ರಾಜಕೀಯ
ಯೋಧರ ಸಂತಾಪ ಸಭೆಯನ್ನು ಸ್ವಾರ್ಥ ರಾಜಕೀಯಕ್ಕೆ ಬಳಸುವ ದೇಶದ್ರೋಹಿಗಳಿಗೆ ಧಿಕ್ಕಾರ : ಪ್ರಕಾಶ್ ರೈ ಆಕ್ರೋಶ
ಸುದ್ದಿದಿನ ಡೆಸ್ಕ್ : ನಿನ್ನೆ ಬೆಂಗಳೂರಿನಲ್ಲಿ ಹುತಾತ್ಮಯೋಧರಿಗೆ ಸಂತಾಪ ಸೂಚಿಸಲು ಖಾಸಗಿ ಸುದ್ದಿವಾಹಿನಿಯೊಂದು ಕಾರ್ಯಕ್ರಮ ಏರ್ಪಡಿಸಿತ್ತು. ಈ ಸಂತಾಪ ಸಭೆಯಲ್ಲಿ ಪ್ರಕಾಶ್ ರೈ ಮಾತನಾಡುವ ಸಂದರ್ಭದಲ್ಲಿ ‘ ಡೋಂಗೀ ದೇಶಭಕ್ತರು’ ಅವರ ಮಾತುಗಳನ್ನು ಸರಿಯಾಗಿ ಕೇಳಿಸಿಕೊಳ್ಳುವ ವ್ಯವ್ಯಧಾನವಿಲ್ಲದೆ ಅರೆ ಪ್ರಜ್ಞೆ ಯಲ್ಲಿರುವವರಂತೆ ವರ್ತಿಸಿದ್ದಾರೆ.
ಈ ದುರ್ಘಟನೆಯ ಲಾಭವನ್ನು ಪಡೆಯಲು ಮೋದಿ ಮತ್ತೊಮ್ಮೆ ಅಸ್ತಿತ್ವಕ್ಕೆ ಬರಲೆಂಬ ಉದ್ದೇಶದಿಂದ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಪುಡಿ ರಾಜಾಕೀಯ ರೌಡಿಗಳ ವರ್ತಿಸಿರುವುದನ್ನು ಖಂಡಿಸಿ ಪ್ರಕಾಶ್ ರೈ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.
ಪ್ರಕಾಶ್ ರೈ ಟ್ವೀಟ್
When a Nation mourns n talks the need to be united ..SHAME on these who are politicising a tragedy .. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರನ್ನು ಸ್ಮರಿಸುತ್ತ…ನಾವು ಭಾರತಿಯರೆಲ್ಲ ಒಂದಾಗಿರಬೇಕೆಂದು ಮಾತನಾಡುತ್ತಿದ್ದ ಸಂತಾಪ ಸಭೆಯನ್ನು .. ಸ್ವಾರ್ಥ ರಾಜಕೀಯಕ್ಕೆ ಬಳಸುವ ಈ ದೇಶದ್ರೋಹಿಗಳಿಗೆ ಧಿಕ್ಕಾರ .. JAI HIND pic.twitter.com/4xSgP987i5
— Prakash Raj (@prakashraaj) February 16, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401