Connect with us

ಲೈಫ್ ಸ್ಟೈಲ್

ಚೆಲುವೆರ ಗುಪ್ತಾಂಗದಿಂದ ತಯಾರಿಸಿದ ಬಿಯರ್ ಇದು..! ತಮಾಷೆಯಲ್ಲ ಸ್ವಾಮಿ

Published

on

Photo Courtesy: The Indian Express

ಸುದ್ದಿದಿನ ಡೆಸ್ಕ್ | ಲುವೆಯರ ಯೋನಿ ದ್ರವದಿಂದ ಬಿಯರ್ ತಯಾರಿಸಿರುವ ಪೋಲೆಂಡ್ ನ ವಾರ್ಸಾ ಕಂಪನಿಯೊಂದು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಈ ಬಿಯರ್ ಗೆ ‘ಆರ್ಡರ್ ಆಫ್ ಯೋನಿ’ ಎಂಬ ಹೆಸರನ್ನಿಟ್ಟಿದೆ ಕಂಪನಿ. ಚೆಲುವೆಯರ ಚೆಲುವನ್ನು ಕಲ್ಪಿಸಿ ಕೊಳ್ಳುತ್ತಾ ಬಿಯರ್ ಅನ್ನು ಹೀರಿ ಎಂದು ಬಾಟೆಲ್ ಮೇಲೆ ಬರೆಯಲಾಗಿದೆ. ಇದು ಯಾವ ಯಾವ ರೂಪದರ್ಶಿಯರ ಗುಪ್ತಾಂಗದಿಂದ ತಯಾರಿಸಿದ ಬಿಯರ್, ಹಾಗೂ ಬಿಯರ್ ಹೀರುವಾಗ ಯಾವ ಯಾವ ಭಂಗಿಯಲ್ಲಿ ರತಿ ಕ್ರೀಡೆಯನ್ನು ನಡೆಸಬೇಕು ಎಂಬ ವಿವರಣೆಯನ್ನೂ ಕೊಡಲಾಗಿದೆ.

Link ಗೆ ಭೇಟಿ ಕೊಡಿ.

http://orderyoni.com/#sppb-carousel-1487020756

ಈ ಬಿಯರ್ ಬಾಟಲಿಯ ಬೆಲೆ 466 ರೂಪಾಯಿ. ಜುಲೈ 28 ರಂದು ಪೋಲೆಂಡ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಬಿಯರ್ ನಲ್ಲಿ ಶೇ.8 ರಷ್ಟು ಆಲ್ಕೋಹಾಲ್ ಪ್ರಮಾಣವಿದೆ. ಹಾಗೇ ಎರಡು ರೀತಿಯ ಬಿಯರ್ ಬಾಟಲ್ ಗಳು ಲಭ್ಯವಿದೆ. ಒಂದಕ್ಕೆ ‘ಕಾಮ’ ವೆಂದು, ಮತ್ತೊಂದಕ್ಕೆ ಭಾವೋದ್ರೆಕವೆಂದು ಹೆಸರಿಡಲಾಗಿದೆ.

ಸುದ್ದಿದಿನ|ವಾಟ್ಸಾಪ್|9986715401

ದಿನದ ಸುದ್ದಿ

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

Published

on

3 ವರ್ಷದ ನಂತರ ಬಡ್ಡಿ ನಿಲ್ಲುತ್ತದೆ ಎಂಬುದು ಹಳೆಯ ನಿಯಮ; 58 ವರ್ಷದವರೆಗೆ ಬಡ್ಡಿ ಗ್ಯಾರಂಟಿ, ಆದರೆ ಈ ತೆರಿಗೆ ನಿಯಮ ಗೊತ್ತಿರಲಿ

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.

http://Visit : www.suddidina.com

3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?

ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.

ಉದಾಹರಣೆ:

ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.

ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!

ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.

ಖಾತೆದಾರರು ಏನು ಮಾಡಬೇಕು?

1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.

2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.

3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

Continue Reading

ದಿನದ ಸುದ್ದಿ

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

Published

on

ಸೆಪ್ಟೆಂಬರ್ ಅಂತ್ಯಕ್ಕೆ ಹೊಸ ಸೇವೆ ಜಾರಿ; ಮುಂದಿನ ವಾರವೇ `ನಮ್ಮ ಬಿಎಂಟಿಸಿ 2.0' ಆ್ಯಪ್ ಲೋಕಾರ್ಪಣೆ, 200 ಹೊಸ ಮಿನಿ ಡೀಸೆಲ್ ಬಸ್ ಖರೀದಿಗೆ ಸಿದ್ಧತೆ

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್‌ಗಳಾದ ಓಲಾ, ಉಬರ್, ರ‍್ಯಾಪಿಡೋ ನಂತಹ ಆ್ಯಪ್‌ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್‌ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

http://Visit : www.suddidina.com

ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.

ನಮ್ಮ ಬಿಎಂಟಿಸಿ 2.0′ ಆ್ಯಪ್‌ನಲ್ಲಿ ಏನಿದೆ ಹೊಸತು?

ಖಾಸಗಿ ಆ್ಯಪ್‌ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್‌ನಲ್ಲಿ ಬಿಎಂಟಿಸಿ ನೆಟ್‌ವರ್ಕ್‌ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ ಒಟ್ಟು 6,938 ಬಸ್‌ಗಳಿವೆ. ಪ್ರತಿದಿನ ಸರಾಸರಿ 6,200 ಬಸ್‌ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.

ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ: 

ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

200 ಹೊಸ ಮಿನಿ ಬಸ್‌ಗಳ ಖರೀದಿ:

ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್‌ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್‌ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್‌ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್‌ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್‌ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.

ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:

ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ 200 ಮಿನಿ ಎಸಿ ಇ-ಬಸ್‌ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್‌ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

Continue Reading

ದಿನದ ಸುದ್ದಿ

EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ

Published

on

ಕರ್ನಾಟಕ – ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ

ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.

http://Visit : www.suddidina.com

ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.

ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.

ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.

ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.

ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

Continue Reading
Advertisement

Title

ದಿನದ ಸುದ್ದಿ5 hours ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ5 hours ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ5 hours ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ
ದಿನದ ಸುದ್ದಿ5 hours ago

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ...

ದಿನದ ಸುದ್ದಿ5 hours ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

ದಿನದ ಸುದ್ದಿ5 hours ago

ಮೊದಲ ಬಾರಿಗೆ ಗೋನೂರು ಕೆರೆಗೆ ಹರಿದು ಬಂದ ಭದ್ರೆ – ರೈತರ ಸಂಭ್ರಮಾಚರಣೆ

ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಮೊದಲ ಬಾರಿಗೆ ಗೋನೂರು ಕೆರೆಗೆ ಆಗಮಿಸಿದ ಭದ್ರೆಗೆ ಬುಧವಾರ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು.  ...

ದಿನದ ಸುದ್ದಿ10 hours ago

EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ

ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ...

ದಿನದ ಸುದ್ದಿ12 hours ago

ಬೆಂಗಳೂರು ಸೆಪ್ಟೆಂಬರ್‌ನಲ್ಲಿ 31.9 ಡಿ.ಸೆ. ದಾಖಲೆ – ಹವಾಮಾನ ಇಲಾಖೆ ಎಚ್ಚರಿಕೆ

ಸುದ್ದಿದಿನ,ಬೆಂಗಳೂರು: ಪ್ರತಿ ವರ್ಷ ಮಳೆಗಾಲದ ಅಂತ್ಯದಲ್ಲಿ ನೈಋತ್ಯ ಮಾನ್ಸೂನ್ ಶೀತವಾಗಿರುತ್ತದೆ. ಆದರೆ ಈ ಬಾರಿ, 75 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. 2026ರ...

ದಿನದ ಸುದ್ದಿ12 hours ago

KPSCExam: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ವೈದ್ಯರ ಕೊರತೆ – ತಕ್ಷಣ ನೇಮಕಾತಿ ಅಗತ್ಯ

ಸುದ್ದಿದಿನ,ಕಲಬುರ್ಗಿ: ಕರ್ನಾಟಕದಲ್ಲಿ ವೈದ್ಯಾಧಿಕಾರಿ ಹುದ್ದೆಗಳ ಖಾಲಿತನವು ದಿನದಿಂದ ದಿನಕ್ಕೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ, ರಾಜ್ಯದ...

ದಿನದ ಸುದ್ದಿ12 hours ago

ಸ್ಕ್ರೀನ್‌ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ

ಸುದ್ದಿದಿನ,ಸ್ಮಾರ್ಟ್‌ಫೋನ್: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ನಮ್ಮ ಜೀವನದ ಅವಿಭಾಜ್ಯ ಭಾಗವಾಗಿದೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುವಂತಾಗಿದೆ. ಊಟವನ್ನೇ ಬಿಟ್ಟುಬಿಡುವವರು ಇದ್ದರೂ, ಮೊಬೈಲ್‌...

Trending