ದಿನದ ಸುದ್ದಿ
ರಾಷ್ಟ್ರಪತಿ ರಾಮನಾಥ್ ಕೋವಿಂದ್ 2 ದಿನಗಳ ಭೇಟಿಗಾಗಿ ಇಂದು ಬೆಂಗಳೂರಿಗೆ ಆಗಮನ
ಸುದ್ದಿದಿನ ಡೆಸ್ಕ್ : ಎರಡು ದಿನಗಳ ಭೇಟಿಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರೀಯ ಸೈನಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗಿಯಾಗಲಿದ್ದಾರೆ.
ಬೆಂಗಳೂರಿನ ಹೊರವಲಯದ ಕನಕಪುರ ರಸ್ತೆಯ ಬಳಿ ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ತಿರುಪತಿ ಶ್ರೀನಿವಾಸ ದೇವಾಲಯವನ್ನು ರಾಷ್ಟ್ರಪತಿ ಅವರು ನಾಡಿದ್ದು, ಮಂಗಳವಾರ ಲೋಕಾರ್ಪಣೆ ಮಾಡಲಿದ್ದು, ಬಳಿಕ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243