ದಿನದ ಸುದ್ದಿ
ದಾವಣಗೆರೆ | ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ದಾವಣಗೆರೆ ವಿತರಣಾ ಕೇಂದ್ರದಲ್ಲಿ ಹಾಳಾಗಿರುವ ಪಾಟ್ಹೆಡ್ ಬದಲಾಯಿಸುವ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.07 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಈ ಕೆಳಕಂಡ ಫೀಡರ್ ವ್ಯಾಪ್ತಿಯಲ್ಲಿ ಬರುವ ನಗರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್-1 ಎಸ್.ವಿ.ಟಿ. ಫೀಡರ್ ವ್ಯಾಪ್ತಿಯ ಎಂ.ಸಿ.ಸಿ. ಬಿ. ಬ್ಲಾಕ್, ಮಾಮಾಸ್ ಜಾಯಿಂಟ್ ರಸ್ತೆ, ಎಫ್-2 ಎಂ.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ಶಾಮನೂರು ರಸ್ತೆ, ಬಿ.ಐ.ಇ.ಟಿ. ಕಾಲೇಜು, ನೀಜಲಿಂಗಪ್ಪ ಬಡಾವಣೆ. ಎಫ್-5 ಮೌನೇಶ್ವರ ಫೀಡರ್ ವ್ಯಾಪ್ತಿಯ ಮೌನೇಶ್ವರ ಬಡಾವಣೆ, ಎಂ.ಯು.ಎಸ್.ಎಸ್. ಕಾಲೋನಿ, ನಿಟ್ಟುವಳ್ಳಿ, ನಿಟ್ಟುವಳ್ಳಿ ಹೊಸ ಬಡಾವಣೆ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಎಫ್-6 ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ.
ಕೆ.ಎಸ್.ಆರ್.ಟಿ.ಸಿ., ತಾಲೂಕು ಆಪೀಸ್, ಅಗ್ನಿ ಶಾಮಕ ಠಾಣೆ. ಏಫ್-7 ಜಿ & ಎಸ್. ಫೀಡರ್ ವ್ಯಾಪ್ತಿಯ ಗಣೇಶ್ ಮಿಲ್, ಭಗತ್ ಸಿಂಗ್ ನಗರ, ಕೆ.ಎಸ್.ಆರ್.ಟಿ.ಸಿ. ಸುತ್ತಮುತ್ತ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ. ಎಫ್-8 ಕೆ.ಟಿ.ಜೆ. ಫೀಡರ್ ವ್ಯಾಪ್ತಿಯ ಕೆ.ಟಿ.ಜೆ. ನಗರ, ಡಾಂಗೇ ಪಾರ್ಕ್, ಶಿವಪ್ಪ ವೃತ್ತ, ತ್ರಿಶೂಲ್ ರಸ್ತೆ, ಕೆ.ಬಿ. ಬಡಾವಣೆ, ಲಾಯರ್ ರಸ್ತೆ, ಅಶೋಕ ರಸ್ತೆ. ಎಫ್-9 ಪಿ.ಜೆ.ಫೀಡರ್ ವ್ಯಾಪ್ತಿಯ ಪಿ.ಜೆ. ಬಡಾವಣೆ, ರಾಂ. & ಕೋ ವೃತ್ತ, ಪೋಲಿಸ್ ಕ್ವಾಟ್ರರ್ಸ್, ಚರ್ಚ್ ರಸ್ತೆ, ಈದ್ಗಾ ಕಾಂಪ್ಲೆಕ್ಸ್, ಅರುಣಾ ಚಿತ್ರ ಮಂದಿರ.
ಎಫ್-10 ಸಿ.ಜಿ.ಎಚ್. ಫೀಡರ್ ವ್ಯಾಪ್ತಿಯ ವಿನೋಭ ನಗರ, ಸಿ.ಜೆ. ಆಸ್ಪತ್ರೆ, ಬಾಪೂಜಿ ಆಸ್ಪತ್ರೆ, ಎಂ.ಸಿ.ಸಿ. ಎ ಬ್ಲಾಕ್, ಪಿ.ಜೆ. ಬಡಾವಣೆ, ರಾಂ. & ಕೋ ವೃತ್ತ, ಏಫ್-12 ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ, ಕುಂದವಾಡ ವಾಟರ್ ಸಪ್ಲೇ, ಎಫ್-4 ಬಿ.ಟಿ. ಫೀಡರ್ ವ್ಯಾಪ್ತಿಯ ರೆಹಮಾನ್ ರ್ರಸ್ತೆ, ದೇವೇಂದ್ರಪ್ಪ ಮಿಲ್, ಕೊರಚರ ಹಟ್ಟಿ, ಯಲ್ಲಮ್ಮ ಪಾರ್ಕ್, ದೇವರಾಜ್ ಕಾಟ್ರರ್ಸ್, ಇಂದಿರಾ ನಗರ, ಕಾರ್ಲ್ಮಾಕ್ರ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ, ಮಂಡಕ್ಕಿ ಬಟ್ಟಿ, ಶಿವಪಾರ್ವತಿ ನಗರ, ಕೋಳಿಚನ್ನಪ್ಪ ಮಿಲ್.
ಎಫ್-11 ಎಲ್.ಎಫ್-1 ಫೀಡರ್ ವ್ಯಾಪ್ತಿಯ ಮಂಡೀ ಪೇಟೆ, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್.ಆರ್. ರಸ್ತೆ, ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿ.ಟಿ. ಗಲ್ಲಿ, ವಿಜಯಲಕ್ಷಿ ರಸ್ತೆ, ಎಂ.ಜಿ. ರಸ್ತೆ, ಗೂಡ್ಶೆಡ್ಡ್ ರಸ್ತೆ, ಗಡಿಯಾರ ಕಂಬ, ಆಜಾದ್ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಅಮೆಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ ಲೇಔಟ್ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ4 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ