Connect with us

ದಿನದ ಸುದ್ದಿ

ಹಿಂದಿ, ಇಂಗ್ಲಿಷ್ ನಂತರ ಕನ್ನಡ ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೂ ಬಂತು ಕುತ್ತು

Published

on

ಸುದ್ದಿದಿನ ಡೆಸ್ಕ್: ನ್ಯಾಯಗಳ ವಿರುದ್ಧ ಅಕ್ಷರಗಳ ಬೆಂಕಿಯುಂಡೆ ಉಗುಳುತ್ತಾ ದೇಶದ ರಾಜಕಾರಣಿಗಳ ಚಳಿ ಬಿಡಿಸಿದ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಹತ್ಯೆ ಮಾಡಿದವರು ಯಾರೆಂಬ ಊಹೆಗಳು ನಿಜವಾಗುತ್ತವೆ. ಸತ್ಯ ಹೇಳುವ ಪತ್ರಿಕೋದ್ಯಮ ಇನ್ನು ಮುಂದುವರಿದರೆ ನಾವೆಷ್ಟು ಗೌರಿಗಳನ್ನು ಕಳೆದುಕೊಳ್ಳಬೇಕೋ ಗೊತ್ತಿಲ್ಲ. ಇದಕ್ಕಾಗಿಯೇ ಭಾರತದ ಕೆಲವು ಬಹು ದೊಡ್ಡ ಮಾಧ್ಯಮ ಸಂಸ್ಥೆಗಳು ಹಾಗೂ ಪತ್ರಿಕೆಗಳು ಶರಣಾಗತಿಯ ತಂತ್ರಗಳನ್ನು ಅನುಸರಿಸುತ್ತಿವೆ.

ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮೊನ್ನೆಯಷ್ಟೆ ಹೊಸಪೇಟೆಗೆ ಬಂದಿದ್ದರು. ವಿಚಾರ ಸಂಕಿರಣವೊಂದರಲ್ಲಿ ಮಾತನಾಡುತ್ತ ಪತ್ರಿಕೋದ್ಯಮಿಗಳನ್ನು ಹೇಗೆ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ತಮ್ಮ ವಿರುದ್ಧ ಬರೆಯದಂತೆ ಹೇಗೆ ನಿಯಂತ್ರಿಸುತ್ತದೆ ಎಂಬ ಮಾಹಿತಿಗಳನ್ನು ಪುಂಖಾನುಪುಂಖವಾಗಿ ನೀಡುತ್ತಾ ಹೋದರು. ಆದರೆ, ಇದನ್ನು ವರದಿ ಮಾಡಿದ ಮಾಧ್ಯಮಗಳು ಭೂಷಣ್ ಈ ಕುರಿತು ನೀಡಿದ ಹೇಳಿಕೆಗಳನ್ನು ತೇಲಿಸಿ ಬರೆದು ತಮಗೇನು ಗೊತ್ತೇ ಇಲ್ಲವೇನೋ ಎಂಬಂತೆ ಮೌನಕ್ಕೆ ಶರಣಾಗಿವೆ. ಅಸಲಿಗೆ ಭೂಷಣ್ ಹೇಳಿದ್ದು ಹೀಗಿತ್ತು. ಸದ್ಯ ಪತ್ರಿಕೋದ್ಯಮ ತುರ್ತು ಪರಿಸ್ಥಿತಿ ದೇಶದಲ್ಲಿದೆ.ಪತ್ರಿಕೆಗಳು, ಹಾಗೂ ಮಾಧ್ಯಮಗಳನ್ನು ಬ್ಲಾಕ್ ಮೇಲ್ ಮಾಡಿ ರಾಜಕೀಯ ಪಕ್ಷ ಹಾಗೂ ಅದಕ್ಕೆ ಸಂಬಂಧಿಸಿದ ಸಂಘಟನೆಯೊಂದು ತಮ್ಮ ವಿರುದ್ಧ ಏನೂ ಬರೆಯದಂತೆ ಷಡ್ಯಂತ್ರ ರೂಪಿಸುತ್ತಿದೆ. ‌ಈ ಪಕ್ಷವು ತನ್ನದೇ ಆದ ದೊಡ್ಡ ಐಟಿ ಸೆಲ್ ರೂಪಿಸಿಕೊಂಡಿದ್ದು ದೇಶದ ಪ್ರಾದೇಶಿಕ ಮಾಧ್ಯಮಗಳು ಹಾಗೂ ಪತ್ರಿಕೆಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಅದರಲ್ಲಿ ಈಗ ಬಹುತೇಕ ಸಫಲವಾಗಿದೆ ಕೂಡ. ಈ ಐಟಿ ಸೆಲ್ ಶಿವಮೊಗ್ಗದಂತ ಸಣ್ಣ ಊರಿನಿಂದ ಹಿಡಿದು ಮುಂಬಯಿಯಂತ ದೊಡ್ಡ ನಗರಗಳಲ್ಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಒಂದು ಮೂಲದ ಪ್ರಕಾರ ಈ ಐಟಿ ಸೆಲ್‍ನಲ್ಲಿ ಕೆಲಸ ಮಾಡುವ ಪ್ರತಿ ಬರಹಗಾರನಿಗೆ ಕನಿಷ್ಠ 50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತಿದೆ.ಹೀಗೆ ಅರ್ಧ ಲಕ್ಷ ರೂ. ಸಂಬಳ ಪಡೆಯುತ್ತಿರುವ ಇವರು ಸುಳ್ಳು ಸುದ್ದಿಗಳನ್ನು ಬಿತ್ತುವುದು, ಕೋಮು ಗಲಭೆ ಸೃಷ್ಟಿಸುವುದು. ಒಂದು ಧರ್ಮದ ಕುರಿತು ಇಲ್ಲ ಸಲ್ಲದ ಸುದ್ದಿ ಬರೆಯುವುದು. ಇನ್ನೊಂದು ಧರ್ಮವನ್ನು ಪ್ರಚೋದಿಸುವಂತಹ ಸುದ್ದಿಗಳನ್ನು ಬರೆಯುತ್ತಿದ್ದಾರೆ. ಇದಿಷ್ಟೆ ಅಲ್ಲ ಈ ಐಟಿ ಸೆಲ್ ಸಾಕುತ್ತಿರುವ ರಾಜಕೀಯ ಪಕ್ಷವು ದೇಶವನ್ನು ಉದ್ಧಾರ ಮಾಡುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಫೇಸ್‍ಬುಕ್, ಟ್ವಿಟರ್, ವಾಟ್ಸ್ ಆಪ್ ಮೂಲಕ ಹರಡುವುದು ಇದರ ಮುಖ್ಯ ಉದ್ದೇಶ.

ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಪತ್ರಿಕೆಗಳು ನಡೆಯಲು ಅಗತ್ಯವಾಗಿ ಬೇಕಿರುವ ನ್ಯೂಸ್‍ಪ್ರಿಂಟ್‍ಗಳ ಬೆಲೆ ಈಗ ಶೇ. 50ರಷ್ಟು ಹೆಚ್ಚಾಗಿದೆ. ಹಣ ಹೆಚ್ಚಿಗೆ ಕೊಟ್ಟರೂ ನ್ಯೂಸ್ ಪ್ರಿಂಟ್‍ಗಳನ್ನು ಖರೀದಿಸಲು ಅನುಮತಿ ಸಿಗುತ್ತಿಲ್ಲ. ಪರಿಸರವನ್ನು ಉಳಿಸುವ ಸಲುವಾಗಿ ನ್ಯೂಸ್‍ಪ್ರಿಂಟ್ ಬೆಲೆ ಏರಿಕೆ ಮಾಡಿ ಅದರ ಬಳಕೆ ಕಡಿಮೆ ಮಾಡಲಾಗುತ್ತಿದೆ ಎಂದು ಬೂಸಿ ಬಿಡಲಾಗುತ್ತಿದೆ. ಆದರೆ, ಪತ್ರಿಕೋದ್ಯಮವನ್ನು ನಿಯಂತ್ರಿಸಲು ಕಂಡುಕೊಂಡಿರುವ ಬಹು ದೊಡ್ಡ ದಾರಿ ಇದು.

ಕನ್ನಡದ ದೊಡ್ಡ ಪತ್ರಿಕೆ ಮೇಲೆ ರಾಜಕೀಯ ಪ್ರಭಾವ

ರಾಜಕೀಯ ಸಂಘಟನೆಯೊಂದು ತಾನು ಮಾಧ್ಯಮಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡು ಓಡಾಡುತ್ತಿದೆ. ತಾನು ಕನ್ನಡದ ಒಂದು ದೊಡ್ಡ ಪತ್ರಿಕೆಗೆ ವಾರ್ನಿಂಗ್ ಕೊಟ್ಟಿರುವುದಾಗಿ ಅದು ಬೀಗುತ್ತಿದೆ. ಆ ಸಂಘಟನೆಯ ಕಾರ್ಯಕರ್ತರ ಪ್ರಕಾರ. ಇತ್ತೀಚೆಗೆ ಬಹುಮತ ಸಾಬೀತುಪಡಿಸಲು ವಿಫಲವಾದ ಪಕ್ಷವೊಂದು ತನ್ನ ಆತ್ಮಾವಲೋಕನಾ ಸಭೆಯಲ್ಲಿ ತನ್ನ ವಿಫಲತೆಗೆ ಕಾರಣವಾದ 20 ಅಂಶಗಳ ಪಟ್ಟಿ ಮಾಡಿತು.
ಪ್ರಾದೇಶಿಕ ಹಾಗೂ ರಾಷ್ಟೀಯ ಪಕ್ಷಗಳು ಅಧಿಕಾರ ರಚಿಸಲು ನಾವು ಬಿಡುವುದಿಲ್ಲ ಎಂದು ದೇಶದ ಉನ್ನತ ಸ್ಥಾನದಲ್ಲಿರುವ ರಾಜಕೀಯ ನಾಯಕರೊಬ್ಬರು ದಿಲ್ಲಿಯಲ್ಲಿ ಮಾಡಿದ್ದ ಭಾಷಣವನ್ನು ಕನ್ನಡ ಪತ್ರಿಕೆಯು ತನ್ನ ಮುಖಪುಟದಲ್ಲಿ ವರದಿ ಮಾಡಿತ್ತು. ಈ ವರದಿಯು , ಹೇಳಿಕೆ ನೀಡಿದ ರಾಜಕಾರಣಿಯ ಪಕ್ಷದ ವಿರುದ್ಧ ಕನ್ನಡಿಗರು ಸಂಘಟನೆಯಾಗಲು ಕಾರಣವಾಯಿತು ಎಂಬ ಅಭಿಪ್ರಾಯಗಳು ವ್ಯಕ್ತವಾದವು.

ಈ ಸುದ್ದಿಯನ್ನು ಪಿಟಿಐ ವರದಿ ಮಾಡಿದೆ ಎಂದು ಪತ್ರಿಕೆ ಹೇಳಿತ್ತು. ಇದನ್ನು ಆಧರಿಸಿ ಆ ರಾಜಕೀಯ ಪಕ್ಷವು ಪಿಟಿಐ ಕಚೇರಿಯಾದ್ಯಂತ ತಡಕಾಡಿ ಆ ಸುದ್ದಿ ಪಿಟಿಐನಿಂದ ವರದಿಯಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಆ ಪತ್ರಿಕೆಯ ಕಚೇರಿಗೆ ಹೋಯಿತು. ಆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವರು ಸಂಪಾದಕರೊಂದಿಗೆ ಮಾತನಾಡಿ ಈ ಸುದ್ದಿ ಕೊಟ್ಟವರು ಯಾರು ಎಂಬುದಾಗಿ ಪ್ರಶ್ನಿಸಿತು. ಅಂದಹಾಗೆ ಅದು ಪಿಟಿಐನಿಂದ ವರದಿಯಾಗಿದ್ದ ಸುದ್ದಿ ಆಗಿರಲಿಲ್ಲ ಬದಲಾಗಿ ಅದೇ ಸಂಸ್ಥೆಯ ಇಂಗ್ಲಿಷ್ ವರದಿಗಾರರು ದಿಲ್ಲಿಯಿಂದ ನೀಡಿದ ವರದಿಯಾಗಿತ್ತು. ಅದನ್ನು ಯತಾವತ್ತಾಗಿ ಭಾಷಾಂತರ ಮಾಡಲಾಗಿತ್ತು. ಭಾಷಾಂತರಿಸಿದ ಹಿರಿಯ ಪತ್ರಕರ್ತರಿಗೆ ಕ್ಷಮಾಧಾನ ನೀಡಲಾಗಿದೆಯಾದರೂ ಅದನ್ನು ವರದಿ ಮಾಡಿದ ಇಂಗ್ಲಿಷ್ ಪತ್ರಿಕೆ ವರದಿಗಾರನಿಗೆ ಇನ್ನು ಕಿರುಕುಳ ತಪ್ಪಿಲ್ಲ ಎಂಬ ಮಾಹಿತಿಗಳು ಬಂದಿವೆ.

ಕನ್ನಡಿಗರ ವಿಶ್ವಾಸ ಗಳಿಸಿ ಸ್ವಾತಂತ್ರ ನಂತರದ ದಿನಗಳಿಂದಲೂ ಸಮಾಜದ ಕಟ್ಟಕಡೆಯ ವ್ಯಕ್ತಿಪರವಾಗಿ ನಿಂತಿದ್ದ ಈ ದೊಡ್ಡ ಪತ್ರಿಕೆಯ ಕತೆಯೇ ಹೀಗಾದರೆ ಮಿಕ್ಕ ಪತ್ರಿಕೆಗಳ ಕತೆಯೇನು? ಕೋಬ್ರಾ ಪೋಸ್ಟ್ ಈಗಾಗಲೇ ನೀಡಿರುವ ಸೂಜಿ ಮೊನೆ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದಿರುವ ಸಂಪಾದಕರನ್ನು ನೋಡಿದ್ದೀರ. ಇದರರ್ಥ ಕೆಲವರು ಆ ಪಕ್ಷದ ಜತೆ ಕೈ ಜೋಡಿಸಿ ಡೀಲ್ ಆಗಿದ್ದಾರೆ. ಇನ್ನೂ ಕೆಲವರು ಡೀಲ್ ಆಗದೆ ಬೆದರಿಕೆ ಎದುರಿಸುತ್ತಿದ್ದಾರೆ.

ಏನು ಮಾಡಬೇಕು?

ಮಾಧ್ಯಮ ಸಂಸ್ಥೆಗಳ ಮೇಲೆ ರಾಜಕೀಯ ನಾಯಕರು, ಪಕ್ಷಗಳ ಪ್ರಭಾವ ಬೀರುತ್ತಿರುವುದು ಇಂದು ನಿನ್ನೆಯದಲ್ಲ. ಯಾವ ಸರಕಾರ ಬಂದರೂ, ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಇಂಥ ಅನಾಚಾರ ತಪ್ಪಲ್ಲ. ಈಗ ಸ್ವಲ್ಪ ಹೆಚ್ಚಾಗಿದೆ ಎಂದುಕೊಳ್ಳೋಣ. ವಿಶ್ವಾಸಾರ್ಹವಾದ ಸುದ್ದಿಗಳನ್ನು ತಿಳಿಯಬೇಕಿದ್ದರೆ ನವ ಹಾಗೂ ಸ್ವತಂತ್ರ ಮಾಧ್ಯಮಗಳನ್ನು ಆಯ್ಕೆ ಮಾಡಿಕೊಳ್ಳಿ. ಅವುಗಳಿ ಆಗಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಐದು ರೂಪಾಯಿಂದ ಸಾವಿರ ರೂ. ವರೆಗೆ ಆರ್ಥಿಕ ಸಹಾಯ ಮಾಡಿ ಅವನ್ನು ಪೋಷಿಸಿ.

ನಮಸ್ಕಾರ
ಸುದ್ದಿದಿನ ಸಂಪಾದಕೀಯ ಬಳಗ

ದಿನದ ಸುದ್ದಿ

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

Published

on

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.

ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.

ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.

ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.

ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ4 days ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ7 days ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ1 week ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ1 week ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ1 week ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ1 week ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ1 week ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ1 week ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ1 week ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

Trending