ದಿನದ ಸುದ್ದಿ
ಅಶ್ಲೀಲ ಸಿಡಿ ವೈರಲ್ | ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ; ಆರೋಪ ಮುಕ್ತನಾದ ಮೇಲೆ ಸಚಿವ ಸ್ಥಾನ ನೀಡಿ
ಸುದ್ದಿದಿನ, ಬೆಂಗಳೂರು : ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ಆಗಬಾರದೆಂದು ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಅವರಿಗೆ ರವಾನೆ ಮಾಡಿದ್ದು ತಮ್ಮ ನಿಲುವನ್ನು ತಿಳಿಸಿದ್ದಾರೆ.
ಇದನ್ನೂ ಓದಿ | ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್; ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ
ಅಶ್ಲೀಲ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಜುಗರ ತಪ್ಪಿಸಲು, ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪ್ರಕರಣದಲ್ಲಿ ನಾನು ಆರೋಪ ಮುಕ್ತನಾದ ಬಳಿಕ ನನಗೆ ಸಚಿವ ಸ್ಥಾನ ನೀಡಿ ಎಂದು ಸಿಎಂಬಿ.ಎಸ್.ಯಡಿಯೂರಪ್ಪಗೆ ರವಾನಿಸಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243