Connect with us

ದಿನದ ಸುದ್ದಿ

36 ದಿನಗಳಲ್ಲಿ 13 ಕೋಟಿ ಉದ್ಯೋಗ ನಷ್ಟ ಆದರೂ ಮೋದಿ ಸರಕಾರಕ್ಕೆ ಪರಿವೆಯೇ ಇಲ್ಲ..?!

Published

on

ಪ್ರತಿವಾರ ಉದ್ಯೋಗದ ಸರ್ವೆ ನಡೆಸುವ ಸಿಎಂಐಇ ಸಂಸ್ಥೆಯ ಎಪ್ರಿಲ್ ತಿಂಗಳ ವರದಿ ಈಗ ಬಂದಿದೆ. ಇಡೀ ಎಪ್ರಿಲ್ ತಿಂಗಳಲ್ಲಿ 12.12 ಕೋಟಿ ಉದ್ಯೋಗ ನಷ್ಟ ಸಂಭವಿಸಿದೆ ಎಂದು ಅದು ತೋರಿಸಿದೆ. ಮಾರ್ಚ್ ಕೊನೆಯ ವಾರದಲ್ಲಿ ಅಂದರೆ ಲಾಕ್ಡೌನಿನ ಮೊದಲ ವಾರದಲ್ಲಿ 85 ಲಕ್ಷ ಉದ್ಯೋಗಗಳು ನಷ್ಟ ಆದವು ಎಂದು ಈ ಹಿಂದೆ ಅದರ ಸವೇ ಹೇಳಿತ್ತು. ಅಂದರೆ ಲಾಕ್ ಡೌನಿನ 36 ದಿನಗಳಲ್ಲಿ ಒಟ್ಟು 13 ಕೋಟಿ ಉದ್ಯೋಗ ನಷ್ಟವಾಗಿದೆ. ಇದು ಹಿಂದಿನ ಹಣಕಾಸು ವರ್ಷದಲ್ಲಿ ಸರಾಸರಿ ಉದ್ಯೋಗಿಗಳ ಸಂಖ್ಯೆಯ 30ಶೆ.ದಷ್ಟು. ಅಂದರೆ ಸುಮಾರು ಪ್ರತಿ ಮೂರರಲ್ಲಿ ಎರಡು ಉದ್ಯೋಗಗಳಷ್ಟೇ ಉಳಿದಿವೆ.

ನಿಜ, ಇವು ಅಂದಾಜು ಅಂಕಿ-ಅಂಶಗಳಷ್ಟೇ. ಆದರೆ ದೇಶ, ಅದರಲ್ಲೂ ಜನಸಾಮಾನ್ಯರು ಎಂತಹ ಆರ್ಥಿಕ ಸಂಕಟವನ್ನು ಎದುರಿಸಬೇಕಾಗಿ ಬಂದಿದೆ ಎಂಬುದನ್ನು ಇದು ಖಂಡಿತವಾಗಿಯೂ ಸೂಚಿಸುತ್ತದೆ ಎನ್ನುತ್ತಾರೆ ಪರಿಣಿತರು.ಎಪ್ರಿಲ್ ತಿಂಗಳ ಸರ್ವೆಯ ಅಂಕಿ-ಅಂಶಗಳ ವಿವರಗಳಿಗೆ ಹೋದಾಗ ಇನ್ನಷ್ಟು ಆಘಾತಕಾರೀ ಚಿತ್ರಗಳು ಮೂಡಿ ಬರುತ್ತವೆ.


ವಿಭಾಗವಾರು ಏರಿಳಿಕೆಗಳನ್ನು ನೋಡಿ

  • ಸಣ್ಣ ವ್ಯಾಪಾರಿಗಳು ಮತ್ತು ಕೂಲಿಗಳು -9.1 ಕೋಟಿ
  • ಉದ್ಯಮಿಗಳು -1.8 ಕೋಟಿ
  • ಸಂಬಳದಾರ ನೌಕರರು -1.8 ಕೋಟಿ
  • ರೈತರು +58 ಲಕ್ಷ

ಒಟ್ಟು -12.12 ಕೋಟಿ


ಮುಕ್ಕಾಲು ಪಾಲು ಉದ್ಯೋಗ ನಷ್ಟ ಆಗಿರುವುದು ಸಣ್ಣ ವ್ಯಾಪಾರಿಗಳು ಮತ್ತು ಕೂಲಿಗಳಿಗೆ. ಇದರಲ್ಲಿ ಬೀದಿ ಮಾರಾಟಗಾರರು, ಸಣ್ಣ-ಪುಟ್ಟ ವ್ಯಾಪಾರಿಗಳು, ಅಂಗಡಿದಾರರು, ಅಲ್ಲಿ ಕೆಲಸ ಮಾಡುವವರು ಮತ್ತು ದಿನಗೂಲಿಗಳು ಸೇರುತ್ತಾರೆ. ಇವರು ನಮ್ಮ ಉದ್ಯೋಗ ಪಿರಮಿಡ್ಡಿನ ತಳಬಾಗದಲ್ಲಿರುವ ದೊಡ್ಡ ವಿಭಾಗ, ಅದಕ್ಕನುಗುಣವಾಗಿ ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಉದ್ಯಮಿಗಳು ಎನ್ನುವಾಗ ಇಲ್ಲಿ ಹೆಚ್ಚಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳವರು(ಎಂಎಸ್‌ಎಂಇ), ಕೆಲವು ದೊಡ್ಡ ಪ್ರಮಾಣದ ಉದ್ದಿಮೆದಾರರು ನಷ್ಟ ಅನುಭವಿಸಿರಬಹುದು. ಆದರೂ ಬಹುಪಾಲು ಈ ಎಂಎಸ್‌ಎಂಇ ಗಳದ್ದೇ.

ಮಾಸಿಕ ಸಂಬಳ ಪಡೆಯುವ ನೌಕರರಲ್ಲೂ 1.8 ಕೋಟಿ ಜನ ಉದ್ಯೋಗ ಕಳಕೊಂಡಿದ್ದಾರೆ ಎಂಬುದು ಗಮನಾರ್ಹ. ರೈತರ ಸಂಖ್ಯೆ, ಅಂದರೆ ಕೃಷಿಯಲ್ಲಿ ತೊಡಗಿರುವವವರ ಸಂಖ್ಯೆ ಮಾತ್ರ ಸುಮಾರು 58ಲಕ್ಷದಷ್ಟಾದರೂ ಹೆಚ್ಚಾಗಿದೆ. ಆದರೆ ಇದರರ್ಥ ಕೃಷಿ ರಂಗದಲ್ಲಿ ಉದ್ಯೋಗಾವಕಾಶ ಹೆಚ್ಚಿದೆಯೆಂದೇನಲ್ಲ. ನಗರಗಳಲ್ಲಿ ಉದ್ಯೋಗ ಕಳೆದುಕೊಂಡು ಊರಿಗೆ ಮರಳಿದವರಲ್ಲಿ ಕೆಲವರು ಮತ್ತೆ ಕೃಷಿರಂಗದಲ್ಲೇ ಏನೋ ಕೆಲಸ ಹುಡುಕಿಕೊಂಡಿದ್ದಾರೆ ಎಂದರ್ಥ.

ಅಂದರೆ ಕೃಷಿರಂಗದ ಒಟ್ಟು ಆದಾಯ ಈಗ ಈ ಹೆಚ್ಚುವರಿ 58 ಲಕ್ಷ ಜನಗಳ ನಡುವೆಯೂ ಹಂಚಿ ಹೋಗುತ್ತದೆ, ವಾಸ್ತವಿಕವಾಗಿ ರೈತರ ತಲಾ ಆದಾಯ ಇಳಿಯುತ್ತದೆ. ಅಲ್ಲದೆ ಇದು ಕಟಾವಿನ ಸಮಯವಾದ್ದರಿಂದ ಸದ್ಯಕ್ಕೆ ಇವರಿಗೆ ಏನೋ ತುಸು ಆದಾಯ ಬರುವ ಕೆಲಸ ಸಿಕ್ಕಿದೆ. ಮುಂದೇನು ಎಂಬ ಚಿಂತೆ ಇದ್ದೇ ಇದೆ.

ಒಟ್ಟಾರೆಯಾಗಿ, ಲಾಕ್‌ಡೌನಿನಿಂದಾಗಿ ಆಗಿರುವ 13 ಕೊಟಿ ಉದ್ಯೋಗನಷ್ಟಗಳಲ್ಲಿ 8.5 ಕೋಟಿ ನಗರ ಪ್ರದೇಶಗಳಲ್ಲಿ, 4.5 ಕೊಟಿ ಗ್ರಾಮೀಣ ಪ್ರದೇಶಗಳಲ್ಲಿ. ಕೃಷಿ ಚಟುವಟಿಕೆಗಲಲ್ಲಿ ತೊಡಗಿರುವವರ ಸಂಖ್ಯೆ ತಸು ಹೆಚ್ಛಾಗಿದ್ದರ ಅರ್ಥ, ಗ್ರಾಮೀಣ ಪ್ರದೇಶದ ಉಳಿದ ವಲಯಗಳಲ್ಲಿ. ಮುಖ್ಯವಾಗಿ ಚಿಲ್ಲರೆ ವ್ಯಾಪಾರಗಳಲ್ಲಿ, ಸಾರಿಗೆ ಮುಂತಾದವುಗಳಲ್ಲಿ ಇನ್ನಷ್ಟು ಹೆಚ್ಚು ನಷ್ಟಗಳು ಉಂಟಾಗಿವೆ. ಇವರು ಈ ಮೊದಲಿನಂತೆ ನಗರಗಳಿಗೂ ಹೋಗುವಂತಿಲ್ಲ.

ಇವೆಲ್ಲ ಅನಿರೀಕ್ಷಿತವೇನಲ್ಲ. ಇದನ್ನು ಮುಂಗಂಡು ಸರಕಾರ ಸರಿಯಾದ ಯೋಜನೆಯೊಂದಿಗೆ ಲಾಕ್‌ಡೌನ್ ಹಾಕಿದ್ದರೆ ಜನಸಾಮಾನ್ಯರು ಅದರಲ್ಲೂ ಕೋಟ್ಯಂತರ ವಲಸೆ ಕಾರ್ಮಿಕರು ಈಗ ಕಾಣುತ್ತಿರುವಂತೆ ಹಸಿವು, ಅವಮಾನ, ಸಾವುಗಳನ್ನು ಎದುರಿಸಬೇಕಾಗಿ ಬರುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳು ಮತ್ತು ಪ್ರಜಾಪ್ರಭುತ್ವವಾದಿಗಳು ಆಗ್ರಹಿಸಿರುವಂತೆ ಅಗತ್ಯ ಇರುವ ಎಲ್ಲರಿಗೆ 10 ಕೆ.ಜಿ. ಆಹಾರಧಾನ್ಯಗಳು ಸೇರಿದಂತೆ ಆವಶ್ಯಕ ವಸ್ತುಗಳನ್ನು ಮತ್ತು ಸ್ಥಬ್ಧಗೊಂಡ ಅರ್ಥವ್ಯವಸ್ಥೆ ಮತ್ತೆ ಚಾಲನೆ ಪಡೆಯುವ ವರೆಗೆ,ಅಂದರೆ ಮುಂದಿನ ಮೂರು ತಿಂಗಳಾದರೂ ಒಂದು ಕುಟುಂಬಕ್ಕೆ ತಿಂಗಳಿಗೆ 7500 ರೂ. ಕೊಡುವ ವ್ಯವಸ್ಥೆ ಮಾಡಿದ್ದರೆ ದೇಶದ ಜನಸಾಮಾನ್ಯರು ಇಷ್ಟೊಂದು ಸಂಕಟ ಪಡುವ ಅಗತ್ಯ ಬರುತ್ತಿರಲಿಲ್ಲ. ಇದಕ್ಕೆ ಹೆಚ್ಚೆಂದರೆ ಜಿಡಿಪಿಯ 3ಶೇ. ವೆಚ್ಚ ತಗಲುತ್ತದಷ್ಟೇ.

ಹಿಡಿಯಷ್ಟು ಸೂಪರ್ ಶ್ರೀಮಂತರಿಗೆ, ನಮ್ಮ ಬ್ಯಾಂಕುಗಳಿಗೆ ನಷ್ಟ ಉಂಟುಮಾಡಿ ಆರಾಮವಾಗಿ ಇರುವ, ದೇಶ ಬಿಟ್ಟು ಪಲಾಯನ ಮಾಡಿದ ಮಂದಿಗೂ 69 ಸಾವಿರ ಕೋಟಿ ರೂ.ಗಳನ್ನು ಇತ್ತೀಚೆಗಷ್ಟೇ ಕೊಟ್ಟಿರುವ ಸರಕಾರಕ್ಕೆ ಇದು ಖಂಡಿತಾ ಅಸಾಧ್ಯವೇನಲ್ಲ. ಆದರೆ ಅದು ಪರಿಹಾರದ ಹೆಸರಲ್ಲಿ ಕೊಟ್ಟದ್ದು ಜಿಡಿಪಿಯ 0.7ಶೇ.ದಷ್ಟು ಮಾತ್ರ. ಇದರಿಂದ ಜನಧನ ಖಾತೆಗಳಿಗೆ ಕೇವಲ ಒಮ್ಮೆ 500ರೂ. ಕೊಡುವುದಾಗಿ ಸರಕಾರ ಹೇಳಿತು. ಅದೂ ಬಹಳಷ್ಟು ಮಂದಿಗೆ ತಲುಪಿಲ್ಲ ಎಂದು ವರದಿಯಾಗಿದೆ.

ನಂತರ ಯಾವುದೇ ಪರಿಹಾರ ಪ್ರಕಟವಾಗಲಿಲ್ಲ, ಲಾಕ್‌ಡೌನನ್ನು ವಿಸ್ತರಿಸಿದಾಗಲೂ ಯಾವುದೇ ಪರಿಹಾರದ ಮಾತೂ ಪ್ರಧಾನಿಗಳ ಮನದಿಂದಲೇ ಆಗಲಿ, ಬಾಯಿಂದಲೇ ಆಗಲಿ ಬರಲೇ ಇಲ್ಲ. ಲಾಕ್‌ಡೌನಿನ ಮೂರನೇ ಘಟ್ಟ ಮುಗಿರುವ ಒಮದು ವಾರದ ಮೊದಲು, ಮೇ 11ರಂದು ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೊ ಕಾನ್ಫರೆನ್ಸಿನಲ್ಲೂ ಹಲವು ಮುಖ್ಯಮಂತ್ರಿಗಳು ಕೇಳಿದರೂ ಅದಕ್ಕೆ ಉತ್ತರ ದೊರೆತಿಲ್ಲ. ಬದಲಿಗೆ, ಉದ್ಯೋಗದಾತರೆನಿಸಿಕೊಳ್ಳುವ ಮಾಲಕರಿಗೆ ಕಾರ್ಮಿಕ ಕಾನೂನುಗಳಲ್ಲಿ ಭಾರೀ ರಿಯಾಯ್ತಿ/ವಿನಾಯ್ತಿಗಳನ್ನು ನೀಡುವ ಮೂಲಕ ನೇರ ರಿಟ್ರೆಂಚ್‌ಮೆಂಟ್ ಇತ್ಯಾದಿಗಳ ಮೂಲಕ ಇನ್ನಷ್ಟು ಉದ್ಯೋಗ ನಷ್ಟಗಳಿಗೆ ಅವಕಾಶವನ್ನು ತೆರೆದು ಕೊಡಲಾಗುತ್ತಿದೆ.

  • ಕೃಪೆ : ಜನಶಕ್ತಿ ಮೀಡಿಯಾ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending