ದಿನದ ಸುದ್ದಿ

ಕವಿತೆ | ಮುರುಕುಂಬಿ

Published

on

  • ಡಾ.ಗಿರೀಶ್ ಮೂಗ್ತಿಹಳ್ಳಿ

ನಮ್ಮ ಒಳಗೆ ಬಿಡಲೆ ಇಲ್ಲ
ಚೌರ ಚಹಾ ಮಾಡಲೆ ಇಲ್ಲ
ಎದೆಗೆ ಒದ್ದರು; ಬದಿ ಬದಿಗು ನಕ್ಕರು

ಜಾತಿಪಂಚೆ ಉಟ್ಟುಕೊಂಡು
ನೀತಿನಂಜು ಇಟ್ಟುಕೊಂಡು
ದ್ವೇಷ ಮೆರೆದರು; ಕಟುಸತ್ಯ ಮರೆತರು

ನೂರ ಒಂದು ಕೂಡಿಕೊಂಡು
ಹಟ್ಟಿತನಕ ಅಟ್ಟಿಬಂದು
ಬೆಂಕಿ ಇಟ್ಟರು ; ಕಣ್ಣೀರು ಕೊಟ್ಟರು

ಮುರುಕುಂಬಿ ಮುರುಕರೆಲ್ಲ
ಕಂಬಿ ಹಿಂದೆ ಬಿದ್ದರಲ್ಲ
ಕೆಟ್ಟ ಮನಗಳು; ಕಡುಕೆಟ್ಟ ಜನಗಳು

ಜಾತಿಗೀತಿ ಏನು ಇಲ್ಲ
ಪ್ರೀತಿ ಪ್ರೇಮ ಇರಲಿ ಎಲ್ಲ
ಬಾಳ್ಮೆ ಮಾಡಲು; ಸಹಬಾಳ್ಮೆ ಮಾಡಲು

ಶಾಂತಿಬೆಳಕು ಬುದ್ಧನಿರಲು
ಕ್ರಾಂತಿಕಹಳೆ ಬಸವನಿರಲು
ಅಳಲುಬಾರದು;’ವಿಧಿದಾತ’ನಿರಲು
ಅಳುಕುಬಾರದು. (ಕವಿತೆ-ಡಾ. ಗಿರೀಶ್ ಮೂಗ್ತಿಹಳ್ಳಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version