ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ನಿನ್ನೆ ಪ್ರಮಾಣ ವಚನ ಸ್ವೀಕರಿದ್ದು, ಅವರಿಗೆ ದೇಶ-ವಿದೇಶಗಳಿಂದ ಅಭಿನಂದನೆ ಮಹಾಪೂರವೇ ಹರಿದು ಬರುತ್ತಿದೆ. ಬಳಿಕ ಮಾತನಾಡಿದ ನೂತನ ರಾಷ್ಟ್ರಪತಿ ಅವರು, ದೇಶ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವಾಗ ದೇಶ ತಮ್ಮನ್ನು ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಮಾಡಿದೆ ಎಂದು ನುಡಿದರು. ಕಾರ್ಗಿಲ್ ವಿಜಯ ದಿವಸ್ ಮುನ್ನಾದಿನವಾದ ನಿನ್ನೆ ದೇಶದ ಜನತೆಗೆ ಶುಭಾಶಯ ಕೋರಿ, ಈ ದಿನ ನಮ್ಮ ಸಶಸ್ತ್ರ ಪಡೆಗಳ ಶೌರ್ಯದ ಸಂಕೇತವಾಗಿದೆ ಎಂದರು.
- ರಾಜ್ಯದ ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅರಣ್ಯ ಮತ್ತು ಜೀವಿಶಾಸ್ತ್ರ ಇಲಾಖೆ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮಕ್ಕೆ ಕಾರ್ಕಳದ ಮಣಿ ರಾಜ ಶೆಟ್ಟಿ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಗೆ ಭಟ್ಕಳದ ಗೋವಿಂದ ಜಟ್ಟಪ್ಪ ನಾಯ್ಕ, ಮೃಗಾಲಯ ಪ್ರಾಧಿಕಾರಕ್ಕೆ ಮೈಸೂರಿನ ಕುವೆಂಪು ನಗರದ ಎಂ. ಶಿವಕುಮಾರ್, ಅರಣ್ಯ ಅಭಿವೃದ್ಧಿ ನಿಗಮಕ್ಕೆ ಶಿಕಾರಿಪುರದ ಎನ್. ರೇವಣ್ಣಪ್ಪ ಕೊಳಗಿ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರನ್ನಾಗಿ ಮಡಿಕೇರಿಯ ಎಂ.ಎನ್. ರವಿ ಕಾಳಪ್ಪ, ಎಂ.ಸಿ ಅಂಡ್ ಎ ಗೆ ಗದಗದ ಕುರ್ತಕೋಟೆಯ ಎಂ.ಎಸ್. ಕರಿಗೌಡ್ರ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮಕ್ಕೆ ಶಂಕರ ಬಿ ಪಾಟೀಲ್ ಮುನೇನ ಕೊಪ್ಪ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಕೆ.ವಿ. ನಾಗರಾಜ್ ನೇಮಕ ಮಾಡಲಾಗಿದೆ.
- ದೇಶದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ್ ಜೋಶಿ ರಾಜ್ಯಸಭೆಗೆ ನಿನ್ನೆ ತಿಳಿಸಿದ್ದಾರೆ. ಈ ಕುರಿತು ಲಿಖಿತ ಉತ್ತರ ನೀಡಿರುವ ಅವರು, 2020-21ನೇ ಸಾಲಿನಲ್ಲಿ 716 ದಶಲಕ್ಷ ಟನ್ ಕಲ್ಲಿದ್ದಲು ಉತ್ಪಾದನೆಯಾಗಿದ್ದು, ಕಳೆದ ವರ್ಷ 778 ದಶಲಕ್ಷ ಟನ್ಗೆ ಏರಿಕೆಯಾಗಿದೆ. ಈ ವರ್ಷದ ಜೂನ್ ಅಂತ್ಯದ ವೇಳೆಗೆ 204ದಶಲಕ್ಷ ಟನ್ ಕಲ್ಲಿದ್ದಲು ಉತ್ಪಾದನೆಯಾಗಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿ 166 ದಶಲಕ್ಷ ಟನ್ ಉತ್ಪಾದನೆಯಾಗಿತ್ತು. ಕಲ್ಲಿದ್ದಲು ಉತ್ಪಾದನೆಗೆ ಸರ್ಕಾರ ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದು, ಕೋಲ್ ಇಂಡಿಯಾ ಲಿಮಿಟೆಡ್ ಮೂಲಕ ಕಳೆದ ವರ್ಷ 52 ಕಲ್ಲಿದ್ದಲು ಯೋಜನೆಗಳಿಗೆ ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
- ಇಂದು ಕಾರ್ಗಿಲ್ ವಿಜಯ ದಿವಸ. ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕ ಟ್ರಸ್ಟ್ನಿಂದ ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಬೆಳಗ್ಗೆ 4.45ಕ್ಕೆ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುತಾತ್ಮ ವೀರಯೋಧರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.
- ದೇಶದ ೭೫ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಅಗಸ್ಟ್ 11 ರಿಂದ 15 ನೇ ತಾರೀಖಿನವರೆಗೆ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ದೇಶಭಕ್ತಿ ಮೆರೆಯಲು ಬೆಂಗಳೂರು ನಗರ ವ್ಯಾಪ್ತಿಗೆ ರಾಜ್ಯ ಸರ್ಕಾರ 2 ಲಕ್ಷ ರಾಷ್ಟ್ರಧ್ವಜಗಳನ್ನು ಬಿಬಿಎಂಪಿಗೆ ಹಂಚಿಕೆ ಮಾಡಿದೆ. ಕೇಂದ್ರ ಸರ್ಕಾರದ ಹರ್ ಘರ್ ಮೆ ತಿರಂಗಾ ಎಂಬ ಅಭಿಯಾನದಡಿ ರಾಷ್ಟ್ರಧ್ವಜಗಳನ್ನು ಪಾಲಿಕೆಗೆ ರಾಜ್ಯ ಸರ್ಕಾರ ಹಂಚಿಕೆ ಮಾಡಿದೆ.
- ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು’ ಎಂದರು.
- ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಒಟ್ಟಿಗೆ ಸೇರಿ ಸಮರ್ಪಕವಾಗಿ ಕೆಲಸ ಮಾಡುತ್ತಿದ್ದು, ಹಂತ-ಹಂತವಾಗಿ ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
- ಇಂದಿನ ಸ್ವಾತಂತ್ರ್ಯದ ಫಲ, ನಮ್ಮ ಹಿರಿಯರ ತ್ಯಾಗ, ಬಲಿದಾನದ ಸಂಕೇತವಾಗಿದೆ. ಭವಿಷ್ಯದ ಅರಿವು ಮೂಡಬೇಕಾದರೆ, ಇತಿಹಾಸದ ಅವಲೋಕನ ಮಾಡಿಕೊಳ್ಳಬೇಕು ಎಂದು ಗಣಿ, ಭೂ ವಿಜ್ಞಾನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
- ವಿಶ್ವ ಅಥ್ಲಿಟಿಕ್ ಚಾಂಪಿಯನ್ ಶಿಪ್ನ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಜತ ಪದಕ ಗೆದ್ದ ಭಾರತದ ನೀರಜ್ ಚೋಪ್ರಾ ಸಾಧನೆಗೆ ಲೋಕಸಭೆಯಲ್ಲಿ ನಿನ್ನೆ ಸ್ಪೀಕರ್ ಓಂ ಬಿರ್ಲಾ, ಪ್ರಶಂಸೆ ವ್ಯಕ್ತಪಡಿಸಿದರು. ಅಥ್ಲಿಟಿಕ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಇದು ಪ್ರಥಮ ಬೆಳ್ಳಿ ಪದಕವಾಗಿದೆ. ಈ ಗೆಲುವಿನಿಂದ ದೇಶಾದ್ಯಂತ ಜನರಲ್ಲಿ ಉತ್ಸಾಹ ಹೆಚ್ಚಾಗಿದ್ದು, ಚೋಪ್ರಾ ಅವರಿಗೆ ಸದನದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್


