ದಿನದ ಸುದ್ದಿ
36 ದಿನಗಳಲ್ಲಿ 13 ಕೋಟಿ ಉದ್ಯೋಗ ನಷ್ಟ ಆದರೂ ಮೋದಿ ಸರಕಾರಕ್ಕೆ ಪರಿವೆಯೇ ಇಲ್ಲ..?!
ಪ್ರತಿವಾರ ಉದ್ಯೋಗದ ಸರ್ವೆ ನಡೆಸುವ ಸಿಎಂಐಇ ಸಂಸ್ಥೆಯ ಎಪ್ರಿಲ್ ತಿಂಗಳ ವರದಿ ಈಗ ಬಂದಿದೆ. ಇಡೀ ಎಪ್ರಿಲ್ ತಿಂಗಳಲ್ಲಿ 12.12 ಕೋಟಿ ಉದ್ಯೋಗ ನಷ್ಟ ಸಂಭವಿಸಿದೆ ಎಂದು ಅದು ತೋರಿಸಿದೆ. ಮಾರ್ಚ್ ಕೊನೆಯ ವಾರದಲ್ಲಿ ಅಂದರೆ ಲಾಕ್ಡೌನಿನ ಮೊದಲ ವಾರದಲ್ಲಿ 85 ಲಕ್ಷ ಉದ್ಯೋಗಗಳು ನಷ್ಟ ಆದವು ಎಂದು ಈ ಹಿಂದೆ ಅದರ ಸವೇ ಹೇಳಿತ್ತು. ಅಂದರೆ ಲಾಕ್ ಡೌನಿನ 36 ದಿನಗಳಲ್ಲಿ ಒಟ್ಟು 13 ಕೋಟಿ ಉದ್ಯೋಗ ನಷ್ಟವಾಗಿದೆ. ಇದು ಹಿಂದಿನ ಹಣಕಾಸು ವರ್ಷದಲ್ಲಿ ಸರಾಸರಿ ಉದ್ಯೋಗಿಗಳ ಸಂಖ್ಯೆಯ 30ಶೆ.ದಷ್ಟು. ಅಂದರೆ ಸುಮಾರು ಪ್ರತಿ ಮೂರರಲ್ಲಿ ಎರಡು ಉದ್ಯೋಗಗಳಷ್ಟೇ ಉಳಿದಿವೆ.
ನಿಜ, ಇವು ಅಂದಾಜು ಅಂಕಿ-ಅಂಶಗಳಷ್ಟೇ. ಆದರೆ ದೇಶ, ಅದರಲ್ಲೂ ಜನಸಾಮಾನ್ಯರು ಎಂತಹ ಆರ್ಥಿಕ ಸಂಕಟವನ್ನು ಎದುರಿಸಬೇಕಾಗಿ ಬಂದಿದೆ ಎಂಬುದನ್ನು ಇದು ಖಂಡಿತವಾಗಿಯೂ ಸೂಚಿಸುತ್ತದೆ ಎನ್ನುತ್ತಾರೆ ಪರಿಣಿತರು.ಎಪ್ರಿಲ್ ತಿಂಗಳ ಸರ್ವೆಯ ಅಂಕಿ-ಅಂಶಗಳ ವಿವರಗಳಿಗೆ ಹೋದಾಗ ಇನ್ನಷ್ಟು ಆಘಾತಕಾರೀ ಚಿತ್ರಗಳು ಮೂಡಿ ಬರುತ್ತವೆ.
ವಿಭಾಗವಾರು ಏರಿಳಿಕೆಗಳನ್ನು ನೋಡಿ
- ಸಣ್ಣ ವ್ಯಾಪಾರಿಗಳು ಮತ್ತು ಕೂಲಿಗಳು -9.1 ಕೋಟಿ
- ಉದ್ಯಮಿಗಳು -1.8 ಕೋಟಿ
- ಸಂಬಳದಾರ ನೌಕರರು -1.8 ಕೋಟಿ
- ರೈತರು +58 ಲಕ್ಷ
–ಒಟ್ಟು -12.12 ಕೋಟಿ
ಮುಕ್ಕಾಲು ಪಾಲು ಉದ್ಯೋಗ ನಷ್ಟ ಆಗಿರುವುದು ಸಣ್ಣ ವ್ಯಾಪಾರಿಗಳು ಮತ್ತು ಕೂಲಿಗಳಿಗೆ. ಇದರಲ್ಲಿ ಬೀದಿ ಮಾರಾಟಗಾರರು, ಸಣ್ಣ-ಪುಟ್ಟ ವ್ಯಾಪಾರಿಗಳು, ಅಂಗಡಿದಾರರು, ಅಲ್ಲಿ ಕೆಲಸ ಮಾಡುವವರು ಮತ್ತು ದಿನಗೂಲಿಗಳು ಸೇರುತ್ತಾರೆ. ಇವರು ನಮ್ಮ ಉದ್ಯೋಗ ಪಿರಮಿಡ್ಡಿನ ತಳಬಾಗದಲ್ಲಿರುವ ದೊಡ್ಡ ವಿಭಾಗ, ಅದಕ್ಕನುಗುಣವಾಗಿ ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಉದ್ಯಮಿಗಳು ಎನ್ನುವಾಗ ಇಲ್ಲಿ ಹೆಚ್ಚಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳವರು(ಎಂಎಸ್ಎಂಇ), ಕೆಲವು ದೊಡ್ಡ ಪ್ರಮಾಣದ ಉದ್ದಿಮೆದಾರರು ನಷ್ಟ ಅನುಭವಿಸಿರಬಹುದು. ಆದರೂ ಬಹುಪಾಲು ಈ ಎಂಎಸ್ಎಂಇ ಗಳದ್ದೇ.
ಮಾಸಿಕ ಸಂಬಳ ಪಡೆಯುವ ನೌಕರರಲ್ಲೂ 1.8 ಕೋಟಿ ಜನ ಉದ್ಯೋಗ ಕಳಕೊಂಡಿದ್ದಾರೆ ಎಂಬುದು ಗಮನಾರ್ಹ. ರೈತರ ಸಂಖ್ಯೆ, ಅಂದರೆ ಕೃಷಿಯಲ್ಲಿ ತೊಡಗಿರುವವವರ ಸಂಖ್ಯೆ ಮಾತ್ರ ಸುಮಾರು 58ಲಕ್ಷದಷ್ಟಾದರೂ ಹೆಚ್ಚಾಗಿದೆ. ಆದರೆ ಇದರರ್ಥ ಕೃಷಿ ರಂಗದಲ್ಲಿ ಉದ್ಯೋಗಾವಕಾಶ ಹೆಚ್ಚಿದೆಯೆಂದೇನಲ್ಲ. ನಗರಗಳಲ್ಲಿ ಉದ್ಯೋಗ ಕಳೆದುಕೊಂಡು ಊರಿಗೆ ಮರಳಿದವರಲ್ಲಿ ಕೆಲವರು ಮತ್ತೆ ಕೃಷಿರಂಗದಲ್ಲೇ ಏನೋ ಕೆಲಸ ಹುಡುಕಿಕೊಂಡಿದ್ದಾರೆ ಎಂದರ್ಥ.
ಅಂದರೆ ಕೃಷಿರಂಗದ ಒಟ್ಟು ಆದಾಯ ಈಗ ಈ ಹೆಚ್ಚುವರಿ 58 ಲಕ್ಷ ಜನಗಳ ನಡುವೆಯೂ ಹಂಚಿ ಹೋಗುತ್ತದೆ, ವಾಸ್ತವಿಕವಾಗಿ ರೈತರ ತಲಾ ಆದಾಯ ಇಳಿಯುತ್ತದೆ. ಅಲ್ಲದೆ ಇದು ಕಟಾವಿನ ಸಮಯವಾದ್ದರಿಂದ ಸದ್ಯಕ್ಕೆ ಇವರಿಗೆ ಏನೋ ತುಸು ಆದಾಯ ಬರುವ ಕೆಲಸ ಸಿಕ್ಕಿದೆ. ಮುಂದೇನು ಎಂಬ ಚಿಂತೆ ಇದ್ದೇ ಇದೆ.
ಒಟ್ಟಾರೆಯಾಗಿ, ಲಾಕ್ಡೌನಿನಿಂದಾಗಿ ಆಗಿರುವ 13 ಕೊಟಿ ಉದ್ಯೋಗನಷ್ಟಗಳಲ್ಲಿ 8.5 ಕೋಟಿ ನಗರ ಪ್ರದೇಶಗಳಲ್ಲಿ, 4.5 ಕೊಟಿ ಗ್ರಾಮೀಣ ಪ್ರದೇಶಗಳಲ್ಲಿ. ಕೃಷಿ ಚಟುವಟಿಕೆಗಲಲ್ಲಿ ತೊಡಗಿರುವವರ ಸಂಖ್ಯೆ ತಸು ಹೆಚ್ಛಾಗಿದ್ದರ ಅರ್ಥ, ಗ್ರಾಮೀಣ ಪ್ರದೇಶದ ಉಳಿದ ವಲಯಗಳಲ್ಲಿ. ಮುಖ್ಯವಾಗಿ ಚಿಲ್ಲರೆ ವ್ಯಾಪಾರಗಳಲ್ಲಿ, ಸಾರಿಗೆ ಮುಂತಾದವುಗಳಲ್ಲಿ ಇನ್ನಷ್ಟು ಹೆಚ್ಚು ನಷ್ಟಗಳು ಉಂಟಾಗಿವೆ. ಇವರು ಈ ಮೊದಲಿನಂತೆ ನಗರಗಳಿಗೂ ಹೋಗುವಂತಿಲ್ಲ.
ಇವೆಲ್ಲ ಅನಿರೀಕ್ಷಿತವೇನಲ್ಲ. ಇದನ್ನು ಮುಂಗಂಡು ಸರಕಾರ ಸರಿಯಾದ ಯೋಜನೆಯೊಂದಿಗೆ ಲಾಕ್ಡೌನ್ ಹಾಕಿದ್ದರೆ ಜನಸಾಮಾನ್ಯರು ಅದರಲ್ಲೂ ಕೋಟ್ಯಂತರ ವಲಸೆ ಕಾರ್ಮಿಕರು ಈಗ ಕಾಣುತ್ತಿರುವಂತೆ ಹಸಿವು, ಅವಮಾನ, ಸಾವುಗಳನ್ನು ಎದುರಿಸಬೇಕಾಗಿ ಬರುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳು ಮತ್ತು ಪ್ರಜಾಪ್ರಭುತ್ವವಾದಿಗಳು ಆಗ್ರಹಿಸಿರುವಂತೆ ಅಗತ್ಯ ಇರುವ ಎಲ್ಲರಿಗೆ 10 ಕೆ.ಜಿ. ಆಹಾರಧಾನ್ಯಗಳು ಸೇರಿದಂತೆ ಆವಶ್ಯಕ ವಸ್ತುಗಳನ್ನು ಮತ್ತು ಸ್ಥಬ್ಧಗೊಂಡ ಅರ್ಥವ್ಯವಸ್ಥೆ ಮತ್ತೆ ಚಾಲನೆ ಪಡೆಯುವ ವರೆಗೆ,ಅಂದರೆ ಮುಂದಿನ ಮೂರು ತಿಂಗಳಾದರೂ ಒಂದು ಕುಟುಂಬಕ್ಕೆ ತಿಂಗಳಿಗೆ 7500 ರೂ. ಕೊಡುವ ವ್ಯವಸ್ಥೆ ಮಾಡಿದ್ದರೆ ದೇಶದ ಜನಸಾಮಾನ್ಯರು ಇಷ್ಟೊಂದು ಸಂಕಟ ಪಡುವ ಅಗತ್ಯ ಬರುತ್ತಿರಲಿಲ್ಲ. ಇದಕ್ಕೆ ಹೆಚ್ಚೆಂದರೆ ಜಿಡಿಪಿಯ 3ಶೇ. ವೆಚ್ಚ ತಗಲುತ್ತದಷ್ಟೇ.
ಹಿಡಿಯಷ್ಟು ಸೂಪರ್ ಶ್ರೀಮಂತರಿಗೆ, ನಮ್ಮ ಬ್ಯಾಂಕುಗಳಿಗೆ ನಷ್ಟ ಉಂಟುಮಾಡಿ ಆರಾಮವಾಗಿ ಇರುವ, ದೇಶ ಬಿಟ್ಟು ಪಲಾಯನ ಮಾಡಿದ ಮಂದಿಗೂ 69 ಸಾವಿರ ಕೋಟಿ ರೂ.ಗಳನ್ನು ಇತ್ತೀಚೆಗಷ್ಟೇ ಕೊಟ್ಟಿರುವ ಸರಕಾರಕ್ಕೆ ಇದು ಖಂಡಿತಾ ಅಸಾಧ್ಯವೇನಲ್ಲ. ಆದರೆ ಅದು ಪರಿಹಾರದ ಹೆಸರಲ್ಲಿ ಕೊಟ್ಟದ್ದು ಜಿಡಿಪಿಯ 0.7ಶೇ.ದಷ್ಟು ಮಾತ್ರ. ಇದರಿಂದ ಜನಧನ ಖಾತೆಗಳಿಗೆ ಕೇವಲ ಒಮ್ಮೆ 500ರೂ. ಕೊಡುವುದಾಗಿ ಸರಕಾರ ಹೇಳಿತು. ಅದೂ ಬಹಳಷ್ಟು ಮಂದಿಗೆ ತಲುಪಿಲ್ಲ ಎಂದು ವರದಿಯಾಗಿದೆ.
ನಂತರ ಯಾವುದೇ ಪರಿಹಾರ ಪ್ರಕಟವಾಗಲಿಲ್ಲ, ಲಾಕ್ಡೌನನ್ನು ವಿಸ್ತರಿಸಿದಾಗಲೂ ಯಾವುದೇ ಪರಿಹಾರದ ಮಾತೂ ಪ್ರಧಾನಿಗಳ ಮನದಿಂದಲೇ ಆಗಲಿ, ಬಾಯಿಂದಲೇ ಆಗಲಿ ಬರಲೇ ಇಲ್ಲ. ಲಾಕ್ಡೌನಿನ ಮೂರನೇ ಘಟ್ಟ ಮುಗಿರುವ ಒಮದು ವಾರದ ಮೊದಲು, ಮೇ 11ರಂದು ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೊ ಕಾನ್ಫರೆನ್ಸಿನಲ್ಲೂ ಹಲವು ಮುಖ್ಯಮಂತ್ರಿಗಳು ಕೇಳಿದರೂ ಅದಕ್ಕೆ ಉತ್ತರ ದೊರೆತಿಲ್ಲ. ಬದಲಿಗೆ, ಉದ್ಯೋಗದಾತರೆನಿಸಿಕೊಳ್ಳುವ ಮಾಲಕರಿಗೆ ಕಾರ್ಮಿಕ ಕಾನೂನುಗಳಲ್ಲಿ ಭಾರೀ ರಿಯಾಯ್ತಿ/ವಿನಾಯ್ತಿಗಳನ್ನು ನೀಡುವ ಮೂಲಕ ನೇರ ರಿಟ್ರೆಂಚ್ಮೆಂಟ್ ಇತ್ಯಾದಿಗಳ ಮೂಲಕ ಇನ್ನಷ್ಟು ಉದ್ಯೋಗ ನಷ್ಟಗಳಿಗೆ ಅವಕಾಶವನ್ನು ತೆರೆದು ಕೊಡಲಾಗುತ್ತಿದೆ.
- ಕೃಪೆ : ಜನಶಕ್ತಿ ಮೀಡಿಯಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ7 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ6 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

