ದಿನದ ಸುದ್ದಿ
ಪ್ರಾಣಿಗಳ ಮೇಲೆ ನಡೆಯುವ ಅಮಾನವೀಯ ಕೃತ್ಯಗಳನ್ನು ತಡೆಯಲು ತಿಳಿದುಕೊಳ್ಳಲೇ ಬೇಕಾದ ಪ್ರಾಣಿ ಕಲ್ಯಾಣ ಕಾನೂನುಗಳಿವು : ಮಿಸ್ ಮಾಡ್ದೆ ಓದಿ
- ಡಾ.ಕಮಲೇಶ್ ಕುಮಾರ್ ಕೆ ಎಸ್, ಪಶುವೈದ್ಯಾಧಿಕಾರಿಗಳು, ಶಿವಮೊಗ್ಗ
ಹಿಂದಿನಿಂದಲೂ ತಮ್ಮ ಪಾಡಿಗೆ ತಾವು ಜೀವಿಸುತ್ತಿದ್ದ ವನ್ಯ ಪ್ರಾಣಿಗಳನ್ನು ನಾವು ನಮ್ಮ ಅನುಕೂಲಕ್ಕೆ ತಕ್ಕಂತೆ ಎಷ್ಟೋ ಪ್ರಾಣಿಗಳನ್ನು ಪಳಗಿಸಿ ನಾಡು ಪ್ರಾಣಿಗಳನ್ನಾಗಿ ಪರಿವರ್ತಿಸಿದ್ದೇವೆ. ಮಾತು ಬಾರದ ಮೂಕ ಜೀವಿಗಳನ್ನು ಮನುಷ್ಯರಾದ ನಾವು ನಮ್ಮ ಅನುಕೂಲಕ್ಕೆ ತಕ್ಕಂತೆ ನಮ್ಮ ಸ್ವಾರ್ಥಕ್ಕಾಗಿ ಜೀವನ ನಡೆಸಲು, ಆರ್ಥಿಕವಾಗಿ ಸದೃಢವಾಗಲು, ಆಟವಾಡಲು, ನಮ್ಮ ಜೀವನದ ಒಡನಾಡಿಗಳಾಗಿ, ಮನರಂಜನೆ ಪಡೆಯಲು ಹಾಗು ಸಾಂಪ್ರದಾಯಿಕವಾಗಿ ಬಂದಿರುವ ಕಾರ್ಯಗಳನ್ನು ಮಾಡಲು ಬಳಸಿಕೊಳ್ಳುತ್ತಿದ್ದೇವೆ. ಇಷ್ಟೆಲ್ಲಾ ಆದರೂ ಅವುಗಳನ್ನು ಸರಿಯಾಗಿ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲೆಯೇ ಇದೆ ಅಲ್ಲವೇ, ಎಲ್ಲವೂ ತಿಳಿದಿದ್ದರು ಸ್ವಾರ್ಥಿಗಳಾದ ಕೆಲವರು ಮಾಡುತ್ತಿರುವುದಾದರು ಏನು?
ಅದುವೆ ಹಿಂಸೆ..!
ಇತ್ತೀಚೆಗಷ್ಟೇ ಕೇರಳ, ಹಿಮಾಚಲ್ ಪ್ರದೇಶ ಹಾಗೂ ಛತ್ತೀಸ್ ಗಡದಲ್ಲಿ ನಡೆದ ಅಮಾನವೀಯ ಕೃತ್ಯಗಳು ಮಾನವೀಯತೆಯನ್ನು ಮೀರಿವೆ. ಛತ್ತೀಸ್ಗಡ ರಾಜ್ಯದ ರಾಯಪುರದ ಲೀಲಾಂಬ ಹಳ್ಳಿಯಲ್ಲಿ ಒಂದು ಹಸುವಿನ ಬಾಯಿಯಲ್ಲಿ, ಹಿಮಾಚಲ್ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ದಹಾದ್ ಗ್ರಾಮದಲ್ಲಿ ಕೂಡ ಒಂದು ಗರ್ಭಿಣಿ ಹಸುವಿನ ಬಾಯಿಯಲ್ಲಿ ಸ್ಪೋಟಕವನ್ನಿಟ್ಟು ಘಾಸಿಗೊಳಿಸಿದ್ದಾರೆ.
ಹಾಗೂ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆಹಾರ ಅರಸಿ ಬಂದ ಗರ್ಭಿಣಿ ಆನೆಯ ಬಾಯಿಗೆ ತಿನ್ನಲು ಸ್ಪೋಟಕ ತುಂಬಿದ ತೆಂಗಿನಕಾಯಿಯನ್ನಿಟ್ಟು ಹತ್ಯೆಗೈದಿರುವುದು ವಿಶ್ವವ್ಯಾಪಿ ಖಂಡನೆಗೆ ಗುರಿಯಾಗಿದೆ. ಅಷ್ಟೇ ಏಕೆ ನಮ್ಮ ಕಣ್ಣೆದುರಲ್ಲೇ ಎಷ್ಟೋ ಹಿಂಸೆಗಳು ಕಣ್ಮರೆಯಾಗಿ ಹೋಗುತ್ತಿವೆ. ಹೀಗೆಯೇ ಆಗುತ್ತಿದ್ದರೆ ನಮ್ಮ ದೇಶದ ಹೆಸರು ಹಾಗು ಪ್ರಾಣಿ ಸಂಕುಲ ಸಂಪೂರ್ಣವಾಗಿ ನಾಶವಾಗುವುದು ಖಚಿತ.
ಪ್ರಾಣಿಗಳು ಕೇವಲ ಆಟವಾಡುವ ವಸ್ತುವಲ್ಲ ಅವುಗಳಿಗೂ ನಮ್ಮಷ್ಟೇ ಜೀವಿಸುವ ಹಕ್ಕಿರುವುದು, ಜೀವಿಗಳಲ್ಲೆ ಹೆಚ್ಚು ಸ್ವಾರ್ಥಿಯಾಗಿರುವ ಹಾಗೂ ಪ್ರಾಣಿ ಸಂಕುಲದ ಸ್ಥಳವನ್ನು ಅಕ್ರಮಿಸುತ್ತಿರುವ ನಾವುಗಳು ಪ್ರಾಣಿಗಳ ಜೀವ ರಕ್ಷಣೆ ಮಾಡಬೇಕೆ ಹೊರತು ಅವುಗಳ ಜೀವಕ್ಕೆ ಕುತ್ತು ತರಬಾರದು. ಇಷ್ಟೆಲ್ಲಾ ಆದಮೇಲಾದರು ನಾವುಗಳು ಪ್ರಾಣಿಗಳ ರಕ್ಷಣೆಗೆ ಸಜ್ಜಾಗಬೇಕು, ಪ್ರಾಣಿ ಕಲ್ಯಾಣ ಮಂಡಳಿ ಹಾಗೂ ಅದರ ವಿವಿಧ ಕಾನೂನಿನ ಬಗ್ಗೆ ಅರಿವು ಮುಡಿಸಿಕೊಳ್ಳಲೇಬೇಕು.
ಮುಖ್ಯವಾಗಿರುವ ಪ್ರಾಣಿ ಕಲ್ಯಾಣ ಕಾನೂನುಗಳು ಹೀಗಿವೆ
- Prevention of Cruelty to Animals Act – 1960,
- Wild Life Protection Act – 1972,
- Transport of Animal Rules – 1975, -Performing Animals Registration (Amendment) Rules 2001
ಈ ಕಾನೂನುಗಳ ಪ್ರಕಾರ ಈ ಕೆಳಕಂಡ ಅಮಾನವೀಯ ಕೃತ್ಯಗಳ ಮೇಲೆ ಕ್ರಮ ಜರುಗಿಸಬಹುದು..
ಪ್ರಾಣಿಗಳನ್ನು ಹೊಡಿಯೋದು, ಒದಿಯೋದು, ಧೀರ್ಘಕಾಲ ಸವಾರಿ ಮಾಡೋದು, ಹೆಚ್ಚುಭಾರ ಹೆರೋದು ಹಾಗು ಚಿತ್ರಹಿಂಸೆ ನೀಡೋದು ಮಾಡಿದರೆ PCA – 1960, ಸೆಕ್ಷನ್ 11 (1) (a) ಪ್ರಕಾರ ಕಾನೂನು ಕ್ರಮ ಜರುಗಿಸಬಹುದಾಗಿದೆ.
- ವಯಸ್ಸಾಗಿರುವ, ಗಾಯವಾಗಿರುವ ಹಾಗೂ ಅನರ್ಹ ಪ್ರಾಣಿಯನ್ನು ಕೆಲಸಕ್ಕೆ ಬಳಸುವ ಹಾಗಿಲ್ಲ.
- ಹಾನಿಕಾರಕ ಔಷಧವನ್ನು ಪ್ರಾಣಿಗಳ ಮೇಲೆ ಬಳಸುವ ಹಾಗಿಲ್ಲ.
- ಅಸ್ವಸ್ಥತೆ ಹಾಗೂ ನೋವು ಮೂಡಿಸುವಹಾಗೆ ಪ್ರಾಣಿಯನ್ನು ವಾಹನದಲ್ಲಿ ಸಾಗಣೆ ಮಾಡುವ ಹಾಗಿಲ್ಲ.
- ಕಾನೂನಿನ ಪ್ರಕಾರ ಶಿಫಾರಸ್ಸು ಮಾಡಿರುವ ಪಂಜರಕ್ಕಿಂತ ಸಣ್ಣ ಪಂಜರಗಳಲ್ಲಿ ಪ್ರಾಣಿಗಳನ್ನು ಇಡುವ ಹಾಗಿಲ್ಲ.
- ಪ್ರಾಣಿಗಳನ್ನು ದೊಡ್ಡ ಸರಪಣಿ ಹಾಗು ಅಸಮಂಜಸ ಸಮಯದವರೆಗೆ ಕಟ್ಟಿ ಹಾಕುವ ಹಾಗಿಲ್ಲ.
- ಶ್ವಾನವನ್ನು ದೀರ್ಘಕಾಲ ದೇಹಕ್ಕೆ ವ್ಯಾಯಾಮವಿಲ್ಲದೆ ಒಂದೇ ಸ್ಥಳದಲ್ಲಿ ಕಟ್ಟಿ ಹಾಕಿ ಬಂದಿಸುವ ಹಾಗಿಲ್ಲ.
- ಪ್ರಾಣಿಗಳನ್ನು ಸಾಕುವವರು ಅವುಗಳಿಗೆ ಊಟ, ನೀರು ಹಾಗೂ ಆಶ್ರಯ ಕಡ್ಡಾಯವಾಗಿ ನೀಡಲೇಬೇಕಿದೆ
- ಸಾಕುಪ್ರಾಣಿಗಳನ್ನು ಅವುಗಳ ವಯಸ್ಸಾದಮೇಲೆ ಅಥವಾ ಖಾಯಿಲೆಬಿದ್ದರೆ ಹಾಗೆಯೇ ತ್ಯಜಿಸುವ ಹಾಗಿಲ್ಲ.
- ಪ್ರಾಣಿಗಳನ್ನು ಅಮಾನವೀಯವಾಗಿ ವಿರೂಪಗೊಳಿಸುವ ಅಥವಾ ಸಾಯಿಸುವಹಾಗಿಲ್ಲ.
- ಒಂದು ಪ್ರಾಣಿಯನ್ನು ಇನ್ನೊಂದು ಪ್ರಾಣಿಯ ಜೊತೆಗೆ ಜಗಳವಾಡಲು ಪ್ರೇರೇಪಿಸುವಹಾಗಿಲ್ಲ.
- ಒಂದು ಪ್ರಾಣಿಗೆ ಇನ್ನೊಂದು ಜೀವಂತ ಪ್ರಾಣಿಯನ್ನು ತಿನ್ನಲು ಕೊಡುವುದು ಅಥವಾ ತಿನ್ನಲು ಪ್ರೇರೇಪಿಸುವ ಹಾಗಿಲ್ಲ.
- ಹೆಣ್ಣು ಪ್ರಾಣಿಗಳು ಹಾಲು ಜಾಸ್ತಿ ನೀಡುವ ಹಾಗೆ ಹಾನಿಕಾರಕ ಔಷಧ (Oxytocin) ನೀಡುವ ಹಾಗಿಲ್ಲ.
- ಪ್ರಾಣಿಗಳಿಗೆ ತರಬೇತಿ ಹಾಗು ಪ್ರದರ್ಶನ ನೀಡಲು Animal Welfare Board of India ಮಂಡಳಿಯಿಂದ ನೋಂದಣಿ ಕಡ್ಡಾಯವಾಗಿ ಮಾಡಿಸಬೇಕು.
- ಹುಲಿ, ಸಿಂಹ, ಕೋತಿ, ಚಿರತೆ, ಕರಡಿ, ಎತ್ತು ಹಾಗೂ ಇನ್ನಿತರ ಪ್ರಾಣಿಗಳನ್ನು ಬೀದಿಗಳಲ್ಲಿ ಪ್ರದರ್ಶಿಸಲು ಬಳಸುವ ಹಾಗಿಲ್ಲ.
- ಪ್ರಾಣಿಗಳ ಜೊತೆಗೆ ದೈಹಿಕ ಸಂಪರ್ಕ ಅಥವಾ ಅನೈತಿಕ ಸಂಬಂಧ ಹೊಂದುವ ಹಾಗಿಲ್ಲ.
ಈ ರೀತಿ ಯಾವುದಾದರು ಆಪತ್ತಿನಲ್ಲಿರುವ ಪ್ರಾಣಿಗಳು ಕಂಡುಬಂದಲ್ಲಿ ಪುರಾವೆಯ (ಫೋಟೋ / ವಿಡಿಯೋ) ಸಮೇತ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದು.
(ಡಾ.ಕಮಲೇಶ್ ಕುಮಾರ್ ಕೆ ಎಸ್
ಪಶುವೈದ್ಯಾಧಿಕಾರಿಗಳು
ಪಶುಚಿಕಿತ್ಸಾಲಯ, ಮತ್ತೂರು,
ಶಿವಮೊಗ್ಗ.
ಈ ಮೇಲ್ : kskamalesh93@gmail.com
ಫೋನ್ : 9164282969)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ4 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ4 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ


