Connect with us

ದಿನದ ಸುದ್ದಿ

ಹಿಂದಿ, ಇಂಗ್ಲಿಷ್ ನಂತರ ಕನ್ನಡ ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೂ ಬಂತು ಕುತ್ತು

Published

on

ಸುದ್ದಿದಿನ ಡೆಸ್ಕ್: ನ್ಯಾಯಗಳ ವಿರುದ್ಧ ಅಕ್ಷರಗಳ ಬೆಂಕಿಯುಂಡೆ ಉಗುಳುತ್ತಾ ದೇಶದ ರಾಜಕಾರಣಿಗಳ ಚಳಿ ಬಿಡಿಸಿದ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಹತ್ಯೆ ಮಾಡಿದವರು ಯಾರೆಂಬ ಊಹೆಗಳು ನಿಜವಾಗುತ್ತವೆ. ಸತ್ಯ ಹೇಳುವ ಪತ್ರಿಕೋದ್ಯಮ ಇನ್ನು ಮುಂದುವರಿದರೆ ನಾವೆಷ್ಟು ಗೌರಿಗಳನ್ನು ಕಳೆದುಕೊಳ್ಳಬೇಕೋ ಗೊತ್ತಿಲ್ಲ. ಇದಕ್ಕಾಗಿಯೇ ಭಾರತದ ಕೆಲವು ಬಹು ದೊಡ್ಡ ಮಾಧ್ಯಮ ಸಂಸ್ಥೆಗಳು ಹಾಗೂ ಪತ್ರಿಕೆಗಳು ಶರಣಾಗತಿಯ ತಂತ್ರಗಳನ್ನು ಅನುಸರಿಸುತ್ತಿವೆ.

ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮೊನ್ನೆಯಷ್ಟೆ ಹೊಸಪೇಟೆಗೆ ಬಂದಿದ್ದರು. ವಿಚಾರ ಸಂಕಿರಣವೊಂದರಲ್ಲಿ ಮಾತನಾಡುತ್ತ ಪತ್ರಿಕೋದ್ಯಮಿಗಳನ್ನು ಹೇಗೆ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ತಮ್ಮ ವಿರುದ್ಧ ಬರೆಯದಂತೆ ಹೇಗೆ ನಿಯಂತ್ರಿಸುತ್ತದೆ ಎಂಬ ಮಾಹಿತಿಗಳನ್ನು ಪುಂಖಾನುಪುಂಖವಾಗಿ ನೀಡುತ್ತಾ ಹೋದರು. ಆದರೆ, ಇದನ್ನು ವರದಿ ಮಾಡಿದ ಮಾಧ್ಯಮಗಳು ಭೂಷಣ್ ಈ ಕುರಿತು ನೀಡಿದ ಹೇಳಿಕೆಗಳನ್ನು ತೇಲಿಸಿ ಬರೆದು ತಮಗೇನು ಗೊತ್ತೇ ಇಲ್ಲವೇನೋ ಎಂಬಂತೆ ಮೌನಕ್ಕೆ ಶರಣಾಗಿವೆ. ಅಸಲಿಗೆ ಭೂಷಣ್ ಹೇಳಿದ್ದು ಹೀಗಿತ್ತು. ಸದ್ಯ ಪತ್ರಿಕೋದ್ಯಮ ತುರ್ತು ಪರಿಸ್ಥಿತಿ ದೇಶದಲ್ಲಿದೆ.ಪತ್ರಿಕೆಗಳು, ಹಾಗೂ ಮಾಧ್ಯಮಗಳನ್ನು ಬ್ಲಾಕ್ ಮೇಲ್ ಮಾಡಿ ರಾಜಕೀಯ ಪಕ್ಷ ಹಾಗೂ ಅದಕ್ಕೆ ಸಂಬಂಧಿಸಿದ ಸಂಘಟನೆಯೊಂದು ತಮ್ಮ ವಿರುದ್ಧ ಏನೂ ಬರೆಯದಂತೆ ಷಡ್ಯಂತ್ರ ರೂಪಿಸುತ್ತಿದೆ. ‌ಈ ಪಕ್ಷವು ತನ್ನದೇ ಆದ ದೊಡ್ಡ ಐಟಿ ಸೆಲ್ ರೂಪಿಸಿಕೊಂಡಿದ್ದು ದೇಶದ ಪ್ರಾದೇಶಿಕ ಮಾಧ್ಯಮಗಳು ಹಾಗೂ ಪತ್ರಿಕೆಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಅದರಲ್ಲಿ ಈಗ ಬಹುತೇಕ ಸಫಲವಾಗಿದೆ ಕೂಡ. ಈ ಐಟಿ ಸೆಲ್ ಶಿವಮೊಗ್ಗದಂತ ಸಣ್ಣ ಊರಿನಿಂದ ಹಿಡಿದು ಮುಂಬಯಿಯಂತ ದೊಡ್ಡ ನಗರಗಳಲ್ಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಒಂದು ಮೂಲದ ಪ್ರಕಾರ ಈ ಐಟಿ ಸೆಲ್‍ನಲ್ಲಿ ಕೆಲಸ ಮಾಡುವ ಪ್ರತಿ ಬರಹಗಾರನಿಗೆ ಕನಿಷ್ಠ 50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತಿದೆ.ಹೀಗೆ ಅರ್ಧ ಲಕ್ಷ ರೂ. ಸಂಬಳ ಪಡೆಯುತ್ತಿರುವ ಇವರು ಸುಳ್ಳು ಸುದ್ದಿಗಳನ್ನು ಬಿತ್ತುವುದು, ಕೋಮು ಗಲಭೆ ಸೃಷ್ಟಿಸುವುದು. ಒಂದು ಧರ್ಮದ ಕುರಿತು ಇಲ್ಲ ಸಲ್ಲದ ಸುದ್ದಿ ಬರೆಯುವುದು. ಇನ್ನೊಂದು ಧರ್ಮವನ್ನು ಪ್ರಚೋದಿಸುವಂತಹ ಸುದ್ದಿಗಳನ್ನು ಬರೆಯುತ್ತಿದ್ದಾರೆ. ಇದಿಷ್ಟೆ ಅಲ್ಲ ಈ ಐಟಿ ಸೆಲ್ ಸಾಕುತ್ತಿರುವ ರಾಜಕೀಯ ಪಕ್ಷವು ದೇಶವನ್ನು ಉದ್ಧಾರ ಮಾಡುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಫೇಸ್‍ಬುಕ್, ಟ್ವಿಟರ್, ವಾಟ್ಸ್ ಆಪ್ ಮೂಲಕ ಹರಡುವುದು ಇದರ ಮುಖ್ಯ ಉದ್ದೇಶ.

ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಪತ್ರಿಕೆಗಳು ನಡೆಯಲು ಅಗತ್ಯವಾಗಿ ಬೇಕಿರುವ ನ್ಯೂಸ್‍ಪ್ರಿಂಟ್‍ಗಳ ಬೆಲೆ ಈಗ ಶೇ. 50ರಷ್ಟು ಹೆಚ್ಚಾಗಿದೆ. ಹಣ ಹೆಚ್ಚಿಗೆ ಕೊಟ್ಟರೂ ನ್ಯೂಸ್ ಪ್ರಿಂಟ್‍ಗಳನ್ನು ಖರೀದಿಸಲು ಅನುಮತಿ ಸಿಗುತ್ತಿಲ್ಲ. ಪರಿಸರವನ್ನು ಉಳಿಸುವ ಸಲುವಾಗಿ ನ್ಯೂಸ್‍ಪ್ರಿಂಟ್ ಬೆಲೆ ಏರಿಕೆ ಮಾಡಿ ಅದರ ಬಳಕೆ ಕಡಿಮೆ ಮಾಡಲಾಗುತ್ತಿದೆ ಎಂದು ಬೂಸಿ ಬಿಡಲಾಗುತ್ತಿದೆ. ಆದರೆ, ಪತ್ರಿಕೋದ್ಯಮವನ್ನು ನಿಯಂತ್ರಿಸಲು ಕಂಡುಕೊಂಡಿರುವ ಬಹು ದೊಡ್ಡ ದಾರಿ ಇದು.

ಕನ್ನಡದ ದೊಡ್ಡ ಪತ್ರಿಕೆ ಮೇಲೆ ರಾಜಕೀಯ ಪ್ರಭಾವ

ರಾಜಕೀಯ ಸಂಘಟನೆಯೊಂದು ತಾನು ಮಾಧ್ಯಮಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡು ಓಡಾಡುತ್ತಿದೆ. ತಾನು ಕನ್ನಡದ ಒಂದು ದೊಡ್ಡ ಪತ್ರಿಕೆಗೆ ವಾರ್ನಿಂಗ್ ಕೊಟ್ಟಿರುವುದಾಗಿ ಅದು ಬೀಗುತ್ತಿದೆ. ಆ ಸಂಘಟನೆಯ ಕಾರ್ಯಕರ್ತರ ಪ್ರಕಾರ. ಇತ್ತೀಚೆಗೆ ಬಹುಮತ ಸಾಬೀತುಪಡಿಸಲು ವಿಫಲವಾದ ಪಕ್ಷವೊಂದು ತನ್ನ ಆತ್ಮಾವಲೋಕನಾ ಸಭೆಯಲ್ಲಿ ತನ್ನ ವಿಫಲತೆಗೆ ಕಾರಣವಾದ 20 ಅಂಶಗಳ ಪಟ್ಟಿ ಮಾಡಿತು.
ಪ್ರಾದೇಶಿಕ ಹಾಗೂ ರಾಷ್ಟೀಯ ಪಕ್ಷಗಳು ಅಧಿಕಾರ ರಚಿಸಲು ನಾವು ಬಿಡುವುದಿಲ್ಲ ಎಂದು ದೇಶದ ಉನ್ನತ ಸ್ಥಾನದಲ್ಲಿರುವ ರಾಜಕೀಯ ನಾಯಕರೊಬ್ಬರು ದಿಲ್ಲಿಯಲ್ಲಿ ಮಾಡಿದ್ದ ಭಾಷಣವನ್ನು ಕನ್ನಡ ಪತ್ರಿಕೆಯು ತನ್ನ ಮುಖಪುಟದಲ್ಲಿ ವರದಿ ಮಾಡಿತ್ತು. ಈ ವರದಿಯು , ಹೇಳಿಕೆ ನೀಡಿದ ರಾಜಕಾರಣಿಯ ಪಕ್ಷದ ವಿರುದ್ಧ ಕನ್ನಡಿಗರು ಸಂಘಟನೆಯಾಗಲು ಕಾರಣವಾಯಿತು ಎಂಬ ಅಭಿಪ್ರಾಯಗಳು ವ್ಯಕ್ತವಾದವು.

ಈ ಸುದ್ದಿಯನ್ನು ಪಿಟಿಐ ವರದಿ ಮಾಡಿದೆ ಎಂದು ಪತ್ರಿಕೆ ಹೇಳಿತ್ತು. ಇದನ್ನು ಆಧರಿಸಿ ಆ ರಾಜಕೀಯ ಪಕ್ಷವು ಪಿಟಿಐ ಕಚೇರಿಯಾದ್ಯಂತ ತಡಕಾಡಿ ಆ ಸುದ್ದಿ ಪಿಟಿಐನಿಂದ ವರದಿಯಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಆ ಪತ್ರಿಕೆಯ ಕಚೇರಿಗೆ ಹೋಯಿತು. ಆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವರು ಸಂಪಾದಕರೊಂದಿಗೆ ಮಾತನಾಡಿ ಈ ಸುದ್ದಿ ಕೊಟ್ಟವರು ಯಾರು ಎಂಬುದಾಗಿ ಪ್ರಶ್ನಿಸಿತು. ಅಂದಹಾಗೆ ಅದು ಪಿಟಿಐನಿಂದ ವರದಿಯಾಗಿದ್ದ ಸುದ್ದಿ ಆಗಿರಲಿಲ್ಲ ಬದಲಾಗಿ ಅದೇ ಸಂಸ್ಥೆಯ ಇಂಗ್ಲಿಷ್ ವರದಿಗಾರರು ದಿಲ್ಲಿಯಿಂದ ನೀಡಿದ ವರದಿಯಾಗಿತ್ತು. ಅದನ್ನು ಯತಾವತ್ತಾಗಿ ಭಾಷಾಂತರ ಮಾಡಲಾಗಿತ್ತು. ಭಾಷಾಂತರಿಸಿದ ಹಿರಿಯ ಪತ್ರಕರ್ತರಿಗೆ ಕ್ಷಮಾಧಾನ ನೀಡಲಾಗಿದೆಯಾದರೂ ಅದನ್ನು ವರದಿ ಮಾಡಿದ ಇಂಗ್ಲಿಷ್ ಪತ್ರಿಕೆ ವರದಿಗಾರನಿಗೆ ಇನ್ನು ಕಿರುಕುಳ ತಪ್ಪಿಲ್ಲ ಎಂಬ ಮಾಹಿತಿಗಳು ಬಂದಿವೆ.

ಕನ್ನಡಿಗರ ವಿಶ್ವಾಸ ಗಳಿಸಿ ಸ್ವಾತಂತ್ರ ನಂತರದ ದಿನಗಳಿಂದಲೂ ಸಮಾಜದ ಕಟ್ಟಕಡೆಯ ವ್ಯಕ್ತಿಪರವಾಗಿ ನಿಂತಿದ್ದ ಈ ದೊಡ್ಡ ಪತ್ರಿಕೆಯ ಕತೆಯೇ ಹೀಗಾದರೆ ಮಿಕ್ಕ ಪತ್ರಿಕೆಗಳ ಕತೆಯೇನು? ಕೋಬ್ರಾ ಪೋಸ್ಟ್ ಈಗಾಗಲೇ ನೀಡಿರುವ ಸೂಜಿ ಮೊನೆ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದಿರುವ ಸಂಪಾದಕರನ್ನು ನೋಡಿದ್ದೀರ. ಇದರರ್ಥ ಕೆಲವರು ಆ ಪಕ್ಷದ ಜತೆ ಕೈ ಜೋಡಿಸಿ ಡೀಲ್ ಆಗಿದ್ದಾರೆ. ಇನ್ನೂ ಕೆಲವರು ಡೀಲ್ ಆಗದೆ ಬೆದರಿಕೆ ಎದುರಿಸುತ್ತಿದ್ದಾರೆ.

ಏನು ಮಾಡಬೇಕು?

ಮಾಧ್ಯಮ ಸಂಸ್ಥೆಗಳ ಮೇಲೆ ರಾಜಕೀಯ ನಾಯಕರು, ಪಕ್ಷಗಳ ಪ್ರಭಾವ ಬೀರುತ್ತಿರುವುದು ಇಂದು ನಿನ್ನೆಯದಲ್ಲ. ಯಾವ ಸರಕಾರ ಬಂದರೂ, ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಇಂಥ ಅನಾಚಾರ ತಪ್ಪಲ್ಲ. ಈಗ ಸ್ವಲ್ಪ ಹೆಚ್ಚಾಗಿದೆ ಎಂದುಕೊಳ್ಳೋಣ. ವಿಶ್ವಾಸಾರ್ಹವಾದ ಸುದ್ದಿಗಳನ್ನು ತಿಳಿಯಬೇಕಿದ್ದರೆ ನವ ಹಾಗೂ ಸ್ವತಂತ್ರ ಮಾಧ್ಯಮಗಳನ್ನು ಆಯ್ಕೆ ಮಾಡಿಕೊಳ್ಳಿ. ಅವುಗಳಿ ಆಗಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಐದು ರೂಪಾಯಿಂದ ಸಾವಿರ ರೂ. ವರೆಗೆ ಆರ್ಥಿಕ ಸಹಾಯ ಮಾಡಿ ಅವನ್ನು ಪೋಷಿಸಿ.

ನಮಸ್ಕಾರ
ಸುದ್ದಿದಿನ ಸಂಪಾದಕೀಯ ಬಳಗ

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ15 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ16 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ16 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ16 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ16 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ18 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ18 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending