ದಿನದ ಸುದ್ದಿ
ಸ್ವಾತಂತ್ರ್ಯದ ಕೂಗಿಗಿಂತ ಜೈಲಿನ ಗೋಡೆಗಳು ಎತ್ತರವಿಲ್ಲ..! : “ಪ್ರಧಾನ ಜೈಲರ್”ಗೆ ಹಿರಿಯ ಪತ್ರಕರ್ತನ ಎಚ್ಚರಿಕೆಯ ಪತ್ರ..!
- ರವೀಶ್ ಕುಮಾರ್, ಎನ್ ಡಿಟಿವಿ ಸಂಪಾದಕ, ಕನ್ನಡಕ್ಕೆ : ನವೀನ್ ಸೂರಿಂಜೆ, ಪತ್ರಕರ್ತ
ಮಂದೀಪ್ ಪುನಿಯಾ ಅವರ ಬಂಧನ ನನ್ನನ್ನು ಬಹಳ ಕಾಡುತ್ತಿದೆ. ಹತ್ರಾಸ್ ಪ್ರಕರಣದಲ್ಲಿ ಸಿದ್ದೀಕ್ ಕಪ್ಪನ್ ವಿಚಾರ ಏನಾಯ್ತು ಎಂಬುದೇ ಗೊತ್ತಾಗುತ್ತಿಲ್ಲ. ಕಾನ್ಪುರದ ಪತ್ರಕರ್ತ ಅಮಿತ್ ಸಿಂಗ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈಗ ರಾಜ್ದೀಪ್ ಸರ್ದೇಸಾಯಿ ಮತ್ತು ಸಿದ್ಧಾರ್ಥ್ ವರದರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪರಿಸ್ಥಿತಿ ನೋಡುವಾಗ ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಕೊನೆಗೊಳ್ಳುವುದೇ ಎಂಬ ಆತಂಕ ಎದುರಾಗಿದೆ.
ಸ್ವಾತಂತ್ರ್ಯದ ಕೂಗಿಗಿಂತ ಜೈಲಿನ ಗೋಡೆಗಳು ಎತ್ತರವಿರಲು ಸಾಧ್ಯವಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಯಾರು ಕಸಿಯಲು ಬಯಸುತ್ತಾರೋ ಅವರು ಇಡೀ ದೇಶವನ್ನು ಬಂಧನದಲ್ಲಿಡಲು ಬಯಸುತ್ತಾರೆ.
ಆತ್ಮೀಯ ಜೈಲರ್ ರವರೇ,
ಭಾರತದ ಇತಿಹಾಸವು ಈ ಕರಾಳ ದಿನಗಳ ಸುರಕ್ಷತೆಯನ್ನು ನಿಮಗೆ ವಹಿಸುತ್ತಿದೆ. ರಾತ್ರೋ ರಾತ್ರಿ “ಅವರ” ಪೊಲೀಸರು ಸ್ವಾತಂತ್ರ್ಯ ಬಯಸುವ ಪತ್ರಕರ್ತರನ್ನು ಬಂಧಿಸಿ ನಿಮ್ಮಲ್ಲಿಗೆ ಕರೆತರಬಹುದು. ಅದಕ್ಕಾಗಿಯೇ ದೂರದೂರುಗಳಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಒಂದು ನೆನಪಿರಲಿ, ಮುಂದೊಂದು ದಿನ ನಿಮ್ಮ ಮಕ್ಕಳು ಗೂಗಲ್ ಸರ್ಚ್ ಮಾಡಿ ನಿಮ್ಮನ್ನು ಪ್ರಶ್ನಿಸುತ್ತಾರೆ. ಆಗ ನಾನು ನೌಕರನಷ್ಟೇ ಆಗಿದ್ದೆ. ನಿಜವಾದ ಜೈಲರ್ ಬೇರೊಬ್ಬನಿದ್ದ ಎಂದು ನಿಮ್ಮ ಮಕ್ಕಳಿಗೆ ಹೇಳಿರಿ. ನೀವು ಐಎಎಸ್, ಐಪಿಎಸ್ ಅಧಿಕಾರಿಯಾಗಿದ್ದರೆ ನಿಮ್ಮ ಮಕ್ಕಳು ಪತ್ರಕರ್ತರಾಗದಂತೆ ನೋಡಿಕೊಳ್ಳಿ. ಪತ್ರಕರ್ತರಾಗಿ ಸತ್ಯ ಹೇಳಿದರೆ ಸಣ್ಣ ತಪ್ಪುಗಳನ್ನು ಹುಡುಕಿ ಜೈಲಿಗೆ ಹಾಕಲಾಗುತ್ತದೆ.
ಭಾರತ ಮಾತೆ ಎಲ್ಲವನ್ನೂ ವೀಕ್ಷಿಸುತ್ತಿದ್ದಾಳೆ. ಗೋದಿ ಮೀಡಿಯಾದ ಮುಖ್ಯಸ್ಥರಿಗೆ ಕಿರೀಟಧಾರಣೆ ಮಾಡಲಾಗುತ್ತಿದೆ ಮತ್ತು ಸ್ವತಂತ್ರ ಧ್ವನಿಗಳನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಸ್ವತಂತ್ರ ಪತ್ರಕರ್ತರು ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತ ಚಳವಳಿಯ ಸುದ್ದಿ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಲೈವ್ ಮೂಲಕ ಗ್ರಾಮದಿಂದ ಗ್ರಾಮಕ್ಕೆ ತಲುಪಿರುವುದನ್ನು ರೈತರು ಗಮನಿಸಿದ್ದಾರೆ. ಅವುಗಳನ್ನು ತಡೆಯಲು, ಸಣ್ಣ ತಪ್ಪುಗಳನ್ನು ಹುಡುಕಿ ಅವರ ಮೇಲೆ ಎಫ್ಐಆರ್ ಮಾಡಲಾಗುತ್ತಿದೆ.
ಸ್ವತಂತ್ರ್ಯದ ಘೋಷಣೆ ಕೂಗುವ ಆ ಸ್ಥಳದ ಮೇಲೆ ಜೈಲರ್ ಕಣ್ಣು ಬಿದ್ದಿದೆ. ಜೈಲರ್ ರವರೇ, ನೀವು ಆ ಜೈಲರ್ ಅಲ್ಲ. ಜೈಲರ್ ಮತ್ತೊಬ್ಬರಿದ್ದಾರೆ. ಆ ಜೈಲರ್ ಈ ಬಾರಿಯ ಬಜೆಟ್ ನಲ್ಲಿ “ಪ್ರಧಾನಿ ಜೈಲು ಬಂಧನ ಯೋಜನೆ” ಪ್ರಾರಂಭಿಸಬಹುದು. ನರೇಗಾ ಯೋಜನೆಯಡಿ ಬರೋ ಗ್ರಾಮಗಳನ್ನು ಜೈಲನ್ನಾಗಿ ಮಾಡಬೇಕು.
ಗ್ರಾಮಗಳಲ್ಲಿ ಪ್ರಶ್ನೆ ಕೇಳುವವರನ್ನು ಮತ್ತು ಭಾಷಣ ಮಾಡುವವರನ್ನು ಜೈಲಿಗೆ ಹಾಕಬೇಕು. ಕೊನೆಗೆ ಜೈಲುಗಳನ್ನು ನಿರ್ಮಿಸಿದವನನ್ನು ಮತ್ತು ಜೈಲಿನತ್ತಾ ದಿಟ್ಟಿಸಿದವನನ್ನೂ ಜೈಲಿಗೆ ಹಾಕಬೇಕು. ಇಡೀ ದೇಶದ ಗ್ರಾಮ ಗ್ರಾಮವೇ ನಿಶ್ಯಬ್ದವಾಗಿರಬೇಕು. ಯಾಕೆಂದರೆ “ಪ್ರಧಾನಿ ಜೈಲು ಬಂಧನ ಯೋಜನೆ”ಯನ್ನು ಜೈಲರ್ ಪ್ರಾರಂಭಿಸಿದ್ದಾರೆ ಎಂದು ಘೋಷಿಸಬೇಕು.
ಪ್ರಶ್ನಿಸುವ ಪತ್ರಕರ್ತರನ್ನು ಜೈಲಿನಲ್ಲಿ ಇರಿಸಿದರೆ, ಎರಡು ಬೆಳವಣಿಗೆಗಳು ನಡೆಯಬಹುದು. ಮೊದಲನೆಯದಾಗಿ ಪತ್ರಿಕೆಗಳು ಜೈಲಿನಿಂದ ಹೊರಬರುತ್ತವೆ. ಎರಡನೆಯದಾಗಿ ಜೈಲಿನಿಂದ ಹೊರಗಿರುವ ಪತ್ರಿಕೆಗಳಲ್ಲಿ ಸಾಫ್ಟ್ ಸ್ಟೋರಿಗಳು ಬರಬಹುದು. ಇದು ವಿಶ್ವ ಗುರು ಭಾರತಕ್ಕೆ ಒಳ್ಳೆಯದೇ ? ಯೋಚಿಸಿ.
ಸಿದ್ಧಾರ್ಥ್ ವರದರಾಜನ್, ರಾಜ್ದೀಪ್ ಸರ್ದೇಸಾಯಿ, ಅಮಿತ್ ಸಿಂಗ್ ಸೇರಿದಂತೆ ಎಲ್ಲಾ ಪತ್ರಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕೆಂದು ನಾನು ವಿನಂತಿಸುತ್ತೇನೆ. ಮಂದೀಪ್ ಪುನಿಯಾ ಬಿಡುಗಡೆ ಮಾಡಲೇಬೇಕು. ಪ್ರಶ್ನಿಸುವ ಪತ್ರಕರ್ತರ ವಿರುದ್ದ ನಡೆಯುವ ಎಫ್ಐಆರ್ ಆಟ ನಿಲ್ಲಬೇಕು.
ಅತ್ಯಂತ ಗಂಭೀರವಾಗಿ ಒಂದು ತಿಳಿದುಕೊಳ್ಳಿ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತದೆ ಎಂದು ಜನ ಅರ್ಥ ಮಾಡಿಕೊಳ್ಳುವ ದಿನ ಬಂದೇ ಬರುತ್ತದೆ. ಆ ದಿನ ಈ ದೇಶದ ಹಳ್ಳಿಗಳ ಗೋಡೆಗಳು, ವಿಮಾನಗಳು ನಿಲ್ದಾಣಗಳು, ಬುಲೆಟ್ ರೈಲುಗಳು, ತರಕಾರಿ ಮಂಡಿಗಳು, ಜಾತ್ರೆಗಳು, ಮಾರುಕಟ್ಟೆಗಳು ಮತ್ತು ಶೌಚಾಲಯ ಗೋಡೆಗಳ ಮೇಲೆ, ಟ್ರಾಕ್ಟರುಗಳು, ಬಸ್ಸುಗಳು ಮತ್ತು ಟ್ರಕ್ಗಳ ಹಿಂದೆ ಜನ ಬರೆಯಲು ಪ್ರಾರಂಭಿಸುತ್ತಾರೆ.
“ಗುಲಾಮಿ ಮಾಧ್ಯಮಗಳು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಆ ದೇಶದಲ್ಲಿ ಸ್ವಾತಂತ್ರ್ಯ ಇರಲು ಸಾಧ್ಯವಿಲ್ಲ. ಗೋದಿ ಮಾಧ್ಯಮದಿಂದ ಮುಕ್ತವಾದರಷ್ಟೇ ಹೊಸ ಸ್ವಾತಂತ್ರ್ಯ ಬರಲು ಸಾಧ್ಯ”
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್
ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.
“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.
ಶ್ರೀ ಎ. ಜಯಪ್ಪ ಅವರು ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.
ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ3 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ2 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

