ದಿನದ ಸುದ್ದಿ
ಜನಸಂಖ್ಯೆ ನಿಯಂತ್ರಣ ; ಗರ್ಭ ನಿರೋಧಕ ಅಳವಡಿಕೆಯಲ್ಲಿ ಕರ್ನಾಟಕಕ್ಕೆ ಅಗ್ರ ಸ್ಥಾನ
ಸುದ್ದಿದಿನಡೆಸ್ಕ್:ಜನಸಂಖ್ಯೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸಿರುವ ಗರ್ಭ ನಿರೋಧಕ ಅಳವಡಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆಯ ಒಡಂಬಡಿಕೆಯೊಂದಿಗೆ ಪ್ರಾಯೋಗಿಕವಾಗಿ ರಾಜ್ಯದ 4 ಜಿಲ್ಲೆಗಳನ್ನು ಗರ್ಭ ನಿರೋಧಕ ಅಳವಡಿಕೆ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಈ ಎಲ್ಲ ಜಿಲ್ಲೆಗಳ ಯೋಜನೆ ಸಂಪೂರ್ಣ ಯಶಸ್ವಿಯಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಡಬ್ಲ್ಯುಎಚ್ಒ ಒಡಂಬಡಿಕೆ ಯೊಂದಿಗೆ 6 ಜಿಲ್ಲೆಗಳಿಗೆ ಯೋಜನೆ ವಿಸ್ತರಣೆಯಾಗಲಿದೆ ಎಂದರು.
ಚಿತ್ರದುರ್ಗದಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ ಜನಸಂಖ್ಯಾ ಸ್ಫೋಟದಿಂದ ಭವಿಷ್ಯದ ಮೇಲೆ ಮಾರಕ ಪರಿಣಾಮ ಬೀರಲಿದೆ ಎಂದು ಹೇಳಿದರು. ಜನಸಂಖ್ಯೆ ನಿಯಂತ್ರಣದಿಂದ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧಿಸಬಹುದು ಎಂದು ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿ ಪಾಟೀಲ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243