Connect with us

ದಿನದ ಸುದ್ದಿ

ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು : ಪ್ರಧಾನಿ ನರೇಂದ್ರ ಮೋದಿ

Published

on

ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ, ಬದಲಾಗಿ ದೇಶದ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತ ಪರಮಾಣು ಬೆದರಿಕೆಗೆ ಅಂಜುವುದಿಲ್ಲ, ಹಾಗೆಯೇ ಅದನ್ನು ಸಹಿಸುವುದಿಲ್ಲ – ಪ್ರಧಾನಿ ನರೇಂದ್ರ ಮೋದಿ

ಸುದ್ದಿದಿನಡೆಸ್ಕ್:ಅಪರೇಷನ್ ಸಿಂಧೂರ ಕಾರ್ಯಚರಣೆಯ ತಾತ್ಕಾಲಿಕ ಸ್ಥಗಿತ ಒಂದು ಸಮಾಪ್ತಿಯ ನಿರ್ಧಾರವಲ್ಲ, ಮುಂಬರುವ ದಿನಗಳಲ್ಲಿ ಪಾಕಿಸ್ತಾನ ತನ್ನ ಬದ್ಧತೆಗೆ ಅನುಗುಣವಾಗಿ ಮುಂದಿನ ಕ್ರಮಗಳನ್ನು ಅನುಸರಿಸುತ್ತದೆಯೇ ಎಂಬುದನ್ನು ಭಾರತ ಪರಿಶೀಲಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕಳೆದ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನರೇಂದ್ರ ಮೋದಿಯವರು ಆಪರೇಷನ್ ಸಿಂಧೂರ ಆರಂಭದ ಮೂರನೇ ದಿನದಲ್ಲೇ ಪಾಕಿಸ್ತಾನ ತನ್ನ ನಿರೀಕ್ಷೆಗಿಂತ ಹೆಚ್ಚು ನಷ್ಟವನ್ನು ಅನುಭವಿಸಿದೆ. ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ, ಬದಲಾಗಿ ದೇಶದ ಸಾಮೂಹಿಕ ಭಾವನೆಗಳು ಮತ್ತು ಸ್ಥಿತಿಸ್ಥಾಪಕತ್ವದ ಪ್ರಬಲ ಸಂಕೇತವಾಗಿದೆ. ಆಪರೇಷನ್ ಸಿಂಧೂರ ನ್ಯಾಯಕ್ಕಾಗಿ ಅಚಲ ಪ್ರತಿಜ್ಞೆಯಾಗಿದೆ. ಆಪರೇಷನ್ ಸಿಂಧೂರ ಭಯೋತ್ಪಾದನೆಯ ವಿರುದ್ಧದ ಹೋರಾಟವನ್ನು ಮರು ವ್ಯಾಖ್ಯಾನಿಸಿದೆ ಮತ್ತು ಹೊಸ ಮಾನದಂಡ ಮತ್ತು ಹೊಸ ಸಾಮಾನ್ಯತೆಯನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು.

ಭಾರತದ ಭದ್ರತಾ ನೀತಿಯ ಮೂರು ಪ್ರಮುಖ ಸ್ತಂಭಗಳನ್ನು ವಿವರಿಸಿದ ಪ್ರಧಾನಿ, ಭಯೋತ್ಪಾದನೆಗೆ ನಿರ್ಣಾಯಕ ಪ್ರತೀಕಾರವೇ ಅದರ ಮೊದಲ ಸ್ತಂಭವಾಗಿದೆ. ಭಾರತದ ಮೇಲಿನ ಯಾವುದೇ ಭಯೋತ್ಪಾದಕ ದಾಳಿಗೆ ಬಲವಾದ ಮತ್ತು ದೃಢವಾದ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದರು. ಭಾರತ ಪರಮಾಣು ಬೆದರಿಕೆಗಳಿಗೆ ಅಂಜುವುದಿಲ್ಲ. ಇನ್ನು ಮುಂದೆ ಯಾವುದೇ ಪರಮಾಣು ಬೆದರಿಕೆಯನ್ನು ಸಹಿಸದಿರುವುದು ಎರಡನೆಯ ಸ್ತಂಭವಾಗಿದೆ. ಭಯೋತ್ಪಾದನಾ ಚಟುವಟಿಕೆಗಳ ಪ್ರಾಯೋಜಕರು ಮತ್ತು ಭಯೋತ್ಪಾದಕರ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಇದುವೇ ಮೂರನೇ ಸ್ಥಂಭ ಎಂದು ಹೇಳಿದ ಅವರು, ಭಯೋತ್ಪಾದಕರಿಗೆ ಆಶ್ರಯ ನೀಡುವ ಮತ್ತು ರಕ್ಷಿಸುವವರನ್ನು ಭಯೋತ್ಪಾದಕರಿಂದ ಭಿನ್ನವಾಗಿ ನೋಡಲಾಗುವುದಿಲ್ಲ ಎಂದರು.

ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು

ಹಾಗೆಯೇ ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು ಎಂದು ಪ್ರದಾನ ಮಂತ್ರಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಭಾರತದ ಏಕತೆಯೇ ಅದರ ಶಕ್ತಿಯ ಮೂಲವಾಗಿದೆ. ಯುದ್ಧದ ಕಾಲವಲ್ಲದ ಈ ಯುಗದಲ್ಲಿ ಭಯೋತ್ಪಾದನೆಗೂ ಅವಕಾಶವಿಲ್ಲ. ಅದರ ವಿರುದ್ಧ ಶೂನ್ಯ ಸಹಿಷ್ಣುತೆಯೇ ಉತ್ತಮ ಹಾಗೂ ಸುರಕ್ಷಿತ ಭವಿಷ್ಯಕ್ಕೆ ಖಾತ್ರಿ ಎಂದರು.

ಪಾಕಿಸ್ತಾನ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಪಡಿಸಬೇಕು. ಪಾಕಿಸ್ತಾನ ಸೇನೆ ಮತ್ತು ಪಾಕಿಸ್ತಾನ ಸರ್ಕಾರ ಭಯೋತ್ಪಾದನೆಯನ್ನು ಪೋಷಿಸುವುದನ್ನು ಮುಂದುವರಿಸಿದರೆ, ಒಂದು ದಿನ ಅದು ಪಾಕಿಸ್ತಾನದ ಸ್ವಂತ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಅವರು ಎಚ್ಚರಿಸಿದರು.

ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ-ಪಿಒಕೆ ಬಗ್ಗೆ ಮಾತ್ರ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಸ್ಪಷ್ಟಪಡಿಸಿದರು. ಇದೇ ವೇಳೆ ಭಾರತದ ಸೇನೆ, ಗುಪ್ತಚರ ಸಂಸ್ಥೆಗಳು ಮತ್ತು ವಿಜ್ಞಾನಿಗಳಿಗೆ ಗೌರವ ಸೂಚಿಸಿದ ಪ್ರಧಾನಿ, ಈ ಕಾರ್ಯಾಚರಣೆಯಲ್ಲಿ ತೊಡಗಿದ ಸಶಸ್ತ್ರ ಪಡೆಗಳ ಧೈರ್ಯ ಹಾಗೂ ಶೌರ್ಯವನ್ನು ದೇಶದ ತಾಯಂದಿರು, ಸಹೋದರಿಯರು ಮತ್ತು ಪುತ್ರಿಯರಿಗೆ ಅರ್ಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending