Connect with us

ಭಾವ ಭೈರಾಗಿ

ಕವಿತೆ | ಮಾದಿಗ ಕೇರಿಯ ಕೆಂದುಂಜ

Published

on

ಚಿತ್ರ ಕೃಪೆ : ದೇವನೂರು ಮಹದೇವ ಅವರ 'ಕುಸುಮಬಾಲೆ'ಯ ಮುಖಪುಟ

 

ಮೂಡುಗಡೆ ರೇವಜ್ಜ
ಉರಿಗಣ್ಣ ಬಿಟ್ಟಾಗ
ಪುಟ್ಟಿಯೊಳಗಿನ ಕೆಂದುಂಜ
ಕೊಕ್ಕೋ…ಕೋ…ಅಂದಾಗ
ನಮ್ ಕೇರಿಲಿ ಬೆಳ್ಳನೆ ಮುಂಜಾವು

ನಮ್ ಮಾದ್ರಟ್ಟಿನೆ ಹಾಗೆ
ಕುರಿ ಕೋಳಿ.ದನಕರ.ಕೋಣ ಎಮ್ಮೆ
ಅಯ್ಯೊ…ಇದ್ ಬದ್ ಪ್ರಾಣಿಪಕ್ಷಿಗಳೆ…. ತುಂಬ್ಕೊಂಡಿರುವ “ಮೃಗಾಲಯ.”

ಹೊಟ್ಟೆಗೆ ಇಟ್ಟಿಲ್ಲುದ್ರು
ಹಟ್ಟಿ ತುಂಬ ಮೂಕ್ ಪ್ರಾಣಿಗಳಿವೆ
ಎಷ್ಟೆ ಆಗ್ಲಿ ನನ್ನವರು..
ಪ್ರಾಣಿಪ್ರಿಯರು ತಾನೆ.

ತೆಂಗಿನ್ ಗರಿ ಮುಚ್ಚಿದ್ದ
ಗುಡ್ಲು ಅಂಗ್ಳದಾಗೆ ಅಂಗಿ ಇಲ್ದೆ
ತಂಗ್ಳು ರೊಟ್ಟಿ ಕಡಿವ
ಸಿಂಬ್ಳುಗೊಣ್ಣೆಯ ಕೂಸ್ ಗಳಿಗೇನು ಕೊರತೆಯಿಲ್ಲ…

ಗೋಡೆ ಮ್ಯಾಗಳ್ದ್ ತಗಣಿ
ಅಕ್ಕೆಗಳ್ದ್ ಸಗಣಿ ತಿಕ್ಕಿ ನೋಡೊ ಗಂಡಾ
ಅಂದ್ರೆ ನೆಕ್ಕಿ ನೋಡ್ತಾನೆ ನನ್ ಬಂಡಾ
ಎಂದು ಮಾತೆತ್ತಿದ್ರೆ ಒಡಪಾಕೊ
ಮುದುಕಿಯರಿದ್ದಾರೆ…

ರಾತ್ರಿಯೆಲ್ಲಾ ಕೂದ್ಲು ಇಡ್ಕೊಂಡು
ಗುದ್ದಾಡಿದ್ರು..
ಬೆಳಿಗ್ಗೆದ್ದು ಏನು ಗೊತ್ತಿಲ್ದಂಗೆ
ಕಸ್ಟ ಸುಖ ಮಾತಡ್ತಾ…
ಸೌವ್ಕರ್ನ ಹೊಲಕ್ಕೆ
ಕೂಲಿ ಕುಂಬಳಕ್ಕೋಗುವ
ಚಿಕ್ಕವ್ವ ಸಣ್ಣವ್ವರಿಗೇನು ಬರವಿಲ್ಲ..

ಊರಾಗೆ ಮಳೆ ಬೆಳೆ ಚನ್ನಗಾಗ್ಬಕಂದ್ರೆ
ಮಾದ್ರು ಮಾರಿ ಹಬ್ಬ ಮಾಡಬೇಕಂತೆ
ಅದೇನೊ ಮಾರಿಗುಡಿ ಮುಂದೆ
ಮಡಕೆಗೆ ದವಸ ಧಾನ್ಯ ಬೇಸಿ
ಸರುಗ ಹೋರ್ ಬೇಕು
ಅಂದಚಂದವಾಗಿರುವ ಹುಡ್ಗೆರ್ನೆಲ್ಲಾ
ಉಚ್ಚೆಂಗವ್ವಗೆ ಬಿಟ್ಟು
ಮುತ್ ಕಟ್ಸ್ ಬೇಕೆನ್ನುತ್ತಿದ್ದ
ಊರ ಒಕ್ಕಲು ಮುಖಂಡರಿದ್ದಾರೆ.

ಸೆಪ್ಪೆದೊಂಟು.ತೊಗರಿ ಕಟ್ಗೆ..
ಎಳ್ ಕಡ್ಡಿನ ಲಟ್ಟನೆ ಮುರಿದು ಒಲೆಗಿಕ್ಕಿ
ಈ ಒಲೆಗೆನ್ ಜಡ್ಬೇನೆ
ಇದ್ರ್ ನೆಗ್ ಬಿದ್ದು ನೆಲ್ಲಿ ಕಾಯಾಗ
ಥೂ..ಎಂದು ಉಗಿದು
ಹುಫ್ ಎಂದು ಊದುವ
ದವಡೆ ಸಿಟ್ಟಿನ ನನ್ನವ್ವಂದಿರ
ಕಣ್ಣೀರಿನ ತೇವಕ್ಕೇನು ಸುಂಕವಿಲ್ಲ.

ಹೋರಿಸಾರು.ನಾಟಿಕೋಳಿಸಾರು
ಹಸಿಅವರೆಕಳ್ಸಾರು.
ಆಗಾಗ ಒಣಮುರ್ಗಿ ಸುಟ್ಕಂಡು
ಕೆಂಪಾನೆ ಇಂಡಿ ಚಟ್ನೆ. ಬಿಸಿರಾಗಿಮುದ್ದೆ..
ಇದೆ ನಮ್ ಕೇರಿ ಜವಾರಿ ಕೂಳು

ಇನ್ನು ಅಡವಾಗೆ
ಉಣ್ ಬೇಕು ಎಂದು
ಗಫಗಫ ನುಂಗುತ್ತಿರುವಾಗ
ಕೆರೆಂಚಿನಲ್ಲಿ ಕೆರ್ ಕೆರ್ ಎನ್ತ
ಮುದ್ದೆ ಪಾತ್ರೆ ಸೀಕನ್ನೆ ಕ್ಯರ್ಕಂಡು ತಿನ್ನುವ
ಅಕ್ಕತಂಗಿಯರೆ ಹೆಚ್ಚಿದ್ದಾರೆ..

ಇನ್ನು ಬಾಳ ಇವೆ
ಹರಳಯ್ಯನ ಹುಳಿರಂಪಿಗೆ
ಚನ್ನಯ್ಯನ ಹಗ್ಗ
ಮಾತಂಗಿ ಕರೇಬಾನಿ
ಜಜ್ಜುರಿ ಕೋಲು..ಇತ್ಯಾದಿ….

ಇಗೀಗ ..
ಹಟ್ಟಿಹುಡುಗ್ರು ನಾಕ್ ಅಕ್ಸರ ಕಲ್ತು ಗಟ್ಟಿಯಾಗಿ
ಸಂಘಪಂಗ ಮಾಡ್ಕೊಂಡು
ಏನೇನೊ ಮಾಡ್ತಿವೆ..

-ಹುಚ್ಚಂಗಿಪ್ರಸಾದ್ ಸಂತೇಬೆನ್ನೂರು

ಭಾವ ಭೈರಾಗಿ

ಕವಿತೆ | ಬುದ್ಧ ನಗುತ್ತಾನೆ..!

Published

on

  • ರಶ್ಮಿಪ್ರಸಾದ್ (ರಾಶಿ)

ಬೋಧಿವೃಕ್ಷದಡಿಯಲಿ ಕುಳಿತು
ಬೋಧನೆಯ ನೆಲೆಯಲಿ ನಿಂತರಷ್ಟೇ
ನಿನ್ನಂತಾಗುವೆವೆಂಬ ಮೌಢ್ಯವ ಕಂಡು
ಬುದ್ಧ ಇನ್ನೂ ನಗುತ್ತಲೇ ಇದ್ದಾನೆ…
ನಮ್ಮೊಳಗೆಂದೂ ನೀನಿಲ್ಲ ಬುದ್ಧ.!

ಸಕಲವೈಭೋಗಗಳನೂ ತ್ಯಜಿಸಿ
ಮೋಹದಾ ಸೆಲೆಯನು ತೊರೆದರಷ್ಟೇ
ನಿನ್ನಂತಾಗುವೆವೆಂಬ ಭ್ರಮೆಯ ಕಂಡು
ಬುದ್ಧ ಇನ್ನೂ ನಗುತ್ತಲೇ ಇದ್ದಾನೆ…
ನಮ್ಮೊಳಗೆಂದೂ ನೀನಿಲ್ಲ ಬುದ್ಧ.!

ಭೋಗ,ರಾಗದ ತತ್ವವಷ್ಟೇ ಅರಿತು
ತ್ಯಾಗ,ವಿರಾಗದ ಮಹತ್ವವನ್ನೇ ಮರೆತು
ನಿನ್ನಂತೆ ನಗುವುದಿಲ್ಲವೆಂಬ ಸತ್ಯವ ಕಂಡು
ಬುದ್ಧ ಇನ್ನೂ ಮುಗುಳ್ನಗುತ್ತಲೇ ಇದ್ದಾನೆ…
ನಿಜಕ್ಕೂ ನಮ್ಮೊಳಗೆಂದೂ ನೀನಿಲ್ಲ ಬುದ್ಧ.!

ನಿನ್ನ ಹೆಸರಷ್ಟೇ ಉಚ್ಛರಿಸುವೆವು ನಾವು
ನಿನ್ನ ತತ್ವಗಳ ಪಾಲಿಸಲೇ ಇಲ್ಲ ನಾವು
ನಿನ್ನ ಉಪದೇಶವ ಪಠಿಸಲಿಲ್ಲ ನಾವು
ನಿನ್ನ ವೇದಾಂತವೆಂದೂ ಅನುಸರಿಸಲಿಲ್ಲ ನಾವು
ನಿನ್ನಂತೆ ಎಂದಿಗೂ ಆಗಲೇ ಇಲ್ಲ ನಾವು.!

ಮತ್ತೇ ನೀನೇ ಹುಟ್ಟಿಬರಬೇಕು ಬುದ್ಧ
ನಮ್ಮೊಳಗೆ ಜ್ಞಾನೋದಯದ ಬೆಳಕು ಚೆಲ್ಲಲು
ನಮ್ಮೊಳಗೆ ಬೌದ್ಧತ್ವದ ಠಾವು ಮೂಡಲು
ನಮ್ಮೊಳಗೆ ಶಾಂತಿ ಮಂತ್ರದ ತಪನೆಯಾಗಲು
ನಮ್ಮೊಳಗೆ ನಮ್ಮನ್ನೇ ಕಂಡುಕೊಳ್ಳಲು.!

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಭಾವ ಭೈರಾಗಿ

ಕವಿತೆ | ನಿನ್ನ ಮಗನ ಕೊಂದರು…

Published

on

  • ಮೂಲ : ಬ್ರೆಕ್ಟ್, ಅನುವಾದ : ಸಿದ್ಧಲಿಂಗಯ್ಯ

ಗೆಳತಿ ವ್ಲಾಸೋವ ನಿನ್ನ ಮಗನ ಕೊಂದರು
ಹೋರಾಟದ ಜೀವಿ ಒಡನಾಡಿ ಬಂಧುವನ್ನು
ನಿನ್ನ ಮಗನ ಕೊಂದರು.

ಅವನಂಥ ಮೈಕೈಗಳು ಕಟ್ಟಿದಂಥ ಗ್ವಾಡೆ ತಾವು
ಬಿಸಿಲೇರದ ಬೆಳಗಿನಲ್ಲಿ ನಿನ್ನ ಮಗನ ಕೊಂದರು
ಬೆವರ ಬಸಿದ ಅವನ ಎದೆಗೆ ಗುರಿಯಿಟ್ಟರು
ಗುಂಡಿಕ್ಕಿದರು.

ಗುಂಡೊಂದು ಕಾಣಲಿಲ್ಲ ಕೊಲೆಗಡುಕರ ಕೆಲಸವೆಲ್ಲ
ಸತ್ತ ಮಗನ ಕಣ್ಣಿನಲ್ಲಿ ಮಿಂಚಿಮಾಯವಾಯಿತು
ಹೊರಗಿನವರು ಕೊಲ್ಲಲಿಲ್ಲ ಎಲ್ಲ ಇವನ ಬಂಧುಬಳಗ
ನೆರೆಹೊರೆಯವರು

ಸುತ್ತಿದಂಥ ಸರಪಳಿಯಲಿ ಧರಧರಧರ ಎಳೆಯುವಾಗ
ಕ್ರಾಂತಿವೀರರೆಲ್ಲ ಬಂದು ಮುತ್ತಿಕೊಂಡರು.
ಗಿಟುಕಾಸಿದ ಗಿರಣಿಗಳು ಚಿಮಣಿ ಹೊತ್ತು ನಿಂತಿದ್ದೊ
ಅವನ ಕಾಲ ಮಿಂಚಿತ್ತು ಹೊಳೆಯಿತೇನೊ ಮನಸಿಗೆ
ಶೂನ್ಯವಾದ ಗಿರಣಿಗಳಲಿ ದಿನದಿನಕ್ಕೂ ಬೆಳೆಯುವಂಥ
ಬೆಟ್ಟದಂಥ ಶಕ್ತಿಯೊಂದು ಕಂಡಿತವನ ಕಣ್ಣಿಗೆ
ತೊಟ್ಟಿಕ್ಕಿತು ಕಣ್ಣೀರು ಹೋದನವನು ಮಣ್ಣಿಗೆ

ಓ ಗೆಳತಿ ವ್ಲಾಸೋವ ನಿನ್ನ ಮಗನ ಕೊಂದರು
ಹೋರಾಟದ ಜೀವಿಯನ್ನು ಒಡನಾಡಿ ಬಂಧುವನ್ನು
ನಿನ್ನ ಮಗನ ಕೊಂದರು.”

ಸುದ್ದಿದಿನ|ವಾಟ್ಸಾಪ್|9980346243

Continue Reading

ಭಾವ ಭೈರಾಗಿ

ಕತೆ | ಮತ್ತೆ ಮಳೆ

Published

on

ಹರೀಶ್ ಬೇದ್ರೆ
  • ಜಿ. ಹರೀಶ್ ಬೇದ್ರೆ

ಒಂದು ಊಟ ತಂದುಕೊಡೊಕೆ ಎರಡು ಗುಂಟೆ ಬೇಕಾ?
ಸರ್, ಜೋರಾಗಿ ಮಳೆ ಬರುತ್ತಿದೆ.,. ಹಾಗಾಗಿ…
ಅದಕ್ಕಂತ ಎಕ್ಸ್ಟ್ರಾ ದುಡ್ಡು ತೆಗೆದುಕೊಂಡಿಲ್ವಾ, ತಗೊಂಡ ಮೇಲೆ ಸರಿಯಾದ ಟೈಮಿಗೆ ಬರಬೇಕು.

ಸರಿಯಾಗಿ ಕೆಲಸ ಮಾಡೊ ಯೋಗ್ಯತೆ ಇಲ್ಲದ ಮೇಲೆ ಇಂತ ಕೆಲಸಕ್ಕೆ ಬರಬಾರದು. ಆ ಪಾರ್ಸೆಲ್ ಕೊಡು ಎಂದು ಡೆಲಿವರಿ ಬಾಯ್ ಕೊಡುವ ಮುನ್ನವೇ ಅವನ ಕೈಯಿಂದ ಪಾರ್ಸೆಲ್ ಕಿತ್ತುಕೊಂಡು, ಕೆಟ್ಟದಾಗಿ ಬೈಯುತ್ತಾ ಆ ವ್ಯಕ್ತಿ ಮನೆಯೊಳಗೆ ಹೋದ.

ಗಿರೀಶ್ ಸ್ವಿಗ್ಗಿಯಲ್ಲಿ ಡೆಲಿವರಿ ಬಾಯಾಗಿ ಕೆಲಸಕ್ಕೆ ಸೇರಿಕೊಂಡು ಒಂದು ವರ್ಷದ ಮೇಲಾಗಿದೆ. ಎಲ್ಲೋ ಅಪರೂಪಕ್ಕೆ ಒಮ್ಮೆ ತಡವಾದಾಗ ಯಾಕಪ್ಪಾ ಲೇಟ್ ಎಂದು ಮಾಮೂಲಿಯಂತೆ ಕೇಳಿದ್ದಿದೆ. ಯಾರೂ ಇಂದಿನಂತೆ ಬೈದಿರಲಿಲ್ಲ. ಇದು ಗಿರೀಶನ ಮನಸ್ಸಿನ ಮೇಲೆ ತುಂಬಾ ಪರಿಣಾಮ ಬೀರಿತಾದರೂ . ಪಾಪ ತುಂಬಾ ಹಸಿದಿದ್ದರೇನೊ ಅದಕ್ಕೆ ಹಾಗೆ ಮಾತನಾಡಿರಬೇಕು ಹೋಗಲಿ ಬಿಡು ಎಂದುಕೊಂಡರೂ ಮನಸ್ಸು ಸಮಾಧಾನವಾಗಲಿಲ್ಲ.

ಶಿವಮೊಗ್ಗದಲ್ಲಿ ಆಷಾಢ ಆರಂಭವಾದ ಮೊದಲನೇ ದಿನದಿಂದಲೇ ಆರಂಭವಾದ ಮಳೆ ಹದಿನೈದು ದಿನಗಳಾದರೂ ಬಿಡದೆ ಸುರಿಯುತ್ತಿತ್ತು. ಈ ದಿನವಂತೂ ವರುಣದೇವ, ಭೂತಾಯಿಯ ಮೇಲೆ ಇನ್ನಿಲ್ಲದಂತೆ ದೌರ್ಜನ್ಯ ನಡೆಸುತ್ತಿರುವ ಮನುಷ್ಯರಿಗೆ ಸರಿಯಾದ ಪಾಠ ಕಲಿಸಲೇಬೇಕೆಂಬ ಹಠಕ್ಕೆ ಬಿದ್ದವನಂತೆ ರುದ್ರರೂಪ ತಾಳಿದ್ದ. ಜೋರಾದ ಮಳೆಯ ಜೊತೆಗೆ ಗುಡುಗು ಸಿಡಿಲಿನ ಆರ್ಭಟವೂ ಜಾಸ್ತಿಯಾಗಿತ್ತು. ಬರಿಯ ಮಳೆಯಾಗಿದ್ದರೆ ಗಿರೀಶನಿಗೆ ನಿಗಧಿತ ವೇಳೆಯಲ್ಲಿ ಆರ್ಡರ್ ತಲುಪಿಸಲು ಯಾವ ತೊಂದರೆಯೂ ಇರಲಿಲ್ಲ.

ಆದರೆ ವಿಚಿತ್ರ ಗುಡುಗು ಸಿಡಿಲುಗಳ ಅಬ್ಬರ ಇದ್ದಿದ್ದರಿಂದ ಎರೆಡೆರಡು ಕಡೆ ನಿಂತು ಬರಬೇಕಾಯಿತು. ಊಟದ ಆರ್ಡರ್ ಕೊಟ್ಟ ವ್ಯಕ್ತಿಯ ಮನೆಗೂ ಹೊಟೇಲಿಗೂ ಆರು ಕಿಲೋಮೀಟರ್ ಅಂತರವಿತ್ತು. ಮನೆ ಇದ್ದದ್ದು ಹೊಸ ಬಡಾವಣೆಯಲ್ಲಿ, ಅಲ್ಲಿ ಮನೆಗಳು ವಿರಳ ಹಾಗೂ ನಿಲ್ಲಲು ಎಲ್ಲೂ ಜಾಗ ಇರದ ಕಾರಣ ಒಂದು ಕಡೆ ಸ್ವಲ್ಪ ಜಾಸ್ತಿ ಹೊತ್ತೆ ನಿಂತು ಮಳೆಯ ಆರ್ಭಟ ಕಡಿಮೆಯಾಗಲಿ ಎಂದು ಕಾದಿದ್ದ. ಅದೇ ತಪ್ಪಾಗಿ ಮುಖಕ್ಕೆ ಮಂಗಳಾರತಿ ಮಾಡಿಸಿಕೊಳ್ಳುವಂತಾಯಿತು.

ಇದೇ ಯೋಚನೆಯಲ್ಲಿ ನಿಧಾನವಾಗಿ ಬೈಕ್ ಚಲಿಸುತ್ತಾ ಬರುವಾಗ ಮಳೆ ಜೋರಾಗಿ ಪಕ್ಕದಲ್ಲೇ ಸಿಡಿಲು ಬಡಿದ ಅನುಭವವಾಗಿ ಇಹಲೋಕಕ್ಕೆ ಬಂದು ಹತ್ತಿರದಲ್ಲಿ ಎಲ್ಲಾದರೂ ನಿಲ್ಲಲು ಜಾಗ ಇದೇಯೆ ಎಂದು ನೋಡುತ್ತಾ ಬರುವಾಗ ಚಿಕ್ಕದೊಂದು ಮನೆಯಲ್ಲೇ ಅಂಗಡಿ ಮಾಡಿಕೊಂಡಿರುವುದು ಕಣ್ಣಿಗೆ ಬಿತ್ತು. ಸೀದಾ ಅಲ್ಲಿಗೆ ಬಂದು ನಿಂತ. ಅಂಗಡಿಯ ಮುಂಭಾಗದಲ್ಲಿ ಮಳೆ ಬಿಸಿಲಿಗೆ ಅಡ್ಡವಾಗಿ ಏನೂ ಹಾಕಿರದ ಕಾರಣ ನೆನೆಯುವುದು ತಪ್ಪಲಿಲ್ಲ. ಆದರೂ ಅಲ್ಲೇ ನಿಂತಿದ್ದ, ಅಂಗಡಿಯೊಳಗೆ ಇರಚಲು ಬಡಿಯುತ್ತಿದ್ದರಿಂದ ಹೇಳೋಣವೆಂದು ಬಗ್ಗಿ ನೋಡಿದರೆ ಒಳಗಡೆ ಹೆಂಗಸೊಬ್ಬಳು ಕಂಡಳು. ಇವನು ಇರಚಲು ಬಡಿಯುತ್ತಿದೆ ಎಂದು ಕೂಗಿದನ್ನು ಕೇಳಿ ಹೆಂಗಸು ಯಾರೋ ಏನೋ ಕೊಳ್ಳಲು ಬಂದಿರಬೇಕೆಂದು ಬಂದು ಏನು ಬೇಕು ಎಂದು ಕೇಳಿದಳು. ಇವನು ನನಗೇನು ಬೇಡ, ಮಳೆ ಅಂಗಡಿ ಒಳಗೂ ಬಿದ್ದು ಸಾಮಾನುಗಳು ಹಾಳಾಗುತ್ತಿವೆ ಎಂದು ಹೇಳಲು ಕರೆದೆ ಎಂದ.

ಆಗ ಗಮನಿಸಿದ ಹೆಂಗಸು ಹೌದಲ್ಲವೆ ಎಂದು ಬಾಗಿಲು ಮುಂದೆ ಎಳೆದಳು. ಇವನು ಅಲ್ಲಿಯೇ ನಿಂತಿದ್ದನ್ನು ನೋಡಿ, ಒಳಗೆ ಬನ್ನಿ ಎಂದು ಪಕ್ಷದ ಬಾಗಿಲು ತೆರೆದಳು. ಇವನು ಪರವಾಗಿಲ್ಲ ಎಂದು ಹೇಳಲು ಹೊರಟ ಕ್ಷಣದಲ್ಲೇ ಮತ್ತೊಂದು ಸಿಡಿಲು ಬಡಿಯಿತು. ಆಗ ಏನನ್ನು ಹೇಳದೆ ಒಳಹೋಗಿ ಬಾಗಿಲ ಬಳಿಯೇ ನಿಂತು ಮಳೆಯ ನೋಡತೊಡಗಿದ. ಕಣ್ಣು ಮಳೆ ನೋಡುತ್ತಿದ್ದರೆ, ಮನಸು ಬೈದ ವ್ಯಕ್ತಿಯ ಬಗ್ಗೆ ಯೋಚಿಸುತ್ತಿತ್ತು. ಸ್ವಲ್ಪ ಹೊತ್ತಿನ ನಂತರ ಆ ಅಂಗಡಿಯಾಕೆ ತಿನ್ನಲು ಕಾರಮಂಡಕ್ಕಿ ಕೊಟ್ಟು ಕುಡಿಯಲು ಬಿಸಿಯಾದ ಕಾಫಿ ಕೊಟ್ಟಳು. ಇವನು ಬೇಡ ಎನ್ನದೆ ತಿಂದು, ಕುಡಿದ. ಅಷ್ಟು ಹೊತ್ತಿಗೆ ಮಳೆಯ ರಭಸ ಕಡಿಮೆಯಾದ್ದರಿಂದ ಬರುತ್ತೇನೆ ಎಂದು ಹೇಳಿ ಹೊರಟ.

ಒಂದು ವಾರದ ನಂತರ ಮತ್ತೆ ಅದೇ ಬಡಾವಣೆಗೆ ಹೋಗುವ ಅವಕಾಶ ಸಿಕ್ಕಿತು. ಅಲ್ಲಿಗೆ ಹೋಗುವಾಗ, ತಕ್ಷಣ ಆ ದಿನ ಒಳಕರೆದು ಉಪಚರಿಸಿದ ಹೆಂಗಸಿನ ನೆನಪಾಗಿ, ಬರುವಾಗ ಅವಳನ್ನು ಮಾತನಾಡಿಸಿಯೇ ಬರುವುದೆಂದು ತೀರ್ಮಾನಿಸಿದ. ದಾರಿಯುದ್ದಕ್ಕೂ ಹೋಗುವಾಗ ಅವಳ ಬಗ್ಗೆ ನೆನಪಿಸಿಕೊಂಡರೆ ಏನೂ ನೆನಪಾಗಲಿಲ್ಲ. ಅವಳು ಹೇಗಿದ್ದಾಳೆ, ಮುಖ ಹೇಗಿದೆ, ತಾನು ತಿಂದಿದ್ದು ಏನು ಏನೊಂದೂ ನೆನಪಾಗಲಿಲ್ಲ. ಆಗ ಆ ಕ್ಷಣದಲ್ಲಿ ಅವನ ಮನಸ್ಸು ಪೂರ್ತಿ ಬೈದ ವ್ಯಕ್ತಿಯ ಬಗ್ಗೆಯೆ ಗಿರಕಿ ಹೊಡೆಯುತ್ತಿದ್ದರಿಂರ ಬೇರೆ ಕಡೆ ಗಮನ ಹೋಗಿರಲಿಲ್ಲ.

ಇಂದು ಬಂದಾಗ ನೋಡಿದರೆ ಅದೊಂದು ಪುಟ್ಟ ಅಂಗಡಿ. ಅಲ್ಲಿ ಬೀಡಿ ಸಿಗರೇಟು ತಂಬಾಕು, ಎಲೆ ಅಡಿಕೆ, ಸ್ವಲ್ಪ ಕುರುಕಲು ತಿಂಡಿಗಳ ಜೊತೆಗೆ ಕಾರಮಂಡಕ್ಕಿ, ಮಿರ್ಚಿ ಮಾತ್ರ ಸಿಗುತ್ತಿತ್ತು. ಮೂವತ್ತರ ಆಸುಪಾಸಿನ ಮಹಿಳೆ ಅದನ್ನು ನಡೆಸುತ್ತಿದ್ದಳು. ಇವನನ್ನು ನೋಡಿದ ಆ ಮಹಿಳೆ ಹಿಂದಿನ ಗುರುತು ಹಿಡಿಯದೆ ಏನು ಬೇಕು ಎಂದು ಕೇಳಿದಳು. ಅದಕ್ಕೆ ಗಿರೀಶ್ ಅಂದಿನ ಘಟನೆ ವಿವರಿಸಿ, ನೀವೇ ಅಲ್ಲವೇ ಇದ್ದಿದ್ದು ಎಂದ. ಹೌದು, ಆದರೆ ಅವತ್ತು ನೀವು ರೈನ್ ಕೋಟ್, ಹೆಲ್ಮೆಟ್ ಹಾಕಿದ್ದರಿಂದ ಗೊತ್ತಾಗಲಿಲ್ಲ ಎಂದಳು.

ಅವಳ ಹಾಗೂ ಅಂಗಡಿಯ ಪರಿಸ್ಥಿತಿ ನೋಡಿದಾಗ, ಅಂದು ತಾನು ದುಡ್ಡು ಕೊಡದೆ ಹೋಗಿದ್ದು ತಪ್ಪಾಯಿತು ಎನಿಸಿ, ಅವತ್ತು ಯಾವುದೋ ಮೂಡಲ್ಲಿ ಹಣ ಕೊಡಲಿಲ್ಲ, ಎಷ್ಟಾಗಿತ್ತು ಎಂದ. ಅದಕ್ಕವಳು ಬೇಡ ಎಂದು ಹಣ ಪಡೆಯಲಿಲ್ಲ. ಅಂದಿನಿಂದ ಗಿರೀಶ್ ಆ ಕಡೆ ಹೋದಾಗಲೆಲ್ಲಾ ತಪ್ಪದೇ ಈ ಅಂಗಡಿಗೆ ಬಂದು ಹಣ ಕೊಟ್ಟು ಕಾಫಿ ಕುಡಿದು ನಾಲ್ಕು ಮಾತನಾಡಿ ಹೋಗುತ್ತಿದ್ದ. ಯಾವಾಗ ಬಂದರೂ ಅಲ್ಲಿ ಆ ಹೆಂಗಸು ಮತ್ತು ಎರಡು ಮೂರು ವರ್ಷದ ಮಗು ಮಾತ್ರ ಇರುವುದನ್ನು ಗಮನಿಸಿ, ಕುತೂಹಲ ತಡೆಯಲಾರದೆ, ಮನೆಯಲ್ಲಿ ಮತ್ತೆ ಯಾರಿದ್ದಾರೆ ಎಂದು ಕೇಳಿದ. ಅದಕ್ಕವಳು ನಾನು ನನ್ನ ಮಗಳು ಇಬ್ಬರೇ ಎಂದಳು. ಏಕೆ ಎಂದಾಗ, ವರ್ಷದ ಹಿಂದೆ ನನ್ನ ಯಜಮಾನರು ಕೊವಿಡ್ ನಿಂದ ಹೋದರು ಹಾಗಾಗಿ ಎಂದಳು. ಇವನು ಮತ್ತೆ ಏನನ್ನು ಕೇಳಲಿಲ್ಲ.. ನಂತರ ತಿಳಿದಿದ್ದೆಂದರೆ, ಗಂಡ ಇರುವವರೆಗೂ ಅವನ ಕುಟುಂಬದವರೊಂದಿಗೆ ಬದುಕು ಚೆನ್ನಾಗಿಯೇ ಇತ್ತು. ಆತ ಹೋದನಂತರ ಆಸ್ತಿಯ ಸಲುವಾಗಿ, ಇವಳಿಗೆ ಈ ಪುಟ್ಟ ಮನೆ, ನಾಲ್ಕು ಬಿಡಿಗಾಸು ಕೊಟ್ಟು ಹೊರಹಾಕಿದ್ದಾರೆಂದು.

ಇವಳು ತನ್ನ ಮನೆಯವರಿಗೆ ಹೊರೆಯಾಗಬಾರದೆಂದು ಇಲ್ಲಿಗೆ ಮಗಳೊಂದಿಗೆ ಬಂದು ಬದುಕು ಕಟ್ಟೀಕೊಂಡಿದ್ದಾಳೆ ಎಂದು.
ಅದೊಂದು ದಿನ ಗಿರೀಶನಿಗೆ, ಆತನ ತಂದೆಗೆ ಹುಷಾರಿಲ್ಲ ಎಂದು ಕರೆ ಬಂದು ಊರಿಗೆ ಹೋದ. ಅಲ್ಲಿಗೆ ಹೋದ ಎರಡನೆ ದಿನ ತಾಯಿ, ಗಿರೀಶನನ್ನು ಕೂರಿಸಿಕೊಂಡು, ಆದದ್ದು ಆಗಿ ಹೋಯಿತು. ಅದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡು ನೀನೂ ಕೊರಗುತ್ತಾ ನಮಗೂ ಕೊರಗುವಂತೆ ಏಕೆ ಮಾಡ್ತಿಯಾ? ನಿನ್ನ ತಂದೆ ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಹೀಗಾಗಿರುವುದು ಎಂದು ಹೇಳುವಾಗಲೇ ಗಿರೀಶನ ಗೆಳೆಯನು ಬಂದ.

ಅವನು ಗಿರೀಶನನ್ನು ಹೊರಗೆ ಕರೆದುಕೊಂಡು ಹೋಗಿ, ನೋಡು ನಿನಗೇನು ಮಹಾ ವಯಸ್ಸಾಗಿಲ್ಲ, ಮೊದಲನೇ ಸಂಬಂಧ ಅಲ್ಲದಿದ್ದರೂ ಎರಡನೇ ಸಂಬಂಧವಾದರೂ ನೋಡು. ಅವರಿಗೂ ಒಂದು ಬದುಕು ಸಿಗುತ್ತದೆ, ನಿನ್ನ ಬದುಕಿಗೂ ಆಧಾರ ಸಿಕ್ಕಂತೆ ಆಗುತ್ತದೆ. ಜೊತೆಗೆ ನಿನ್ನ ತಂದೆ ತಾಯಿಗೆ ನೆಮ್ಮದಿ ಸಿಗುತ್ತದೆ ಯೋಚಿಸು ಎಂದ.
ಗಿರೀಶನಿಗೆ ಈಗ ಮೂವತ್ತೈದು ವರ್ಷ, ಅವನಿಗೆ ಮದುವೆಯಾಗಿ ಆರು ವರ್ಷವಾದರೂ ಮಕ್ಕಳಾಗಿರಲಿಲ್ಲ. ಅದಕ್ಕಾಗಿ ಹರಕೆ ಹೊತ್ತು ತೀರಿಸಲು ತನ್ನ ಊರಿಂದ ಹದಿನೈದು ಕಿಲೋಮೀಟರ್ ದೂರದಲ್ಲಿ ಇರುವ ಮನೆದೇವರಿಗೆ ಬೈಕಿನಲ್ಲಿ ಹೆಂಡತಿಯೊಂದಿಗೆ ಹೋಗುವಾಗ, ಎದುರಿನಿಂದ ವೇಗವಾಗಿ ಬಂದ ವಾಹನದಿಂದ ತಪ್ಪಿಸಿಕೊಳ್ಳಲು ಹೋಗಿ, ಬೈಕ್ ಸಮೇತ ಕೆರೆಯಲ್ಲಿ ಬಿದ್ದಿದ್ದರು.

ಅಲ್ಪಸ್ವಲ್ಪ ಈಜು ಬರುತ್ತಿದ್ದ ಗಿರೀಶ್ ಕಷ್ಟಪಟ್ಟು ದಡ ಸೇರಿದ. ಆದರೆ ಆತನ ಹೆಂಡತಿ ಬದುಕಿ ಉಳಿಯಲಿಲ್ಲ. ಊರಲ್ಲೇ ಇದ್ದರೆ ಹೆಂಡತಿಯ ನೆನಪು ಬಹಳ ಕಾಡುತ್ತದೆ, ಅವಳ ಸಾವಿಗೆ ತಾನೇ ಕಾರಣ ಎಂದು ಕೊರಗುವಂತೆ ಆಗುತ್ತದೆ ಎನ್ನುವ ಕಾರಣಕ್ಕೆ ತನ್ನ ಊರು ಬಿಟ್ಟು ಶಿವಮೊಗ್ಗ ಸೇರಿದ್ದ. ಇಷ್ಟು ದಿನ ಯಾರು ಏನೇ ಹೇಳಿದ್ದರೂ ಮರುಮದುವೆಯ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಈಗ, ತಂದೆಯ ಅನಾರೋಗ್ಯ, ತಾಯಿಯ ಮಾತು, ಜೊತೆಗೆ ಗೆಳೆಯ, ವಿಧವೆ, ವಿಚ್ಜೇದಿತೆ, ಕೈಲಾಗದವರಿಗೆ ಮದುವೆಯಾಗಿ ಹೊಸ ಬದುಕು ಕೊಡಬಾರದೇಕೆ ಎನ್ನುವ ಮಾತು ಮತ್ತೊಂದು ದಿಕ್ಕಿನಲ್ಲಿ ಯೋಚಿಸುವಂತೆ ಮಾಡಿತು.

ಅದಕ್ಕಾಗಿಯೆ ಗಿರೀಶ್, ಅಪ್ಪ ನನಗೆ ಯೋಚಿಸಲು ಸ್ವಲ್ಪ ದಿನ ಅವಕಾಶ ಕೊಡು ಹೇಳುತ್ತೇನೆ ಎಂದು ಶಿವಮೊಗ್ಗಕ್ಕೆ ಬಂದ. ಅದೇ ದಿನ ಹೊಸ ಬಡಾವಣೆಯ ಆರ್ಡರ್ ಸಿಕ್ಕಿತು. ವಾಡಿಕೆಯಂತೆ ಡೆಲಿವರಿ ಕೊಟ್ಟು ಕಾಫಿ ಕುಡಿಯಲು ಬಂದ. ಅದೇನೋ ಗೊತ್ತಿಲ್ಲ, ಆಂದು ಆ ಅಂಗಡಿಯ ಮಹಿಳೆ ಬಹಳ ವಿಶೇಷವಾಗಿ ಕಂಡಳು. ಸಂಜೆ ಮನೆಗೆ ಬಂದವನು ಏನೋ ಯೋಚಸಿ ಗೆಳೆಯನಿಗೆ ಕರೆ ಮಾಡಿ, ಅಂಗಡಿಯ ಮಹಿಳೆಯ ವಿಷಯವನ್ನು ಅವನಿಗೆ ತಿಳಿಸಿ, ಅವಳು ಒಪ್ಪಿದರೆ ಅವಳಿಗೆ ಮದುವೆಯಾಗಿ, ಅವಳ ಮಗುವಿಗೆ ತಂದೆಯಾಗಲು ಬಯಸಿರುವೆ. ಇದಕ್ಕೆ ಅಪ್ಪ ಅಮ್ಮನ ಒಪ್ಪಿಗೆ ಇದೇಯಾ ನೀನೇ ಕೇಳಿ ತಿಳಿಸು. ಆಮೇಲೆ ನಾನು ಅವಳ ಬಳಿ ಮಾತನಾಡುವೆ ಎಂದ ಗಿರೀಶ್. ಸಮಯ ನೋಡಿ ನಿನ್ನ ತಂದೆ ತಾಯಿಯರ ಜೊತೆ ಮಾತನಾಡಿ ತಿಳಿಸುವೆ ಎಂದ ಗೆಳೆಯ. ಗಿರೀಶ್, ಗೆಳೆಯನಿಂದ ಬರುವ ಕರೆಗೆ ಕಾಯುತ್ತಿದ್ದಾನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ2 hours ago

ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ...

ದಿನದ ಸುದ್ದಿ13 hours ago

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ...

ದಿನದ ಸುದ್ದಿ15 hours ago

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...

ದಿನದ ಸುದ್ದಿ23 hours ago

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ...

ದಿನದ ಸುದ್ದಿ23 hours ago

ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡಲು ಒತ್ತಾಯ

ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ...

ದಿನದ ಸುದ್ದಿ24 hours ago

ಗೃಹಜ್ಯೋತಿ ಯೋಜನೆ | ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯ : ಸಚಿವ ಕೆ.ಜೆ. ಜಾರ್ಜ್

ಸುದ್ದಿದಿನ, ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯಿಸಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ....

ದಿನದ ಸುದ್ದಿ1 day ago

ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಸುದ್ದಿದಿನ,ದಾವಣಗೆರೆ : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ 75 ನೇ ವಾರ್ಷಿಕೋತ್ಸದ ಅಂಗವಾಗಿ...

ದಿನದ ಸುದ್ದಿ2 days ago

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ...

ದಿನದ ಸುದ್ದಿ2 days ago

ಮೀಸಲಾತಿ ಹೆಚ್ಚಳ ; ಸಂವಿಧಾನದ 9ನೇ ಶೆಡ್ಯುಲ್‌ನಲ್ಲಿ ಸೇರಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯಲ್‌ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ...

ದಿನದ ಸುದ್ದಿ3 days ago

ನೈತಿಕ ಪೊಲೀಸ್‍ಗಿರಿಗೆ ಅವಕಾಶ ಇಲ್ಲ ; ಸಿ.ಎಂ. ಸಿದ್ದರಾಮಯ್ಯ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ...

Trending