ಅಸಾಮಾನ್ಯಳು

ಭಾರತದ ಕಿರಿಯ ಲೇಖಕಿ ‘ಮಾನ್ಯ ಹರ್ಷ’..!

Published

on

ಮಾನ್ಯ ಹರ್ಷ

ತ್ತು ವರ್ಷದ ಈ ಪುಟ್ಟ ಲೇಖಕಿ ಮಾನ್ಯ ಹರ್ಷ ಗೆ ಓದುವುದು ಬರೆಯುವುದು ಎಂದರೆ ತುಂಬಾ ಇಷ್ಟವಂತೆ. ಬೆಂಗಳೂರಿನ ಚಿತ್ರ ಮತ್ತು ಹರ್ಷ ದಂಪತಿಗಳ ಮಗಳಾದ ಮಾನ್ಯ ಹತ್ತು ವರ್ಷಕ್ಕೆ ಕನ್ನಡದಲ್ಲಿ ಪುಸ್ತಕ ಬರೆದು ಕನ್ನಡದ ಕಿರಿಯ ಲೇಖಕಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

ಈಕೆ ಬರೆದಿರುವ “ ನೀರಿನ ಪುಟಾಣಿ ಸಂರಕ್ಷಕರು ” ಮಕ್ಕಳ ಕಾದಂಬರಿಗೆ , ಇಂಡಿಯಾ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಕನ್ನಡದಲ್ಲಿ ಪುಸ್ತಕ ಬರೆದಿರುವ ಕಿರಿಯ ಲೇಖಕಿ “ ಎಂಬ ಬಿರುದಿಗೆ ಪಾತ್ರಳಾಗಿದ್ದಾಳೆ ಮಾನ್ಯ.

ಬೆಂಗಳೂರಿನ ಬಿ.ಟಿ.ಎಮ್ ಬಡಾವಣೆ ಯ ವಿಬ್ಗಯಾರ್ ಶಾಲೆಯ ಐದನೇ ತರಗತಿಯಲ್ಲಿ ಓದುತ್ತಿರುವುದು ಮಾನ್ಯ ತಾನು ಅಪ್ಪಟ ಕನ್ನಡತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾಳೆ. ಚಿಕ್ಕ ವಯಸ್ಸಿನಲ್ಲೇ ಸಾಹಿತ್ಯ ಆಸಕ್ತಿ ಯನ್ನು ಬೆಳಸಿಕೊಂಡಿರುವ ಮಾನ್ಯ, ತನ್ನ ಅಜ್ಜಿಯ ಬಾಯಿಂದ ಕನ್ನಡ ಕಥೆ-ಕವನಗಳನ್ನು ಕೇಳಿ ಬೆಳೆದ ಹುಡುಗಿ. ಕನ್ನಡದಲ್ಲಿ ಪುಸ್ತಕ ಬರೆಯಲು ನನ್ನ ಅಜ್ಜಿಯೇ ನನಗೆ ಸ್ಫೂರ್ತಿ ಎನ್ನುತ್ತಾಳೆ ಮಾನ್ಯ.

ಈಗಾಗಲೇ ” ನೇಚರ್ ಅವರ್ ಫ್ಯೂಚರ್” ಪುಸ್ತಕ ಬರೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಐದು ರೆಕಾರ್ಡ್ ಬುಕ್ಗಳಲ್ಲಿ ಹೆಸರು ಮಾಡಿರುವ ಈ ಪುಟ್ಟ ಲೇಖಕಿ, ವಜ್ರ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಭಾರತದ ಕಿರಿಯ ಕವಿಯಿತ್ರಿ” ಎಂಬ ಬಿರುದನ್ನೂ ಮುಡಿಗೇರಿಸಿಕೊಂಡಿದ್ದಾಳೆ.

ನೀರಿನ ಪುಟಾಣಿ ಸಂರಕ್ಷಕರು” ಈಕೆಯ ಎರಡನೆಯ ಪುಸ್ತಕವಾಗಿದ್ದು , ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಬರೆದಿದ್ದಾಳೆ.
ಆಂಗ್ಲ ಅವತರಣಿಕೆ ” ದಿ ವಾಟರ್ ಹೀರೋಸ್” ಮತ್ತು ಕನ್ನಡದಲ್ಲಿ ” ನೀರಿನ ಪುಟಾಣಿ ಸಂರಕ್ಷಕರು ” ಹೆಸರಲ್ಲಿ ರಚಿತವಾಗಿರುವ ಈ ಪುಸ್ತಕ ಸದ್ಯ ಕಾಡುತ್ತಿರುವ ನೀರಿನ ಕೊರತೆ ಮತ್ತು ಇದರ ಸಂರಕ್ಷಣೆಯ ತೀವ್ರತೆಯ ಮೇಲೆ ಬೆಳಕು ಚೆಲ್ಲುತ್ತದೆ.

ಈ ಪುಸ್ತಕ ಮಾರ್ಚ್ 22 ಕ್ಕೆ , ವಿಶ್ವ ಜಲ ದಿನದಂದು ಬಿಡುಗಡೆ ಆಗಬೇಕಿತ್ತು. ಆದ್ರೆ ವಿಶ್ವವನ್ನು ಕಾಡುತ್ತಿರುವ ಕರೋನ ಕಾಟದಿಂದಾಗಿ ಪುಸ್ತಕ ಬಿಡುಗಡೆ ತುಂಬಾ ಕಷ್ಟ ಆಯ್ತು. ಲಾಕ್ಡೌನ್ ನಡುವೆಯೂ ಪುಸ್ತಕವನ್ನು ಆನ್ಲೈನ್ ನಲ್ಲೇ ಬಿಡುಗಡೆ ಮಾಡಿದೆವು ಎಂದು ತಮ್ಮ ಅಳಲು ವ್ಯಕ್ತ ಪಡಿಸಿದರು.

ಪುಟ್ಟ ಲೇಖಕಿಯು, ದೈನಂದಿನ ಜೀವನದ ಸರಳ ನಿದರ್ಶನಗಳ ಮೂಲಕ ನೀರಿನ ಸಮಸ್ಯೆ ಯನ್ನು ಸ್ವಾರಸ್ಯಕರವಾಗಿ ನಿರೂಪಿಸಲು ಪ್ರಯತ್ನಿಸಿದ್ದಾರೆ.

ನೀರನ್ನು ಉಳಿಸಲು ಪ್ರತಿಯೊಬ್ಬರೂ ಅನುಸರಿಸಬೇಕಾದ ಅತ್ಯಂತ ಸರಳ ಮತ್ತು ಸುಲಭ ನಿಯಮಗಳನ್ನು ಈ ಪುಸ್ತಕ ಒಳಗೊಂಡಿದೆ.

ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ಚಿಕ್ಕ ವಯಸ್ಸಿನಲ್ಲೇ ಪ್ರಕೃತಿಯ ಬಗೆಗಿನ ಜವಾಬ್ದಾರಿ ಅರಿತ ಮಕ್ಕಳು ಹೇಗೆ ತಮ್ಮ ಪುಟ್ಟ ಕೈಗಳಿಂದ ದೊಡ್ಡ ಕೆಲಸ ಮಾಡಿ ತೋರಿಸುತ್ತಾರೆ ಎಂಬುದರ ಕಥಾಸಂಗಮವೇ ” ” ಪುಟಾಣಿ ಸಂರಕ್ಷಕರು ” .

ನೀರು ಪ್ರಕೃತಿಯ ಅಮೂಲ್ಯ ದ್ರವವಾಗಿದೆ. ನೀರು ಇಲ್ಲದೆ ಜೀವನವು ಅಸ್ತಿತ್ವದಲ್ಲಿಲ್ಲ. 3/4 ನೇ ಭಾಗದಷ್ಟು ಭೂಮಿಯ ಮೇಲ್ಮೈ ಜಲಮೂಲಗಳಿಂದ ಆವರಿಸಿದ್ದರೂ, ಈ ನೀರಿನ 97 ಪ್ರತಿಶತ ಉಪ್ಪು ನೀರಿನ ರೂಪದಲ್ಲಿ ಸಾಗರಗಳಲ್ಲಿದೆ, ಮತ್ತು ಮಾನವ ಬಳಕೆಗೆ ಅನರ್ಹವಾಗಿದೆ.

ಕೇವಲ 2.7% ಮಾತ್ರ ಶುದ್ದ ನೀರು ಇದ್ದು ಭ ಇದರಲ್ಲಿ ಸುಮಾರು 70% ರಷ್ಟು ನೀರು
ಹಿಮನದಿಗಳಾಗಿವೆ. ಅದರಲ್ಲಿ ಕೇವಲ 1% ಶುದ್ಧ ನೀರು ಲಭ್ಯವಿದ್ದು ಮಾನವ ಬಳಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಅಮೂಲ್ಯವಾದ ಸಂಪನ್ಮೂಲವನ್ನು ಸಂರಕ್ಷಿಸುವುದು ಬಹಳ ಮುಖ್ಯ ಎಂದು ಸಾರಿ ಹೇಳುತ್ತಿದ್ದಾರೆ ಈ ಪುಟ್ಟ ಲೇಖಕಿ. ಈ ಪುಸ್ತಕವು ಪ್ರಕೃತಿ ತಾಯಿಗೆ ಅರ್ಪಿತವಾಗಿವೆ.

ವಿಶ್ವ ಜಲ ದಿನಾಚರಣೆ, ಮಾರ್ಚ್ 22, 2018 ರಂದು, ಮಾನ್ಯ , 38 ಮಕ್ಕಳು ಮತ್ತು 36 ಪೋಷಕರೊಂದಿಗೆ ನೀರು ಉಳಿಸಿ ಮೆರವಣಿಗೆ ಜಾತಾ ಹಮ್ಮಿಕೊಂಡಿದ್ದಳು. ದೊರೆಸಾನಿ ಅರಣ್ಯ ಪ್ರದೇಶ ದಿಂದ ಪ್ರಾರಂಭವಾದ ಜಾತಾ ಪುಟ್ಟನ್‌ಹಳ್ಳಿ ಕೆರೆ ಯಲ್ಲಿ ಸಸಿಗಳನ್ನು ನೆಡುವ ಮೂಲಕ ಕೊನೆಗೊಂಡಿತು. ಮಕ್ಕಳು ನೀರನ್ನು ಉಳಿಸುವ ವಾಗ್ದಾನ ಮಾಡಿದರು ಮತ್ತು ನೀರು ಸಂರಕ್ಷಣೆ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದರು.

ಮನ್ಯಾ ಕನ್ನಡದಲ್ಲಿ ರಾಪ್ ಹಾಡನ್ನು ಬರೆದು ಹಾಡಿದ್ದಾರೆ. ಪ್ರಕೃತಿಯ ಸಂರಕ್ಷಣೆ ಬಗೆಗಿನ ಈ ರಾಪ್ ಸಂಗ ಸಾಮಾಜಿಕ ಮಾಧ್ಯಮ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಬ್ಗಿಯರ್ ಬಿಟಿಎಂ ಶಾಲೆಯ ವಿದ್ಯಾರ್ಥಿಗಳು ಹಾಡಿದ ಸ್ಟ್ರೈಕ್ ಆಫ್ ಪ್ಲಾಸ್ಟಿಕ್ ಗೀತೆಯ ಸಾಹಿತ್ಯವನ್ನೂ ಮಾನ್ಯಾ ಬರೆದಿದ್ದಾರೆ. ಇದೇ ಶಾಲೆಯ ಮ್ಯೂಸಿಕ್ ಸರ್ ಈ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದು , ದೊಡ್ಡ ಹಿಟ್ ಆಗಿದೆ.

ಭಾರತ ಕೇಂದ್ರ ಸರಕಾರ ಹಮ್ಮಿಕೊಂಡಿದ್ದ #WaterHeroes ಸ್ಪರ್ಧೆ ಯಲ್ಲಿ ಕೂಡ ಮಾನ್ಯಳ ನೀರಿನ ಹೋರಾಟ ಮತ್ತು ಕಳಕಳಿ ಗೆ ಪ್ರಶಸ್ತಿ ಬಂದಿದೆ.

UN -Water ನ ಫೇಸ್ ಬುಕ್ ಖಾತೆಯಲ್ಲಿ ಈ ಪುಟ್ಟ ಬಾಲೆಯ ನೀರಿನ ಹೋರಾಟ ಹಾಗೂ ನೀರಿನ ಸಂರಕ್ಷಣೆ ಕಳಕಳಿ ಬಗ್ಗೆ ಹಂಚಿಕೊಳ್ಳಲಾಗಿದೆ.

ಈ ಕಿರಿಯ ಕವಿಯಿತ್ರಿಯ ಕಿವಿಮಾತು

ನೀವು ಉಪದೇಶ ಮಾಡುವ ಮೊದಲು ಸ್ವಯಂ
ಅಭ್ಯಾಸ ಮಾಡಿ”.

ಅಪ್ರತಿಮ ಪ್ರತಿಭೆಯ ಈ ಪುಟ್ಟ ಬಾಲೆ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ಮುಡಿಗೇರಿಸಲಿ. ಮತ್ತಷ್ಟು
ಯಶಸ್ಸ ಈಕೆಯದಾಗಲಿ ಎಂದು ಹಾರೈಸೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version