Connect with us

ರಾಜಕೀಯ

ರಾಜಕೀಯ ವಿವಾದೋದ್ಯಮ: ಪ್ರತಿರೋಧದ ಹಾದಿ

Published

on

ರ್ಪಡುವ ಘಟನಾವಳಿಗಳು ಮತ್ತು ಅಭಿವ್ಯಕ್ತ ವಿಚಾರಗಳು ವಿವಾದದ ಸ್ವರೂಪ ಪಡೆದು ಪ್ರಚಲಿತ ವಿದ್ಯಮಾನಗಳ ಆವರಣ ಕಲುಷಿತಗೊಂಡಿರುವ ಸಂದರ್ಭ ಈಗಿನದು. ಒಬ್ಬೊಬ್ಬರು ತಮ್ಮ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳುವುದಕ್ಕೆ ವಿವಾದಗಳನ್ನು ಬಳಸಿಕೊಳ್ಳುವುದರ ಕಡೆಗೇ ಗಮನ ಹರಿಸುತ್ತಿದ್ದಾರೆ. ಈ ಬಗೆಯ ಹಿತಾಸಕ್ತಿ ರಕ್ಷಣೆಯ ಸ್ವಾರ್ಥಪರ ನಡೆಗಳನ್ನು ರಾಷ್ಟ್ರ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ಪೋಷಿಸುತ್ತಿದೆ. ಪ್ರಾದೇಶಿಕ ವೈವಿಧ್ಯತೆ ಮತ್ತು ಸಾಂಸ್ಕøತಿಕ ಪರಂಪರೆಯ ಉದಾತ್ತತೆಯನ್ನು ಒಡೆದು ಆಕ್ರಾಮಕವೆನ್ನಿಸುವ ಸಮೂಹ ವರ್ತನಾ ಧಾಟಿಯನ್ನು ನಿರ್ದೇಶಿಸುತ್ತಿದೆ. ತನ್ನೊಳಗಿನ ಸಂಕುಚಿತತೆಯನ್ನು ಸಾಮಾಜಿಕವಾಗಿಸಿ ಜನಸಮೂಹದೊಳಗೆ ಬೆರೆಸಿಬಿಡುವ ಅದರ ಕಾರ್ಯಸೂಚಿ ಈಗಾಗಲೇ ಅಭೂತಪೂರ್ವ ಯಶಸ್ಸು ಪಡೆದಿದೆ. ಮತ್ತೆ ಮತ್ತೆ ಯಶಸ್ಸು ಪಡೆಯುವುದರ ಗಮ್ಯದ ಕಡೆಗೇ ಚಲಿಸುತ್ತಲೇ ಇದೆ. ಇದನ್ನು ದೃಢೀಕರಿಸುವಂತೆ ಜನವರ್ಗವು ಅಧಿಕಾರದಲ್ಲಿರುವವರನ್ನು ಆರಾಧಿಸುತ್ತಾ ತಮ್ಮ ಪ್ರಜ್ಞೆಯನ್ನು ಆಳ್ವಿಕೆಯ ಪಾದಕ್ಕರ್ಪಿಸಿಬಿಟ್ಟಿದೆ.

ದೇಶವೊಂದರ ರಾಜಕಾರಣವು ಜನಸಮೂಹವನ್ನು ಸರಿದಾರಿಯಲ್ಲಿರುವಂತೆ ನೋಡಿಕೊಳ್ಳುವ ನಾಯಕತ್ವವನ್ನು ಪೋಷಿಸಬೇಕು. ಹಾಗೆ ಪೋಷಿಸುತ್ತಲೇ ರಾಜಕೀಯಕ್ಕೆ ಉದಾತ್ತ ತಾತ್ವಿಕತೆಯ ಗುಣಲಕ್ಷಣದ ಸಂಸ್ಕಾರವನ್ನು ಒದಗಿಸಬೇಕು. ಆಡಳಿತಾರೂಢ ಸರ್ಕಾರವನ್ನು ಪ್ರತಿನಿಧಿಸುವ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ಸಂವಾದಾತ್ಮಕ ನಂಟು ಜನರ ಪ್ರಜ್ಞೆಯನ್ನು ಎತ್ತರಿಸುವ ರೀತಿಯಲ್ಲಿ ರೂಪುಗೊಳ್ಳುತ್ತಿರಬೇಕು. ಈ ನಂಟು ಅಪವಿತ್ರವಾಗಿರದೇ ದೇಶದ ಬೆಳವಣಿಗೆಯ ಹೆಜ್ಜೆಗಳನ್ನು ಸ್ಪಷ್ಟಪಡಿಸಿಕೊಳ್ಳುವುದಕ್ಕೆ ನೆರವಾಗುವಂತಿರಬೇಕು. ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಾರ್ಕಿಕ ಪರಿಹಾರ ಕಂಡುಕೊಳ್ಳುವ ಉತ್ಸಾಹದೊಂದಿಗೆ ಮುಂದಡಿಯಿಡಬೇಕು. ಸಮಸ್ಯೆಗಳನ್ನು ಜೀವಂತವಾಗಿಟ್ಟು ಅವುಗಳ ಆಧಾರದಲ್ಲಿ ಅಧಿಕಾರದ ಬೆಳೆ ತೆಗೆಯುವ ಅಪೇಕ್ಷೆಗಳು ವಿವಾದಗಳನ್ನು ಸೃಷ್ಟಿಸುವುದಕ್ಕಷ್ಟೇ ಬಳಕೆಯಾಗುತ್ತವೆ. ದೇಶಕ್ಕೆ ಪ್ರಯೋಜನವಾಗುವುದಿಲ್ಲ. ಜನರ ಒಳಿತಿನ ದೃಷ್ಟಿಯಿಂದಲೂ ಅವು ಅಪಾಯಕಾರಿ. ಈ ಹಂತದಲ್ಲಿಯೇ ಅವು ವಾಣಿಜ್ಯಿಕ ಹಿತಾಸಕ್ತಿಗಳನ್ನು ಪೋಷಿಸುವಂಥ ಉದ್ಯಮಗಳ ನಿರೀಕ್ಷೆಗಳನ್ನು ಈಡೇರಿಸುವ ಮೂಲಗಳಾಗುತ್ತವೆ. ರಾಜಕಾರಣವನ್ನು ವಿವಾದೋದ್ಯಮವಾಗಿಸುತ್ತವೆ. ಸದ್ಯದ ವಿದ್ಯಮಾನಗಳು ಈ ವಿಲಕ್ಷಣತೆಯನ್ನು ದೃಢೀಕರಿಸುತ್ತಿವೆ.

ಇದನ್ನು ಇನ್ನಷ್ಟು ಸ್ಪಷ್ಟಪಡಿಸಿಕೊಳ್ಳುವುದಕ್ಕೆ ಆಡಳಿತಾರೂಢ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡೆಗಳನ್ನು ನಿದರ್ಶನಗಳನ್ನಾಗಿ ಚರ್ಚಿಸಬಹುದು. ಭಾರತದಲ್ಲಿ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ ಎಂಬ ಎರಡು ರಾಷ್ಟ್ರೀಯ ಪಕ್ಷಗಳಿವೆ. ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅಸ್ತಿತ್ವದಲ್ಲಿವೆ. ಇತ್ತೀಚಿಗಿನ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ವ್ಯಾಪಕವಾಗಿ ಸಮ್ಮಿಶ್ರ ಸರ್ಕಾರದ ಪ್ರಯೋಗಗಳು ಮುಂಚೂಣಿಗೆ ಬಂದಿವೆ. ಮೈತ್ರಿ ಸರ್ಕಾರದ ಹೆಜ್ಜೆಗಳ ನಡಿಗೆಯ ದ್ವಂದ್ವಗಳೂ ಅರಿವಿಗೆ ಬಂದಿವೆ. ರಾಷ್ಟ್ರೀಯ ಪಕ್ಷಗಳೆರಡೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರುವ ತಮ್ಮೊಳಗಿನ ಹಂಬಲಗಳನ್ನು ಹತ್ತಿಕ್ಕಿಕೊಂಡು ಅವುಗಳ ನೆರವಿನ ಹಸ್ತವನ್ನು ಜೊತೆಗಿಟ್ಟುಕೊಂಡೇ ಮುನ್ನಡೆಯಬೇಕಾದ ಅನಿವಾರ್ಯತೆಯನ್ನು ಮನಗಂಡಿವೆ. ಇದರ ಮಧ್ಯೆಯೇ ಭಾರತೀಯ ಜನತಾಪಕ್ಷವು ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಪಡೆದು ಕೇಂದ್ರದಲ್ಲಿ ಅಧಿಕಾರ ಹಿಡಿದ ನಂತರವೂ ಮಿತ್ರಪಕ್ಷಗಳನ್ನು ಜೊತೆಗಿರಿಸಿಕೊಂಡು ಎನ್‍ಡಿಎ (ನ್ಯಾಷನಲ್ ಡೆಮಾಕ್ರೆಟಿಕ್ ಅಲಯನ್ಸ್) ಬಂಧವನ್ನು ಚಾಲ್ತಿಯಲ್ಲಿರಿಸಿಕೊಂಡಿದೆ. ಕಾಂಗ್ರೆಸ್ ಕೂಡಾ ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್) ಎಂಬ ಮೈತ್ರಿಕೂಟವನ್ನು ನೆಚ್ಚಿಕೊಂಡು ಚುನಾವಣಾ ಅಖಾಡಕ್ಕಿಳಿಯುತ್ತಿದೆ. ಇದೀಗ ಎಲ್ಲ ಪಕ್ಷಗಳೂ ಒಗ್ಗೂಡಿ ತೃತೀಯ ಶಕ್ತಿಯನ್ನು ರೂಪಿಸಿ ಎನ್.ಡಿ.ಎಯನ್ನು ಮಣಿಸುವ ಪ್ರಯತ್ನಗಳಲ್ಲಿ ನಿರತವಾಗಿವೆ.

ರಾಷ್ಟ್ರೀಯ ಪಕ್ಷಗಳನ್ನು ಅಲ್ಲಗಳೆದು ಅಸ್ತಿತ್ವಕ್ಕೆ ಬಂದ ಪ್ರಾದೇಶಿಕ ಪಕ್ಷಗಳು ಭಿನ್ನ ಹಾದಿಯನ್ನೇನೂ ತುಳಿಯಲಿಲ್ಲ. ಹಿಂದಿನ ರಾಜಕಾರಣದ ಸಾಂಪ್ರದಾಯಿಕ ಸಂಕುಚಿತತೆಯನ್ನೇ ಮತ್ತಷ್ಟು ವಿಸ್ತರಿಸಿದವು. ಅವುಗಳ ಹೆಸರುಗಳು ಉದಾತ್ತತೆಯ ಅರ್ಥವನ್ನು ಧ್ವನಿಸಿದರೂ ಮಾಡಿದ್ದೆಲ್ಲವೂ ಸಂಕುಚಿತ ರಾಜಕಾರಣ. ರಾಜ್ಯಗಳ ನಡುವಿನ ಸೌಹಾರ್ದದ ಬಂಧವನ್ನು ಒಡೆಯುವ ಹಾಗೆ ಭಾಷಿಕ ಮೂಲಭೂತವಾದಿತ್ವವನ್ನೇ ಬಂಡವಾಳವಾಗಿಸಿಕೊಂಡು ಮತಬೆಳೆ ದಕ್ಕಿಸಿಕೊಳ್ಳುವ ಪ್ರಯತ್ನಗಳಲ್ಲಿಯೇ ತಲ್ಲೀನವಾದವು. ಜಲವಿವಾದಗಳು ಈ ನೆಲೆಯಲ್ಲಿಯೇ ಹುಟ್ಟಿಕೊಂಡವು. ಬೇರೊಂದು ದೇಶದ ವಿರುದ್ಧದ ಯುದ್ಧಸನ್ನದ್ಧ ಮನಸ್ಥಿತಿ ರಾಷ್ಟ್ರರಾಜಕಾರಣದ ವಿಲಕ್ಷಣ ಗುಣವಾಗುವುದಕ್ಕೆ ಧಾರ್ಮಿಕ ಕೇಂದ್ರಿತ ಸಂಕುಚಿತತೆಯೇ ಕಾರಣ.
ತಮಿಳುನಾಡಿನಲ್ಲಿ ಜನಪ್ರಿಯತೆ ಗಳಿಸಿದ ನಟ-ನಟಿಯರು ತಮ್ಮ ಪ್ರಭಾವವನ್ನು ಅಧಿಕಾರಕೇಂದ್ರಿತ ದೃಷ್ಟಿಕೋನಕ್ಕಾಗಿ ಬಳಸಿಕೊಂಡರು. ಜನಪ್ರಿಯತೆಯ ಸರಕು ಕುಸಿಯುವ ಭೀತಿಯಲ್ಲಿ ವಿವಾದದ ವಿಷ ಹರಡುವ ಕೃಷಿಯಲ್ಲಿ ಖುಷಿ ಕಂಡರು. ಮಹಾರಾಷ್ಟ್ರದ ಪ್ರಾದೇಶಿಕ ರಾಜಕಾರಣವಂತೂ ಅಧಾರ್ಮಿಕ ಮದೋನ್ಮತ್ತ ಭಾವನೆಗಳು ಮತ್ತು ಭಾಷಿಕ ಅಂಧಾಭಿಮಾನದ ವರ್ತುಲದಲ್ಲಿ ಸಿಲುಕಿಕೊಂಡು ಅದೇ ಪರಮ ಮಾದರಿ ಎನ್ನುವಂತೆ ವೈಭವೀಕರಿಸಲ್ಪಟ್ಟಿತು. ಬಿಹಾರದಲ್ಲಂತೂ ಪರ್ಯಾಯ ಪ್ರಾದೇಶಿಕ ಪಕ್ಷದ ಅಸ್ತಿತ್ವ ಜನರ ಉದ್ಧಾರಕ್ಕೆ ಬಳಕೆಯಾಗುವ ಬದಲು ಪ್ರಭಾವೀ ನಾಯಕರೆನ್ನಿಸಿಕೊಂಡವರ ಸಮೃದ್ಧಿಗೆ ಪೂರಕ ವೇದಿಕೆಯನ್ನು ರೂಪಿಸಿಕೊಟ್ಟಿತು. ಆಂಧ್ರದ ಅಸ್ಮಿತೆಯ ಹೆಮ್ಮೆಯ ಭಾವಾವೇಶ ಅಲ್ಲಿಯ ಪ್ರಾದೇಶಿಕ ಪಕ್ಷಗಳು ಚಿಗುರೊಡೆದು ಅಧಿಕಾರ ಹಿಡಿಯುವುದಕ್ಕೆ ನೆರವಾಯಿತು. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳಲ್ಲೂ ಪ್ರಬಲ ತಾತ್ವಿಕತೆಯೊಂದಿಗಿನ ಪರ್ಯಾಯ ಪ್ರಾದೇಶಿಕ ರಾಜಕಾರಣ ರೂಪುಗೊಳ್ಳಲೇ ಇಲ್ಲ. ಮೇಲ್ನೋಟದಲ್ಲಿ ರೂಪುಗೊಂಡಿವೆ ಎಂಬ ಭಾವವನ್ನು ಮೂಡಿಸಿದ ಪಕ್ಷಗಳು ಮತ್ತೆ ರಾಷ್ಟ್ರೀಯ ಪಕ್ಷಗಳ ಆಲದ ಮರಗಳ ನೆರಳನ್ನೇ ನೆಚ್ಚಿಕೊಂಡುಬಿಟ್ಟವು.

ವಿವಿಧ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಅತ್ಯಂತ ಎಚ್ಚರದ ರಕ್ಷಣಾತ್ಮಕ ತಂತ್ರಗಾರಿಕೆಯನ್ನೇ ( Defense Mechanism) ನೆಚ್ಚಿಕೊಂಡು ತಮ್ಮೊಳಗಿನ ಅಧಿಕಾರದಾಹವನ್ನು ಕಾಯ್ದುಕೊಳ್ಳುವಂಥ ರಾಜಿಸ್ವಭಾವಕ್ಕೇ ಪಕ್ಕಾದವು. ಒಂದು ನಿರ್ದಿಷ್ಟ ಉದಾತ್ತ ಸೈದ್ಧಾಂತಿಕ ಆದರ್ಶವಾದಿ ಮಾದರಿಯನ್ನು ಸ್ಥಾಪಿಸಿಕೊಳ್ಳುವ ನಿಟ್ಟಿನಲ್ಲಿ ಅವುಗಳು ಆಲೋಚಿಸಲೇ ಇಲ್ಲ. ಇಬ್ಬರು ಬ್ಯಾಟ್ಸ್‍ಮನ್ ಅತ್ತ ಔಟ್ ಆಗದೆಯೇ, ಇತ್ತ ರನ್‍ಗಳನ್ನೂ ಗಳಿಸದೇ ಉಳಿದು ಇಡೀ ತಂಡಸ್ಫೂರ್ತಿಯನ್ನು ಅಂತ್ಯಗೊಳಿಸುವ ಹಾಗೆ ಪ್ರಾದೇಶಿಕ ಪಕ್ಷಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಅತ್ತ ನಿಜದ ಮೌಲಿಕ ರಾಜಕಾರಣವನ್ನೂ ಮಾಡದೇ, ಇತ್ತ ಪರ್ಯಾಯ ರಾಜಕಾರಣದ ವಿನೂತನ ಮಾದರಿಗಳನ್ನೂ ಹುಟ್ಟುಹಾಕದೇ ಮುಂದಡಿಯಿಟ್ಟವು. ಅವು ಭೌತಿಕವಾಗಿ ಜೀವಂತ. ಅಂತಃಸತ್ವದ ದೃಷ್ಟಿಯಿಂದ ಅವು ದುರ್ಬಲ. ಕಾರ್ಯಾನುಷ್ಠಾನದ ನೆಲೆಯಲ್ಲಿ ಅವುಗಳದ್ದು ಶೂನ್ಯಸಂಪಾದನೆ. ರಾಷ್ಟ್ರೀಯ ಪಕ್ಷಗಳಿಗೂ ಮತ್ತು ಪ್ರಾದೇಶಿಕ ಪಕ್ಷಗಳ ನಡುವೆ ಈ ಆಯಾಮದಲ್ಲಿಯೇ ಸಾಮ್ಯತೆಗಳನ್ನು ಗುರುತಿಸಬಹುದು.

ಭಾರತದಂಥ ವೈವಿಧ್ಯತೆಯ ರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳು ಜನರ ನಾಡಿಮಿಡಿತವನ್ನು ಗ್ರಹಿಸಿಕೊಳ್ಳುವುದು ಅತ್ಯಂತ ಸವಾಲಿನ ಕ್ರಿಯೆ. ನಂಬಿಕೆಯ ಜಗತ್ತು ಒಂದು ಕಡೆ. ಅದೇ ನಂಬಿಕೆಯ ಬಲದಲ್ಲಿ ಮೌಢ್ಯ ಬಿತ್ತುವ ಹುನ್ನಾರಿಗಳೊಂದಿಗಿನ ಪ್ರಬಲ ಸಾಮಾಜಿಕ ವ್ಯವಸ್ಥೆ ಮತ್ತೊಂದು ಕಡೆ. ಇವೆರಡರ ನಡುವೆ ಪಕ್ಷಗಳು ಮತ್ತು ನಾಯಕರು ತಮ್ಮನ್ನು ಪ್ರತಿಷ್ಠಾಪಿಸಿಕೊಳ್ಳುವ ಅನಿವಾರ್ಯತೆಯ ಬಿಕ್ಕಟ್ಟು. ಈ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ವಿಫಲವಾಗಿದ್ದೇ ಸದ್ಯದ ಎಲ್ಲ ವಿಕೃತಿಗಳಿಗೆ ಕಾರಣ. ಶೈಕ್ಷಣಿಕ ಅರ್ಹತೆಗಳ ನೆರವಿನೊಂದಿಗೆ ಪ್ರತಿಯೊಬ್ಬ ಪ್ರಜೆಗಳ ವ್ಯಕ್ತಿಗತ ಸಾಮಥ್ರ್ಯವನ್ನು ವಿವೇಚನಾತ್ಮಕ ಬೌದ್ಧಿಕತೆಗೆ ತಿರುಗಿಸುವ ದಾರ್ಶನಿಕ ಹೊಣೆಗಾರಿಕೆ ನಿಭಾಯಿಸಬೇಕಿದ್ದ ನಾಯಕತ್ವವು ಸಮಾಜದ ಸಾಂಪ್ರದಾಯಿಕ ಜಾಡ್ಯಗಳ ಕೈಗೊಂಬೆಯಾಗಿದ್ದರಿಂದ ಪಕ್ಷಗಳ ಬಹುಮುಖೀ ಶಕ್ತಿ ಸಾಬೀತಾಗಲೇ ಇಲ್ಲ. ಸದ್ಯದ ಸ್ಥಿತಿ ಹೇಗಿದೆ ಎಂದರೆ ಅಧಿಕಾರದಲ್ಲಿರುವವರನ್ನು ಕೆಳಗಿಳಿಸಲು ಸಾಮಾಜಿಕ ಸಂಘರ್ಷಗಳನ್ನೇ ಪ್ರಬಲ ಅಸ್ತ್ರಗಳನ್ನಾಗಿಸಿಕೊಳ್ಳುವ ಪಕ್ಷಗಳ ರಹಸ್ಯ ಕಾರ್ಯಸೂಚಿ ನಡೆಗಳೇ ನಿರ್ಣಾಯಕವಾಗಿವೆ. ಇವುಗಳನ್ನೇ ಪರಿಹಾರೋಪಾಯ ಎಂದುಕೊಳ್ಳಬೇಕೇ, ಅಥವಾ ತಿರಸ್ಕರಿಸಬೇಕೇ ಎಂಬ ದ್ವಂದ್ವಗಳಲ್ಲಿ ಜನರು ಸಿಲುಕಿದ್ದಾರೆ.ಪ್ರತಿರೋಧವನ್ನೊಡ್ಡಿದವರ ತೇಜೋವಧೆಗೈದು ಕಾನೂನು ಬಲಪ್ರಯೋಗದೊಂದಿಗೆ ಧ್ವನಿ ಹತ್ತಿಕ್ಕುವ ಆಡಳಿತಾತ್ಮಕ ವರ್ತನೆಗಳು ಪ್ರಜಾಪ್ರಭುತ್ವದ ಸಾಧ್ಯತೆಗಳನ್ನೇ ಮೊಟಕುಗೊಳಿಸುತ್ತಿವೆ. ಈ ಹಂತದಲ್ಲಿ ಜನರೊಳಗಿಂದಲೇ ಸಕಾರಾತ್ಮಕ ಧ್ವನಿ ಹೊಮ್ಮಬೇಕಾಗುತ್ತದೆ. ಇದಕ್ಕೂ ಮುನ್ನ ಜನರಿಗೆ ಕೆಲವು ಸತ್ಯಗಳು ಗೊತ್ತಾಗಬೇಕು. ಗೊತ್ತಾಗುವಂತೆ ಪ್ರಾಜ್ಞವಲಯ ಹಿಂದೆಂದಿಗಿಂತಲೂ ಹೆಚ್ಚಿನ ಶ್ರದ್ಧೆಯೊಂದಿಗೆ ಶ್ರಮಿಸಬೇಕು. ವಿವಿಧ ಪಕ್ಷಗಳ ನಾಯಕರು ಅಧಿಕಾರದಲ್ಲಿರಲಿ, ಇಲ್ಲದಿರಲಿ, ತಮ್ಮದೇ ಆದ ಪ್ರಭಾವಳಿಯೊಂದಿಗೆ ಅಸ್ತಿತ್ವವನ್ನು ಕಾಯ್ದುಕೊಂಡಿರುತ್ತಾರೆ. ಭ್ರಷ್ಟಾಚಾರ ಮತ್ತಿತರ ಅಕ್ರಮದ ಹಾದಿಯಲ್ಲಿ ಸಮಾನಮಸ್ಕರಾಗಿರುತ್ತಾರೆ. ಸಂಘರ್ಷಗಳಿಗೆ ಜನರನ್ನೇ ದಾಳಗಳನ್ನಾಗಿಸುತ್ತಾರೆ. ಪರಸ್ಪರ ಕೆಸೆರೆರಚಾಟದೊಂದಿಗೆ ಧರ್ಮಾಂಧ ನಡೆಗಳೊಂದಿಗೆ ಗುರುತಿಸಿಕೊಳ್ಳುವ ಜಾಯಮಾನವನ್ನೇ ಶಾಶ್ವತ ಗುಣಲಕ್ಷಣವಾಗಿಸಿಕೊಳ್ಳುವ ಹಾದಿಹಿಡಿದಿರುತ್ತಾರೆ. ಒಂದು ಪಕ್ಷದವರು ಅಧಿಕಾರದಲ್ಲಿದ್ದಾಗ ಮತ್ತೊಬ್ಬರು ತಾರ್ಕಿಕ ಆಂದೋಲನವನ್ನು ಕಟ್ಟುವ ಬದಲು ಸಂಕುಚಿತತೆಯೊಂದಿಗಿನ ವಿತಂಡವಾದಿ ಹೇಳಿಕೆಗಳು ಮತ್ತು ಸಮಾಜವನ್ನು ಯಥಾಸ್ಥಿತಿಯಲ್ಲಿಡುವಂಥ ಹುನ್ನಾರದ ಹೆಜ್ಜೆಗಳೊಂದಿಗೆ ಗುರುತಿಸಿಕೊಂಡು ಯಾಂತ್ರಿಕ ವಿರೋಧದ ನಾಟಕವಾಡುತ್ತಾರೆ.
ಹಾಗೆ ನಾಟಕವಾಡುತ್ತ ಜನರಿಗೆ ಹತ್ತಿರ ಎಂದು ಬಿಂಬಿಸಿಕೊಳ್ಳುತ್ತಾ ಮುಂದೊಂದು ದಿನ ಅಧಿಕಾರಕ್ಕೆ ಬಂದು ಅವರೂ ಹಿಂದಿನವರಂತೆಯೇ ನಿರ್ಲಕ್ಷ್ಯ ಧೋರಣೆಗಳೊಂದಿಗೇ ಮುಂದಡಿಯಿಟ್ಟು ಇಡೀ ಸಮಾಜವನ್ನು ಸ್ಥಗಿತತೆಯ ಅಪಾಯಕ್ಕೆ ಸಿಲುಕಿಸಿಬಿಡುತ್ತಾರೆ. ಜನರು ಅವರ ಈ ನಡೆಗಳನ್ನು ಪ್ರಶ್ನಿಸುವಂತಾಗಬೇಕು. “ನೀವು ವಿತಂಡವಾದಿ ಸಂಕುಚಿತತೆಯೊಂದಿಗೆ ಇರಬೇಡಿ. ಸಂಘರ್ಷದ ಮಾತುಗಳನ್ನಾಡಬೇಡಿ. ಒಂದಾಗಿರುವ ನಮ್ಮ ನಡುವೆ ಗೋಡೆಗಳನ್ನು ಕಟ್ಟಬೇಡಿ. ಆ ಗೋಡೆಗಳ ಮೇಲೆ ರಾಜಕಾರಣದ ಅಟ್ಟಹಾಸ ಮೆರೆಯಬೇಡಿ.

ಧರ್ಮ, ಜಾತಿ ನೆಲೆಗಳಲ್ಲಿ ಅಮಾನವೀಯಗೊಳ್ಳುವ ವ್ಯಕ್ತಿಗತ ಮನಸ್ಥಿತಿಯನ್ನು ತಪ್ಪಿಸಿ ಮನುಷ್ಯತ್ವದ ಗಮ್ಯದ ಕಡೆಗೆ ಸಾಮಾಜಿಕ ಚಲನೆ ಇರುವಂತೆ ನೋಡಿಕೊಳ್ಳಿ. ಈ ದೇಶದಲ್ಲಿ ಮನುಷ್ಯಪರ ಮತ್ತು ಜೀವಪರ ಬೆಳವಣಿಗೆಯ ಹೆಜ್ಜೆಗಳನ್ನು ಪೋಷಿಸುವುದರ ಕಡೆಗೆ ಗಮನಹರಿಸಿ. ಸುಳ್ಳುಗಳನ್ನು ಹೇಳಿ ನಮ್ಮನ್ನು ಯಾಮಾರಿಸುವುದನ್ನು ನಿಲ್ಲಿಸಿ. ಮಾಧ್ಯಮಗಳನ್ನು ಸಾಕಿಕೊಂಡು ಅವುಗಳ ಮೂಲಕ ನಮ್ಮನ್ನು ದಾರಿತಪ್ಪಿಸಬೇಡಿ. ನಿಮ್ಮನ್ನು ಪ್ರಶ್ನಿಸುವವರ ಒಡಲಾಳದ ನೋವುಗಳನ್ನು ಅರ್ಥೈಸಿಕೊಳ್ಳುವ ಅಂತಃಕರಣ ಪ್ರದರ್ಶಿಸಿ. ಎಲ್ಲಕ್ಕಿಂತ ಹೆಚ್ಚಾಗಿ ನೀವೂ ಮನುಷ್ಯರಾಗಿ. ನಮ್ಮನ್ನೂ ಮನುಷ್ಯರಾಗಿಯೇ ಉಳಿಯುವುದಕ್ಕೆ ಅವಕಾಶ ಮಾಡಿಕೊಡಿ. ಇಡೀ ದೇಶದೊಳಗೆ ನಿಜವಾದ ದೇಶಪ್ರೇಮದ ಬೆಳೆ ತೆಗೆಯಿರಿ. ಅದರೊಂದಿಗೆ ಪ್ರತಿಯೊಬ್ಬರ ಬದುಕಿನ ಸಮೃದ್ಧಿಯ ಸಾಧ್ಯತೆಗಳನ್ನು ವಿಸ್ತರಿಸಿರಿ” ಎಂದು ನಾವೆಲ್ಲರೂ ಒಕ್ಕೊರಲ ಧ್ವನಿಯೊಂದಿಗೆ ಸ್ಪಷ್ಟ ಸಂದೇಶ ಸಾರಬೇಕಿದೆ. ಹುನ್ನಾರಗಳೊಂದಿಗಿನ ರಾಜಕಾರಣದ ವಿವಾದೋದ್ಯಮವನ್ನು ಹತ್ತಿಕ್ಕಬೇಕಿದೆ. ನಾಯಕರ ಅಧಿಕಾರದಾಹದೊಂದಿಗಿನ ವ್ಯಾವಹಾರಿಕ ಮನೋಧರ್ಮಗಳನ್ನು ಕೊನಗಾಣಿಸಬೇಕಿದೆ.

(-ಡಾ.ಎನ್.ಕೆ.ಪದ್ಮನಾಭ
ಸಹಾಯಕ ಪ್ರಾಧ್ಯಾಪಕರು
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ
ಉಜಿರೆ
ಇ-ಮೇಲ್ :nkpadmanabh@gmail.com)

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ14 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ14 hours ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ2 days ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ3 days ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

ದಿನದ ಸುದ್ದಿ3 days ago

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ...

ದಿನದ ಸುದ್ದಿ3 days ago

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು...

ಅಂತರಂಗ4 days ago

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

~ಗೋವರ್ಧನ ನವಿಲೇಹಾಳು  ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ...

ದಿನದ ಸುದ್ದಿ7 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ7 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ1 week ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

Trending