Connect with us

ರಾಜಕೀಯ

ಕಾಂಗ್ರೆಸ್ ನಲ್ಲಿ ಸಿದ್ದು ಬಗ್ಗೆ ಇದೆ ಸಾಫ್ಟ್ ಕಾರ್ನರ್ !

Published

on

  • ಎಚ್‌ಡಿಕೆಗೆ ಸಿದ್ದು ಗೈಡ್ ಆಗಿರಲಿ
  • ಹಣಕಾಸು ವಿಚಾರದಲ್ಲಿ ಸಿದ್ದರಾಮಯ್ಯ ಅವರಷ್ಟು ಚಾಣಾಕ್ಷರು ಮತ್ತೊಬ್ಬರಿಲ್ಲ
  • ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಫೇಸ್‌ಬುಕ್‌ನಲ್ಲಿ ಸಿಗುತ್ತಿದೆ ಒಮ್ಮತ
ಸುದ್ದಿದಿನ ವಿಶೇಷ : ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸೋಲಿನ ಎಲ್ಲ ಜವಾಬ್ದಾರಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹೊರಿಸಿದೆ. ಕೆಪಿಸಿಸಿ ಸಭೆಯಲ್ಲಿ ಈ ಕೈ ಮುಖಂಡ ಕೋಳಿವಾಡ ಅವರು ನಡೆದುಕೊಂಡ ವರ್ತನೆಯು ಇದಕ್ಕೆ ಕನ್ನಡಿ ಹಿಡಿದಂತಿತ್ತು.
ಆಡಳಿತ ವಿರೋಧಿ ಅಲೆ ಇಲ್ಲದಿರುವಾಗ ಸಿದ್ದರಾಮಯ್ಯ ಅವರ ಏಕ ಪಕ್ಷೀಯ ನಿರ್ಧಾರಗಳೇ ಸೋಲಿಗೆ ಕಾರಣವಾಯಿತು ಎಂಬ ಚರ್ಚೆಗಳೂ ಚಾಲ್ತಿಯಲ್ಲಿವೆ. ಆದರೆ, ಕೈ ಪಾಳಯದೊಳಗೆ ಸಿದ್ದರಾಮಯ್ಯ ಅವರ ಕುರಿತು ಕೆಲ ಮುಖಂಡರು ಒಳ್ಳೆಯ ಅಭಿಪ್ರಾಯ ಅದರಲ್ಲೂ ಸಾಫ್ಟ್ ಕಾರ್ನರ್ ಹೊಂದಿರುವುದು ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿದೆ.
ಫೇಸ್‌ಬುಕ್‌ನಲ್ಲಿ ಬರಹಗಾರ ರಾಜಾರಾಂ ತಳ್ಳೂರ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಅವರ ಕುರಿತು ವ್ಯಕ್ತಪಡಿಸಿರುವ ಅಭಿಪ್ರಾಯವೊಂದನ್ನು ಹಂಚಿಕೊಂಡಿದ್ದು, ಇದಕ್ಕೆ ಚಿಂತಕರು, ವಾಗ್ಮಿಗಳು, ಬರಹಗಾರರು ಮೊದಲಾದ ಗಣ್ಯರ ಪಡೆಯೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಪೋಸ್ಟ್ ಹೀಗಿದೆ:

ವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕುವ ಮುನ್ನ ಸ್ಪೀಕರ್ ಮಾತನಾಡುತ್ತಾ: ರಾಜನೀತಿ ತಜ್ನನಾಗಿ ಒಂದು ಮಾತು ಹೇಳ್ತೇನೆ. ಇದು ಸ್ಪೀಕರ್ ಕುರ್ಚಿಯಿಂದ ಹೇಳುವ ಮಾತಲ್ಲ ಅಥವಾ ರಾಜಕೀಯ ಪಕ್ಷದ ಪ್ರತಿನಿಧಿ ಆಗಿಯೂ ಹೇಳುವ ಮಾತಲ್ಲ.
ಫಿಸ್ಕಲ್ ರೆಸ್ಪಾನ್ಸಿಬಿಲಿಟಿ ಬಿಲ್ ಸ್ವಲ್ಪವೂ ಉಲ್ಲಂಘನೆ ಆಗದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿ, ಅದಕ್ಕೆ ಹಣಕಾಸನ್ನೂ ವ್ಯವಸ್ಥೆ ಮಾಡಿ, ಯಾವುದೇ ಸರ್ಕಾರಿ ಚೆಕ್ ಬೌನ್ಸ್ ಆಗದಂತೆ ಅದನ್ನೆಲ್ಲ ಜಾರಿ ಮಾಡಿದ ಸಿದ್ದರಾಮಯ್ಯ ಹಣಕಾಸು ಸಚಿವರಾಗಿಯೂ ಹಲವು ಸಂಪುಟಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಇರುವವರು. ಹೆಚ್ಚಿನಂಶ ಪ. ಬಂಗಾಳದ ಕಮ್ಯುನಿಸ್ಟ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅಶೋಕ್ ಮಿತ್ರಾ ಬಿಟ್ಟರೆ ಇಂತಹ ಹಣಕಾಸಿನ ಶಿಸ್ತು ಹೊಂದಿದ್ದ ದೇಶದ ಮತ್ತೊಬ್ಬ ಹಣಕಾಸು ಸಚಿವರೆಂದರೆ ಸಿದ್ಧರಾಮಯ್ಯ ಎಂದರು. ಜೊತೆಗೆ ಹೊಸ ಮುಖ್ಯಮಂತ್ರಿಗಳಿಗೆ ಸಿದ್ಧರಾಮಯ್ಯ ಅವರಿಂದ ಸಲಹೆಗಳನ್ನು ಪಡೆದು ಮುಂದುವರಿಯಲು ಹೇಳಿದರು.
ಹೆಚ್ಚಿನಂಶ ಮಾಜೀ ಮುಖ್ಯಮಂತ್ರಿಯೊಬ್ಬರು ತನ್ನ ಸಾರ್ವಜನಿಕ ಸೇವೆಗಾಗಿ ಸಂಸದೀಯ ಸೀಟೊಂದರಿಂದ ಪಡೆಯಬಹುದಾದ ಅತಿದೊಡ್ಡ ಮಾತಿನ ಗೌರವ ಇದು.
ರಾಜಾರಾಂ ಅವರ ಈ ಪೋಸ್ಟ್ ಫೇಸ್‌ಬುಕ್‌ನಲ್ಲಿ ಕಂಡ ಕೂಡಲೇ ಹಲವರು ಸಿದ್ದರಾಮಯ್ಯ ಅವರ ಪರ ಭಾವನಾತ್ಮಕವಾದ ಸಾಲುಗಳನ್ನು ಬರೆದಿದ್ದಾರೆ. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಅರಸು ಅವರಿಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ ಎಂಬುದಾಗಿಯೂ ಅಭಿಪ್ರಾಯ ವ್ಯಕ್ತವಾಗಿದೆ.  ಫೇಸ್‌ಬುಕ್‌ನಲ್ಲಿ ವ್ಯಕ್ತವಾಗಿರುವ ಕೆಲವು ಕಮೆಂಟ್‌ಗಳು ಇಲ್ಲಿವೆ.

ದಿನೇಶ್ ಅಮಿನ್ ಮಟ್ಟು

ಇದೇ ಮಾತನ್ನು ಮಾಜಿಪ್ರಧಾನಿ ಮನಮಮೋಹನ್ ಸಿಂಗ್ ಬೆಂಗಳೂರಿನಲ್ಲಿ ಹೇಳಿದ್ದರು. ಸಿಂಗ್ ಅವರ ಮಾತಿನಲ್ಲಿ ಸ್ವಲ್ಪ ಪಶ್ಚಾತಾಪ ಮತ್ತು ಸ್ವಲ್ಪ ಅಪರಾಧಿ ಪ್ರಜ್ಞೆ ಕೂಡಾ ಇತ್ತೆಂದು ನನಗನಿಸಿತ್ತು.

ಗೋವಿಂದ ರಾಜ್ ಬೈಚನಕುಪ್ಪೆ

ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…
ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಮಂಜುನಾಥ್ ಚಾಂದ್

ಮನ್ನಾಗಳ ದೊಡ್ಡ ಸಂತೆಯೇ ಇರುವ ಜೆಡಿಎಸ್ ಪ್ರಣಾಳಿಕೆಯನ್ನು ಈಡೇರಿಸುವುದಲ್ಲ, ನಿಭಾಯಿಸುವುದಕ್ಕೆ ಸಿದ್ದರಾಮಯ್ಯನವರೇ ಮುಂಚೂಣಿಯಲ್ಲಿ ನಿಲ್ಲಬೇಕಾಗುತ್ತದೆ. ಇಲ್ಲವಾದರೆ ಸರಕಾರ ಮಕಾಡೆ ಮಲಗಬೇಕಾಗುತ್ತದೆ.

ರಾಘವೇಂದ್ರ ಹೆಗಡೇಕರ್

 ಸಿದ್ಧರಾಮ್ಯನವರ ಬಡವರ ಪರ ಯೋಜನೆಗಳು ಹೆಚ್ಚು ಪ್ರಚಾರವಾಗದೆ ಮೇಲ್ವರ್ಗದ ಕುರಿತ ಅವರ ಉಡಾಪೆ ಮತ್ತು ವಿರೋಧಿ ನೀತಿಗಳೆ ಅಗತ್ಯಕ್ಕಿಂತ ಹೆಚ್ಚು ಪ್ರಚಾರವಾಗಿ ಅವರಿಗೆ ಮುಳುವಾಯಿತು..

ನವೀನ್ ತೀರ್ಥಹಳ್ಳಿ

ನಿಜಕ್ಕೂ ಸಿದ್ದರಾಮಯ್ಯನವರು ದೇವರಾಜ ಅರಸು ಅವರಂತ ಬಲಿಷ್ಠ ಯೋಗ್ಯ ಮುಖ್ಯಮಂತ್ರಿ ಯಾಗಿದ್ದರು
ಈ ನಾಡಿನ ಮತದಾರ ಜಾತೀವಾದಿಗಳ
ಹುನ್ನಾರ ಕ್ಕೆ ಬಲಿಯಾಗಿ ಕಾಂಗ್ರೆಸ್‌ಗೆ ಕಡಿಮೆ ಮತ ಹಾಕಿದ ಅದರಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಯಾಗುವುದು ತಪ್ಪಿ ಹೋಗಿದೆ.

ವೀರಭದ್ರ ಭದ್ರ

 ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಚೆನ್ನರಾಜು

ಅಗೋರಿಗಳನ್ನು ನಂಬುವ ಯಡ್ಡಿ, ಜೋತಿಷ್ಯವನ್ನು ನಂಬುವ ಕುಮಾರಸ್ವಾಮಿ ಇವರ ನಡುವೆ ಸಿದ್ದರಾಮಯ್ಯ ಎಂಬ ನೈತಿಕ ಗುರುವೊಬ್ಬರಿದ್ದಾರೆ ಎಂದರೆ ನಂಬಲಾಗದು. ಅವರಿಗೆ ಇದುವರೆಗೂ ಯಾವ ಸ್ಥಾನವೂ ನೀಡದೆ ಎಲ್ಲಿ ಮೂಲೆಗುಂಪಾಗಿ ಬಿಡುವರೋ ಎಂಬ ಆತಂಕವಿದೆ. ಒಂದಂತು ನಿಜ ನೈತಿಕ ಸ್ವಾಭಿಮಾನದ ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ . ಲವ್ ಯು ಎರ್ ಸರ್

ಲೋಕೇಶ್ ಮುನಿಯಪ್ಪ

ಬಹುಶಃ ಭಾರತದ ರಾಜಕೀಯದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ತಾನು ಇಷ್ಟು ಮಾಡುತ್ತೇನೆ(ಸಿದ್ದರಾಯ್ಯ ಅದನ್ನು ಚುನಾವಣಾಆಶ್ವಾಸನೆಯಾಗಿ ಹೇಳಿರಲಿಲ್ಲ)ಎಂದು ಹೇಳಿದನ್ನು ಚ್ಯುತಿ ಇಲ್ಲದೇ ಪಾಲಿಸಿದರು. ಖಂಡಿತವಾಗಿಯೂ ಅದು ಎಲ್ಲರಿಗೂ ಸಾದ್ಯವಿರಲಿಲ್ಲ. ನಮಸ್ಕಾರ ಸಾರ ನೀವು ನಮ್ಮ ಜೊತೆಗಿರುತ್ತೀರಾ..

ಚಿದಂಬರ್ ಜೋಷಿ

ಮಾನ್ಯ ಸಿದ್ದರಾಮಯ್ಯ ಸಾಹೇಬರದು ಉನ್ನತ ವ್ಯಕ್ತಿತ್ವ, ಕಳಂಕ ರಹಿತ ಸಮಾಜ ಸೇವೆ, ಇಷ್ಟೊಂದು ವರ್ಷ ರಾಜಕೀಯದಲ್ಲಿದ್ದರೂ ಅವರ ಅಣ್ಣತಮ್ಮಂದಿರುಗಳಿಗೆ ಯಾವುದೇ ಸಹಾಯ ಮಾಡಿರದ ವ್ಯಕ್ಕಿ— ಸನ್ಮಾನ್ಯ ಮೋದೀಜಿಯವರ ಹಾಗೆ, ಚಾಣಾಕ್ಷ ನಡೆ ಹೊಂದಿದವರು, ಐದು ವರ್ಷ ಮುಖ್ಯಮಂತ್ರಿಯಾಗಿ ಯಾವ ಕಪ್ಪು ಚುಕ್ಕೆ ಇಲ್ಲದೇ ಇರುವದು ಸಾಮಾನ್ಯ ಮಾತಲ್ಲ. ಹಗರಣಗಳಂತೂ ಇಲ್ಲವೇ ಇಲ್ಲ.

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 days ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ7 days ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ7 days ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ2 weeks ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ2 weeks ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ3 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

Trending