ದಿನದ ಸುದ್ದಿ
36 ದಿನಗಳಲ್ಲಿ 13 ಕೋಟಿ ಉದ್ಯೋಗ ನಷ್ಟ ಆದರೂ ಮೋದಿ ಸರಕಾರಕ್ಕೆ ಪರಿವೆಯೇ ಇಲ್ಲ..?!
ಪ್ರತಿವಾರ ಉದ್ಯೋಗದ ಸರ್ವೆ ನಡೆಸುವ ಸಿಎಂಐಇ ಸಂಸ್ಥೆಯ ಎಪ್ರಿಲ್ ತಿಂಗಳ ವರದಿ ಈಗ ಬಂದಿದೆ. ಇಡೀ ಎಪ್ರಿಲ್ ತಿಂಗಳಲ್ಲಿ 12.12 ಕೋಟಿ ಉದ್ಯೋಗ ನಷ್ಟ ಸಂಭವಿಸಿದೆ ಎಂದು ಅದು ತೋರಿಸಿದೆ. ಮಾರ್ಚ್ ಕೊನೆಯ ವಾರದಲ್ಲಿ ಅಂದರೆ ಲಾಕ್ಡೌನಿನ ಮೊದಲ ವಾರದಲ್ಲಿ 85 ಲಕ್ಷ ಉದ್ಯೋಗಗಳು ನಷ್ಟ ಆದವು ಎಂದು ಈ ಹಿಂದೆ ಅದರ ಸವೇ ಹೇಳಿತ್ತು. ಅಂದರೆ ಲಾಕ್ ಡೌನಿನ 36 ದಿನಗಳಲ್ಲಿ ಒಟ್ಟು 13 ಕೋಟಿ ಉದ್ಯೋಗ ನಷ್ಟವಾಗಿದೆ. ಇದು ಹಿಂದಿನ ಹಣಕಾಸು ವರ್ಷದಲ್ಲಿ ಸರಾಸರಿ ಉದ್ಯೋಗಿಗಳ ಸಂಖ್ಯೆಯ 30ಶೆ.ದಷ್ಟು. ಅಂದರೆ ಸುಮಾರು ಪ್ರತಿ ಮೂರರಲ್ಲಿ ಎರಡು ಉದ್ಯೋಗಗಳಷ್ಟೇ ಉಳಿದಿವೆ.
ನಿಜ, ಇವು ಅಂದಾಜು ಅಂಕಿ-ಅಂಶಗಳಷ್ಟೇ. ಆದರೆ ದೇಶ, ಅದರಲ್ಲೂ ಜನಸಾಮಾನ್ಯರು ಎಂತಹ ಆರ್ಥಿಕ ಸಂಕಟವನ್ನು ಎದುರಿಸಬೇಕಾಗಿ ಬಂದಿದೆ ಎಂಬುದನ್ನು ಇದು ಖಂಡಿತವಾಗಿಯೂ ಸೂಚಿಸುತ್ತದೆ ಎನ್ನುತ್ತಾರೆ ಪರಿಣಿತರು.ಎಪ್ರಿಲ್ ತಿಂಗಳ ಸರ್ವೆಯ ಅಂಕಿ-ಅಂಶಗಳ ವಿವರಗಳಿಗೆ ಹೋದಾಗ ಇನ್ನಷ್ಟು ಆಘಾತಕಾರೀ ಚಿತ್ರಗಳು ಮೂಡಿ ಬರುತ್ತವೆ.
ವಿಭಾಗವಾರು ಏರಿಳಿಕೆಗಳನ್ನು ನೋಡಿ
- ಸಣ್ಣ ವ್ಯಾಪಾರಿಗಳು ಮತ್ತು ಕೂಲಿಗಳು -9.1 ಕೋಟಿ
- ಉದ್ಯಮಿಗಳು -1.8 ಕೋಟಿ
- ಸಂಬಳದಾರ ನೌಕರರು -1.8 ಕೋಟಿ
- ರೈತರು +58 ಲಕ್ಷ
–ಒಟ್ಟು -12.12 ಕೋಟಿ
ಮುಕ್ಕಾಲು ಪಾಲು ಉದ್ಯೋಗ ನಷ್ಟ ಆಗಿರುವುದು ಸಣ್ಣ ವ್ಯಾಪಾರಿಗಳು ಮತ್ತು ಕೂಲಿಗಳಿಗೆ. ಇದರಲ್ಲಿ ಬೀದಿ ಮಾರಾಟಗಾರರು, ಸಣ್ಣ-ಪುಟ್ಟ ವ್ಯಾಪಾರಿಗಳು, ಅಂಗಡಿದಾರರು, ಅಲ್ಲಿ ಕೆಲಸ ಮಾಡುವವರು ಮತ್ತು ದಿನಗೂಲಿಗಳು ಸೇರುತ್ತಾರೆ. ಇವರು ನಮ್ಮ ಉದ್ಯೋಗ ಪಿರಮಿಡ್ಡಿನ ತಳಬಾಗದಲ್ಲಿರುವ ದೊಡ್ಡ ವಿಭಾಗ, ಅದಕ್ಕನುಗುಣವಾಗಿ ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಉದ್ಯಮಿಗಳು ಎನ್ನುವಾಗ ಇಲ್ಲಿ ಹೆಚ್ಚಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳವರು(ಎಂಎಸ್ಎಂಇ), ಕೆಲವು ದೊಡ್ಡ ಪ್ರಮಾಣದ ಉದ್ದಿಮೆದಾರರು ನಷ್ಟ ಅನುಭವಿಸಿರಬಹುದು. ಆದರೂ ಬಹುಪಾಲು ಈ ಎಂಎಸ್ಎಂಇ ಗಳದ್ದೇ.
ಮಾಸಿಕ ಸಂಬಳ ಪಡೆಯುವ ನೌಕರರಲ್ಲೂ 1.8 ಕೋಟಿ ಜನ ಉದ್ಯೋಗ ಕಳಕೊಂಡಿದ್ದಾರೆ ಎಂಬುದು ಗಮನಾರ್ಹ. ರೈತರ ಸಂಖ್ಯೆ, ಅಂದರೆ ಕೃಷಿಯಲ್ಲಿ ತೊಡಗಿರುವವವರ ಸಂಖ್ಯೆ ಮಾತ್ರ ಸುಮಾರು 58ಲಕ್ಷದಷ್ಟಾದರೂ ಹೆಚ್ಚಾಗಿದೆ. ಆದರೆ ಇದರರ್ಥ ಕೃಷಿ ರಂಗದಲ್ಲಿ ಉದ್ಯೋಗಾವಕಾಶ ಹೆಚ್ಚಿದೆಯೆಂದೇನಲ್ಲ. ನಗರಗಳಲ್ಲಿ ಉದ್ಯೋಗ ಕಳೆದುಕೊಂಡು ಊರಿಗೆ ಮರಳಿದವರಲ್ಲಿ ಕೆಲವರು ಮತ್ತೆ ಕೃಷಿರಂಗದಲ್ಲೇ ಏನೋ ಕೆಲಸ ಹುಡುಕಿಕೊಂಡಿದ್ದಾರೆ ಎಂದರ್ಥ.
ಅಂದರೆ ಕೃಷಿರಂಗದ ಒಟ್ಟು ಆದಾಯ ಈಗ ಈ ಹೆಚ್ಚುವರಿ 58 ಲಕ್ಷ ಜನಗಳ ನಡುವೆಯೂ ಹಂಚಿ ಹೋಗುತ್ತದೆ, ವಾಸ್ತವಿಕವಾಗಿ ರೈತರ ತಲಾ ಆದಾಯ ಇಳಿಯುತ್ತದೆ. ಅಲ್ಲದೆ ಇದು ಕಟಾವಿನ ಸಮಯವಾದ್ದರಿಂದ ಸದ್ಯಕ್ಕೆ ಇವರಿಗೆ ಏನೋ ತುಸು ಆದಾಯ ಬರುವ ಕೆಲಸ ಸಿಕ್ಕಿದೆ. ಮುಂದೇನು ಎಂಬ ಚಿಂತೆ ಇದ್ದೇ ಇದೆ.
ಒಟ್ಟಾರೆಯಾಗಿ, ಲಾಕ್ಡೌನಿನಿಂದಾಗಿ ಆಗಿರುವ 13 ಕೊಟಿ ಉದ್ಯೋಗನಷ್ಟಗಳಲ್ಲಿ 8.5 ಕೋಟಿ ನಗರ ಪ್ರದೇಶಗಳಲ್ಲಿ, 4.5 ಕೊಟಿ ಗ್ರಾಮೀಣ ಪ್ರದೇಶಗಳಲ್ಲಿ. ಕೃಷಿ ಚಟುವಟಿಕೆಗಲಲ್ಲಿ ತೊಡಗಿರುವವರ ಸಂಖ್ಯೆ ತಸು ಹೆಚ್ಛಾಗಿದ್ದರ ಅರ್ಥ, ಗ್ರಾಮೀಣ ಪ್ರದೇಶದ ಉಳಿದ ವಲಯಗಳಲ್ಲಿ. ಮುಖ್ಯವಾಗಿ ಚಿಲ್ಲರೆ ವ್ಯಾಪಾರಗಳಲ್ಲಿ, ಸಾರಿಗೆ ಮುಂತಾದವುಗಳಲ್ಲಿ ಇನ್ನಷ್ಟು ಹೆಚ್ಚು ನಷ್ಟಗಳು ಉಂಟಾಗಿವೆ. ಇವರು ಈ ಮೊದಲಿನಂತೆ ನಗರಗಳಿಗೂ ಹೋಗುವಂತಿಲ್ಲ.
ಇವೆಲ್ಲ ಅನಿರೀಕ್ಷಿತವೇನಲ್ಲ. ಇದನ್ನು ಮುಂಗಂಡು ಸರಕಾರ ಸರಿಯಾದ ಯೋಜನೆಯೊಂದಿಗೆ ಲಾಕ್ಡೌನ್ ಹಾಕಿದ್ದರೆ ಜನಸಾಮಾನ್ಯರು ಅದರಲ್ಲೂ ಕೋಟ್ಯಂತರ ವಲಸೆ ಕಾರ್ಮಿಕರು ಈಗ ಕಾಣುತ್ತಿರುವಂತೆ ಹಸಿವು, ಅವಮಾನ, ಸಾವುಗಳನ್ನು ಎದುರಿಸಬೇಕಾಗಿ ಬರುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘಟನೆಗಳು ಮತ್ತು ಪ್ರಜಾಪ್ರಭುತ್ವವಾದಿಗಳು ಆಗ್ರಹಿಸಿರುವಂತೆ ಅಗತ್ಯ ಇರುವ ಎಲ್ಲರಿಗೆ 10 ಕೆ.ಜಿ. ಆಹಾರಧಾನ್ಯಗಳು ಸೇರಿದಂತೆ ಆವಶ್ಯಕ ವಸ್ತುಗಳನ್ನು ಮತ್ತು ಸ್ಥಬ್ಧಗೊಂಡ ಅರ್ಥವ್ಯವಸ್ಥೆ ಮತ್ತೆ ಚಾಲನೆ ಪಡೆಯುವ ವರೆಗೆ,ಅಂದರೆ ಮುಂದಿನ ಮೂರು ತಿಂಗಳಾದರೂ ಒಂದು ಕುಟುಂಬಕ್ಕೆ ತಿಂಗಳಿಗೆ 7500 ರೂ. ಕೊಡುವ ವ್ಯವಸ್ಥೆ ಮಾಡಿದ್ದರೆ ದೇಶದ ಜನಸಾಮಾನ್ಯರು ಇಷ್ಟೊಂದು ಸಂಕಟ ಪಡುವ ಅಗತ್ಯ ಬರುತ್ತಿರಲಿಲ್ಲ. ಇದಕ್ಕೆ ಹೆಚ್ಚೆಂದರೆ ಜಿಡಿಪಿಯ 3ಶೇ. ವೆಚ್ಚ ತಗಲುತ್ತದಷ್ಟೇ.
ಹಿಡಿಯಷ್ಟು ಸೂಪರ್ ಶ್ರೀಮಂತರಿಗೆ, ನಮ್ಮ ಬ್ಯಾಂಕುಗಳಿಗೆ ನಷ್ಟ ಉಂಟುಮಾಡಿ ಆರಾಮವಾಗಿ ಇರುವ, ದೇಶ ಬಿಟ್ಟು ಪಲಾಯನ ಮಾಡಿದ ಮಂದಿಗೂ 69 ಸಾವಿರ ಕೋಟಿ ರೂ.ಗಳನ್ನು ಇತ್ತೀಚೆಗಷ್ಟೇ ಕೊಟ್ಟಿರುವ ಸರಕಾರಕ್ಕೆ ಇದು ಖಂಡಿತಾ ಅಸಾಧ್ಯವೇನಲ್ಲ. ಆದರೆ ಅದು ಪರಿಹಾರದ ಹೆಸರಲ್ಲಿ ಕೊಟ್ಟದ್ದು ಜಿಡಿಪಿಯ 0.7ಶೇ.ದಷ್ಟು ಮಾತ್ರ. ಇದರಿಂದ ಜನಧನ ಖಾತೆಗಳಿಗೆ ಕೇವಲ ಒಮ್ಮೆ 500ರೂ. ಕೊಡುವುದಾಗಿ ಸರಕಾರ ಹೇಳಿತು. ಅದೂ ಬಹಳಷ್ಟು ಮಂದಿಗೆ ತಲುಪಿಲ್ಲ ಎಂದು ವರದಿಯಾಗಿದೆ.
ನಂತರ ಯಾವುದೇ ಪರಿಹಾರ ಪ್ರಕಟವಾಗಲಿಲ್ಲ, ಲಾಕ್ಡೌನನ್ನು ವಿಸ್ತರಿಸಿದಾಗಲೂ ಯಾವುದೇ ಪರಿಹಾರದ ಮಾತೂ ಪ್ರಧಾನಿಗಳ ಮನದಿಂದಲೇ ಆಗಲಿ, ಬಾಯಿಂದಲೇ ಆಗಲಿ ಬರಲೇ ಇಲ್ಲ. ಲಾಕ್ಡೌನಿನ ಮೂರನೇ ಘಟ್ಟ ಮುಗಿರುವ ಒಮದು ವಾರದ ಮೊದಲು, ಮೇ 11ರಂದು ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೊ ಕಾನ್ಫರೆನ್ಸಿನಲ್ಲೂ ಹಲವು ಮುಖ್ಯಮಂತ್ರಿಗಳು ಕೇಳಿದರೂ ಅದಕ್ಕೆ ಉತ್ತರ ದೊರೆತಿಲ್ಲ. ಬದಲಿಗೆ, ಉದ್ಯೋಗದಾತರೆನಿಸಿಕೊಳ್ಳುವ ಮಾಲಕರಿಗೆ ಕಾರ್ಮಿಕ ಕಾನೂನುಗಳಲ್ಲಿ ಭಾರೀ ರಿಯಾಯ್ತಿ/ವಿನಾಯ್ತಿಗಳನ್ನು ನೀಡುವ ಮೂಲಕ ನೇರ ರಿಟ್ರೆಂಚ್ಮೆಂಟ್ ಇತ್ಯಾದಿಗಳ ಮೂಲಕ ಇನ್ನಷ್ಟು ಉದ್ಯೋಗ ನಷ್ಟಗಳಿಗೆ ಅವಕಾಶವನ್ನು ತೆರೆದು ಕೊಡಲಾಗುತ್ತಿದೆ.
- ಕೃಪೆ : ಜನಶಕ್ತಿ ಮೀಡಿಯಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ4 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

