Connect with us

ದಿನದ ಸುದ್ದಿ

‘ಈ ವಿಷಯದ ಕುರಿತು ನಾವೇಕೆ ಮಾತಾಡಬಾರದು..?’ : ರೈತ ಹೋರಾಟ ಕುರಿತು ಪಾಪ್ ಗಾಯಕಿ ರಿಹಾನ ಟ್ವೀಟ್..!

Published

on

  • ದಿನೇಶ್ ಕುಮಾರ್ ಎಸ್.ಸಿ.

ಇಷ್ಟೇ ಆಕೆ ಬರೆದದ್ದು. ಜತೆಗೆ ಸಿಎನ್ ಎನ್ ಸುದ್ದಿಸಂಸ್ಥೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಮಾಡಿರುವ ವಿಸ್ತ್ರತ ವರದಿಯ ಲಿಂಕ್ ಶೇರ್ ಮಾಡಿದ್ದರು. ನೋಡನೋಡುತ್ತಿದ್ದಂತೆ ಅದು ಲಕ್ಷಾಂತರ ರೀಟ್ವೀಟ್ ಗಳಾದವು. #Rihanna ಮತ್ತು #FarmersProtest ಹ್ಯಾಶ್ ಟ್ಯಾಗ್ ಗಳು ಜಾಗತಿಕ ಟ್ರೆಂಡ್ ಆದವು.

ಆಕೆ ರಿಹಾನಾ. ಜಗತ್ತಿನ ಪ್ರಖ್ಯಾತ ಪಾಪ್ ಗಾಯಕಿ. ಟ್ವಿಟರ್ ಒಂದರಲ್ಲೇ ಆಕೆಯ ಅನುಯಾಯಿಗಳ ಸಂಖ್ಯೆ ಹತ್ತು ಕೋಟಿ! ಒಂಭತ್ತು ಗ್ರಾಮಿ ಅವಾರ್ಡ್, ಹದಿಮೂರು ಅಮೆರಿಕನ್ ಮ್ಯೂಸಿಕ್ ಅವಾರ್ಡ್, ಹನ್ನೆರಡು ಬಿಲ್ ಬೋರ್ಡ್ ಮ್ಯೂಸಿಕ್ ಅವಾರ್ಡ್ ಜತೆಗೆ ಆರು ಗಿನ್ನೆಸ್ ದಾಖಲೆಗಳು ಈಕೆಯ ಮಡಿಲಲ್ಲಿವೆ! ಜಗತ್ತಿನ ಯಾವುದೇ ಮಹಿಳಾ ಸಂಗೀತಗಾರ್ತಿಗಿಂತ ಹೆಚ್ಚು ಶ್ರೀಮಂತೆ ಈಕೆ. ಟೈಂ ಮ್ಯಾಗಜೀನ್ ನ ಜಗತ್ತಿನ ಅತಿಹೆಚ್ಚು ಪ್ರಭಾವಶಾಲಿ ಸೆಲೆಬ್ರಿಟಿಗಳಲ್ಲಿ ಈಕೆ ಹಲವಾರು ವರ್ಷ ಖಾಯಂ ಸ್ಥಾನ ಪಡೆದಿದ್ದಾರೆ. ಆಕೆಯ ಆಸ್ತಿಯ ಒಟ್ಟು ಮೌಲ್ಯ ಎಷ್ಟು ಗೊತ್ತೇ? 600 ಮಿಲಿಯನ್ ಡಾಲರ್!

ರಿಹಾನಾ ಕೆರೆಬಿಯನ್ ದ್ವೀಪ ಸಮೂಹದ ಬಾರ್ಬಡೋಸ್ ಎಂಬ ದೇಶದವರು. ಆಕೆಯ ಬಾಲ್ಯವೇ ಆಘಾತಕಾರಿಯಾಗಿತ್ತು. ಕುಡುಕ ಅಪ್ಪ ದಿನವೂ ಈಕೆಯ ತಾಯಿಯನ್ನು ಹೊಡೆಯುತ್ತಿದ್ದ. ರಿಹಾನಾಗೆ ವಿಪರೀತ ತಲೆನೋವು. ಅಮ್ಮ ಅಕೌಂಟೆಂಟ್, ಅಪ್ಪ ವೇರ್ ಹೌಸ್ ಒಂದರ ಸೂಪರ್ ವೈಜರ್. ಸಣ್ಣ ವಯಸ್ಸಿನಲ್ಲೇ ರಿಹಾನ ಬಟ್ಟೆ ವ್ಯಾಪಾರ ಮಾಡುತ್ತಿದ್ದಳು.

ಕುಡುಕ ಅಪ್ಪ ಕೊಕೈನ್ ಗೆ ಅಡಿಕ್ಟ್ ಆಗಿದ್ದ. ಪ್ರತಿನಿತ್ಯ ಮನೆ ರಣರಂಗವಾಗುತ್ತಿತ್ತು, ರಿಹಾನಾಳ ತಲೆನೋವೂ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಕೊನೆಗೊಂದು ದಿನ ಈಕೆಗೆ ಹದಿನಾಲ್ಕು ವರ್ಷವಾಗಿದ್ದಾಗ ಅಪ್ಪ-ಅಮ್ಮ ಬೇರೆಯಾದರು. ರಿಹಾನಾಳ ತಲೆನೋವು ಸಂಪೂರ್ಣ ನಿಂತುಹೋಯಿತು!

ರಿಹಾನಾಗೆ ಸಂಗೀತದಲ್ಲಿ ಆಸಕ್ತಿಯಿತ್ತು. ನೀವು ಹೆಸರಾಂತ ಕ್ರಿಕೆಟಿಗರಾದ ಕ್ರಿಸ್ ಜೋರ್ಡಾನ್, ಕಾರ್ಲೋಸ್ ಬ್ರಥ್ ವೈಟ್ ಹೆಸರು ಕೇಳಿರುತ್ತೀರಿ. ಅವರ ಜತೆಯಲ್ಲೇ ಈಕೆ ಶಾಲೆಯಲ್ಲಿ ಓದಿದವಳು. 2003ರಲ್ಲಿ ರಿಹಾನ ತನ್ನ ಇಬ್ಬರು ಗೆಳತಿಯರೊಂದಿಗೆ ಸೇರಿ ಸಣ್ಣ ತಂಡ ಮಾಡಿಕೊಂಡು ಸಂಗೀತಾಭ್ಯಾಸ ಆರಂಭಿಸಿದಳು. ಅಮೆರಿಕದ ಮ್ಯೂಸಿಕ್ ಪ್ರೊಡ್ಯೂಸರ್ ಇವಾನ್ ರೋಜರ್ಸ್ ಎಂಬಾತನ ಕಣ್ಣಿಗೆ ಬಿತ್ತು ಈ ತಂಡ. ಆ ನಂತರ ರಿಹಾನಾಳ ಬದುಕಲ್ಲಿ ನಡೆದಿದ್ದೆಲ್ಲ ಪವಾಡ. ಆಕೆ ಮುಟ್ಟಿದ್ದೆಲ್ಲ ಚಿನ್ನ. ಸಂಗೀತ ಜಗತ್ತು ಅವಳನ್ನು ಆರಾಧಿಸಿತು. ಆಕೆ ಇಡೀ ಜಗತ್ತು ಸುತ್ತಿದಳು.

ಹತ್ತಾರು ಮ್ಯೂಸಿಕ್ ಆಲ್ಬಮ್ ಗಳು ಜನಪ್ರಿಯವಾದವು. ಹಣ, ಪ್ರಶಸ್ತಿ, ಖ್ಯಾತಿ ಎಲ್ಲವೂ ಆಕೆಯನ್ನು ಮುತ್ತಿಕೊಂಡವು. 2008ರ ಫೆಬ್ರವರಿ 22 ರಂದು ಅಂದಿನ ಬಾರ್ಬಡೋಸ್ ಸರ್ಕಾರ ರಿಹಾನಾಗೆ ಗೌರವ ನೀಡಲೆಂದು “ರಿಹಾನಾ ದಿನಾಚರಣೆ” (ರಿಹಾನಾ ಡೇ) ಆಚರಿಸಿತು. ಅದಾದ ನಂತರ ಪ್ರತಿವರ್ಷ ಫೆ.22ರಂದು ಬಾರ್ಬಡೋಸ್ ದೇಶದಲ್ಲಿ ರಿಹಾನಾ ಡೇ ಆಚರಿಸಲಾಗುತ್ತಿದೆ. ಬದುಕಿರುವಾಗಲೇ, ಅದೂ ಇಷ್ಟು ಸಣ್ಣ ವಯಸ್ಸಿಗೆ ಇಂಥ ಗೌರವ ಎಷ್ಟು ಜನರಿಗೆ ಸಿಕ್ಕೀತು ಹೇಳಿ?

ಇಂಥ ರಿಹಾನಾ ಈಗ ಭಾರತೀಯ ರೈತರ ಪರವಾಗಿ ಮಾತನಾಡಿದ್ದಾರೆ, ಅದು ಈಗ ಜಾಗತಿಕ ಸುದ್ದಿ. ರಿಹಾನಾ ಬೆನ್ನಲ್ಲೇ ಹಲವು ಜಾಗತಿಕ ಸೆಲೆಬ್ರಿಟಿಗಳು ಭಾರತದ ರೈತರ ಪ್ರತಿಭಟನೆಗಳನ್ನು ಬೆಂಬಲಿಸಿ ಹೇಳಿಕೆ ನೀಡುತ್ತಿದ್ದಾರೆ. ನಮ್ಮ ರೈತರ ಕೂಗಿಗೆ ಆನೆ ಬಲ ಬಂದಂತಾಗಿದೆ.‌

ಅಂದಹಾಗೆ ರಿಹಾನಾ ಈ ರೀತಿಯಲ್ಲಿ ಜಾಗತಿಕ ವಿದ್ಯಮಾನಗಳಿಗೆ ಸ್ಪಂದಿಸುವುದು ಹೊಸದೇನೂ ಅಲ್ಲ. ಸೂಡಾನ್, ನೈಜೀರಿಯಾಗಳಲ್ಲಿ ನಡೆಯುತ್ತಿರುವ ಸಾಮಾಜಿಕ ನ್ಯಾಯದ ಹೋರಾಟಗಳನ್ನು ಆಕೆ ಬೆಂಬಲಿಸಿದ್ದರು. ಮ್ಯಾನ್ಮಾರ್ ನ ಬೆಳವಣಿಗೆಗಳ ಕುರಿತೂ ಆಕೆ ಧ್ವನಿ ಎತ್ತಿದ್ದಾರೆ. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ನಂತರ ನಡೆದ ಐತಿಹಾಸಿಕ ಮಹಿಳಾ ರ‌್ಯಾಲಿಯಲ್ಲಿ ರಿಹಾನಾ ಭಾಗವಹಿಸಿದ್ದರು. ಹಲವಾರು ದೇಶಗಳ ಜನರಿಗೆ ವೀಸಾ ನಿರ್ಬಂಧಿಸಿದ ಟ್ರಂಪ್ ಸರ್ಕಾರದ ನಡೆಯನ್ನೂ ಅವರು ಹಿಂದೆ ಕಟುವಾಗಿ ಟೀಕಿಸಿದ್ದರು.

ಭಾರತದ ರೈತ ಹೋರಾಟದ ಕುರಿತು ರಿಹಾನಾ ನೀಡಿರುವ ಹೇಳಿಕೆ ಈಗ ‘ಗೇಮ್ ಚೇಂಜರ್’ ಎಂದೇ ಭಾವಿಸಲಾಗುತ್ತಿದೆ. ರಷ್ಯಾ, ಬ್ರೆಜಿಲ್ ಮತ್ತು ಭಾರತದಲ್ಲಿ ಈ ವರ್ಷದ ಬಹುದೊಡ್ಡ ಜನಹೋರಾಟಗಳು ನಡೆಯುತ್ತಿವೆ. ಆದರೆ ರಷ್ಯಾದ ಪ್ರತಿಭಟನೆಗಳಿಗೆ ಸಿಕ್ಕಷ್ಟು ಮಹತ್ವ ಭಾರತದ ರೈತರ ಪ್ರತಿಭಟನೆಗಳಿಗೆ ದೊರಕಿರಲಿಲ್ಲ. ಈಗ ರಿಹಾನಾ ಅವರ ಒಂದು ಟ್ವೀಟ್ ಎಲ್ಲವನ್ನೂ ಬದಲಿಸಿದೆ.

ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಒತ್ತಡ, ಮುಜುಗರಗಳಿಂದ ತಪ್ಪಿಸಿಕೊಳ್ಳಲು ಇರುವುದು ಏಕೈಕ ದಾರಿ, ರೈತರ ದಾರಿಯಲ್ಲಿ ಕಬ್ಬಿಣದ ಮುಳ್ಳುಗಳನ್ನು ನೆಡುವುದಲ್ಲ. ರೈತರು ಇಟ್ಟಿರುವ ಎರಡೇ ಬೇಡಿಕೆಗಳನ್ನು ಈಡೇರಿಸುವುದು. ಮೂರು ಕರಾಳ ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು, ಎಂಎಸ್ ಪಿಗೆ ಕಾನೂನಿಗೆ‌ ಬಲ ನೀಡಬೇಕು. ರೈತರು ಇನ್ನೇನೂ ಕೇಳುತ್ತಿಲ್ಲ.

ಅದಕ್ಕೆ ಹೊರತಾಗಿ ಸರ್ಕಾರ ಬೇರೆ ಏನನ್ನು ಮಾಡಿದರೂ ಜಗತ್ತಿನಾದ್ಯಂತ ಟೀಕೆಗಳಿಗೆ ಒಳಪಡಲಿದೆ ಮತ್ತು ಇದರ ಪರಿಣಾಮವಾಗಿ ನಮ್ಮ ದೇಶದ ಹೆಸರು, ಮೌಲ್ಯವನ್ನೂ ಕಡಿಮೆ ಮಾಡಿದ ಜವಾಬ್ದಾರಿಯನ್ನು ಮೋದಿ ಸರ್ಕಾರವೇ ಹೊರಬೇಕಾಗುತ್ತದೆ.

ರಿಹಾನ ಟ್ವೀಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending