Connect with us

ದಿನದ ಸುದ್ದಿ

ಹಿಂದಿ, ಇಂಗ್ಲಿಷ್ ನಂತರ ಕನ್ನಡ ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೂ ಬಂತು ಕುತ್ತು

Published

on

ಸುದ್ದಿದಿನ ಡೆಸ್ಕ್: ನ್ಯಾಯಗಳ ವಿರುದ್ಧ ಅಕ್ಷರಗಳ ಬೆಂಕಿಯುಂಡೆ ಉಗುಳುತ್ತಾ ದೇಶದ ರಾಜಕಾರಣಿಗಳ ಚಳಿ ಬಿಡಿಸಿದ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಹತ್ಯೆ ಮಾಡಿದವರು ಯಾರೆಂಬ ಊಹೆಗಳು ನಿಜವಾಗುತ್ತವೆ. ಸತ್ಯ ಹೇಳುವ ಪತ್ರಿಕೋದ್ಯಮ ಇನ್ನು ಮುಂದುವರಿದರೆ ನಾವೆಷ್ಟು ಗೌರಿಗಳನ್ನು ಕಳೆದುಕೊಳ್ಳಬೇಕೋ ಗೊತ್ತಿಲ್ಲ. ಇದಕ್ಕಾಗಿಯೇ ಭಾರತದ ಕೆಲವು ಬಹು ದೊಡ್ಡ ಮಾಧ್ಯಮ ಸಂಸ್ಥೆಗಳು ಹಾಗೂ ಪತ್ರಿಕೆಗಳು ಶರಣಾಗತಿಯ ತಂತ್ರಗಳನ್ನು ಅನುಸರಿಸುತ್ತಿವೆ.

ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮೊನ್ನೆಯಷ್ಟೆ ಹೊಸಪೇಟೆಗೆ ಬಂದಿದ್ದರು. ವಿಚಾರ ಸಂಕಿರಣವೊಂದರಲ್ಲಿ ಮಾತನಾಡುತ್ತ ಪತ್ರಿಕೋದ್ಯಮಿಗಳನ್ನು ಹೇಗೆ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ತಮ್ಮ ವಿರುದ್ಧ ಬರೆಯದಂತೆ ಹೇಗೆ ನಿಯಂತ್ರಿಸುತ್ತದೆ ಎಂಬ ಮಾಹಿತಿಗಳನ್ನು ಪುಂಖಾನುಪುಂಖವಾಗಿ ನೀಡುತ್ತಾ ಹೋದರು. ಆದರೆ, ಇದನ್ನು ವರದಿ ಮಾಡಿದ ಮಾಧ್ಯಮಗಳು ಭೂಷಣ್ ಈ ಕುರಿತು ನೀಡಿದ ಹೇಳಿಕೆಗಳನ್ನು ತೇಲಿಸಿ ಬರೆದು ತಮಗೇನು ಗೊತ್ತೇ ಇಲ್ಲವೇನೋ ಎಂಬಂತೆ ಮೌನಕ್ಕೆ ಶರಣಾಗಿವೆ. ಅಸಲಿಗೆ ಭೂಷಣ್ ಹೇಳಿದ್ದು ಹೀಗಿತ್ತು. ಸದ್ಯ ಪತ್ರಿಕೋದ್ಯಮ ತುರ್ತು ಪರಿಸ್ಥಿತಿ ದೇಶದಲ್ಲಿದೆ.ಪತ್ರಿಕೆಗಳು, ಹಾಗೂ ಮಾಧ್ಯಮಗಳನ್ನು ಬ್ಲಾಕ್ ಮೇಲ್ ಮಾಡಿ ರಾಜಕೀಯ ಪಕ್ಷ ಹಾಗೂ ಅದಕ್ಕೆ ಸಂಬಂಧಿಸಿದ ಸಂಘಟನೆಯೊಂದು ತಮ್ಮ ವಿರುದ್ಧ ಏನೂ ಬರೆಯದಂತೆ ಷಡ್ಯಂತ್ರ ರೂಪಿಸುತ್ತಿದೆ. ‌ಈ ಪಕ್ಷವು ತನ್ನದೇ ಆದ ದೊಡ್ಡ ಐಟಿ ಸೆಲ್ ರೂಪಿಸಿಕೊಂಡಿದ್ದು ದೇಶದ ಪ್ರಾದೇಶಿಕ ಮಾಧ್ಯಮಗಳು ಹಾಗೂ ಪತ್ರಿಕೆಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಅದರಲ್ಲಿ ಈಗ ಬಹುತೇಕ ಸಫಲವಾಗಿದೆ ಕೂಡ. ಈ ಐಟಿ ಸೆಲ್ ಶಿವಮೊಗ್ಗದಂತ ಸಣ್ಣ ಊರಿನಿಂದ ಹಿಡಿದು ಮುಂಬಯಿಯಂತ ದೊಡ್ಡ ನಗರಗಳಲ್ಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಒಂದು ಮೂಲದ ಪ್ರಕಾರ ಈ ಐಟಿ ಸೆಲ್‍ನಲ್ಲಿ ಕೆಲಸ ಮಾಡುವ ಪ್ರತಿ ಬರಹಗಾರನಿಗೆ ಕನಿಷ್ಠ 50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತಿದೆ.ಹೀಗೆ ಅರ್ಧ ಲಕ್ಷ ರೂ. ಸಂಬಳ ಪಡೆಯುತ್ತಿರುವ ಇವರು ಸುಳ್ಳು ಸುದ್ದಿಗಳನ್ನು ಬಿತ್ತುವುದು, ಕೋಮು ಗಲಭೆ ಸೃಷ್ಟಿಸುವುದು. ಒಂದು ಧರ್ಮದ ಕುರಿತು ಇಲ್ಲ ಸಲ್ಲದ ಸುದ್ದಿ ಬರೆಯುವುದು. ಇನ್ನೊಂದು ಧರ್ಮವನ್ನು ಪ್ರಚೋದಿಸುವಂತಹ ಸುದ್ದಿಗಳನ್ನು ಬರೆಯುತ್ತಿದ್ದಾರೆ. ಇದಿಷ್ಟೆ ಅಲ್ಲ ಈ ಐಟಿ ಸೆಲ್ ಸಾಕುತ್ತಿರುವ ರಾಜಕೀಯ ಪಕ್ಷವು ದೇಶವನ್ನು ಉದ್ಧಾರ ಮಾಡುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಫೇಸ್‍ಬುಕ್, ಟ್ವಿಟರ್, ವಾಟ್ಸ್ ಆಪ್ ಮೂಲಕ ಹರಡುವುದು ಇದರ ಮುಖ್ಯ ಉದ್ದೇಶ.

ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಪತ್ರಿಕೆಗಳು ನಡೆಯಲು ಅಗತ್ಯವಾಗಿ ಬೇಕಿರುವ ನ್ಯೂಸ್‍ಪ್ರಿಂಟ್‍ಗಳ ಬೆಲೆ ಈಗ ಶೇ. 50ರಷ್ಟು ಹೆಚ್ಚಾಗಿದೆ. ಹಣ ಹೆಚ್ಚಿಗೆ ಕೊಟ್ಟರೂ ನ್ಯೂಸ್ ಪ್ರಿಂಟ್‍ಗಳನ್ನು ಖರೀದಿಸಲು ಅನುಮತಿ ಸಿಗುತ್ತಿಲ್ಲ. ಪರಿಸರವನ್ನು ಉಳಿಸುವ ಸಲುವಾಗಿ ನ್ಯೂಸ್‍ಪ್ರಿಂಟ್ ಬೆಲೆ ಏರಿಕೆ ಮಾಡಿ ಅದರ ಬಳಕೆ ಕಡಿಮೆ ಮಾಡಲಾಗುತ್ತಿದೆ ಎಂದು ಬೂಸಿ ಬಿಡಲಾಗುತ್ತಿದೆ. ಆದರೆ, ಪತ್ರಿಕೋದ್ಯಮವನ್ನು ನಿಯಂತ್ರಿಸಲು ಕಂಡುಕೊಂಡಿರುವ ಬಹು ದೊಡ್ಡ ದಾರಿ ಇದು.

ಕನ್ನಡದ ದೊಡ್ಡ ಪತ್ರಿಕೆ ಮೇಲೆ ರಾಜಕೀಯ ಪ್ರಭಾವ

ರಾಜಕೀಯ ಸಂಘಟನೆಯೊಂದು ತಾನು ಮಾಧ್ಯಮಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡು ಓಡಾಡುತ್ತಿದೆ. ತಾನು ಕನ್ನಡದ ಒಂದು ದೊಡ್ಡ ಪತ್ರಿಕೆಗೆ ವಾರ್ನಿಂಗ್ ಕೊಟ್ಟಿರುವುದಾಗಿ ಅದು ಬೀಗುತ್ತಿದೆ. ಆ ಸಂಘಟನೆಯ ಕಾರ್ಯಕರ್ತರ ಪ್ರಕಾರ. ಇತ್ತೀಚೆಗೆ ಬಹುಮತ ಸಾಬೀತುಪಡಿಸಲು ವಿಫಲವಾದ ಪಕ್ಷವೊಂದು ತನ್ನ ಆತ್ಮಾವಲೋಕನಾ ಸಭೆಯಲ್ಲಿ ತನ್ನ ವಿಫಲತೆಗೆ ಕಾರಣವಾದ 20 ಅಂಶಗಳ ಪಟ್ಟಿ ಮಾಡಿತು.
ಪ್ರಾದೇಶಿಕ ಹಾಗೂ ರಾಷ್ಟೀಯ ಪಕ್ಷಗಳು ಅಧಿಕಾರ ರಚಿಸಲು ನಾವು ಬಿಡುವುದಿಲ್ಲ ಎಂದು ದೇಶದ ಉನ್ನತ ಸ್ಥಾನದಲ್ಲಿರುವ ರಾಜಕೀಯ ನಾಯಕರೊಬ್ಬರು ದಿಲ್ಲಿಯಲ್ಲಿ ಮಾಡಿದ್ದ ಭಾಷಣವನ್ನು ಕನ್ನಡ ಪತ್ರಿಕೆಯು ತನ್ನ ಮುಖಪುಟದಲ್ಲಿ ವರದಿ ಮಾಡಿತ್ತು. ಈ ವರದಿಯು , ಹೇಳಿಕೆ ನೀಡಿದ ರಾಜಕಾರಣಿಯ ಪಕ್ಷದ ವಿರುದ್ಧ ಕನ್ನಡಿಗರು ಸಂಘಟನೆಯಾಗಲು ಕಾರಣವಾಯಿತು ಎಂಬ ಅಭಿಪ್ರಾಯಗಳು ವ್ಯಕ್ತವಾದವು.

ಈ ಸುದ್ದಿಯನ್ನು ಪಿಟಿಐ ವರದಿ ಮಾಡಿದೆ ಎಂದು ಪತ್ರಿಕೆ ಹೇಳಿತ್ತು. ಇದನ್ನು ಆಧರಿಸಿ ಆ ರಾಜಕೀಯ ಪಕ್ಷವು ಪಿಟಿಐ ಕಚೇರಿಯಾದ್ಯಂತ ತಡಕಾಡಿ ಆ ಸುದ್ದಿ ಪಿಟಿಐನಿಂದ ವರದಿಯಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಆ ಪತ್ರಿಕೆಯ ಕಚೇರಿಗೆ ಹೋಯಿತು. ಆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವರು ಸಂಪಾದಕರೊಂದಿಗೆ ಮಾತನಾಡಿ ಈ ಸುದ್ದಿ ಕೊಟ್ಟವರು ಯಾರು ಎಂಬುದಾಗಿ ಪ್ರಶ್ನಿಸಿತು. ಅಂದಹಾಗೆ ಅದು ಪಿಟಿಐನಿಂದ ವರದಿಯಾಗಿದ್ದ ಸುದ್ದಿ ಆಗಿರಲಿಲ್ಲ ಬದಲಾಗಿ ಅದೇ ಸಂಸ್ಥೆಯ ಇಂಗ್ಲಿಷ್ ವರದಿಗಾರರು ದಿಲ್ಲಿಯಿಂದ ನೀಡಿದ ವರದಿಯಾಗಿತ್ತು. ಅದನ್ನು ಯತಾವತ್ತಾಗಿ ಭಾಷಾಂತರ ಮಾಡಲಾಗಿತ್ತು. ಭಾಷಾಂತರಿಸಿದ ಹಿರಿಯ ಪತ್ರಕರ್ತರಿಗೆ ಕ್ಷಮಾಧಾನ ನೀಡಲಾಗಿದೆಯಾದರೂ ಅದನ್ನು ವರದಿ ಮಾಡಿದ ಇಂಗ್ಲಿಷ್ ಪತ್ರಿಕೆ ವರದಿಗಾರನಿಗೆ ಇನ್ನು ಕಿರುಕುಳ ತಪ್ಪಿಲ್ಲ ಎಂಬ ಮಾಹಿತಿಗಳು ಬಂದಿವೆ.

ಕನ್ನಡಿಗರ ವಿಶ್ವಾಸ ಗಳಿಸಿ ಸ್ವಾತಂತ್ರ ನಂತರದ ದಿನಗಳಿಂದಲೂ ಸಮಾಜದ ಕಟ್ಟಕಡೆಯ ವ್ಯಕ್ತಿಪರವಾಗಿ ನಿಂತಿದ್ದ ಈ ದೊಡ್ಡ ಪತ್ರಿಕೆಯ ಕತೆಯೇ ಹೀಗಾದರೆ ಮಿಕ್ಕ ಪತ್ರಿಕೆಗಳ ಕತೆಯೇನು? ಕೋಬ್ರಾ ಪೋಸ್ಟ್ ಈಗಾಗಲೇ ನೀಡಿರುವ ಸೂಜಿ ಮೊನೆ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದಿರುವ ಸಂಪಾದಕರನ್ನು ನೋಡಿದ್ದೀರ. ಇದರರ್ಥ ಕೆಲವರು ಆ ಪಕ್ಷದ ಜತೆ ಕೈ ಜೋಡಿಸಿ ಡೀಲ್ ಆಗಿದ್ದಾರೆ. ಇನ್ನೂ ಕೆಲವರು ಡೀಲ್ ಆಗದೆ ಬೆದರಿಕೆ ಎದುರಿಸುತ್ತಿದ್ದಾರೆ.

ಏನು ಮಾಡಬೇಕು?

ಮಾಧ್ಯಮ ಸಂಸ್ಥೆಗಳ ಮೇಲೆ ರಾಜಕೀಯ ನಾಯಕರು, ಪಕ್ಷಗಳ ಪ್ರಭಾವ ಬೀರುತ್ತಿರುವುದು ಇಂದು ನಿನ್ನೆಯದಲ್ಲ. ಯಾವ ಸರಕಾರ ಬಂದರೂ, ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಇಂಥ ಅನಾಚಾರ ತಪ್ಪಲ್ಲ. ಈಗ ಸ್ವಲ್ಪ ಹೆಚ್ಚಾಗಿದೆ ಎಂದುಕೊಳ್ಳೋಣ. ವಿಶ್ವಾಸಾರ್ಹವಾದ ಸುದ್ದಿಗಳನ್ನು ತಿಳಿಯಬೇಕಿದ್ದರೆ ನವ ಹಾಗೂ ಸ್ವತಂತ್ರ ಮಾಧ್ಯಮಗಳನ್ನು ಆಯ್ಕೆ ಮಾಡಿಕೊಳ್ಳಿ. ಅವುಗಳಿ ಆಗಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಐದು ರೂಪಾಯಿಂದ ಸಾವಿರ ರೂ. ವರೆಗೆ ಆರ್ಥಿಕ ಸಹಾಯ ಮಾಡಿ ಅವನ್ನು ಪೋಷಿಸಿ.

ನಮಸ್ಕಾರ
ಸುದ್ದಿದಿನ ಸಂಪಾದಕೀಯ ಬಳಗ

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ನಿಯಮಬಾಹಿರವಾಗಿ ಖರೀದಿ ಪ್ರಕ್ರಿಯೆಗೆ ಮುಂದಾಗಿ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿರುವ ಪ್ರಾಂಶುಪಾಲರಾದ ಡಾ. ಗಣಪತಿ ಕೆ. ಲಮಾಣಿ ಇವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇವರಿಂದ ಅರೇ ಸರ್ಕಾರಿ ಖಾತೆಯ ಅನುದಾನದ ಬಳಕೆಯ ಅಧಿಕೃತ ದಾಖಲೆಗಳನ್ನು ಪಡೆದು, ಪರಿಶೀಲನೆ ಮಾಡಿದಾಗ ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ಮಾಡಿರುವುದು ಮಾತ್ರವಲ್ಲದೆ, ವೆಂಕಟೇಶ್ ಟ್ರೇರ‍್ಸ್, ಕುಕನೂರು ಮತ್ತು ವೆಂಕಟೇಶ್ ಟ್ರೇರ‍್ಸ್, ತಳಕಲ್ಲ ಎಂಬ ಒಂದೇ ಹೆಸರಿನ ಏಜೆನ್ಸಿಯ ಮೂಲಕ ಎರಡು ಸ್ಥಳಗಳ ಹೆಸರಿನಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳನ್ನು ಸೃಷ್ಟಿಸಿಕೊಂಡು ಲಕ್ಷಾಂತರ ರೂಪಾಯಿ ಅನುದಾನವನ್ನು ವಂಚನೆ ಮಾಡಿರುವುದು ಕಂಡುಬದಿರುತ್ತದೆ.

ಪ್ರಾಂಶುಪಾಲರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. 3 ತಿಂಗಳು ಕಳೆದರೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಯಾವುದೇ ಪ್ರತ್ಯುತ್ತರ ನೀಡದ ಕಾರಣ, ನಕಲಿ ಜಿ.ಎಸ್.ಟಿ ಮೂಲಕ ಹಣ ವಂಚಿಸಿರುವ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಗೆ ದೂರು ನೀಡಿ, ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ.

ತರಬೇತಿಯು ಫೆಬ್ರವರಿ 16 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿಯನ್ನು ಸಲ್ಲಿಸಬಹುದು. 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9740982585, 9380162042, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 days ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

ದಿನದ ಸುದ್ದಿ4 days ago

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ...

ದಿನದ ಸುದ್ದಿ4 days ago

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸುವ ಕೆಎಎಸ್...

ದಿನದ ಸುದ್ದಿ7 days ago

ಪ್ರೊ.ಪೂರ್ಣಾನಂದ, ಎ.ನಾರಾಯಣ, ಸತೀಶ್ ಆಚಾರ್ಯ ಸೇರಿದಂತೆ ಹಲವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಸುದ್ದಿದಿನಡೆಸ್ಕ್:ಪ್ರತಿ ವರ್ಷ ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ಪ್ರಶಸ್ತಿಗಳಿಗೆ ಪ್ರಾಧ್ಯಾಪಕ ಪೂರ್ಣಾನಂದ, ವ್ಯಂಗ್ಯಚಿತ್ರಕಾರ ಸತೀಶ್‌ ಆಚಾರ್ಯ, ಪತ್ರಕರ್ತ ಸೋಮಶೇಖರ್ ಪಡುಕೆರೆ ಹಾಗೂ ಚಿಂತಕ, ಬರಹಗಾರ ಎ ನಾರಾಯಣ್...

ದಿನದ ಸುದ್ದಿ7 days ago

ಇದೇ 11 ರಂದು ಜಿಎಂ ವಿಶ್ವವಿದ್ಯಾಲಯದಲ್ಲಿ ಪ್ರಥಮ ಘಟಿಕೋತ್ಸವ : ಕುಲಪತಿ ಡಾ. ಎಸ್.ಆರ್. ಶಂಕಪಾಲ್

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾಲಯವು ಪ್ರಥಮ ಘಟಿಕೋತ್ಸವವನ್ನು ಆಯೋಜಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಖಲಿಸಲಿದೆ. ಈ ಘಟಿಕೋತ್ಸವವು ವಿಶ್ವವಿದ್ಯಾಲಯದ ಮೊದಲ ಪದವಿ ಬ್ಯಾಚ್‌ನ ಯಶಸ್ವಿ ಶೈಕ್ಷಣಿಕ ಪಯಣವನ್ನು ಸಂಭ್ರಮದಿಂದ...

ದಿನದ ಸುದ್ದಿ7 days ago

ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..

~ಹನುಮಂತ ನಾಯ್ಕ್ .ಡಿ ಎಲ್. ಎಲ್. ಬಿ, ಆರ್. ಎಲ್. ಕಾನೂನು ಕಾಲೇಜು ದಾವಣಗೆರೆ ದಾವಣಗೆರೆ ವಿಶ್ವವಿದ್ಯಾಲಯವು ಈ ಹಿಂದೆ ಮೌಲ್ಯಮಾಪನ ಮುಗಿದು 24 ಗಂಟೆಗಳ ಒಳಗೆ...

ದಿನದ ಸುದ್ದಿ1 week ago

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು...

ದಿನದ ಸುದ್ದಿ1 week ago

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು...

ಅಂತರಂಗ1 week ago

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ...

Trending