Connect with us

ಕ್ರೀಡೆ

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಸದೃಢ ರಾಷ್ಟ್ರ ನಿರ್ಮಿಸಲು ಪ್ರೇರಣೆಯಾಗಲಿದೆ

Published

on

  • ಪ್ರತಿಭಾ ವಿ ಪೂಜಾರ,ಪ್ರಥಮ ವರ್ಷದ ಸ್ನಾತಕೋತ್ತರ ಪದವಿ, ವಿದ್ಯಾರ್ಥಿನಿ,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಬೆಂಗಳೂರು ವಿಶ್ವವಿದ್ಯಾಲಯ

ಕ್ರೀಡೆ ಎಂಬುದು ಕೇವಲ ವ್ಯಕ್ತಿಯ ಆರೋಗ್ಯ ಅಥವಾ ಮನರಂಜನೆಯ ಭಾಗ ಮಾತ್ರವಲ್ಲ. ಇದೊಂದು ಊರು, ನಾಡು, ದೇಶದ ಸಂಸ್ಕೃತಿ ಪರಂಪರೆಯನ್ನು ಜಗತ್ತಿಗೆ ತೋರಿಸುವಂತದ್ದು, ಅಂತರ್ ಮಟ್ಟ ಹಾಗೂ ಜಿಲ್ಲಾ ಮಟ್ಟ, ರಾಜ್ಯ ಮತ್ತು ರಾಷ್ಟ್ರ ಮಟ್ಟಗಳಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಿ ಗೆದ್ದ ತಂಡಗಳನ್ನು ಗೌರವಿಸಲಾಗುತ್ತದೆ.

ಒಂದು ಭಾಗದ ಜನ ಇನ್ನೊಂದು ಭಾಗದ ಜನರೊಂದಿಗೆ ಬೆರೆಯುವ ಪರಸ್ಪರ ಸ್ಪರ್ಧಾತ್ಮಕ ಭಾವನೆಯೊಂದಿಗೆ ಬರೆಯುವ, ಪರಸ್ಪರ ಸ್ಪರ್ಧಾತ್ಮಕ ಭಾವನೆಯೊಂದಿಗೆ ತಮ್ಮ ಶ್ರೇಷ್ಠತೆ, ಗಟ್ಟಿತನವನ್ನು ತೋರಿಸುವ ಪ್ರಕ್ರಿಯೆಯು ಕೂಡ ನಡೆಯುತ್ತದೆ. ಹಾಗೆಯೇ ಒಲಿಂಪಿಕ್ಸ್, ಕಾಮನ್ ವೆಲ್ತ್, ಏಷ್ಯದ ಕ್ರೀಡಾಕೂಟಗಳಲ್ಲಿ ಭಾರತೀಯರು ಗೆದ್ದು, ಸಾಧನ ಗೈದು ತಾಕತ್ತಿನ ಪರಾಕಾಷ್ಟ ಮರೆದಿದ್ದಾರೆ.

ಅದೇ ರೀತಿಯಲ್ಲಿ ಹೇಳುವುದಾದರೆ ಬಾಕ್ಸಿಂಗ್, ಕ್ರಿಕೆಟ್, ಕಬ್ಬಡ್ಡಿ, ಕುಸ್ತಿ, ವೇಟ್ ಲಿಫ್ಟಿಂಗ್, ಶಾರ್ಪ್ ಶೂಟಿಂಗ್, ವ್ರೆಸ್ಲಿಂಗ್, ಹಾಕಿ, ಬ್ಯಾಡ್ಮಿಂಟನ್, ಟೆನ್ನಿಸ್ ಹೀಗೆ ಹಲವಾರು ಮುಂತಾದ ಆಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಗೆದ್ದು ಬೀಗಿದ ಆಟಗಾರರ ದೊಡ್ಡ ಪಟ್ಟಿಯೇ ಇದ್ದು, ಇವರೆಲ್ಲಾ ವಿಶ್ವ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ.

ಇದೆಲ್ಲಾ ಸಾಧನೆ ಸಾಧ್ಯವಾಗೋದು ದಿನ ನಿತ್ಯದ ಪ್ರಯತ್ನ, ಕಠಿಣ ಪರಿಶ್ರಮ, ಛಲ ಹಾಗೂ ದೃಢ ನಿರ್ಧಾರದಿಂದ ಆದರೆ, ಯಾರು ಕ್ರೀಡೆಯನ್ನೇ ವೃತ್ತಿ ಯನ್ನಾಗಿ ಸ್ವೀಕರಿಸುತ್ತಾರೋ ಅದೇ ಅವರ ಜೀವನವಾಗುತ್ತದೆ. ಯಾರು ಕ್ರೀಡೆಯನ್ನು ಪ್ರವೃತ್ತಿಯನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾರೋ. ಅವರಿಗೆ ಕ್ರೀಡೆ ಹವ್ಯಾಸವಾಗುತ್ತದೆ.

ಜೀವನವನ್ನೇ ಕ್ರೀಡೆಗಾಗಿ ಮಿಸಲಿಡುವುದಕ್ಕೂ, ಒಂದೆರಡು ಗಂಟೆ ಕ್ರೀಡೆಗಾಗಿ ಮೀಸಲಿಡುವುದಕ್ಕೂ ತುಂಬಾ ವ್ಯತ್ಯಾಸ ವಿದೆ. ಹಾಗಾಗಿ ಕ್ರೀಡಾ ಜೀವನದಲ್ಲಿ ಯಾವುದೇ ಭಾಗವಾದರೂ, ಅದರಿಂದ ಲಾಭವೆ ಹೊರತು ನೋವಂತು ಖಂಡಿತ ಇಲ್ಲ.

ಪ್ರತಿಭಾ ವಿ ಪೂಜಾರ

ಕ್ರೀಡೆ ಮತ್ತು ಆರೋಗ್ಯ: ಹಲವು ರೋಗಗಳಿಗೆ ಮದ್ದು ಯೋಗ ಅಂತಾ ಹೇಳತಾರೆ.ಹಾಗೆಯೇ ಹಲವು ಕಾಯಿಲೆಗಳಿಗೆ ಆಟವೇ ರಾಮಬಾಣ. ನಾವು ಆಡುವ ಪ್ರತಿಯೊಂದು ಆಟವೂ ನಮ್ಮ ದೈನಂದಿನ ಹಾಗೂ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕ್ರೀಡೆಯು ದೇಹಕ್ಕೆ ನಿಯಮಿತ ವ್ಯಾಯಾಮ ಆಗುತ್ತದೆ. ಹೆಚ್ಚಿನ ತೂಕವನ್ನು ತೊಡೆದು ಹಾಕುತ್ತದೆ. ಮನಸ್ಸು ಮತ್ತು ದೇಹವನ್ನು ಚೇತನ್ಯಮಯವಾಗಿಸುತ್ತದೆ. ಮೂಳೆ, ಸ್ನಾಯುಗಳನ್ನು ಬಲಪಡಿಸುತ್ತದೆ.

ಜನರಲ್ಲಿ ಶಿಸ್ತು, ಒಗ್ಗಟ್ಟು, ಸಂಘಟನಾತ್ಮಕ ಶಕ್ತಿಯನ್ನು ಬೆಳೆಸಲಾಗುತ್ತದೆ. ನಿದ್ರಾಹೀನತೆ, ಒತ್ತಡವನ್ನು ತೆಗೆದು ಹಾಕುತ್ತದೆ. ಆರೋಗ್ಯದ ಸಮತೋಲನ ಕಾಯ್ದುಕೊಳ್ಳಲು ಸಹಕಾರಿಯಾಗಿದೆ.
ಮನುಷ್ಯನ ಬೆಳವಣಿಗೆ, ಆರೋಗ್ಯಕರ ಜೀವನ ಶೈಲಿ ರೂಢಿಯಾಗಬೇಕಾದರೆ ಬಾಲ್ಯದಿಂದಲೇ ಉತ್ತಮ ಚಟುವಟಿಕೆಗಳನ್ನು ರೂಡಿ ಮಾಡಿಸಬೇಕಾಗುತ್ತದೆ.

ಒಟ್ಟಿನಲ್ಲಿ ಕ್ರೀಡೆಗಳು ಪರಂಪರೆಯ ಜತೆಗೆ ಸಾಗಿ ಬಂದಿದ್ದು, ಜಗತ್ತಿನ ತುಂಬಾ ವಿಸ್ತಾರಗೊಂಡಿದೆ. ಆಯಾ ದೇಶಗಳು ಒಂದೊಂದು ಕ್ರೀಡೆಯನ್ನು ಹೊಂದಿದ್ದು, ಜಿಲ್ಲಾ, ತಾಲೂಕು, ರಾಜ್ಯ ಹಾಗೂ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಅನ್ಯ ರಾಜ್ಯ ರಾಷ್ಟ್ರದ ಜನರೊಡನೆ ಸ್ನೇಹ ಉಂಟಾಗುತ್ತದೆ. ಹಾಗೂ ಸಂಪರ್ಕ ಉಂಟಾಗುತ್ತದೆ. ಬದುಕಿನಲ್ಲಿ ಸೋಲು ಗೆಲುವು ನಮ್ಮ ದೃಷ್ಟಿಯಲ್ಲಿ ಸ್ವೀಕರಿಸಲು ಬೆಳವಣಿಗೆಯಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಟಿ-20 ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ದೆಹಲಿಗೆ ಆಗಮನ ; ಸಂಜೆ ರೋಡ್ ಶೋ

Published

on

ಸುದ್ದಿದಿನಡೆಸ್ಕ್:ಟಿ-20ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ಬೆಳಗ್ಗೆ ರಾಜಧಾನಿ ದೆಹಲಿಗೆ ಆಗಮಿಸಿತು. ವಿಮಾನ ನಿಲ್ದಾಣದಲ್ಲಿ ಭಾರತದ ಆಟಗಾರರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಪಂದ್ಯಾವಳಿಯ ಫೈನಲ್ ಪಂದ್ಯ ನಡೆದ ಬಾರ್ಬಡೋಸ್‌ನಿಂದ ತಂಡವು ಹಿಂತಿರುಗಿತು.

ಬೆರಿಲ್ ಚಂಡಮಾರುತದಿಂದಾಗಿ ಭಾರತ ತಂಡದ ಆಗಮನ ವಿಳಂಬವಾಯಿತು. ರಾಷ್ಟ್ರದ ರಾಜಧಾನಿಯಲ್ಲಿ ಭಾರತೀಯ ತಂಡವನ್ನು ಸ್ವಾಗತಿಸಲು ಕ್ರಿಕೆಟ್ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ಮುಂಬೈಗೆ ತೆರಳುವ ಮುನ್ನ ಭಾರತ ತಂಡ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದೆ.

ಚಾಂಪಿಯನ್ ತಂಡ ಮುಂಬೈನಲ್ಲಿ ಇಂದು ಸಂಜೆ ತೆರೆದ ಬಸ್‌ನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ -ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ.

ಸಂಜೆ 5ರಿಂದ 7ರವರೆಗೆ ನಾರಿಮನ್ ಪಾಯಿಂಟ್‌ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ವಿಜಯಯಾತ್ರೆ ನಡೆಯಲಿದೆ. ಅದರ ನಂತರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಲಿದ್ದು, ಅಲ್ಲಿ ಬಿಸಿಸಿಐ ಭಾರತ ತಂಡಕ್ಕೆ ಬಹುಮಾನ ಮೊತ್ತವನ್ನು ನೀಡಲಿದೆ. ಟಿ-20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ರೋಡ್ ಶೋಗೆ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

11 ವರ್ಷಗಳ ನಂತರ ಭಾರತ ತಂಡಕ್ಕೆ ಐಸಿಸಿ ಟಿ-20 ವಿಶ್ವಕಪ್ ಕಿರೀಟ ; ಗಣ್ಯರ ಮೆಚ್ಚುಗೆ

Published

on

ಸುದ್ದಿದಿನಡೆಸ್ಕ್:ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡ, 17 ವರ್ಷಗಳ ನಂತರ ಐಸಿಸಿ ಪುರುಷರ ಟಿ-20 ವಿಶ್ವಕಪ್ ಗೆದ್ದಸಾಧನೆ ಮಾಡಿದೆ.

ಭಾರತ ನೀಡಿದ 177 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತಗೊಂಡಿತು. ದಕ್ಷಿಣ ಆಫ್ರಿಕಾ ಪರ ಹೆನ್ರಿಚ್ ಕ್ಲಾಸೆನ್ 52 ರನ್ ಗಳಿಸಿದರೆ, ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ 3, ಜಸ್ ಪ್ರಿತ್ ಬುಮ್ರಾ ಮತ್ತು ಅರ್ಷ್ ದೀಪ್ ಸಿಂಗ್ ತಲಾ 2 ವಿಕೆಟ್ ಪಡೆದರು.

ಟೂರ್ನಿಯಲ್ಲಿ ಅತ್ಯುತ್ತಮ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಸಹಜವಾಗಿಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಹಾಗೆಯೇ 8 ಪಂದ್ಯಗಳಿಂದ 15 ವಿಕೆಟ್ ಉರುಳಿಸಿದ ವೇಗಿ ಜಸ್ ಪ್ರಿತ್ ಬುಮ್ರಾ ಟೂರ್ನಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. 2007ರ ನಂತರ ಭಾರತ ಟಿ20 ವಿಶ್ವಕಪ್ ಗೆದ್ದರೆ, 2013ರ ಚಾಂಪಿಯನ್ಸ್ ಟ್ರೋಫಿ ಬಳಿಕ ಐಸಿಸಿ ಟ್ರೋಫಿ ತನ್ನದಾಗಿಸಿಕೊಂಡಿದೆ.

ಈ ಮಧ್ಯೆ, ಭಾರತ ತಂಡ 2ನೇ ಬಾರಿ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಕ್ರಿಕೆಟ್ ನ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಪ್ರಕಟಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending