Connect with us

ರಾಜಕೀಯ

ಕಾಂಗ್ರೆಸ್ ನಲ್ಲಿ ಸಿದ್ದು ಬಗ್ಗೆ ಇದೆ ಸಾಫ್ಟ್ ಕಾರ್ನರ್ !

Published

on

  • ಎಚ್‌ಡಿಕೆಗೆ ಸಿದ್ದು ಗೈಡ್ ಆಗಿರಲಿ
  • ಹಣಕಾಸು ವಿಚಾರದಲ್ಲಿ ಸಿದ್ದರಾಮಯ್ಯ ಅವರಷ್ಟು ಚಾಣಾಕ್ಷರು ಮತ್ತೊಬ್ಬರಿಲ್ಲ
  • ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಫೇಸ್‌ಬುಕ್‌ನಲ್ಲಿ ಸಿಗುತ್ತಿದೆ ಒಮ್ಮತ
ಸುದ್ದಿದಿನ ವಿಶೇಷ : ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸೋಲಿನ ಎಲ್ಲ ಜವಾಬ್ದಾರಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹೊರಿಸಿದೆ. ಕೆಪಿಸಿಸಿ ಸಭೆಯಲ್ಲಿ ಈ ಕೈ ಮುಖಂಡ ಕೋಳಿವಾಡ ಅವರು ನಡೆದುಕೊಂಡ ವರ್ತನೆಯು ಇದಕ್ಕೆ ಕನ್ನಡಿ ಹಿಡಿದಂತಿತ್ತು.
ಆಡಳಿತ ವಿರೋಧಿ ಅಲೆ ಇಲ್ಲದಿರುವಾಗ ಸಿದ್ದರಾಮಯ್ಯ ಅವರ ಏಕ ಪಕ್ಷೀಯ ನಿರ್ಧಾರಗಳೇ ಸೋಲಿಗೆ ಕಾರಣವಾಯಿತು ಎಂಬ ಚರ್ಚೆಗಳೂ ಚಾಲ್ತಿಯಲ್ಲಿವೆ. ಆದರೆ, ಕೈ ಪಾಳಯದೊಳಗೆ ಸಿದ್ದರಾಮಯ್ಯ ಅವರ ಕುರಿತು ಕೆಲ ಮುಖಂಡರು ಒಳ್ಳೆಯ ಅಭಿಪ್ರಾಯ ಅದರಲ್ಲೂ ಸಾಫ್ಟ್ ಕಾರ್ನರ್ ಹೊಂದಿರುವುದು ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿದೆ.
ಫೇಸ್‌ಬುಕ್‌ನಲ್ಲಿ ಬರಹಗಾರ ರಾಜಾರಾಂ ತಳ್ಳೂರ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಅವರ ಕುರಿತು ವ್ಯಕ್ತಪಡಿಸಿರುವ ಅಭಿಪ್ರಾಯವೊಂದನ್ನು ಹಂಚಿಕೊಂಡಿದ್ದು, ಇದಕ್ಕೆ ಚಿಂತಕರು, ವಾಗ್ಮಿಗಳು, ಬರಹಗಾರರು ಮೊದಲಾದ ಗಣ್ಯರ ಪಡೆಯೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಪೋಸ್ಟ್ ಹೀಗಿದೆ:

ವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕುವ ಮುನ್ನ ಸ್ಪೀಕರ್ ಮಾತನಾಡುತ್ತಾ: ರಾಜನೀತಿ ತಜ್ನನಾಗಿ ಒಂದು ಮಾತು ಹೇಳ್ತೇನೆ. ಇದು ಸ್ಪೀಕರ್ ಕುರ್ಚಿಯಿಂದ ಹೇಳುವ ಮಾತಲ್ಲ ಅಥವಾ ರಾಜಕೀಯ ಪಕ್ಷದ ಪ್ರತಿನಿಧಿ ಆಗಿಯೂ ಹೇಳುವ ಮಾತಲ್ಲ.
ಫಿಸ್ಕಲ್ ರೆಸ್ಪಾನ್ಸಿಬಿಲಿಟಿ ಬಿಲ್ ಸ್ವಲ್ಪವೂ ಉಲ್ಲಂಘನೆ ಆಗದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿ, ಅದಕ್ಕೆ ಹಣಕಾಸನ್ನೂ ವ್ಯವಸ್ಥೆ ಮಾಡಿ, ಯಾವುದೇ ಸರ್ಕಾರಿ ಚೆಕ್ ಬೌನ್ಸ್ ಆಗದಂತೆ ಅದನ್ನೆಲ್ಲ ಜಾರಿ ಮಾಡಿದ ಸಿದ್ದರಾಮಯ್ಯ ಹಣಕಾಸು ಸಚಿವರಾಗಿಯೂ ಹಲವು ಸಂಪುಟಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಇರುವವರು. ಹೆಚ್ಚಿನಂಶ ಪ. ಬಂಗಾಳದ ಕಮ್ಯುನಿಸ್ಟ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅಶೋಕ್ ಮಿತ್ರಾ ಬಿಟ್ಟರೆ ಇಂತಹ ಹಣಕಾಸಿನ ಶಿಸ್ತು ಹೊಂದಿದ್ದ ದೇಶದ ಮತ್ತೊಬ್ಬ ಹಣಕಾಸು ಸಚಿವರೆಂದರೆ ಸಿದ್ಧರಾಮಯ್ಯ ಎಂದರು. ಜೊತೆಗೆ ಹೊಸ ಮುಖ್ಯಮಂತ್ರಿಗಳಿಗೆ ಸಿದ್ಧರಾಮಯ್ಯ ಅವರಿಂದ ಸಲಹೆಗಳನ್ನು ಪಡೆದು ಮುಂದುವರಿಯಲು ಹೇಳಿದರು.
ಹೆಚ್ಚಿನಂಶ ಮಾಜೀ ಮುಖ್ಯಮಂತ್ರಿಯೊಬ್ಬರು ತನ್ನ ಸಾರ್ವಜನಿಕ ಸೇವೆಗಾಗಿ ಸಂಸದೀಯ ಸೀಟೊಂದರಿಂದ ಪಡೆಯಬಹುದಾದ ಅತಿದೊಡ್ಡ ಮಾತಿನ ಗೌರವ ಇದು.
ರಾಜಾರಾಂ ಅವರ ಈ ಪೋಸ್ಟ್ ಫೇಸ್‌ಬುಕ್‌ನಲ್ಲಿ ಕಂಡ ಕೂಡಲೇ ಹಲವರು ಸಿದ್ದರಾಮಯ್ಯ ಅವರ ಪರ ಭಾವನಾತ್ಮಕವಾದ ಸಾಲುಗಳನ್ನು ಬರೆದಿದ್ದಾರೆ. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಅರಸು ಅವರಿಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ ಎಂಬುದಾಗಿಯೂ ಅಭಿಪ್ರಾಯ ವ್ಯಕ್ತವಾಗಿದೆ.  ಫೇಸ್‌ಬುಕ್‌ನಲ್ಲಿ ವ್ಯಕ್ತವಾಗಿರುವ ಕೆಲವು ಕಮೆಂಟ್‌ಗಳು ಇಲ್ಲಿವೆ.

ದಿನೇಶ್ ಅಮಿನ್ ಮಟ್ಟು

ಇದೇ ಮಾತನ್ನು ಮಾಜಿಪ್ರಧಾನಿ ಮನಮಮೋಹನ್ ಸಿಂಗ್ ಬೆಂಗಳೂರಿನಲ್ಲಿ ಹೇಳಿದ್ದರು. ಸಿಂಗ್ ಅವರ ಮಾತಿನಲ್ಲಿ ಸ್ವಲ್ಪ ಪಶ್ಚಾತಾಪ ಮತ್ತು ಸ್ವಲ್ಪ ಅಪರಾಧಿ ಪ್ರಜ್ಞೆ ಕೂಡಾ ಇತ್ತೆಂದು ನನಗನಿಸಿತ್ತು.

ಗೋವಿಂದ ರಾಜ್ ಬೈಚನಕುಪ್ಪೆ

ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…
ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಮಂಜುನಾಥ್ ಚಾಂದ್

ಮನ್ನಾಗಳ ದೊಡ್ಡ ಸಂತೆಯೇ ಇರುವ ಜೆಡಿಎಸ್ ಪ್ರಣಾಳಿಕೆಯನ್ನು ಈಡೇರಿಸುವುದಲ್ಲ, ನಿಭಾಯಿಸುವುದಕ್ಕೆ ಸಿದ್ದರಾಮಯ್ಯನವರೇ ಮುಂಚೂಣಿಯಲ್ಲಿ ನಿಲ್ಲಬೇಕಾಗುತ್ತದೆ. ಇಲ್ಲವಾದರೆ ಸರಕಾರ ಮಕಾಡೆ ಮಲಗಬೇಕಾಗುತ್ತದೆ.

ರಾಘವೇಂದ್ರ ಹೆಗಡೇಕರ್

 ಸಿದ್ಧರಾಮ್ಯನವರ ಬಡವರ ಪರ ಯೋಜನೆಗಳು ಹೆಚ್ಚು ಪ್ರಚಾರವಾಗದೆ ಮೇಲ್ವರ್ಗದ ಕುರಿತ ಅವರ ಉಡಾಪೆ ಮತ್ತು ವಿರೋಧಿ ನೀತಿಗಳೆ ಅಗತ್ಯಕ್ಕಿಂತ ಹೆಚ್ಚು ಪ್ರಚಾರವಾಗಿ ಅವರಿಗೆ ಮುಳುವಾಯಿತು..

ನವೀನ್ ತೀರ್ಥಹಳ್ಳಿ

ನಿಜಕ್ಕೂ ಸಿದ್ದರಾಮಯ್ಯನವರು ದೇವರಾಜ ಅರಸು ಅವರಂತ ಬಲಿಷ್ಠ ಯೋಗ್ಯ ಮುಖ್ಯಮಂತ್ರಿ ಯಾಗಿದ್ದರು
ಈ ನಾಡಿನ ಮತದಾರ ಜಾತೀವಾದಿಗಳ
ಹುನ್ನಾರ ಕ್ಕೆ ಬಲಿಯಾಗಿ ಕಾಂಗ್ರೆಸ್‌ಗೆ ಕಡಿಮೆ ಮತ ಹಾಕಿದ ಅದರಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಯಾಗುವುದು ತಪ್ಪಿ ಹೋಗಿದೆ.

ವೀರಭದ್ರ ಭದ್ರ

 ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಚೆನ್ನರಾಜು

ಅಗೋರಿಗಳನ್ನು ನಂಬುವ ಯಡ್ಡಿ, ಜೋತಿಷ್ಯವನ್ನು ನಂಬುವ ಕುಮಾರಸ್ವಾಮಿ ಇವರ ನಡುವೆ ಸಿದ್ದರಾಮಯ್ಯ ಎಂಬ ನೈತಿಕ ಗುರುವೊಬ್ಬರಿದ್ದಾರೆ ಎಂದರೆ ನಂಬಲಾಗದು. ಅವರಿಗೆ ಇದುವರೆಗೂ ಯಾವ ಸ್ಥಾನವೂ ನೀಡದೆ ಎಲ್ಲಿ ಮೂಲೆಗುಂಪಾಗಿ ಬಿಡುವರೋ ಎಂಬ ಆತಂಕವಿದೆ. ಒಂದಂತು ನಿಜ ನೈತಿಕ ಸ್ವಾಭಿಮಾನದ ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ . ಲವ್ ಯು ಎರ್ ಸರ್

ಲೋಕೇಶ್ ಮುನಿಯಪ್ಪ

ಬಹುಶಃ ಭಾರತದ ರಾಜಕೀಯದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ತಾನು ಇಷ್ಟು ಮಾಡುತ್ತೇನೆ(ಸಿದ್ದರಾಯ್ಯ ಅದನ್ನು ಚುನಾವಣಾಆಶ್ವಾಸನೆಯಾಗಿ ಹೇಳಿರಲಿಲ್ಲ)ಎಂದು ಹೇಳಿದನ್ನು ಚ್ಯುತಿ ಇಲ್ಲದೇ ಪಾಲಿಸಿದರು. ಖಂಡಿತವಾಗಿಯೂ ಅದು ಎಲ್ಲರಿಗೂ ಸಾದ್ಯವಿರಲಿಲ್ಲ. ನಮಸ್ಕಾರ ಸಾರ ನೀವು ನಮ್ಮ ಜೊತೆಗಿರುತ್ತೀರಾ..

ಚಿದಂಬರ್ ಜೋಷಿ

ಮಾನ್ಯ ಸಿದ್ದರಾಮಯ್ಯ ಸಾಹೇಬರದು ಉನ್ನತ ವ್ಯಕ್ತಿತ್ವ, ಕಳಂಕ ರಹಿತ ಸಮಾಜ ಸೇವೆ, ಇಷ್ಟೊಂದು ವರ್ಷ ರಾಜಕೀಯದಲ್ಲಿದ್ದರೂ ಅವರ ಅಣ್ಣತಮ್ಮಂದಿರುಗಳಿಗೆ ಯಾವುದೇ ಸಹಾಯ ಮಾಡಿರದ ವ್ಯಕ್ಕಿ— ಸನ್ಮಾನ್ಯ ಮೋದೀಜಿಯವರ ಹಾಗೆ, ಚಾಣಾಕ್ಷ ನಡೆ ಹೊಂದಿದವರು, ಐದು ವರ್ಷ ಮುಖ್ಯಮಂತ್ರಿಯಾಗಿ ಯಾವ ಕಪ್ಪು ಚುಕ್ಕೆ ಇಲ್ಲದೇ ಇರುವದು ಸಾಮಾನ್ಯ ಮಾತಲ್ಲ. ಹಗರಣಗಳಂತೂ ಇಲ್ಲವೇ ಇಲ್ಲ.

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಚುನಾವಣಾ ಆಯೋಗ ಸಮಾವೇಶ

Published

on

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.

ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ5 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ1 week ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending