ದಿನದ ಸುದ್ದಿ
ಹಿಂದಿ, ಇಂಗ್ಲಿಷ್ ನಂತರ ಕನ್ನಡ ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೂ ಬಂತು ಕುತ್ತು

ಸುದ್ದಿದಿನ ಡೆಸ್ಕ್: ಅನ್ಯಾಯಗಳ ವಿರುದ್ಧ ಅಕ್ಷರಗಳ ಬೆಂಕಿಯುಂಡೆ ಉಗುಳುತ್ತಾ ದೇಶದ ರಾಜಕಾರಣಿಗಳ ಚಳಿ ಬಿಡಿಸಿದ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಹತ್ಯೆ ಮಾಡಿದವರು ಯಾರೆಂಬ ಊಹೆಗಳು ನಿಜವಾಗುತ್ತವೆ. ಸತ್ಯ ಹೇಳುವ ಪತ್ರಿಕೋದ್ಯಮ ಇನ್ನು ಮುಂದುವರಿದರೆ ನಾವೆಷ್ಟು ಗೌರಿಗಳನ್ನು ಕಳೆದುಕೊಳ್ಳಬೇಕೋ ಗೊತ್ತಿಲ್ಲ. ಇದಕ್ಕಾಗಿಯೇ ಭಾರತದ ಕೆಲವು ಬಹು ದೊಡ್ಡ ಮಾಧ್ಯಮ ಸಂಸ್ಥೆಗಳು ಹಾಗೂ ಪತ್ರಿಕೆಗಳು ಶರಣಾಗತಿಯ ತಂತ್ರಗಳನ್ನು ಅನುಸರಿಸುತ್ತಿವೆ.
ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮೊನ್ನೆಯಷ್ಟೆ ಹೊಸಪೇಟೆಗೆ ಬಂದಿದ್ದರು. ವಿಚಾರ ಸಂಕಿರಣವೊಂದರಲ್ಲಿ ಮಾತನಾಡುತ್ತ ಪತ್ರಿಕೋದ್ಯಮಿಗಳನ್ನು ಹೇಗೆ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ತಮ್ಮ ವಿರುದ್ಧ ಬರೆಯದಂತೆ ಹೇಗೆ ನಿಯಂತ್ರಿಸುತ್ತದೆ ಎಂಬ ಮಾಹಿತಿಗಳನ್ನು ಪುಂಖಾನುಪುಂಖವಾಗಿ ನೀಡುತ್ತಾ ಹೋದರು. ಆದರೆ, ಇದನ್ನು ವರದಿ ಮಾಡಿದ ಮಾಧ್ಯಮಗಳು ಭೂಷಣ್ ಈ ಕುರಿತು ನೀಡಿದ ಹೇಳಿಕೆಗಳನ್ನು ತೇಲಿಸಿ ಬರೆದು ತಮಗೇನು ಗೊತ್ತೇ ಇಲ್ಲವೇನೋ ಎಂಬಂತೆ ಮೌನಕ್ಕೆ ಶರಣಾಗಿವೆ. ಅಸಲಿಗೆ ಭೂಷಣ್ ಹೇಳಿದ್ದು ಹೀಗಿತ್ತು. ಸದ್ಯ ಪತ್ರಿಕೋದ್ಯಮ ತುರ್ತು ಪರಿಸ್ಥಿತಿ ದೇಶದಲ್ಲಿದೆ.ಪತ್ರಿಕೆಗಳು, ಹಾಗೂ ಮಾಧ್ಯಮಗಳನ್ನು ಬ್ಲಾಕ್ ಮೇಲ್ ಮಾಡಿ ರಾಜಕೀಯ ಪಕ್ಷ ಹಾಗೂ ಅದಕ್ಕೆ ಸಂಬಂಧಿಸಿದ ಸಂಘಟನೆಯೊಂದು ತಮ್ಮ ವಿರುದ್ಧ ಏನೂ ಬರೆಯದಂತೆ ಷಡ್ಯಂತ್ರ ರೂಪಿಸುತ್ತಿದೆ. ಈ ಪಕ್ಷವು ತನ್ನದೇ ಆದ ದೊಡ್ಡ ಐಟಿ ಸೆಲ್ ರೂಪಿಸಿಕೊಂಡಿದ್ದು ದೇಶದ ಪ್ರಾದೇಶಿಕ ಮಾಧ್ಯಮಗಳು ಹಾಗೂ ಪತ್ರಿಕೆಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಅದರಲ್ಲಿ ಈಗ ಬಹುತೇಕ ಸಫಲವಾಗಿದೆ ಕೂಡ. ಈ ಐಟಿ ಸೆಲ್ ಶಿವಮೊಗ್ಗದಂತ ಸಣ್ಣ ಊರಿನಿಂದ ಹಿಡಿದು ಮುಂಬಯಿಯಂತ ದೊಡ್ಡ ನಗರಗಳಲ್ಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಒಂದು ಮೂಲದ ಪ್ರಕಾರ ಈ ಐಟಿ ಸೆಲ್ನಲ್ಲಿ ಕೆಲಸ ಮಾಡುವ ಪ್ರತಿ ಬರಹಗಾರನಿಗೆ ಕನಿಷ್ಠ 50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತಿದೆ.ಹೀಗೆ ಅರ್ಧ ಲಕ್ಷ ರೂ. ಸಂಬಳ ಪಡೆಯುತ್ತಿರುವ ಇವರು ಸುಳ್ಳು ಸುದ್ದಿಗಳನ್ನು ಬಿತ್ತುವುದು, ಕೋಮು ಗಲಭೆ ಸೃಷ್ಟಿಸುವುದು. ಒಂದು ಧರ್ಮದ ಕುರಿತು ಇಲ್ಲ ಸಲ್ಲದ ಸುದ್ದಿ ಬರೆಯುವುದು. ಇನ್ನೊಂದು ಧರ್ಮವನ್ನು ಪ್ರಚೋದಿಸುವಂತಹ ಸುದ್ದಿಗಳನ್ನು ಬರೆಯುತ್ತಿದ್ದಾರೆ. ಇದಿಷ್ಟೆ ಅಲ್ಲ ಈ ಐಟಿ ಸೆಲ್ ಸಾಕುತ್ತಿರುವ ರಾಜಕೀಯ ಪಕ್ಷವು ದೇಶವನ್ನು ಉದ್ಧಾರ ಮಾಡುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಫೇಸ್ಬುಕ್, ಟ್ವಿಟರ್, ವಾಟ್ಸ್ ಆಪ್ ಮೂಲಕ ಹರಡುವುದು ಇದರ ಮುಖ್ಯ ಉದ್ದೇಶ.
ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಪತ್ರಿಕೆಗಳು ನಡೆಯಲು ಅಗತ್ಯವಾಗಿ ಬೇಕಿರುವ ನ್ಯೂಸ್ಪ್ರಿಂಟ್ಗಳ ಬೆಲೆ ಈಗ ಶೇ. 50ರಷ್ಟು ಹೆಚ್ಚಾಗಿದೆ. ಹಣ ಹೆಚ್ಚಿಗೆ ಕೊಟ್ಟರೂ ನ್ಯೂಸ್ ಪ್ರಿಂಟ್ಗಳನ್ನು ಖರೀದಿಸಲು ಅನುಮತಿ ಸಿಗುತ್ತಿಲ್ಲ. ಪರಿಸರವನ್ನು ಉಳಿಸುವ ಸಲುವಾಗಿ ನ್ಯೂಸ್ಪ್ರಿಂಟ್ ಬೆಲೆ ಏರಿಕೆ ಮಾಡಿ ಅದರ ಬಳಕೆ ಕಡಿಮೆ ಮಾಡಲಾಗುತ್ತಿದೆ ಎಂದು ಬೂಸಿ ಬಿಡಲಾಗುತ್ತಿದೆ. ಆದರೆ, ಪತ್ರಿಕೋದ್ಯಮವನ್ನು ನಿಯಂತ್ರಿಸಲು ಕಂಡುಕೊಂಡಿರುವ ಬಹು ದೊಡ್ಡ ದಾರಿ ಇದು.
ಕನ್ನಡದ ದೊಡ್ಡ ಪತ್ರಿಕೆ ಮೇಲೆ ರಾಜಕೀಯ ಪ್ರಭಾವ
ರಾಜಕೀಯ ಸಂಘಟನೆಯೊಂದು ತಾನು ಮಾಧ್ಯಮಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡು ಓಡಾಡುತ್ತಿದೆ. ತಾನು ಕನ್ನಡದ ಒಂದು ದೊಡ್ಡ ಪತ್ರಿಕೆಗೆ ವಾರ್ನಿಂಗ್ ಕೊಟ್ಟಿರುವುದಾಗಿ ಅದು ಬೀಗುತ್ತಿದೆ. ಆ ಸಂಘಟನೆಯ ಕಾರ್ಯಕರ್ತರ ಪ್ರಕಾರ. ಇತ್ತೀಚೆಗೆ ಬಹುಮತ ಸಾಬೀತುಪಡಿಸಲು ವಿಫಲವಾದ ಪಕ್ಷವೊಂದು ತನ್ನ ಆತ್ಮಾವಲೋಕನಾ ಸಭೆಯಲ್ಲಿ ತನ್ನ ವಿಫಲತೆಗೆ ಕಾರಣವಾದ 20 ಅಂಶಗಳ ಪಟ್ಟಿ ಮಾಡಿತು.
ಪ್ರಾದೇಶಿಕ ಹಾಗೂ ರಾಷ್ಟೀಯ ಪಕ್ಷಗಳು ಅಧಿಕಾರ ರಚಿಸಲು ನಾವು ಬಿಡುವುದಿಲ್ಲ ಎಂದು ದೇಶದ ಉನ್ನತ ಸ್ಥಾನದಲ್ಲಿರುವ ರಾಜಕೀಯ ನಾಯಕರೊಬ್ಬರು ದಿಲ್ಲಿಯಲ್ಲಿ ಮಾಡಿದ್ದ ಭಾಷಣವನ್ನು ಕನ್ನಡ ಪತ್ರಿಕೆಯು ತನ್ನ ಮುಖಪುಟದಲ್ಲಿ ವರದಿ ಮಾಡಿತ್ತು. ಈ ವರದಿಯು , ಹೇಳಿಕೆ ನೀಡಿದ ರಾಜಕಾರಣಿಯ ಪಕ್ಷದ ವಿರುದ್ಧ ಕನ್ನಡಿಗರು ಸಂಘಟನೆಯಾಗಲು ಕಾರಣವಾಯಿತು ಎಂಬ ಅಭಿಪ್ರಾಯಗಳು ವ್ಯಕ್ತವಾದವು.
ಈ ಸುದ್ದಿಯನ್ನು ಪಿಟಿಐ ವರದಿ ಮಾಡಿದೆ ಎಂದು ಪತ್ರಿಕೆ ಹೇಳಿತ್ತು. ಇದನ್ನು ಆಧರಿಸಿ ಆ ರಾಜಕೀಯ ಪಕ್ಷವು ಪಿಟಿಐ ಕಚೇರಿಯಾದ್ಯಂತ ತಡಕಾಡಿ ಆ ಸುದ್ದಿ ಪಿಟಿಐನಿಂದ ವರದಿಯಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಆ ಪತ್ರಿಕೆಯ ಕಚೇರಿಗೆ ಹೋಯಿತು. ಆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವರು ಸಂಪಾದಕರೊಂದಿಗೆ ಮಾತನಾಡಿ ಈ ಸುದ್ದಿ ಕೊಟ್ಟವರು ಯಾರು ಎಂಬುದಾಗಿ ಪ್ರಶ್ನಿಸಿತು. ಅಂದಹಾಗೆ ಅದು ಪಿಟಿಐನಿಂದ ವರದಿಯಾಗಿದ್ದ ಸುದ್ದಿ ಆಗಿರಲಿಲ್ಲ ಬದಲಾಗಿ ಅದೇ ಸಂಸ್ಥೆಯ ಇಂಗ್ಲಿಷ್ ವರದಿಗಾರರು ದಿಲ್ಲಿಯಿಂದ ನೀಡಿದ ವರದಿಯಾಗಿತ್ತು. ಅದನ್ನು ಯತಾವತ್ತಾಗಿ ಭಾಷಾಂತರ ಮಾಡಲಾಗಿತ್ತು. ಭಾಷಾಂತರಿಸಿದ ಹಿರಿಯ ಪತ್ರಕರ್ತರಿಗೆ ಕ್ಷಮಾಧಾನ ನೀಡಲಾಗಿದೆಯಾದರೂ ಅದನ್ನು ವರದಿ ಮಾಡಿದ ಇಂಗ್ಲಿಷ್ ಪತ್ರಿಕೆ ವರದಿಗಾರನಿಗೆ ಇನ್ನು ಕಿರುಕುಳ ತಪ್ಪಿಲ್ಲ ಎಂಬ ಮಾಹಿತಿಗಳು ಬಂದಿವೆ.
ಕನ್ನಡಿಗರ ವಿಶ್ವಾಸ ಗಳಿಸಿ ಸ್ವಾತಂತ್ರ ನಂತರದ ದಿನಗಳಿಂದಲೂ ಸಮಾಜದ ಕಟ್ಟಕಡೆಯ ವ್ಯಕ್ತಿಪರವಾಗಿ ನಿಂತಿದ್ದ ಈ ದೊಡ್ಡ ಪತ್ರಿಕೆಯ ಕತೆಯೇ ಹೀಗಾದರೆ ಮಿಕ್ಕ ಪತ್ರಿಕೆಗಳ ಕತೆಯೇನು? ಕೋಬ್ರಾ ಪೋಸ್ಟ್ ಈಗಾಗಲೇ ನೀಡಿರುವ ಸೂಜಿ ಮೊನೆ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದಿರುವ ಸಂಪಾದಕರನ್ನು ನೋಡಿದ್ದೀರ. ಇದರರ್ಥ ಕೆಲವರು ಆ ಪಕ್ಷದ ಜತೆ ಕೈ ಜೋಡಿಸಿ ಡೀಲ್ ಆಗಿದ್ದಾರೆ. ಇನ್ನೂ ಕೆಲವರು ಡೀಲ್ ಆಗದೆ ಬೆದರಿಕೆ ಎದುರಿಸುತ್ತಿದ್ದಾರೆ.
ಏನು ಮಾಡಬೇಕು?
ಮಾಧ್ಯಮ ಸಂಸ್ಥೆಗಳ ಮೇಲೆ ರಾಜಕೀಯ ನಾಯಕರು, ಪಕ್ಷಗಳ ಪ್ರಭಾವ ಬೀರುತ್ತಿರುವುದು ಇಂದು ನಿನ್ನೆಯದಲ್ಲ. ಯಾವ ಸರಕಾರ ಬಂದರೂ, ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಇಂಥ ಅನಾಚಾರ ತಪ್ಪಲ್ಲ. ಈಗ ಸ್ವಲ್ಪ ಹೆಚ್ಚಾಗಿದೆ ಎಂದುಕೊಳ್ಳೋಣ. ವಿಶ್ವಾಸಾರ್ಹವಾದ ಸುದ್ದಿಗಳನ್ನು ತಿಳಿಯಬೇಕಿದ್ದರೆ ನವ ಹಾಗೂ ಸ್ವತಂತ್ರ ಮಾಧ್ಯಮಗಳನ್ನು ಆಯ್ಕೆ ಮಾಡಿಕೊಳ್ಳಿ. ಅವುಗಳಿ ಆಗಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಐದು ರೂಪಾಯಿಂದ ಸಾವಿರ ರೂ. ವರೆಗೆ ಆರ್ಥಿಕ ಸಹಾಯ ಮಾಡಿ ಅವನ್ನು ಪೋಷಿಸಿ.
ನಮಸ್ಕಾರ
ಸುದ್ದಿದಿನ ಸಂಪಾದಕೀಯ ಬಳಗ

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ15 hours ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ2 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ16 hours ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ
-
ದಿನದ ಸುದ್ದಿ5 hours ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ