ದಿನದ ಸುದ್ದಿ
ಹಿಂದಿ, ಇಂಗ್ಲಿಷ್ ನಂತರ ಕನ್ನಡ ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೂ ಬಂತು ಕುತ್ತು

ಸುದ್ದಿದಿನ ಡೆಸ್ಕ್: ಅನ್ಯಾಯಗಳ ವಿರುದ್ಧ ಅಕ್ಷರಗಳ ಬೆಂಕಿಯುಂಡೆ ಉಗುಳುತ್ತಾ ದೇಶದ ರಾಜಕಾರಣಿಗಳ ಚಳಿ ಬಿಡಿಸಿದ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಹತ್ಯೆ ಮಾಡಿದವರು ಯಾರೆಂಬ ಊಹೆಗಳು ನಿಜವಾಗುತ್ತವೆ. ಸತ್ಯ ಹೇಳುವ ಪತ್ರಿಕೋದ್ಯಮ ಇನ್ನು ಮುಂದುವರಿದರೆ ನಾವೆಷ್ಟು ಗೌರಿಗಳನ್ನು ಕಳೆದುಕೊಳ್ಳಬೇಕೋ ಗೊತ್ತಿಲ್ಲ. ಇದಕ್ಕಾಗಿಯೇ ಭಾರತದ ಕೆಲವು ಬಹು ದೊಡ್ಡ ಮಾಧ್ಯಮ ಸಂಸ್ಥೆಗಳು ಹಾಗೂ ಪತ್ರಿಕೆಗಳು ಶರಣಾಗತಿಯ ತಂತ್ರಗಳನ್ನು ಅನುಸರಿಸುತ್ತಿವೆ.
ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮೊನ್ನೆಯಷ್ಟೆ ಹೊಸಪೇಟೆಗೆ ಬಂದಿದ್ದರು. ವಿಚಾರ ಸಂಕಿರಣವೊಂದರಲ್ಲಿ ಮಾತನಾಡುತ್ತ ಪತ್ರಿಕೋದ್ಯಮಿಗಳನ್ನು ಹೇಗೆ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ತಮ್ಮ ವಿರುದ್ಧ ಬರೆಯದಂತೆ ಹೇಗೆ ನಿಯಂತ್ರಿಸುತ್ತದೆ ಎಂಬ ಮಾಹಿತಿಗಳನ್ನು ಪುಂಖಾನುಪುಂಖವಾಗಿ ನೀಡುತ್ತಾ ಹೋದರು. ಆದರೆ, ಇದನ್ನು ವರದಿ ಮಾಡಿದ ಮಾಧ್ಯಮಗಳು ಭೂಷಣ್ ಈ ಕುರಿತು ನೀಡಿದ ಹೇಳಿಕೆಗಳನ್ನು ತೇಲಿಸಿ ಬರೆದು ತಮಗೇನು ಗೊತ್ತೇ ಇಲ್ಲವೇನೋ ಎಂಬಂತೆ ಮೌನಕ್ಕೆ ಶರಣಾಗಿವೆ. ಅಸಲಿಗೆ ಭೂಷಣ್ ಹೇಳಿದ್ದು ಹೀಗಿತ್ತು. ಸದ್ಯ ಪತ್ರಿಕೋದ್ಯಮ ತುರ್ತು ಪರಿಸ್ಥಿತಿ ದೇಶದಲ್ಲಿದೆ.ಪತ್ರಿಕೆಗಳು, ಹಾಗೂ ಮಾಧ್ಯಮಗಳನ್ನು ಬ್ಲಾಕ್ ಮೇಲ್ ಮಾಡಿ ರಾಜಕೀಯ ಪಕ್ಷ ಹಾಗೂ ಅದಕ್ಕೆ ಸಂಬಂಧಿಸಿದ ಸಂಘಟನೆಯೊಂದು ತಮ್ಮ ವಿರುದ್ಧ ಏನೂ ಬರೆಯದಂತೆ ಷಡ್ಯಂತ್ರ ರೂಪಿಸುತ್ತಿದೆ. ಈ ಪಕ್ಷವು ತನ್ನದೇ ಆದ ದೊಡ್ಡ ಐಟಿ ಸೆಲ್ ರೂಪಿಸಿಕೊಂಡಿದ್ದು ದೇಶದ ಪ್ರಾದೇಶಿಕ ಮಾಧ್ಯಮಗಳು ಹಾಗೂ ಪತ್ರಿಕೆಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಅದರಲ್ಲಿ ಈಗ ಬಹುತೇಕ ಸಫಲವಾಗಿದೆ ಕೂಡ. ಈ ಐಟಿ ಸೆಲ್ ಶಿವಮೊಗ್ಗದಂತ ಸಣ್ಣ ಊರಿನಿಂದ ಹಿಡಿದು ಮುಂಬಯಿಯಂತ ದೊಡ್ಡ ನಗರಗಳಲ್ಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಒಂದು ಮೂಲದ ಪ್ರಕಾರ ಈ ಐಟಿ ಸೆಲ್ನಲ್ಲಿ ಕೆಲಸ ಮಾಡುವ ಪ್ರತಿ ಬರಹಗಾರನಿಗೆ ಕನಿಷ್ಠ 50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತಿದೆ.ಹೀಗೆ ಅರ್ಧ ಲಕ್ಷ ರೂ. ಸಂಬಳ ಪಡೆಯುತ್ತಿರುವ ಇವರು ಸುಳ್ಳು ಸುದ್ದಿಗಳನ್ನು ಬಿತ್ತುವುದು, ಕೋಮು ಗಲಭೆ ಸೃಷ್ಟಿಸುವುದು. ಒಂದು ಧರ್ಮದ ಕುರಿತು ಇಲ್ಲ ಸಲ್ಲದ ಸುದ್ದಿ ಬರೆಯುವುದು. ಇನ್ನೊಂದು ಧರ್ಮವನ್ನು ಪ್ರಚೋದಿಸುವಂತಹ ಸುದ್ದಿಗಳನ್ನು ಬರೆಯುತ್ತಿದ್ದಾರೆ. ಇದಿಷ್ಟೆ ಅಲ್ಲ ಈ ಐಟಿ ಸೆಲ್ ಸಾಕುತ್ತಿರುವ ರಾಜಕೀಯ ಪಕ್ಷವು ದೇಶವನ್ನು ಉದ್ಧಾರ ಮಾಡುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಫೇಸ್ಬುಕ್, ಟ್ವಿಟರ್, ವಾಟ್ಸ್ ಆಪ್ ಮೂಲಕ ಹರಡುವುದು ಇದರ ಮುಖ್ಯ ಉದ್ದೇಶ.
ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಪತ್ರಿಕೆಗಳು ನಡೆಯಲು ಅಗತ್ಯವಾಗಿ ಬೇಕಿರುವ ನ್ಯೂಸ್ಪ್ರಿಂಟ್ಗಳ ಬೆಲೆ ಈಗ ಶೇ. 50ರಷ್ಟು ಹೆಚ್ಚಾಗಿದೆ. ಹಣ ಹೆಚ್ಚಿಗೆ ಕೊಟ್ಟರೂ ನ್ಯೂಸ್ ಪ್ರಿಂಟ್ಗಳನ್ನು ಖರೀದಿಸಲು ಅನುಮತಿ ಸಿಗುತ್ತಿಲ್ಲ. ಪರಿಸರವನ್ನು ಉಳಿಸುವ ಸಲುವಾಗಿ ನ್ಯೂಸ್ಪ್ರಿಂಟ್ ಬೆಲೆ ಏರಿಕೆ ಮಾಡಿ ಅದರ ಬಳಕೆ ಕಡಿಮೆ ಮಾಡಲಾಗುತ್ತಿದೆ ಎಂದು ಬೂಸಿ ಬಿಡಲಾಗುತ್ತಿದೆ. ಆದರೆ, ಪತ್ರಿಕೋದ್ಯಮವನ್ನು ನಿಯಂತ್ರಿಸಲು ಕಂಡುಕೊಂಡಿರುವ ಬಹು ದೊಡ್ಡ ದಾರಿ ಇದು.
ಕನ್ನಡದ ದೊಡ್ಡ ಪತ್ರಿಕೆ ಮೇಲೆ ರಾಜಕೀಯ ಪ್ರಭಾವ
ರಾಜಕೀಯ ಸಂಘಟನೆಯೊಂದು ತಾನು ಮಾಧ್ಯಮಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡು ಓಡಾಡುತ್ತಿದೆ. ತಾನು ಕನ್ನಡದ ಒಂದು ದೊಡ್ಡ ಪತ್ರಿಕೆಗೆ ವಾರ್ನಿಂಗ್ ಕೊಟ್ಟಿರುವುದಾಗಿ ಅದು ಬೀಗುತ್ತಿದೆ. ಆ ಸಂಘಟನೆಯ ಕಾರ್ಯಕರ್ತರ ಪ್ರಕಾರ. ಇತ್ತೀಚೆಗೆ ಬಹುಮತ ಸಾಬೀತುಪಡಿಸಲು ವಿಫಲವಾದ ಪಕ್ಷವೊಂದು ತನ್ನ ಆತ್ಮಾವಲೋಕನಾ ಸಭೆಯಲ್ಲಿ ತನ್ನ ವಿಫಲತೆಗೆ ಕಾರಣವಾದ 20 ಅಂಶಗಳ ಪಟ್ಟಿ ಮಾಡಿತು.
ಪ್ರಾದೇಶಿಕ ಹಾಗೂ ರಾಷ್ಟೀಯ ಪಕ್ಷಗಳು ಅಧಿಕಾರ ರಚಿಸಲು ನಾವು ಬಿಡುವುದಿಲ್ಲ ಎಂದು ದೇಶದ ಉನ್ನತ ಸ್ಥಾನದಲ್ಲಿರುವ ರಾಜಕೀಯ ನಾಯಕರೊಬ್ಬರು ದಿಲ್ಲಿಯಲ್ಲಿ ಮಾಡಿದ್ದ ಭಾಷಣವನ್ನು ಕನ್ನಡ ಪತ್ರಿಕೆಯು ತನ್ನ ಮುಖಪುಟದಲ್ಲಿ ವರದಿ ಮಾಡಿತ್ತು. ಈ ವರದಿಯು , ಹೇಳಿಕೆ ನೀಡಿದ ರಾಜಕಾರಣಿಯ ಪಕ್ಷದ ವಿರುದ್ಧ ಕನ್ನಡಿಗರು ಸಂಘಟನೆಯಾಗಲು ಕಾರಣವಾಯಿತು ಎಂಬ ಅಭಿಪ್ರಾಯಗಳು ವ್ಯಕ್ತವಾದವು.
ಈ ಸುದ್ದಿಯನ್ನು ಪಿಟಿಐ ವರದಿ ಮಾಡಿದೆ ಎಂದು ಪತ್ರಿಕೆ ಹೇಳಿತ್ತು. ಇದನ್ನು ಆಧರಿಸಿ ಆ ರಾಜಕೀಯ ಪಕ್ಷವು ಪಿಟಿಐ ಕಚೇರಿಯಾದ್ಯಂತ ತಡಕಾಡಿ ಆ ಸುದ್ದಿ ಪಿಟಿಐನಿಂದ ವರದಿಯಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಆ ಪತ್ರಿಕೆಯ ಕಚೇರಿಗೆ ಹೋಯಿತು. ಆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವರು ಸಂಪಾದಕರೊಂದಿಗೆ ಮಾತನಾಡಿ ಈ ಸುದ್ದಿ ಕೊಟ್ಟವರು ಯಾರು ಎಂಬುದಾಗಿ ಪ್ರಶ್ನಿಸಿತು. ಅಂದಹಾಗೆ ಅದು ಪಿಟಿಐನಿಂದ ವರದಿಯಾಗಿದ್ದ ಸುದ್ದಿ ಆಗಿರಲಿಲ್ಲ ಬದಲಾಗಿ ಅದೇ ಸಂಸ್ಥೆಯ ಇಂಗ್ಲಿಷ್ ವರದಿಗಾರರು ದಿಲ್ಲಿಯಿಂದ ನೀಡಿದ ವರದಿಯಾಗಿತ್ತು. ಅದನ್ನು ಯತಾವತ್ತಾಗಿ ಭಾಷಾಂತರ ಮಾಡಲಾಗಿತ್ತು. ಭಾಷಾಂತರಿಸಿದ ಹಿರಿಯ ಪತ್ರಕರ್ತರಿಗೆ ಕ್ಷಮಾಧಾನ ನೀಡಲಾಗಿದೆಯಾದರೂ ಅದನ್ನು ವರದಿ ಮಾಡಿದ ಇಂಗ್ಲಿಷ್ ಪತ್ರಿಕೆ ವರದಿಗಾರನಿಗೆ ಇನ್ನು ಕಿರುಕುಳ ತಪ್ಪಿಲ್ಲ ಎಂಬ ಮಾಹಿತಿಗಳು ಬಂದಿವೆ.
ಕನ್ನಡಿಗರ ವಿಶ್ವಾಸ ಗಳಿಸಿ ಸ್ವಾತಂತ್ರ ನಂತರದ ದಿನಗಳಿಂದಲೂ ಸಮಾಜದ ಕಟ್ಟಕಡೆಯ ವ್ಯಕ್ತಿಪರವಾಗಿ ನಿಂತಿದ್ದ ಈ ದೊಡ್ಡ ಪತ್ರಿಕೆಯ ಕತೆಯೇ ಹೀಗಾದರೆ ಮಿಕ್ಕ ಪತ್ರಿಕೆಗಳ ಕತೆಯೇನು? ಕೋಬ್ರಾ ಪೋಸ್ಟ್ ಈಗಾಗಲೇ ನೀಡಿರುವ ಸೂಜಿ ಮೊನೆ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದಿರುವ ಸಂಪಾದಕರನ್ನು ನೋಡಿದ್ದೀರ. ಇದರರ್ಥ ಕೆಲವರು ಆ ಪಕ್ಷದ ಜತೆ ಕೈ ಜೋಡಿಸಿ ಡೀಲ್ ಆಗಿದ್ದಾರೆ. ಇನ್ನೂ ಕೆಲವರು ಡೀಲ್ ಆಗದೆ ಬೆದರಿಕೆ ಎದುರಿಸುತ್ತಿದ್ದಾರೆ.
ಏನು ಮಾಡಬೇಕು?
ಮಾಧ್ಯಮ ಸಂಸ್ಥೆಗಳ ಮೇಲೆ ರಾಜಕೀಯ ನಾಯಕರು, ಪಕ್ಷಗಳ ಪ್ರಭಾವ ಬೀರುತ್ತಿರುವುದು ಇಂದು ನಿನ್ನೆಯದಲ್ಲ. ಯಾವ ಸರಕಾರ ಬಂದರೂ, ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಇಂಥ ಅನಾಚಾರ ತಪ್ಪಲ್ಲ. ಈಗ ಸ್ವಲ್ಪ ಹೆಚ್ಚಾಗಿದೆ ಎಂದುಕೊಳ್ಳೋಣ. ವಿಶ್ವಾಸಾರ್ಹವಾದ ಸುದ್ದಿಗಳನ್ನು ತಿಳಿಯಬೇಕಿದ್ದರೆ ನವ ಹಾಗೂ ಸ್ವತಂತ್ರ ಮಾಧ್ಯಮಗಳನ್ನು ಆಯ್ಕೆ ಮಾಡಿಕೊಳ್ಳಿ. ಅವುಗಳಿ ಆಗಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಐದು ರೂಪಾಯಿಂದ ಸಾವಿರ ರೂ. ವರೆಗೆ ಆರ್ಥಿಕ ಸಹಾಯ ಮಾಡಿ ಅವನ್ನು ಪೋಷಿಸಿ.
ನಮಸ್ಕಾರ
ಸುದ್ದಿದಿನ ಸಂಪಾದಕೀಯ ಬಳಗ

ದಿನದ ಸುದ್ದಿ
ಮೇ 22 | ಇಂದಿನ ಅಡಿಕೆ ದರ

ಇಂದು, ಮೇ 22, 2025 ರಂದು ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ದರಗಳು ಹೀಗಿವೆ (ಪ್ರತಿ ಕ್ವಿಂಟಾಲ್ಗೆ ರೂಪಾಯಿಗಳಲ್ಲಿ):
ಶಿವಮೊಗ್ಗ ಮಾರುಕಟ್ಟೆ:
ರಾಶಿ: ₹48,169 (ಕನಿಷ್ಠ) – ₹58,099 (ಗರಿಷ್ಠ), ಮೋಡಲ್ ಬೆಲೆ: ₹55,869
ಸರಕು: ₹60,399 (ಕನಿಷ್ಠ) – ₹92,510 (ಗರಿಷ್ಠ), ಮೋಡಲ್ ಬೆಲೆ: ₹77,009
ಬೆಟ್ಟೆ: ₹51,319 (ಕನಿಷ್ಠ) – ₹58,219 (ಗರಿಷ್ಠ), ಮೋಡಲ್ ಬೆಲೆ: ₹57,989
ಗೊರಬಲು: ₹15,499 (ಕನಿಷ್ಠ) – ₹30,699 (ಗರಿಷ್ಠ), ಮೋಡಲ್ ಬೆಲೆ: ₹28,429
ಚನ್ನಗಿರಿ ಮಾರುಕಟ್ಟೆ (ದಾವಣಗೆರೆ):
ರಾಶಿ: ₹41,199 (ಕನಿಷ್ಠ) – ₹59,312 (ಗರಿಷ್ಠ), ಮೋಡಲ್ ಬೆಲೆ: ₹57,767
ಸಾಗರ ಮಾರುಕಟ್ಟೆ (ಶಿವಮೊಗ್ಗ):
ಚಾಲಿ: ₹35,699 (ಕನಿಷ್ಠ) – ₹37,141 (ಗರಿಷ್ಠ), ಮೋಡಲ್ ಬೆಲೆ: ₹36,699
ಬಿಳೆಗೋಟು: ₹21,611 (ಕನಿಷ್ಠ) – ₹25,587 (ಗರಿಷ್ಠ), ಮೋಡಲ್ ಬೆಲೆ: ₹24,111
ಕೆಂಪುಗೋಟು: ₹17,599 (ಕನಿಷ್ಠ) – ₹27,499 (ಗರಿಷ್ಠ), ಮೋಡಲ್ ಬೆಲೆ: ₹24,919
ರಾಶಿ: ₹22,899 (ಕನಿಷ್ಠ) – ₹57,470 (ಗರಿಷ್ಠ), ಮೋಡಲ್ ಬೆಲೆ: ₹56,621
ಕುಮಟಾ ಮಾರುಕಟ್ಟೆ (ಉತ್ತರ ಕನ್ನಡ):
ಚಿಪ್ಪು: ₹11,199 (ಕನಿಷ್ಠ) – ₹26,919 (ಗರಿಷ್ಠ), ಮೋಡಲ್ ಬೆಲೆ: ₹24,549
ಕೋಕಾ: ₹6,899 (ಕನಿಷ್ಠ) – ₹22,189 (ಗರಿಷ್ಠ), ಮೋಡಲ್ ಬೆಲೆ: ₹20,429
ಹಣ್ಣು: ₹32,589 (ಕನಿಷ್ಠ) – ₹42,500 (ಗರಿಷ್ಠ), ಮೋಡಲ್ ಬೆಲೆ: ₹39,729
ಚಿತ್ರದುರ್ಗ ಮಾರುಕಟ್ಟೆ:
ರಾಶಿ: ₹52,449 (ಕನಿಷ್ಠ) – ₹52,899 (ಗರಿಷ್ಠ), ಮೋಡಲ್ ಬೆಲೆ: ₹52,679
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ

ಸುದ್ದಿದಿನ,ದಾವಣಗೆರೆ:ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್ಶುಗರ್, ಕೋಕೆನ್, ನಿಕೋಟಿನ್ನಂತಹ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವರೆಲ್ಲಾ ಸಮಾಜಘಾತುಕ ವ್ಯಕ್ತಿಗಳು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಇವರ ಸಂಯುಕ್ತಶ್ರಯದಲ್ಲಿ ಗುರುವಾರ ನಗರದ ಭಾಷಾ ನಗರದಲ್ಲಿನ ನಗರ ಆರೋಗ್ಯ ಕೇಂದ್ರ (ಪ್ರಸೂತಿ ಆರೋಗ್ಯ ಕೇಂದ್ರ) ದಲ್ಲಿ ಆಯೋಜಿಸಲಾಗಿದ್ದ “ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ಮತ್ತು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ” ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕವಾಗಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಣೆ ಇಂತಹ ಪ್ರಕರಣಗಳು ಕಂಡುಬAದಲ್ಲಿ ಆಲಸ್ಯ ಮಾಡದೇ ಸಂಬAಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಅಲ್ಲದೇ ಪುರುಷತ್ವ ಮತ್ತು ಲೈಂಗಿಕತೆಯನ್ನು ಕುಂದಿಸುತ್ತದೆ. ಮಾದಕ ವ್ಯಸನಗಳಿಂದ ವಿವಿ ರೀತಿಯ ಕೃತ್ಯಗಳ್ಲಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗುವುದಲ್ಲದೇ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ವ್ಯಸನಮುಕ್ತರಾಗಿ ಸಮಾಜದಲ್ಲಿ ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉನ್ನತ ಮಟ್ಟದ ವ್ಯಕತಿಗಳಾಗಿ ಬಾಳಬೇಕು. ಈ ನಿಟ್ಟಿನಲ್ಲಿ ತಮ್ಮಗಳ ಸಹಕಾರ ಅತ್ಯಗತ್ಯ ಎಂದರು.
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ರಲ್ಲಿ ಜಾರಿ ಮಾಡಿದ್ದು, ಕೇವಲ ದೈಹಿಕ ಹಿಂಸೆಗೆ ಸೀಮಿತಗೊಳಿಸದೆ, ಲೈಂಗಿಕ, ಮೌಖಿಕ, ಭಾವನಾತ್ಮಕ, ಆರ್ಥಿಕ, ಮತ್ತು ಮಾನಸಿಕ ಹಿಂಸೆಯನ್ನು ಸಹ ಒಳಗೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡುವುದು, ಮನೆಯಿಂದ ಹೊರಹಾಕುವುದು ಇವೆಲ್ಲವೂ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತವೆ. ಕಾಯ್ದೆಯ ಮೂಲಕ ಮಹಿಳೆಯರಿಗೆ ಅರ್ಥಿಕ, ಸಾಮಾಜಿಕ, ಭದ್ರತೆಯನ್ನು ಒದಗಿಸಲಾಗುತ್ತದೆ. ಮಹಿಳೆಯರಿಗೆ ಕೌಟುಂಬಿಕ ದೌರ್ಜನ್ಯಗಳಂತಹ ದೈಹಕ ಮತ್ತು ಮಾನಸಿಕ ಹಿಂಸೆ, ಕಿರುಕುಳ ನೀಡಿದಲ್ಲಿ ಹತ್ತಿರದ ಸಖಿ ಒನ್ ಸ್ಟಾಪ್ ಸೆಂಟರ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸಿ ಸಲಹೆ ಸೂಚನೆಗಳನ್ನು ಪಡೆಯಬಹುದು. ಇದಕ್ಕೆ ಸಂಬAಧಿಸಿದAತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಕಾರದ ವತಿಯಿಂದ ಉಚಿತ ಕಾನೂನು ನರೆವು ನೀಡಲು 40 ವಕೀಲರಿದ್ದಾರೆ. ಇದನ್ನು ಪ್ರತಿಯೊಬ್ಬರು ಸದುಪಯೋಗಪಡೆದುಕೊಳ್ಳಬೇಕು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಲು 15100 ಸಹಾಯವಾಣಿ ಸಂಖ್ಯೆ ಸ್ಥಾಪಿಸಿದ್ದು, ಕರೆ ಮಾಡಿ ಸೂಕ್ತ ಕಾನೂನು ಸಲಹೆ ಪಡೆಯಬಹುದು. ಸಮಾಜದಲ್ಲಿ ಹಿಂದುಳಿದ ಪ್ರತಿಯೊಬ್ಬರನ್ನು ಮುಖ್ಯವಾಹಿನಿಗೆ ತರಲು ಕಂಕಣಬದ್ದರಾಗಿ ಕಾರ್ಯನಿರ್ವಹಿಸಬೇಕು. ಈ ಎರಡೂ ಕಾಯ್ದೆಗಳು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.
ಇದೇ ವೇಳೆ ನೆರಳು ಬೀಡಿ ಕಾರ್ಮಿಕ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ ಸಂವಿಧಾನ ಪೀಠಿಕೆ ವಾಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟ್ಟಿಗೆ, ಸಖಿ ಕೇಂದ್ರದ ಕಾನೂನು ಸಲಹೆಗಾರರಾದ ತಂಜಿಮ್ ಕೌಸರಿ, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎನ್.ರೇಖಾ, ನೆರಳು ಬೀಡಿ ಕಾರ್ಮಿಕ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಸದಸ್ಯೆ ಸಬ್ರಿನ್ ತಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಮೆಟ್ರಿಕ್ ನಂತರದ ಬಾಲಕ, ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ. ಐ.ಟಿ.ಐ. ಮತ್ತು ಡಿಪ್ಲೊಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಆನ್ಲೈನ್ನಲ್ಲಿ ಜೂನ್ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 8050770004 ಮತ್ತು 8050770005.ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ6 days ago
ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ
-
ಅಂಕಣ4 days ago
ಹನಿಗವಿತೆಗಳು | ಬೆಳಕಿನ ಬೆನ್ನ ಹಿಂದೆ
-
ದಿನದ ಸುದ್ದಿ3 days ago
ದಾವಣಗೆರೆ | ಕಾಂಗ್ರೆಸ್ ಸಾಧನೆಯ ಸಮರ್ಪಣೆ ಕಾರ್ಯಕ್ರಮ : ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ
-
ದಿನದ ಸುದ್ದಿ4 days ago
ಹೊಸಪೇಟೆ ನಗರದ ತುಂಬೆಲ್ಲಾ ಜಾಹೀರಾತುಗಳ ಹಾವಳಿ ; ಕಣ್ಣ್ಮುಚ್ಚಿ ಕುಳಿತ ಅಧಿಕಾರಿಗಳು
-
ದಿನದ ಸುದ್ದಿ7 days ago
ಚನ್ನಗಿರಿ | ರೈತರಿಗೆ, ವ್ಯಾಪಾರಿಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳ ಬಾಡಿಗೆ
-
ದಿನದ ಸುದ್ದಿ3 days ago
ದಾವಣಗೆರೆ | ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ