ದಿನದ ಸುದ್ದಿ
ಖಾಸಗಿ ಆಸ್ಪತ್ರೆಯ ಕ್ರೌರ್ಯ ಕುರಿತು ಪತ್ರಕರ್ತ ರಾಜೀವ್ ಅವರ ಕರಾಳ ಅನುಭವ
ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಂಪುಟ ವಿಸ್ತರಣೆ ಮುನ್ನಾ ದಿನ, ಕೆಲಸ ಮುಗಿಸಿ ಮನೆಗೆ ಹೊರಟಿದ್ದೆ. ರಾತ್ರಿ 11.30ರ ಸಮಯ. ಪರಿಚಯದ ಕಿರಿಯ ಗೆಳೆಯನೊಬ್ಬ ಕರೆ ಮಾಡಿದ. “ನನ್ನ ರೂಂ ಮೆಟ್ ದಾರಿಯಲ್ಲಿ ಬರುವಾಗ, ಅಸೌಖ್ಯದಿಂದ ಒದ್ದಾಡಿ, ಮೂರ್ಛೆ ತಪ್ಪಿ ಬಿದ್ದನಂತೆ. ತಕ್ಷಣ ಆತನನ್ನು ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದಾಗ, ಆತ ತಿಗಣಿ ಪೌಡರ್ ಕುಡಿದಿರುವುದು ಗೊತ್ತಾಗಿದೆ. ತಕ್ಷಣ ಬರ್ತೀಯಾ ?” ಒಂದೇ ಉಸಿರಿನಲ್ಲಿ ಹೇಳಿದ. ತಕ್ಷಣ ಅಲ್ಲಿಗೆ ಹೋದೆ. ಆ ವೇಳೆಗೆ ಸೋಮಶೇಖರ್, ಸುಖೇಶ್ ಮತ್ತು ಸಾದಿಯಾ ಕೂಡ ಅಲ್ಲಿದ್ದರು. ತಿಗಣಿ ಪೌಡರ್ ಕುಡಿದಿದ್ದವ ಚೆನ್ನಾಗಿಯೇ ಮಾತನಾಡುತ್ತಿದ್ದ. ಮದುವೆ ಮಾಡದ ಅಪ್ಪನನ್ನು ಬೆದರಿಸಲು ಕುಡಿದಿರುವುದಾಗಿ ವಿವರಿಸಿದ.
ಬಳಿಕ ಆಸ್ಪತ್ರೆಯವರ ಜತೆ ಮಾತನಾಡಿದೆವು. “ಗಾಬರಿ ಬೀಳಬೇಕಿಲ್ಲ. ಆದರೂ, 24 ಗಂಟೆ ಐಸಿಯೂ ನಲ್ಲಿ ಇಟ್ಟು ಅಬ್ಸರ್ವೇಷನ್ ಮಾಡಬೇಕಾಗುತ್ತೆ. ಐಸಿಯೂಗೆ 6000 ರೂ. ಆಗುತ್ತೆ,”” ಅಂದ್ರು
ಗೆಳೆಯರಾದ ಸುಖೇಶ, ಸೋಮು ಸೋದರಿ ಸಾದಿಯಾ ಅವರೇ ಆ ಹಣ ತುಂಬಿದರು. ಬಾಕಿ ಔಷೋಧಪಚಾರಕ್ಕೆ ಎಷ್ಟು ಖರ್ಚಾಗಬಹುದು ಎಂದು ವಿಚಾರಿಸಿದೆವು. 2 ರಿಂದ 3 ಸಾವಿರ ಆಗಬಹುದು ಅಂದ್ರು ಅಸ್ಪತ್ರೆಯವರು.
ಪರಿಚಯದ ನನ್ನ ಗೆಳೆಯ ಹಾಗೂ ಅಸ್ವಸ್ಥನಾಗಿದ್ದ ಆತನ ಗೆಳೆಯ-ಇಬ್ಬರೂ ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬಂದವರು. ಅಸ್ವಸ್ಥ ಗೆಳೆಯನಂತೂ ಕೂಲಿಗೆಂದು ಒಂದು ಜತೆ ಬಟ್ಟೆ, ಚಪ್ಪಲಿಯಲ್ಲಿ ಬಂದವ. ತಳ ಸಮುದಾಯಕ್ಕೆ ಸೇರಿದ, ಬಡ ಕುಟುಂಬದ ಆತನ ಬಳಿ ಏನೂ ಇರಲಿಲ್ಲ. ನಾವೇ ಒಂದಿಷ್ಟು ಹಣ ನೀಡಿ, ಆಸ್ಪತ್ರೆಯಿಂದ ಮನೆಗೆ ಬಂದೆವು.
ಈ ನಡುವೆ, ಅಸ್ವಸ್ಥನಾಗಿ ದಾರಿಯಲ್ಲಿ ಬಿದ್ದವನನ್ನು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದ ಮೂವರು ಪೊಲೀಸ್ ಪೇದೆಗಳು,ಆತನನ್ನು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ, ಅದೇನೋ ಒಂದಿಷ್ಡು ಬರೆದುಕೊಂಡು ಹೋದರು.
ಮರುದಿನ ಮಧ್ಯಾಹ್ನ ಆಸ್ಪತ್ರೆಯಲ್ಲಿದ್ದ ಗೆಳೆಯ ಕರೆ ಮಾಡಿದ. ಡಿಸ್ ಚಾರ್ಜ್ ಮಾಡಿಸುವ ವಿಷಯವಿರಬೇಕು ಎಂದುಕೊಂಡೆ ಕರೆ ಸ್ವೀಕರಿಸಿದೆ. ಆದರೆ ಆತ, “”ಅಣ್ಣಾ.. ಆತ ಸ್ವಲ್ಪ ಸೀರಿಯಸ್ ಆಗಿದ್ದಾನೆ. ಏನನ್ನೂ ಹೇಳಲು ಸಾಧ್ಯ.
ಕೃಪೆ: ರಾಜೀವ್ ಅವರ ಫೇಸ್ಬುಕ್ ವಾಲ್ನಿಂದ
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!