ದಿನದ ಸುದ್ದಿ
ಜಪಾನ್ನ ಟೋಕಿಯೊದಲ್ಲಿ ವಾಣಿಜ್ಯ ನಾಯಕರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಹತ್ವದ ಸಮಾಲೋಚನೆ
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟೋಕಿಯೊದಲ್ಲಿ ನಿನ್ನೆ ಜಪಾನಿನ ವಾಣಿಜ್ಯ ನಾಯಕರೊಂದಿಗೆ ನಡೆದ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಜಪಾನಿನ 34 ಕಂಪನಿಗಳ ಉನ್ನತ ಕಾರ್ಯನಿರ್ವಾಹಕರು ಮತ್ತು ಸಿಇಓಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಂಪನಿಗಳಲ್ಲಿ ಹೆಚ್ಚಿನವು ಭಾರತದಲ್ಲಿ ಹೂಡಿಕೆ ಮತ್ತು ಕಾರ್ಯಾಚರಣೆಗಳನ್ನು ಹೊಂದಿವೆ.
ಆಟೋಮೊಬೈಲ್, ವಿನ್ಯಾಸ, ಸೆಮಿಕಂಡಕ್ಟರ್, ಉಕ್ಕು, ತಂತ್ರಜ್ಞಾನ, ವ್ಯಾಪಾರ ಹಾಗೂ ಬ್ಯಾಂಕಿಂಗ್ ಮತ್ತು ಹಣಕಾಸು ಸೇರಿದಂತೆ ವಿವಿಧ ವಲಯಗಳ ಕಂಪನಿಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಕೀಡಾನ್ರೆನ್, ಜಪಾನ್ ಬಾಹ್ಯ ವ್ಯಾಪಾರ ಸಂಸ್ಥೆ, ಜಪಾನ್ ಇಂಟರ್ನ್ಯಾಶನಲ್ ಸಹಕಾರ ಸಂಸ್ಥೆ, ಜಪಾನ್ ಬ್ಯಾಂಕ್ ಫಾರ್ ಇಂಟರ್ನ್ಯಾಷನಲ್ ಕೋಪರೇಶನ್, ಜಪಾನ್-ಇಂಡಿಯಾ ಬಿಸಿನೆಸ್ ಕನ್ಸಲ್ಟೇಟಿವ್ ಸಮಿತಿ ಮತ್ತು ಇನ್ವೆಸ್ಟ್ ಇಂಡಿಯಾದಂತಹ ಪ್ರಮುಖ ವಾಣಿಜ್ಯ ಸಂಸ್ಥೆಗಳು ಭಾಗವಹಿಸಿದ್ದವು.
ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಭಾರತ ಮತ್ತು ಜಪಾನ್ ಸ್ವಾಭಾವಿಕ ಪಾಲುದಾರರು. ಭಾರತ-ಜಪಾನ್ ಬಾಂಧವ್ಯದ ಅಗಾಧ ಸಾಮರ್ಥ್ಯದ ರಾಯಭಾರಿಗಳು ಎಂದು ವಾಣಿಜ್ಯ ಸಮುದಾಯವನ್ನು ಶ್ಲಾಘಿಸಿದರು.
ಈ ವರ್ಷದ ಮಾರ್ಚ್ನಲ್ಲಿ ಜಪಾನ್ ಪ್ರಧಾನಿ ಕಿಶಿಡಾ ಅವರು ಭಾರತಕ್ಕೆ ಭೇಟಿ ನೀಡಿದಾಗ, ಮುಂದಿನ 5 ವರ್ಷಗಳಲ್ಲಿ ಎರಡು ದೇಶಗಳ ಹೂಡಿಕೆಯ ಮಹತ್ವಾಕಾಂಕ್ಷೆಯ ಗುರಿಯನ್ನು ಜಪಾನಿನ 5 ಟ್ರಿಲಿಯನ್ ಯೆನ್ಗೆ ನಿಗದಿಪಡಿಸಲಾಗಿತ್ತು ಎಂದು ಪ್ರಧಾನಮಂತ್ರಿ ಹೇಳಿದರು.
ಭಾರತ-ಜಪಾನ್ ಕೈಗಾರಿಕಾ ಸ್ಪರ್ಧಾತ್ಮಕತೆ ಪಾಲುದಾರಿಕೆ ಮತ್ತು ಇಂಧನ ಪಾಲುದಾರಿಕೆಯಂತಹ ಆರ್ಥಿಕ ಸಂಬಂಧಗಳ ಇತ್ತೀಚಿನ ಬೆಳವಣಿಗೆಗಳ ಕುರಿತು ಪ್ರಧಾನಮಂತ್ರಿ ಬೆಳಕು ಚೆಲ್ಲಿದರು. ರಾಷ್ಟ್ರೀಯ ಮೂಲಸೌಕರ್ಯ ಕೊಳವೆ ಮಾರ್ಗ, ಉತ್ಪಾದನೆ ಆಧಾರಿತ ಪ್ರೋತ್ಸಾಹ ಯೋಜನೆ ಮತ್ತು ಅರೆವಾಹಕ ನೀತಿಯಂತಹ ಉಪಕ್ರಮಗಳು, ಭಾರತದ ದೃಢವಾದ ನವೋದ್ಯಮ ಪರಿಸರ ವ್ಯವಸ್ಥೆಯ ಬೆಳವಣಿಗೆ ಕುರಿತು ಅವರು ಮಾಹಿತಿ ನೀಡಿದರು.
ಜಾಗತಿಕ ವಿದೇಶಿ ನೇರ ಬಮಡವಾಳ ಹೂಡಿಕೆ ಮಂದಗತಿಯಲ್ಲಿದ್ದರೂ ಹಿಂದಿನ ಹಣಕಾಸು ವರ್ಷದ ದಾಖಲೆಯ 84 ಶತಕೋಟಿ ಡಾಲರ್ ಹೂಡಿಕೆಯನ್ನು ಭಾರತ ಆಕರ್ಷಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು.
ಇದು ಭಾರತದ ಆರ್ಥಿಕ ಸಾಮರ್ಥ್ಯದ ವಿಶ್ವಾಸಮತ ಎಂದು ಅವರು ಬಣ್ಣಿಸಿದರು. ಭಾರತದಲ್ಲಿ ಜಪಾನಿನ ಕಂಪನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಆಹ್ವಾನಿಸಿದರು ಮತ್ತು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಜಪಾನ್ನ ಕೊಡುಗೆಯನ್ನು ‘ಜಪಾನ್ ಸಪ್ತಾಹ’ದ ರೂಪದಲ್ಲಿ ಆಚರಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
बीते 8 वर्षों में हमने एक Strong, Resilient और Responsible Democracy की पहचान बनाई है। भारत की Democratic Process से आज समाज के वैसे लोग भी जुड़ रहे हैं, जो पहले कभी इसका हिस्सा बन ही नहीं पाते थे। pic.twitter.com/gMB47jCnOa
— Narendra Modi (@narendramodi) May 23, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


