ದಿನದ ಸುದ್ದಿ
ಕೃಷಿ ಸಿಂಚಾಯಿ ಯೋಜನೆ | ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2020-21ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತ ಬಳಕೆಗಾಗಿ ಹನಿ ನೀರಾವರಿ ಅಳವಡಿಸಲು ಆಸಕ್ತ ಮತ್ತು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತಬಾಂಧವರಿಗೆ ಶೇ.90 ರಷ್ಟು ಸಹಾಯಧನ ಲಭ್ಯವಿದ್ದು ರೈತರು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬಹುದು.
ಇದನ್ನೂ ಓದಿ | Breaking | ಕೇರಳ ರೈಲು ಪ್ರಯಾಣಿಕರಿಂದ 100 ಕ್ಕೂ ಹೆಚ್ಚು ಜೆಲಾಟಿನ್ ಸ್ಟಿಕ್ಗಳು, 350 ಡಿಟೋನೇಟರ್ಗಳನ್ನು ವಶಕ್ಕೆ ಪಡೆದ ಪೊಲೀಸ್
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243