ದಿನದ ಸುದ್ದಿ
ಕವಿತೆ | ಮುರುಕುಂಬಿ
- ಡಾ.ಗಿರೀಶ್ ಮೂಗ್ತಿಹಳ್ಳಿ
ನಮ್ಮ ಒಳಗೆ ಬಿಡಲೆ ಇಲ್ಲ
ಚೌರ ಚಹಾ ಮಾಡಲೆ ಇಲ್ಲ
ಎದೆಗೆ ಒದ್ದರು; ಬದಿ ಬದಿಗು ನಕ್ಕರು
ಜಾತಿಪಂಚೆ ಉಟ್ಟುಕೊಂಡು
ನೀತಿನಂಜು ಇಟ್ಟುಕೊಂಡು
ದ್ವೇಷ ಮೆರೆದರು; ಕಟುಸತ್ಯ ಮರೆತರು
ನೂರ ಒಂದು ಕೂಡಿಕೊಂಡು
ಹಟ್ಟಿತನಕ ಅಟ್ಟಿಬಂದು
ಬೆಂಕಿ ಇಟ್ಟರು ; ಕಣ್ಣೀರು ಕೊಟ್ಟರು
ಮುರುಕುಂಬಿ ಮುರುಕರೆಲ್ಲ
ಕಂಬಿ ಹಿಂದೆ ಬಿದ್ದರಲ್ಲ
ಕೆಟ್ಟ ಮನಗಳು; ಕಡುಕೆಟ್ಟ ಜನಗಳು
ಜಾತಿಗೀತಿ ಏನು ಇಲ್ಲ
ಪ್ರೀತಿ ಪ್ರೇಮ ಇರಲಿ ಎಲ್ಲ
ಬಾಳ್ಮೆ ಮಾಡಲು; ಸಹಬಾಳ್ಮೆ ಮಾಡಲು
ಶಾಂತಿಬೆಳಕು ಬುದ್ಧನಿರಲು
ಕ್ರಾಂತಿಕಹಳೆ ಬಸವನಿರಲು
ಅಳಲುಬಾರದು;’ವಿಧಿದಾತ’ನಿರಲು
ಅಳುಕುಬಾರದು. (ಕವಿತೆ-ಡಾ. ಗಿರೀಶ್ ಮೂಗ್ತಿಹಳ್ಳಿ)
ಸುದ್ದಿದಿನ.ಕಾಂ|ವಾಟ್ಸಾಪ್|9980346243