Connect with us

ದಿನದ ಸುದ್ದಿ

ಸರಗಳ್ಳರಿದ್ದಾರೆ ಜೋಕೆ ಎಂಬ ಹಾಡು ವೈರಲ್ : ಸೊಗಸಾಗಿ ಹಾಡಿದೆ ಪೊಲೀಸ್ ಪೇದೆಗೆ ಸಿಕ್ತು ಬಹುಮಾನ !

Published

on

ಸುದ್ದಿದಿನ ಡೆಸ್ಕ್: ಸದ್ಯ ಮಹಾ ನಗರಿ ಬೆಂಗಳೂರಿನಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ. ಈ ಹಾವಳಿ ತಡೆಗೆ ಪೊಲೀಸ್ ಇಲಾಖೆ ಇಷ್ಟೇ ಕ್ರಮ ಕೈಗೊಂಡರು ಕಳ್ಳರು ತಮ್ಮ ಕೈ ಚಳಕ ತೋರಿಸುವುದು ಬಿಟ್ಟಿಲ್ಲ. ಈ ಕಾರಣಕ್ಕೆ ನಾಗರಿಕರು ಕೂಡ ಜಾಗೃತಿ ವಹಿಸುವುದು ಮುಖ್ಯ ಎನ್ನುತ್ತೆ ಪೊಲೀಸ್ ಇಲಾಖೆ.

ಇನ್ನು ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸರಗಳ್ಳತದ ಬಗ್ಗೆ ಪೊಲೀಸ್ ಪೇದೆ ಸುಬ್ರಮಣ್ಯ ಶಾನುಭೋಗ್ ಎಂಬುವರು ಜಾಗೃತಿ ಗೀತೆ ರಚಿಸಿ ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಬಹುತೇಕ ನೆಟ್ಟಿಗರು ಸುಬ್ರಮಣ್ಯ ಅವರ ಧ್ವನಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಜೋಕೆ ಜೋಕೆ ಸರಗಳ್ಳರಿದ್ದಾರೆ ಜೋಕೆ’ ಎಂಬ ಹಾಡನ್ನು ಎಲ್ಲರು ಗುನುವಂತೆ ಹಾಡಿದ್ದಾರೆ. ಇದನ್ನು ಗುರುತಿಸಿದ ಬೆಂಗಳೂರು ಸಿಟಿ ಪೊಲೀಸ್ ಇಲಾಖೆ ಸುಬ್ರಮಣ್ಯ ಅವರಿಗೆ ಹತ್ತು ಸಾವಿರ ರೂಪಾಯಿ ಬಹುಮಾನ ನೀಡಿ ಪ್ರೋತ್ಸಾಹಿಸಿದೆ.

ಈ ಕುರಿತು ಬೆಂಗಳೂರು ಪೊಲೀಸ್ ಇಲಾಖೆ ತನ್ನ ಅಧಿಕೃತ ಫೇಸ್‌ಬುಕ್‌ ಪುಟದಲ್ಲಿ ಪ್ರಕಟಿಸಿದೆ. ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ಅವರು ಸುಬ್ರಮಣ್ಯ ಅವರಿಗೆ ಹತ್ತು ಸಾವಿರ ಬಹುಮಾನ ನೀಡಿ ಪ್ರೋತ್ಸಾಹಿಸಿದ್ದಾರೆ.

ಈಗ ನೀವು ಒಂದು ಸಲ ವಿಡಿಯೋ ನೋಡಿ, ಪೊಲೀಸ್ ಪೇದೆ ಸುಬ್ರಮಣ್ಯ ಅವರನ್ನು ಪ್ರೋತ್ಸಾಹಿಸಿ

 

Police Constable subramanya shanbhog spreading awareness on chain snatching through his song.

ದಿನದ ಸುದ್ದಿ

ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

Published

on

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಒಡಿಶಾಗೆ ತೆರಳಿದ್ದಾರೆ. ಎರಡು ವಿಮಾನಗಳಲ್ಲಿ 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದು, ನಂತರ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ತಮ್ಮ ಊರಿಗೆ ತೆರಳಿದ್ದಾರೆ.

18 ಜನ ಮೈಸೂರಿಗೆ ಉಳಿದವರು ಹಾಸನ, ಚಿಕ್ಕಮಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಒಡಿಶಾ ರೈಲು ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗಿದೆ. ಬಾಲಸೋರ್ ಸರ್ಕಾರಿ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಅಲ್ಲಿನ ವೈದ್ಯಾಧಿಕಾರಿಗಳಿಂದ ರಾಜ್ಯದ ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡರು, ಕನ್ನಡಿಗರ ಸುರಕ್ಷತೆ ಸಂಬಂಧ ಅಲ್ಲಿನ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೂ ಸಚಿವರು ಸಮಾಲೋಚನೆ ನಡೆಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರೈತರಿಂದ ಖರೀದಿಸುವ ಹಾಲಿನ ದರ ಕಡಿಮೆ ಮಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸೂಚನೆ

Published

on

ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್ ದರ ಕಡಿತ ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ಹಾಲು ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದೊಂದಿಗೆ ಚರ್ಚಿಸಬೇಕು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ

Published

on

ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.

ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಎಲ್ಲರೂ ಆಗಮಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೋಲ್ಕತಾದಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ.

ಮುಂಜಾನೆ ಹೊರಡಲಿರುವ ಇಂಡಿಗೊ ವಿಮಾನ ಬೆಂಗಳೂರಿಗೆ ಬರಲಿದೆ. ಕೋಲ್ಕತಾದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರರೂ ಈ ರೈಲುಗಳಲ್ಲಿ ವಾಪಸಾಗುವ ವೇಳೆ ಈ ದುರಂತ ಸಂಭವಿಸಿದ್ದು, ತರಬೇತುದಾರರು ಸೇರಿ 32 ಜನರನ್ನು ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ಸಚಿವ ಸಂತೋಷ್ ಲಾಡ್ ಅವರನ್ನು ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈಲು ದುರಂತದಲ್ಲಿ 280ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ಘೋರ, ದುರದೃಷ್ಟಕರ ಘಟನೆ. ಅಪಘಾತ ಸುದ್ದಿಯಿಂದ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಅಪಘಾತದಲ್ಲಿ ಕನ್ನಡಿಗರ ಸಾವು – ನೋವಿನ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಾಥಮಿಕ ಮಾಹಿತಿ ಪಡೆದು ಕನ್ನಡಿಗರ ರಕ್ಷಣೆಗೆ ಹಾಗೂ ಅಗತ್ಯ ನೆರವು ಒದಗಿಸಲು ಘಟನಾ ಸ್ಥಳಕ್ಕೆ ಸಚಿವ ಸಂತೋಷ್ ಲಾಡ್ ತೆರಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದುರಂತದಲ್ಲಿ ಸಿಲುಕಿದ್ದ ಕನ್ನಡಿಗರೊಂದಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಅಗತ್ಯ ನೆರವು ಒದಗಿಸಿ, ಸುರಕ್ಷಿತವಾಗಿ ವಾಪಸ್ ಕರೆ ತರಲಾಗುವುದು ಎಂದು ಧೈರ್ಯ ತುಂಬಿದರು. ರಾಜ್ಯ ಸರ್ಕಾರದ ತುರ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 1070ಅಥವಾ
080-22253707 ಅಥವಾ 080 – 22340676 ಅನ್ನು ಸಂಪರ್ಕಿಸಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending