾರ ಜಿಲ್ಲಾ ಉಸ್ತುವಾರಿಗಳು ಮತ್ತು ಶ್ರೀ ಸೋಣ್ಣಪ್ಪಗೌಡರು ಬೆಟ್ಟಳ್ಳಿ ಬೆ , ಗ್ರಾ , ಜಿಲ್ಲಾ ಉಸ್ತುವಾರಿಗಳು ಹಾಗೂ ಹೊಸಕೋಟೆ ವಿದಾನಸಭಾ ಕ್ಷೆತ್ರದ ಸಂಭಾವ್ಯ ಅಭ್ಯರ್ಥಿಗಳು ಇವರು ಆತಿಥ್ಯ ದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವ ವಾಡುತಿದ್ರು, ಅಸಮರ್ಥ 40% ಕಮಿಷನ್ ಸರ್ಕಾರ, ಎಂದು ಕ್ಯಾತಿ ಗಳಿಸಿರುವ ಬಿಜೆಪಿ ಸರ್ಕಾರವನ್ನ , ಪೊಲೀಸ್ ಠಾಣೆಗಳಲ್ಲಿ ಅಕ್ರಮ ಚಟುವಟಿಕೆಗಳು ಏಗಿಲ್ಲದೆ ನಡೆಯುತ್ತಿದ್ರು , ಸರ್ಕಾರಿ ಅಧಿಕಾರಿಗಳು ಸಾಮಾನ್ಯ ಜನರಿಗೆ ಪ್ರಮಾಣಿಕ ಜನಸೇವೆ ಮಾಡದೆ. ವಿಳಂಬ ದೋರಣೆ , ಇಲ್ಲಸಲ್ಲದ ಸಾಬೂಬು ಹೇಳಿ,ಲಂಚಕ್ಕೆ ಬೇಡಿಕೆ , ಇನ್ನಿತರ ಆಮಿಷಗಳನ್ನ ಪಡೆಯಲು ತಿಂಗಳನು ಗಟ್ಟಲೆ , ಒಬ್ಬೊಬ್ಬರಿಗೆ ವರ್ಷನು ಗಟ್ಟಲೆ ಅರ್ಜಿಗಳನ್ನ ಪೆಂಡಿಂಗ್ ಇಟ್ಟಿರುತ್ತಾರೆ.
ಇನ್ನು ನೂರಾರು ತರದ ಸಮಸ್ಸೆ ಗಳು , ಸರ್ಕಾರ ವತಿಯಿಂದ ಸಿಗಬೇಕಾದ , ಯೋಜನೆಗಳು , ಅನುದಾನಗಳು , ಸಿಗುತ್ತಿಲ್ಲ, ಅಭಿವೃದ್ಧಿ ಕೆಲಸಗಳು ತೀರ ಕುಂಟಿತ ಆಗೋಗಿದೆ ಇದನ್ನ ಪ್ರೆಶ್ನೆ ಮಾಡಬೇಕಾದ , ವಿರೋದ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಗಳು ಕಿಂಚಿತ್ತು ಗಮನ ಕೊಡದೆ ರಾಜಿಕೀಯ ಮಾಡಿಕೊಂಡು , ಒಬ್ಬರಿಗೊಬ್ಬರು ಸಂತೆ ಯಲ್ಲಿ ಕಳ್ಳರ ಗುಂಪು ಇದ್ದಾಗೆ , ಈ ಜೆಸಿಬಿ ಪಕ್ಷಗಳು ಒಂದೆ ಮುಖದ ಮೂರು ನಾಣ್ಯಗಳಿದ್ದಂತೆ ಹೆಸರಿಗೆ ಮಾತ್ರ ಮೂರು ಪಕ್ಷಗಳು ಆದ್ರೆ ಎಲ್ಲರು ಒಂದಾಗಿ ರಾಜಿಕೀಯ ಮಾಡಿಕೊಂಡು ಸಾರ್ವಜಕರಿಗೆ ಸರಿಯಾದ ಸೇವೆ ಕೊಡದೆ ಮುಂದಿನ ವರ್ಷದ ಚುನಾವಣೆಗೆ ಗಮನ ಕೊಟ್ಟು ಅಭಿವೃದ್ಧಿಯನ್ನ ಮಾಡದೆ ಈಗಿನಿಂದಲೇ ಚುನಾವಣಾ ಬ್ಯುಸಿ ಯಲ್ಲಿದ್ದಾರೆ. ಇದನ್ನ ಜನಸಾಮಾನ್ಯರು ಗಂಭೀರ ವಾಗಿ ಯೋಚಿಸಬೇಕಿದೆ ಎಂದು ತಿಳಿಸಲಾಗಿದೆ.
ಇದನ್ನ ಮನಗಂಡ KRS ಪಕ್ಷವು ತಾಲೂಕಿನ ಸಾರ್ವಜನಿಕರಲ್ಲಿ ವಿನಂತಿಸಿ ಕೊಳ್ಳುವುದೇನೆಂದರೆ ಸ್ವಚ್ಚ , ಪ್ರಾಮಾಣಿಕ , ಹಾಗೂ ಪಾರದರ್ಶಕ ವಾದಂತ ಉತ್ತಮ ರಾಜಿಕೀಯ ವ್ಯವಸ್ಥೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪಕ್ಷ ಸೇರ್ಪಡೆ , ಹೋಬಳಿ ಮಟ್ಟದಲ್ಲಿ ಪದಾಧಿಕಾರಿಗಳ ಆಯ್ಕೆ ,ದೇಣಿಗೆ ಸಂಗ್ರಹಣೆ,. ನಡೆಯುತ್ತಿದ್ದು ತಾವುಗಳು ಸಕರಿಸಬೇಕೆಂದು ಮನವಿಮಾಡಿಕೊಳ್ಳುತ್ತಿದೆ.
ಜೊತೆಗೆ ಕೆಲವೇ ತಿಂಗಳುಗಳಲ್ಲಿ ಬರುವ ತಾಲೂಕು ಪಂಚಾಯತ್ (T P) ಹಾಗೂ ಜಿಲ್ಲಾ ಪಂಚಾಯತ್ (Z P) ಚುನಾವಣೆಗಳಲ್ಲಿ ಸ್ಪರ್ಧೆ ಮಾಡಬಯಸುವ ಆಸಕ್ತರಿಗೆ ಅಕ್ರಮ ಚುನಾವಣೆ ಪ್ರಚಾರ ಮಾಡದೆ ಮತದಾರರಿಗೆ [ ಹಣ , ತುಂಡು , ಲಿಕ್ಕರ್ , ಕುಕ್ಕರ್ , ಸೇರಿ , ಪಂಚೆ ]ಇನ್ನಿತರ ಅನೇಕ ಆಮಿಷ ಗಳನ್ನ ಒಡ್ಡದೇ ಪ್ರಾಮಾಣಿಕವಾಗಿ ಚುನಾವಣೆ ಎದುರಿಸಲು ಆಸಕ್ತಿಯುಳ್ಳ ವರಿಗೆ ಪಕ್ಷವು ತರಬೇತಿ ನೀಡಿ ಸ್ಪರ್ದಿಸಲು ಅವಕಾಶ ಮಾಡಿ ಕೊಡುತ್ತಿದೆ. ಇಂತಹ ಅವಕಾಶವನ್ನ ತಾಲೂಕಿನ ಹಾಗೂ ಬೆ, ಗ್ರಾ , ಜಿಲ್ಲಾ ನಾಗರಿಕರು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
- ಶ್ರೀ ಅರುಣ್
ಅಧ್ಯಕ್ಷರು
ನೆಲಮಂಗಲ ತಾಲೂಕು ಕ ರಾ ಪ
ಮೊಬೈಲ್ – 9900996717 - ಶ್ರೀ ವೆಂಕಟೇಶ್ ಮೂರ್ತಿ
ಬೆ, ಗ್ರಾ ಜಿಲ್ಲಾ ಅಧ್ಯಕ್ಷರು ಕ ರಾ ಪ
ಮೊಬೈಲ್ – 6360063039
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ4 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ3 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

