ದಿನದ ಸುದ್ದಿ

ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಕ್ರಯೋಜನಿಕ್ ಇಂಜಿನ್ ತಯಾರಿಕಾ ಘಟಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮೂರು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನಲ್ಲಿ ಇಂದು ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್-ಎಚ್.ಎ.ಎಲ್. ದೇಶೀಯವಾಗಿ ನಿರ್ಮಿಸುತ್ತಿರುವ ಕ್ರಯೋಜನಿಕ್ ಇಂಜಿನ್ ತಯಾರಿಕಾ ಘಟಕವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಈ ವೇಳೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರು, ರಕ್ಷಣಾ ಇಲಾಖೆಯ ಮುಖ್ಯಸ್ಥರು ಉಪಸ್ಥಿತರಿರುತ್ತಾರೆ.
ಅಪರಾಹ್ನ ಬೆಂಗಳೂರಿನ ಸೇಂಟ್ ಜೋಸೆಪ್ ವಿಶ್ವವಿದ್ಯಾಲಯದ ಪ್ರಧಾನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ನಂತರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ರಾಜ್ಯ ಸರ್ಕಾರ ಆಯೋಜಿಸಿರುವ ನಾಗರಿಕ ಪೌರ ಸನ್ಮಾನ ಸಮಾರಂಭದಲ್ಲಿ ರಾಷ್ಟ್ರಪತಿ ಅವರು ಸನ್ಮಾನ ಸ್ವೀಕರಿಸುವ ಕಾರ್ಯಕ್ರಮವಿದೆ. ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ರಾಜಭವನದ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ಕೆಲವು ನಿರ್ಬಂಧ ವಿಧಿಸಲಾಗಿದೆ. ಹಾಗೆಯೇ, ಸುತ್ತಮುತ್ತಲೂ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version