Connect with us

ದಿನದ ಸುದ್ದಿ

ಕನ್ನಡ ಸಾಹಿತ್ಯ ಪರಿಷತ್ತಿನ “ ಸಿರಿಗನ್ನಡಂ ಗೆಲ್ಗೆ “ ಘೋಷವಾಕ್ಯ ಅನುಷ್ಠಾನಗೊಳಿಸಿದ್ದು ಬಿಎಂಶ್ರೀ : ಪ್ರೊ.ಎಚ್.ಎಸ್.ಹರಿಶಂಕರ್

Published

on

ಸುದ್ದಿದಿನ,ದಾವಣಗೆರೆ : ಆಧುನಿಕ ಕನ್ನಡದ ನವಯುಗದ ಪ್ರವರ್ತಕ ರಲ್ಲಿ ಅಗ್ರಗಣ್ಯರಾಗಿದ್ದ ‘ ಶ್ರೀ ‘ ಎಂಬ ನಾಮಾಂಕಿತದಲ್ಲಿ ಪ್ರಕೀರ್ತಿತರಾದವರು ಬಿ. ಎಂ. ಶ್ರೀಕಂಠಯ್ಯನವರು. ಇವರು ಕನ್ನಡದ ಕಣ್ವ ರು, ಹೊಸಗನ್ನಡ ಕಾವ್ಯ ಕುಲಪತಿಗಳು ಎಂದು ನಾಡಿಗೆ ನಾಡೇ ಅವರನ್ನು ಗೌರವಿಸಿದೆ. ಇವರು ನವೋದಯ ಕಾವ್ಯ ಸಾಹಿತ್ಯದ ಪ್ರವರ್ತಕ,ಪಿತಾಮಹ ಎಂದು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಮಾನಸಗಂಗೋತ್ರಿಯ ವಿಶ್ರಾಂತ ಪ್ರಾಧ್ಯಾಪಕರು ಪ್ರೊ.ಎಚ್ಎಸ್ ಹರಿಶಂಕರ್ ಅವರು ನುಡಿದರು.

ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ ಅಂತರ್ಜಾಲ ಕನ್ನಡ ನುಡಿ ಹಬ್ಬ ಕಾರ್ಯಕ್ರಮದಲ್ಲಿ ಆಚಾರ್ಯ ಬಿಎಂಶ್ರೀ ಅವರ ಸಾಹಿತ್ಯ ವಿಷಯವನ್ನು ಕುರಿತಾಗಿ 12 ನೇ ದಿನದ ಉಪನ್ಯಾಸ ನೀಡಿದರು.

1921 ರಲ್ಲಿ ಬಿ ಎಂ ಶ್ರೀ ಅವರ ಇಂಗ್ಲಿಷ್ ಗೀತೆಗಳು ಪ್ರಕಟಗೊಂಡಿದ್ದು, ಯುವ ಕನ್ನಡಿಗರ ಹೃನ್ಮನಗಳನ್ನು ಗೆದ್ದಿತ್ತು. ಅದುವರೆಗೂ ಹಳೆಗನ್ನಡ ಸಾಹಿತ್ಯ ರಚನೆಯನ್ನು ಕೇಳಿ ಕೇಳಿ ಜಡ್ಡು ಗಟ್ಟಿದ್ದ ಕವಿಗಳಿಗೆ ಇವರ ಕವನಗಳ ದಾಟಿ ಬಹು ಅಪ್ಯಾಯಮಾನವಾಗಿ ಕಂಡಿತು.

ಹಿಡಿದು ಮಂಜು ಬೀಳುತಿತ್ತು, ಚುಕ್ಕಿ ಕಣ್ಣು ಮಿಟುಕುತಿತ್ತು, ಕುಡಿಯೋ ಕಂದ ಕುಡಿಯೋ ಎಂಬ ಮಾತು ಕಿವಿಗೆ ಬಿತ್ತು, ತಿರುಗಿ ನೋಡಲೊಬ್ಬೆ ಆಚೆ, ಒಬ್ಬಳಲ್ಲಿ ಹೆಣ್ಣುಮಗಳು, ನರೆಯ ಬಿಳುಪು ಕುರಿಯ ಮರಿಯ ತಲೆಯ ತಡಹುತ್ತಿದ್ದಳು. ಎಂಬ “ಮುದ್ದಿನ ಕುರಿ “ ಕವನದ ಈ ಸಾಲುಗಳನ್ನು ಕೇಳುತ್ತಿದ್ದಂತೆಯೇ ಒಂದು ರೀತಿ ರೋಮಾಂಚನವಾಯಿತು. ಅರೆ ಇದೇನು? ಇದ್ಯಾವ ಚಂದಸ್ಸು? ಕೇಳಲು ಹಿತವಾಗಿದೆ ಎಂದು ಕೇಳಿ ಬಂದದ್ದು ನಿಜ. ಬಿ ಎಂ ಶ್ರೀ ಅವರ ಕವನಗಳು ಜನರನ್ನು ಮೋಡಿ ಮಾಡಿ ಹಿಡಿದಿಟ್ಟಿದ್ದವು. ಮುಂದಿನ ಹೊಸಗನ್ನಡದ ಪೀಳಿಗೆಯ ಕವಿಗಳಿಗೆ ಕವಿತೆಗಳಿಗೆ ಸ್ಪೂರ್ತಿ ಕೊಟ್ಟವು ಎಂದರು.

ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯನವರು ಬಿ ಎಂ ಶ್ರೀಕಂಠಯ್ಯ. ಇವರು 03:01: 1884 ರಂದು. ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸಂಪಿಗೆ ಎಂಬ ಹಳ್ಳಿಯಲ್ಲಿ ಇವರ ತಾತನ ಮನೆಯಲ್ಲಿ ಮೈಲಾರಯ್ಯ ಮತ್ತು ಭಾಗೀರಥಮ್ಮನವರ ಪುತ್ರರಾಗಿ ಜನಿಸಿದರು.

ಇವರ ಬಾಲ್ಯ ಶಿಕ್ಷಣ ಶ್ರೀರಂಗಪಟ್ಟಣದಲ್ಲಿ ನಡೆದಿದ್ದು 1907 ರಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ ಪದವಿ ಪಡೆದು 1909 ರಲ್ಲಿ ಮದ್ರಾಸ್ ನಲ್ಲಿ ಎಂ ಎ ಪದವಿ ಪಡೆದುಕೊಂಡರು. ಮುಂದೆ 1910 ರಲ್ಲಿ ಮಹಾರಾಜ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ನೇಮಕಗೊಂಡು 1 9 2 3 ರಲ್ಲಿ ಇಂಗ್ಲಿಷ್ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದರು.

ಮೊದಮೊದಲು ಬಿಎಂಶ್ರೀ ಅವರು ಕನ್ನಡದ ಬಗ್ಗೆ ಅಷ್ಟಾಗಿ ಒಲವು ತೋರುತ್ತಿರಲಿಲ್ಲ, ಕನ್ನಡದಲ್ಲಿ ಮಾತನಾಡಿ ಎಂದರೆ ಅವರಿಗೆ ಬಿಗುಮಾನ, ಅವಮಾನ ವಾಗುತ್ತಿದ್ದಂತೆ. ಕನ್ನಡ ಸಭೆಗಳಿಗೆ ಹೋಗುತ್ತಿರಲಿಲ್ಲ. ಆದರೆ ಬಹಳ ಕಾಲ ಈ ಬಿಗುಮಾನ ಉಳಿಯಲಿಲ್ಲ. ಕನ್ನಡದ ಕಂಪು ಇವರನ್ನು ಬಹುಬೇಗ ಆಕರ್ಷಿಸಿತು.

ಕನ್ನಡ ಮಾತು ತಲೆ ಎತ್ತುವ ಬಗೆ ಎಂಬ ವಿಷಯ ಕುರಿತು ತಮ್ಮ ಭಾಷಣದಲ್ಲಿ ಜನರಿಗೆ ತಿಳಿಯದ ಭಾಷೆಯಲ್ಲಿ ಬರೆಯುವುದರಲ್ಲಿ ಯಾವ ಬುದ್ಧಿವಂತಿಕೆಯು ಇಲ್ಲಾ. ಹೊಸಗನ್ನಡವನ್ನೇ ಎಲ್ಲರೂ ಹಿಡಿಯಬೇಕು ಎಂದು ಕರೆಕೊಟ್ಟರು ಅಲ್ಲಿಂದ ಮುಂದೆ ಕನ್ನಡವೇ ಅವರ ಸರ್ವಸ್ವವಾಗಿತ್ತು. ಬಿಎಂಶ್ರೀ ಅವರು ಬರೆದದ್ದು ಸ್ವಲ್ಪವಾದರೂ ನವೋದಯ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಕರುಣಾಳು ಬಾ ಬೆಳಕೆ, ಹಳೆಯ ಪಳಕೆಯ ಮುಖಗಳು, ಕನಕಾಂಗಿ, ದೇಶ ಸೇವಕ, ನನ್ನ ಪ್ರೇಮದ ಹುಡುಗಿ, ಹೀಗೆ ಬಿಎಂಶ್ರೀಯವರು ಅನೇಕ ತಮ್ಮ ಸಾಹಿತ್ಯ ಕೃಷಿಯನ್ನು ಮಾಡಿದ್ದು ಗದಾಯುದ್ಧ ನಾಟಕಂ, ಅಶ್ವತ್ಥಾಮ, ಪಾರಸಿಕರು ಇನ್ನು ಹಲವು ಒಳ್ಳೆಯ ಸಾಹಿತ್ಯ ಕೃತಿಗಳನ್ನು ಕನ್ನಡಿಗೆ ಕನ್ನಡಿಗರಿಗೆ ನೀಡಿದ್ದಾರೆ.

ಸಿರಿಗನ್ನಡಂ, ಸಿರಿಗನ್ನಡಂ ಬಾಳ್ಗೆ, ಕನ್ನಡ ತಾಯ್ ಗೆಲ್ಗೆ , ಕನ್ನಡ ತಾಯ್ ಬಾಳ್ಗೆ ಎಂದು ಬಿಎಂಶ್ರೀ ಅವರು ಉದ್ಗರಿಸಿದ್ದಾರೆ. ಇವರಿಗೆ ಕನ್ನಡದ ಬಾವುಟ ವೆಂದರೆ ಇನ್ನಿಲ್ಲದ ಅಭಿಮಾನ ಉತ್ಸಾಹ ಕನ್ನಡದ ಹಿರಿಮೆ ಎಲ್ಲರನ್ನು ರೋಮಾಂಚನಗೊಳಿಸುತ್ತದೆ ಕೆಲವು ಸಾಲುಗಳು ಹೀಗಿವೆ..

ಏರಿಸಿ ಹಾರಿಸಿ ಕನ್ನಡದ ಭಾವುಟ
ಓಹೋ ಕನ್ನಡ ನಾಡು,
ಆಹಾ ಕನ್ನಡ ನುಡಿ,
ಹಾರಿಸಿ, ತೋರಿಸಿ ಕೆಚ್ಚೆದೆಯ ಬಾವುಟ.

ಗಾಳಿಯಲ್ಲಿ ಪಟಪಟ,
ದಾಳಿಯಲ್ಲಿ ಚಟಚಟ,
ಉರಿಯಿತೋ ಉರಿಯಿತೋ
ಹಗೆಯ ಹಠ ಮನೆ-ಮಠ
ಹಾಳ್ ಹಾಳ್ ಸುರಿಯಿತು
ಹಾಗೆಯೇ ಬೀಡ ಕಠ,
ಬಾಳ್ ಕನ್ನಡ ತಾಯ್, ಏಳ್ ಕನ್ನಡ ತಾಯ್,
ಹಾಳ್ ಕನ್ನಡ ತಾಯ್, ಕನ್ನಡಿಗರ ಒಡತಿ ಓ ರಾಜೇಶ್ವರಿ.ಎಂಬ ಬಿಎಂಶ್ರೀ ಅವರ ಕವನ ನಮ್ಮೆಲ್ಲರಿಗೂ ರೋಮಾಂಚನಗೊಳಿಸುತ್ತದೆ.

ಬಿಎಂ ಶ್ರೀಗಳು ಪ್ರಸಿದ್ಧ ವಾಗ್ಮಿಗಳು ತರುಣ ಕನ್ನಡ ಲೇಖಕರಿಗೆ ಇವರ ಪ್ರೋತ್ಸಾಹ ನಿರಂತರವಾಗಿರುತ್ತದೆ ಬಿಎಂಶ್ರೀ ಅವರು 1926 -1930 ರವರೆಗೆ ಮೂರು ವರ್ಷಗಳ ಕಾಲ ಮೈಸೂರು ವಿಶ್ವವಿದ್ಯಾನಿಲಯದ ರಿಜಿಸ್ಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಗುಲ್ಬರ್ಗದಲ್ಲಿ ನಡೆದ ಹದಿನಾಲ್ಕನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆವಹಿಸಿಕೊಂಡಿದ್ದು ಕನ್ನಡಿಗರ ಹೆಮ್ಮೆ ಎಂದು ತಮ್ಮ ಉಪನ್ಯಾಸದಲ್ಲಿ

ಅಧ್ಯಕ್ಷೀಯ ನುಡಿಗಳನ್ನಾಡಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ ವಾಮದೇವಪ್ಪ ನವರು ಬಿಎಂಶ್ರೀ ಅವರನ್ನು ಕುರಿತಾಗಿ ಮಾತನಾಡುತ್ತಾ ಬಿಎಂಶ್ರೀ ಅವರು ಆಧುನಿಕ ಕಣ್ಣು ಆಧುನಿಕ ಸಾಹಿತ್ಯದ ಪ್ರವರ್ತಕ ಎಂದು ಬಣ್ಣಿಸುವುದು ರೊಂದಿಗೆ ಅವರು ಕನ್ನಡ ಸಾಹಿತ್ಯಕ್ಕೆ ಕೊಟ್ಟ ಕೊಡುಗೆಗಳನ್ನು ಸ್ಮರಿಸಿಕೊಳ್ಳುತ್ತಾ ಎಂದು ಕನ್ನಡ ಸಾಹಿತ್ ಪರಿಷತ್ತಿಗೆ ಮಹಾನ್ ಕಾಯಕ ಕಾಯಕಲ್ಪ ತಂದುಕೊಟ್ಟ ಮಹಾನ್ ಚೇತನ ಎಂದು ಬಣ್ಣಿಸಿದರು.

ಇವರು ಕೊಟ್ಟ ಕೊಡುಗೆಗಳನ್ನು ಕೊಡುಗೆಗಳನ್ನು ನೆನೆಯುತ್ತ ಬಿಎಂಶ್ರೀಯವರು ತಮ್ಮ ಸ್ವಂತ ದುಡಿಮೆಯ 6500 ರೂಪಾಯಿಗಳನ್ನು ವ್ಯಯಮಾಡಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ತನ್ನದೇ ಆದ ಮುದ್ರಣ ಆರಂಭಿಸಿದ ಸವಿನೆನಪಿಗಾಗಿ ಆಧುನಿಕ ಗೊಂಡಿರುವ” ಬಿಎಂಶ್ರೀಯವರ ಅಚ್ಚುಕೂಟ” ವೆಂತಲೂ ನಾಮಕರಣಕ್ಕೆ ಕಾರಣೀಭೂತರಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ “ಕನ್ನಡ ನುಡಿ” ಎಂಬ ಪತ್ರಿಕೆಯನ್ನು ಪ್ರಕಟಿಸಿದ ಪ್ರಥಮರು. ಕನ್ನಡ ಸಾಹಿತ್ಯ ಪರಿಷತ್ ನಡೆಸುತ್ತಿರುವ ಕಾವ – ಜಾಣ ಪರೀಕ್ಷೆಗಳ ಸ್ಥಾಪನೆಗೂ ಕಾರಣೀಭೂತರಾದರು. ಕನ್ನಡಸಾಹಿತ್ಯಪರಿಷತ್ತಿನ ಲೋಗೋವನ್ನು, ತಮ್ಮ “ ಸಿರಿಗನ್ನಡಂ ಗೆಲ್ಗೆ “ಎಂಬ ಘೋಷವಾಕ್ಯವನ್ನು ಅನುಷ್ಠಾನಗೊಳಿಸಿದರು.

ಶ್ರೀಯುತ ಬಿಎಂಶ್ರೀ ಅವರು ನಾಡಿನ ಉದ್ದಗಲಕ್ಕೂ ಸಂಚರಿಸಿ ಪಾಂಡಿತ್ಯಪೂರ್ಣ ಮಾತುಗಳ ಮೂಲಕ ಆಂಗ್ಲಭಾಷಾ ಶ್ರೇಷ್ಠ ಕವಿಗಳಾದ ವಿಲಿಯಂ ಶೇಕ್ಸ್ಪಿಯರ್, ವಿಲಿಯಂ ವರ್ಡ್ಸ್ವರ್ತ್ ಮುಂತಾದವರ ಕವಿತೆಗಳನ್ನು ಕನ್ನಡಕ್ಕೆ ಭಾಷಾಂತರಿಸಿ ಕ್ರಾಂತಿಕಾರಕ ಹೋರಾಟ ಮಾಡಿದ ಧೀಮಂತ ವ್ಯಕ್ತಿ ಎಂದು ಬಣ್ಣಿಸಿದರು. ಮುಂತಾದವರು.

ಆರಂಭದಲ್ಲಿ ಶ್ರೀಮತಿ ವೀಣಾ ಕೃಷ್ಣಮೂರ್ತಿಯವರು ಸರ್ವರನ್ನು ಸ್ವಾಗತಿಸಿದರು. ಹಿಂದಿನ ಸುಗಮ ಸಂಗೀತ ಕಾರ್ಯಕ್ರಮವನ್ನು ಜಾನಪದ ಕಲಾ ತಂಡದ ಸದಸ್ಯರಾದ ಶ್ರೀಮತಿ ರುದ್ರಾಕ್ಷಿ ಬಾಯಿ ಮತ್ತು ಸಂಗಡಿಗರು ನೆರವೇರಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending