ಅಂಕಣ
ಕವಿತೆ | ಮೌನಾಮೃತ
~ ತಾರಾ ಸಂತೋಷ್ ಮೇರವಾಡೆ (ಕಾವ್ಯಾಗ್ನಿ), ಗಂಗಾವತಿ
ಅದೆಷ್ಟೋ ಬಗೆಹರಿಯದ
ಸಮಸ್ಯೆಗಳಿಗೆ
ಮೌನಾಮೃತವ
ಸಿಂಪಡಿಸಿ ಸುಮ್ಮನಾಗಿಬಿಡು.
ಅರ್ಥವಿರದ
ವ್ಯರ್ಥ ವಾಗ್ವಾದಗಳಿಗೆ
ಮೌನದ ಪೂರ್ಣವಿರಾಮವನಿಟ್ಟು
ಹೊರಟುಬಿಡು.
ಮಾತಾಡಿ
ಕಿರುಚಾಡಿ
ರಮಟರಾಡಿ ಮಾಡುವ ಬದಲು
ಒಂದರೆಗಳಿಗೆ
ಮೌನದ ಮೊರೆಹೋಗಿ ನೋಡು.
ಅದೆಷ್ಟೋ ಮುಗಿಯದ
ಮನದ ತೊಳಲಾಟಗಳಿಗೆ
ಮೌನವೆಂಬ ಉತ್ತರವುಂಟು
ಅದನ್ನಪ್ಪಿ ಮನಕ್ಕೊಂದಿಷ್ಟು
ಶಾಂತಿಯ ನೀಡಿ ನಕ್ಕುಬಿಡು.
ಸುದ್ದಿದಿನ.ಕಾಂ|ವಾಟ್ಸಾಪ್|9980346243