ಅಂಕಣ
ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)
~ ರುದ್ರಪ್ಪ ಹನಗವಾಡಿ
ಭದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್ಎಸ್ ಹಲವು ಗುಂಪುಗಳಾಗಿ ಒಬ್ಬರಿಗೊಬ್ಬರು ಅನುಮಾನಗಳಿಂದ ದೂರದೂರವಾಗಿದ್ದರು. ಇವರ ಜೊತೆ ಆತ್ಮೀಯ ಹೋರಾಟಗಾರರಾಗಿದ್ದ ಅನೇಕರು ಮಾತಿಲ್ಲದೆ ಅವರವರೇ ಕೊರಗುತ್ತಿದ್ದರು.
ಶಿವಮೊಗ್ಗ ಭದ್ರಾವತಿಯಲ್ಲಿ ಕೃಷ್ಣಪ್ಪನವರಿಗೆ ಎಲ್ಲಾ ಜಾತಿಯ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಾಯಕರ ಬೆಂಬಲ, ಡಿಎಸ್ಎಸ್ ನ ಎಲ್ಲ ಹೋರಾಟಗಾರರಿಗೂ ಸಿಗುತ್ತಿತ್ತು. ಬೆಂಗಳೂರಿಗೆ ಬಂದ ನಂತರ ಆದ ಬೆಳವಣಿಗೆಗಳ ಬಗ್ಗೆ ಒಂದು ರೀತಿಯ ವಿಷಾದ ತುಂಬಿದ ಭಾವ ಕೃಷ್ಣಪ್ಪನವರಲ್ಲಿ ತುಂಬಿತ್ತು. ಆದರೂ ಅವರು ಮತ್ತೆ ಇದನ್ನು ಪುನಶ್ಚೇತನಗೊಳಿಸುವ ಕರ್ಯದಲ್ಲಿ ಹಗಲು ರಾತ್ರಿ ರಾಜ್ಯದ ವಿವಿಧೆಡೆಗೆ ಪ್ರಯಾಣ ಮಾಡುತ್ತ ವಿವಿಧ ಜಿಲ್ಲೆಗಳಿಗೆ ಹೋಗಿ ಡಿಎಸ್ ಎಸ್ ಸಂಘಟನೆಯ ಕರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಅವರು ಡಿಎಸ್ಎಸ್ ಸಂಘಟನೆಯಲ್ಲಿನ ಬೆಳವಣಿಗೆಗಳ ಬಗ್ಗೆ ಮಾಡಿದ ನಿರಾಶಾ ಕಾಲದಲ್ಲಿಯೇ ಛಲಬಿಡದ ವಿಕ್ರಮನಂತೆ ದಲಿತರನ್ನೆಲ್ಲ ಪುನಃ ಸಂಘಟಿಸಿ ಪುನಶ್ಚೇತನ ಗೊಳಿಸುವ ಬಗ್ಗೆ ಅವರ ಸಹಪಾಠಿ ಆರ್. ನಾಗರಾಜ್, ಅರ್ಕೇಶ್ ಮತ್ತು ನಾನು ಅವರ ಮನೆಯಲ್ಲಿ ಸೇರಿದಾಗ ಚರ್ಚಿಸುತ್ತಿದ್ದರು. ಮೈಸೂರಿನ ಮಹಾದೇವ ಬೆಂಗಳೂರಿನ ಸಿದ್ಧಲಿಂಗಯ್ಯ ಇವರುಗಳ ಸಂಬಂಧ ಬಹಳ ದೂರ ಸರಿದಿತ್ತು. ಅದನ್ನು ಪುನಃ ಪುನಶ್ಚೇತನಗೊಳಿಸುವುದಕ್ಕೆ ಬೇಕಾದ ಶ್ರಮ ಹಾಕಲು ಮಹಾದೇವನಿಗಾಗಲೀ, ಸಿದ್ಧಲಿಂಗಯ್ಯನಿಗಾಗಲೀ ಇರಲಿಲ್ಲ. ಹಾಗಾಗಿ ಮತ್ತೆ ಏಕಾಂಗಿಯಾಗಿಯೇ ಎಲ್ಲಾಕಡೆ ಇವರೊಬ್ಬರೇ ತಿರುಗಾಡಿ ಸಂಘಟಿಸಲು ಶ್ರಮಿಸುತ್ತಿದ್ದರು.
ಈ ಯೋಜನೆಯ ಭಾಗವಾಗಿ ಆಯೋಜಿಸಿದ್ದ ಅಂಬೇಡ್ಕರ್ ರ್ಯಾಲಿಯಲ್ಲಿ ಭಾಗವಹಿಸಲು, ಗದಗ ಜಿಲ್ಲಾ ಕೇಂದ್ರದಲ್ಲಿ ವ್ಯವಸ್ಥೆಗೊಳಿಸಿದ ಸಭೆಗೆ ಹೋಗಿದ್ದರು. ನಾನು ಯಲಹಂಕ ಆಫೀಸಿನ ಕೆಲಸ ಮುಗಿಸಿ ಮಧ್ಯಾಹ್ನ ಊಟಕ್ಕೆ ಅವರ ಮನೆಗೆ ಹೋದಾಗ ಮೇಷ್ಟರು ಗದಗ್ಗೆ ಹೋದ ಸುದ್ದಿ ತಿಳಿದಿತ್ತು. ಗದಗ್ನಲ್ಲಿ ಕೃಷ್ಣಪ್ಪನವರ ತಂಗಿಯ ಮಗಳು ಮೈತ್ರ್ರಾ ಕೂಡಾ ಇದ್ದುದು, ಮೈತ್ರಾಳ ಗಂಡ ಬ್ಯಾಂಕ್ವೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಘಟನೆಯ ಜೊತೆ ಅವರನ್ನೆಲ್ಲಾ ನೋಡಿಕೊಂಡು ಬರುವರೆಂದು ಮಾತಾಡಿಕೊಂಡು ನಾನು ಮಧ್ಯಾಹ್ನ ಊಟ ಮುಗಿಸಿಕೊಂಡು ಮತ್ತೆ ಆಫೀಸಿಗೆ ಹೋಗಿದ್ದೆ. ಆದರೆ ಸಂಜೆ 5ರ ವೇಳೆಗೆ ಕೃಷ್ಣಪ್ಪನವರು ಗದಗ್ನಲ್ಲಿ ಹುಷಾರಿಲ್ಲದೆ ಆಸ್ಪತ್ರೆಯಲ್ಲಿರುವುದಾಗಿಯೂ ಗದಗ್ನಿಂದ ಫೋನ್ ಬಂದಿರುವುದಾಗಿಯೂ ನನ್ನ ಆಫೀಸಿಗೆ ಮಗಳು ಶಾಲಿನಿ ಫೋನ್ ಮಾಡಿದ್ದಳು. ಇಂದಿರಾ ಆಫೀಸ್ ಮುಗಿಸಿ ಮನೆಗೆ ಬರುವ ವೇಳೆಗೆ ನನ್ನ ಹೆಂಡತಿ ಗಾಯತ್ರಿಗೂ ಫೋನ್ ಮಾಡಿ ತಿಳಿಸಿದೆ. ಅರ್ಜೆಂಟಾಗಿ ನಾವು ಎಲ್ಲರೂ ಗದಗ್ಗೆ ಹೋಗಿ ಮೇಷ್ಟçರನ್ನ ಕರೆದುಕೊಂಡು ಬಂದು ಇಲ್ಲಿಯೇ ಶುಶ್ರೂಷೆ ಕೊಡಿಸುವ ಎಂದು ಮಾತಾಡಿಕೊಂಡು ರಾತ್ರಿಯೇ ಬೆಂಗಳೂರಿನಿಂದ ಹೊರಟು ಮಧ್ಯೆ ರಾತ್ರಿ ನಮ್ಮೂರ ಬಳಿ ನಿಂತು ನಮ್ಮ ಊರಿನವರಿಗೂ ವಿಷಯ ತಿಳಿಸಿ ಬೆಳಿಗ್ಗೆ 7 ಘಂಟೆಗೆ ಗದಗ ತಲುಪಿದೆವು.
ಬೆಂಗಳೂರು ಬಿಟ್ಟು ಹೊರಟಾಗ ಅವರ ಆರೋಗ್ಯದಲ್ಲಿನ ಸಮಸ್ಯೆ ಸ್ಪಷ್ಟವಾಗಿ ಏನೆಂದು ತಿಳಿಯದಿದ್ದರೂ-ಅವರ ಬಿಡುವಿಲ್ಲದ ತಿರುಗಾಟಕ್ಕೆ ತಡೆಹಾಕಿ ಆರೋಗ್ಯದ ಕಡೆ ಗಮನ ನೀಡಲು ಏನೆಲ್ಲ ಕ್ರಮ ಜರುಗಿಸಬೇಕೆಂದು ನನ್ನ ಹೆಂಡತಿ ಗಾಯತ್ರಿ ಇಂದಿರಾಗೆ ಸಲಹೆ ನೀಡುತ್ತಿದ್ದಳು. ಕೃಷ್ಣಪ್ಪನವರ ಆರೋಗ್ಯ ಕೆಡಿಸುವಂತಹ ಅಭ್ಯಾಸಗಳು ಅವರಿಗೆ ಮೊದಲಿನಿಂದಲೂ ಇರಲಿಲ್ಲ. ಡಿಎಸ್ಎಸ್ನ ಸಮಾವೇಶಗಳಲ್ಲೂ ಕೂಡ ಎಲ್ಲರಿಗೂ ಸ್ವಚ್ಛತೆ, ವ್ಯಾಯಾಮ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರಭಾವಿಸುತ್ತಿದ್ದರು. ಕೊಳಕುತನ, ಸೋಮಾರಿತನ ಬಾಲ್ಯದಿಂದಲೂ ಕೃಷ್ಣಪ್ಪನವರ ಬಳಿ ಸುಳಿದಿರಲಿಲ್ಲ. ಊಟ ಉಪಚಾರಗಳಲ್ಲೂ ಶಿಸ್ತುಬದ್ದರಾಗಿದ್ದು ಅವರಿಗೆ ಅನಾರೋಗ್ಯ ಎಂಬ ಮಾತು ಕೇಳಿರಲಿಲ್ಲ. ಈ ಕಾರಣದಿಂದ ಏನಾದರೂ ಆಗಿರಲಿ ಬಂದ ನಂತರ ಅವರನ್ನು ಹೆಚ್ಚು ತಿರುಗಾಡಲು ಬಿಡಬಾರದೆಂಬ ತೀರ್ಮಾನ ಮಾಡಿಕೊಂಡು ನಾವೆಲ್ಲ ಗದಗ್ ಕಡೆ ಹೊರಟಿದ್ದೆವು.
ಹೋದಾಕ್ಷಣ ಅವರನ್ನು ಐಸಿಯುನಲ್ಲಿ ನಾವು ಮೂವರೂ ಹೋಗಿ ನೋಡಿದೆವು. ಕಣ್ಣು ಬಿಟ್ಟು ನೋಡಿದ್ದನ್ನು ಬಿಟ್ಟರೆ ಬೇರೇನೂ ಮಾತಾಡಲಿಲ್ಲ. ಇಂತಹ ಪರಿಸ್ಥಿತಿಯನ್ನು ನಾವ್ಯಾರು ನಿರೀಕ್ಷಿಸಿರಲಿಲ್ಲ. ದಾರಿಯುದ್ದಕ್ಕೂ ಯೋಚಿಸಿಕೊಂಡು ಬಂದದ್ದಕ್ಕೂ ಇಲ್ಲಿನ ಪರಿಸ್ಥಿತಿ ನೋಡಿ ನಾವೆಲ್ಲಾ ಗರಬಡಿದಂತಾಗಿ ಕೂತಿದ್ದೆವು. ಗಾಯತ್ರಿ, ಇಂದಿರಾ ಮಾತಾಡದೆ ಉಸಿರಾಡುತ್ತಿದ್ದರು. ಮತ್ತೆ 10-15 ನಿಮಿಷಗಳಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎಂದು ವಾರ್ಡ್ ಬಾಯ್ ಹೇಳಿದಾಗ ನಾವೆಲ್ಲ ಒಳಗೆ ಹೋದೆವು. ಬಂದ ಡಾಕ್ಟರ್ ನಮ್ಮನ್ನೆಲ್ಲ ಮತ್ತೆ ಹೊರಹೋಗಲು ಹೇಳಿ ಶುಶ್ರೂಷೆ ಮಾಡುತ್ತಿದ್ದರು. ಏನಾಯಿತು, ಹೇಗಾಯಿತು ಎಂದು ನಾವುಗಳೆಲ್ಲ ಸಾವರಿಸಿಕೊಳ್ಳುತ್ತಿರುವಾಗಲೇ ಮೇಷ್ಟರು ಕೊನೆಯುಸಿರೆಳೆದಿದ್ದರು. ಅಂದು ದಿನಾಂಕ 30-4-1997 ಬೆಳಗಿನ 8.30 ಇರಬಹುದು. ನಾವು ಬಂದು ನೋಡಿ ನಂತರ ಫ್ರೆಶ್ ಆಗಿ ನಂತರ ಏನು ಮಾಡುವುದು ಎಂದು ಯೋಚಿಸುವ ಮುನ್ನ ಇದೆಲ್ಲ ಆಗಿ ಹೋಗಿತ್ತು.
ಈಚೆ ಬಂದ ನನಗೆ ಸಾವನ್ನ ಹೀಗೆ ನೇರವಾಗಿ ಎದುರಿಸಿದ ಸಂದರ್ಭಗಳು ಇರಲಿಲ್ಲ. ಮುಂದಿನ ವಿಚಾರವನ್ನು ಯೋಚನೆ ಮಾಡುತ್ತಲೇ ಹತ್ತಿರದಲ್ಲಿದ್ದ ಟೆಲಿಫೋನ್ ಬೂತ್ನಿಂದ ಮೈಸೂರಿನಲ್ಲಿದ್ದ ಮಗಳು ಸೀಮಾ ಮತ್ತು ಬೆಂಗಳೂರಿನಲ್ಲಿದ್ದ ಶಾಲುಗೆ ಹಾಗೂ ಬೆಂಗಳೂರಿನ ವಿಧಾನಸೌಧದಲ್ಲಿ ಪಿಎಸ್ ಆಗಿದ್ದ ಬಸವಣ್ಯಪ್ಪನಿಗೆ ತಿಳಿಸಿ ಎಲ್ಲಾ ಡಿಎಸ್ಎಸ್ ಸ್ನೇಹಿತರಿಗೆ ತಿಳಿಸಲು ಹೇಳಿದೆ. ಹರಿಹರದಲ್ಲಿನ ಮೇಷ್ಟರ ತಮ್ಮಂದಿರಿಗೆ ಸುದ್ದಿ ತಿಳಿಸಿ ಬಂದೆ. ಸಿರಸಿಯಲ್ಲಿದ್ದ ಮೇಷ್ಟರ ಇನ್ನೊಬ್ಬ ತಮ್ಮ ಮಾರುತಿಗೆ ತಿಳಿಸಿ ಮೇಷ್ಟರ ಪಾರ್ಥಿವ ಶರೀರವನ್ನು ಹರಿಹರಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ವ್ಯವಸ್ಥೆ ಮಾಡಿದೆ. ಆಸ್ಪತ್ರೆಯ ರೀತಿನೀತಿಗಳನ್ನು ಮುಗಿಸಿ-ಸಮಾಧಿಯಾಗುವುದು ಇನ್ನೂ ಒಂದು ದಿನ ತಡವಾಗುವುದರಿಂದ ದೇಹಕ್ಕೆ ಬೇಕಾದ ರೀತಿಯಲ್ಲಿ ಇಂಜೆಕ್ಷನ್ ಕೊಡಿಸಿ ಸುಮಾರು 3-4 ಗಂಟೆಗೆ ಗದಗ ಬಿಟ್ಟು ಹರಿಹರ ಟೌನ್ನಲ್ಲಿದ್ದ ಮೇಷ್ಟರ ಮನೆಗೆ ಸಂಜೆ 7 ಗಂಟೆಯ ಸಮಯಕ್ಕೆ ತಲುಪಿದ್ದೆವು.
ರಾತ್ರಿ ಭಜನೆ ಮಾಡಲು ವ್ಯವಸ್ಥೆ ಮಾಡಿ ನಂತರ ಮೇಷ್ಟರ ಸಂಸ್ಕಾರ ಎಲ್ಲಿ ಏನು ಎಂದು ಅವರ ತಮ್ಮಂದಿರು ತಂಗಿಯರ ಜೊತೆ ಮಾತಾಡಿದಾಗ ಅದೆಲ್ಲ ತುಂಗಭದ್ರಾ ನದಿಯ ದಡದಲ್ಲಿ ಮಾಡುವುದು ಎಂದು ತಿಳಿಸಿದರು. ಈ ಬಗ್ಗೆ ದುಃಖದಲ್ಲಿ ಮುಳುಗಿದ್ದ ಇಂದಿರಾ ಜೊತೆ ಏನೂ ಮಾತಾಡುವ ಸ್ಥಿತಿಯಲ್ಲಿರಲಿಲ್ಲ. ಇದೇ ಚಿಂತೆಯಲ್ಲಿ ನಾನು ಮೂರು ಕಿ.ಮೀ. ದೂರದ ನಮ್ಮ ಊರಿಗೆ ಬಂದಿಳಿದೆ. ರಾತ್ರಿಯಲ್ಲಿ ನಿದ್ದೆ ಬಾರದೆ ಒದ್ದಾಡಿದೆ. ಹರಿಹರ ತುಂಗಾ ನದಿ ದಡದಲ್ಲಿ ಸಂಸ್ಕಾರ ಮಾಡುವ ಅವರ ನಿರ್ಧಾರವನ್ನು ತಿಳಿದು ಮನಸ್ಸಿಗೆ ಒಂದು ಚಿಂತೆಯಾಯಿತು. ಇಷ್ಟೊಂದು ಹೋರಾಟದ ಜೀವನ ನಡೆಸಿದ ಮನುಷ್ಯನ ನೆನಪು ನಾಳೆಗೆ ಭೌತಿಕವಾಗಿ ಕೊನೆಯಾಗುವ ಬಗ್ಗೆ ಚಿಂತೆಯಾಯಿತು. ನಾನು ನಮ್ಮ ಅಣ್ಣ ಅವ್ವ ಇವರ ಜೊತೆ ಚರ್ಚಿಸಿ-ನಮ್ಮ ತೋಟದ ಜಮೀನಿನಲ್ಲಿ ಸಮಾಧಿ ಮಾಡಿದರೆ ಹೇಗೆ ಎಂದು ಯೋಚಿಸಿ, ಬೆಳಿಗ್ಗೆ ಈ ನನ್ನ ಯೋಚನೆಯನ್ನು ಮೇಷ್ಟರ ತಮ್ಮ ಮಾರುತಿ ಬಳಿ ಚರ್ಚಿಸಿ ನಂತರ ಎಲ್ಲ ಅವರ ಸಂಬಂಧಿಗಳಿಗೂ ವಿಚಾರಿಸಿದೆ. ಅವರೆಲ್ಲರೂ ನನ್ನ ಸಲಹೆಗೆ ಒಪ್ಪಿದರು. ಅದರಂತೆ ಎಲ್ಲಾ ಡಿಎಸ್ಎಸ್ನ ಕರ್ಯಕರ್ತರಿಗೆ, ಅಧ್ಯಾಪಕರಿಗೆ, ರಾಜಕಾರಣಿಗಳಿಗೆ ತಿಳಿಸಿದೆವು. ಹರಿಹರದಿಂದ ನಮ್ಮೂರಿನಿಂದಲೇ ತರಿಸಿದ್ದ ಟ್ರಾಕ್ಟರ್ನಲ್ಲಿ ನಮ್ಮ ತೋಟದಲ್ಲಿ ಸುಮಾರು 4 ಗಂಟೆಯ ಸಮಯಕ್ಕೆ 1-5-1997ರಂದು ಕೃಷ್ಣಪ್ಪನವರ ಅಂತಿಮ ಕಾರ್ಯವನ್ನು ಮಾಡಿದೆವು. ಅಂತಿಮ ದರ್ಶನ ಪಡೆಯಲು ರಾಜ್ಯದಾದ್ಯಂತ ಪ್ರಗತಿಪರರು, ಡಿಎಸ್ಎಸ್ ಕರ್ಯಕರ್ತರು, ರಾಜಕಾರಣಿಗಳ ದಂಡೇ ಆಗಮಿಸಿತ್ತು. ಸಮಾಧಿಯಾದ ನಂತರ ಡಿಎಸ್ಎಸ್ನ ಎಲ್ಲಾ ಬಣಗಳ ಕರ್ಯಕರ್ತರೂ ಕೃಷ್ಣಪ್ಪನವರ ಹೋರಾಟದ ಆಶಯಗಳನ್ನು ಈಡೇರಿಸಲು ಅಂದು ಪ್ರಮಾಣ ಮಾಡುವ ಪ್ರತಿಜ್ಞೆ ಮಾಡಿ ನಿರ್ಗಮಿಸಿದ್ದರು.
1997ರಲ್ಲಿ ಕೃಷ್ಣಪ್ಪನವರ ನಿರ್ಗಮನದ ನಂತರ ಕರ್ನಾಟಕದ ದಲಿತ ಹೋರಾಟದ ಸಮಗ್ರ ಚಿತ್ರಣ ಹಲವು ಟಿಸಿಲುಗಳಾಗಿ ಹೊರಹೊಮ್ಮಿದ್ದವು. ನನ್ನ ಸರ್ಕಾರಿ ನೌಕರಿಯ ಜೊತೆ ಎಲ್ಲ ಬಣಗಳಲ್ಲಿ ನನಗೆ ಬಲ್ಲವರಿದ್ದರೂ ಯಾರೊಡನೆ ಒಡನಾಡುವುದು ಎಂಬ ಪ್ರಶ್ನೆ ಮೂಡುತ್ತಿತ್ತು. ಆದರೂ ಯಾರು ಏನೇ ಕರ್ಯಕ್ರಮ ಮಾಡುವಾಗ ಸಹಕಾರ ನೀಡಲು ಕೋರಿದರೆ ಮುಕ್ತ ಮನಸ್ಸಿನಿಂದ ಸಹಾಯ ಮಾಡುತ್ತಿದ್ದೆ.
ಕೃಷ್ಣಪ್ಪನವರ ನಿಧನಾನಂತರ ಬಿಎಸ್ಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕಾನ್ಷಿರಾಮ್ ಅವರು ಯಲಹಂಕದಲ್ಲಿದ್ದ ಕೃಷ್ಣಪ್ಪನವರ ಮನಗೆ ಬಂದು ಇಂದಿರಾ ಮತ್ತು ಅವರ ಇಬ್ಬರು ಮಕ್ಕಳು ಶಾಲಿನಿ, ಸೀಮಾ ಅವರಿಗೆ ಸಾಂತ್ವನ ಹೇಳಿದರು. ತಕ್ಷಣದ ಅಗತ್ಯಗಳಿಗೆ ಎಂಬ ಕಾರಣದಿಂದಲೋ ಏನೋ ಎರಡು ಲಕ್ಷ ರೂಪಾಯಿಗಳನ್ನು ಇಂದಿರಾ ಅವರ ಕುಟುಂಬಕ್ಕೆ ನೀಡಿದ್ದರು. ಆದರೆ ಇಂದಿರಾ ಅವರು ನನಗೀಗ ಸರ್ಕಾರಿ ನೌಕರಿ ಇರುವ ಕಾರಣ ನೀಡಿ, ಅದನ್ನು ಕೃಷ್ಣಪ್ಪನವರ ಹೆಸರಿನಲ್ಲಿ ಮುಂದೆ ಸ್ಥಾಪಿಸಿದ ಟ್ರಸ್ಟ್ನ ಹೆಸರಿನಲ್ಲಿ ನಡೆಸುವ ಕರ್ಯಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿ ಆ ಹಣವನ್ನು ಒಪ್ಪಿಕೊಂಡಿದ್ದರು. ಅದರಂತೆ ಕಾನ್ಷಿರಾಮ್ ಅವರು ನೀಡಿದ ಹಣ, 1997ರಲ್ಲಿ ಸ್ಥಾಪಿಸಿದ ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನಲ್ಲಿ ಮೂಲಧನವಾಗಿ ಉಳಿದಿದೆ. ಕೃಷ್ಣಪ್ಪನವರ ಆಶಯದಂತೆ ಕರ್ಯಕ್ರಮಗಳನ್ನು ನಿರ್ವಹಿಸಿಕೊಂಡು ಕಳೆದ 24 ವರ್ಷಗಳಿಂದ ಬರುತ್ತಿದ್ದೇವೆ.
ಕೃಷ್ಣಪ್ಪನವರು ಕಾಲವಾದ ಎರಡು ತಿಂಗಳಲ್ಲಿ ಡಿಎಸ್ಎಸ್ನ ಅವರ ಅನುಯಾಯಿಗಳಲ್ಲಿ ನಾನು ಮತ್ತು ಇಂದಿರಾ ಮನವಿ ಮಾಡಿ ಕೃಷ್ಣಪ್ಪನವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸುವ ಬಗ್ಗೆ ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆಯನ್ನು ಅರ್ಕೇಶ್ ಇದ್ದ ಸಿಆರ್ಪಿಎಫ್ನಲ್ಲಿನ ಒಂದು ಸಭಾಂಗಣದಲ್ಲಿ ಕರೆದಿದ್ದೆವು. ಆ ಸಭೆಗೆ ಸಾಕಷ್ಟು ಜನ ಬಾರದಿದ್ದರಿಂದ ಮತ್ತೊಂದು ಬಾರಿ ಎಲ್ಲರಿಗೂ ತಿಳಿಹೇಳಿ 9 ಅಥವಾ 11 ಜನರಿರುವ ಒಂದು ಟ್ರಸ್ಟ್ ಸ್ಥಾಪಿಸುವ ಬಗ್ಗೆ ಮತ್ತೆ ಸಭೆ ಕರೆದೆವು. ಎರಡನೇ ಸಭೆಯಲ್ಲಿ ಬಂದವರ ಅಭಿಪ್ರಾಯ ಪಡೆದು 11 ಜನರಲ್ಲಿ ದಲಿತ ಹೋರಾಟಗಾರರು, ಕೃಷ್ಣಪ್ಪನವರ ಕುಟುಂಬ ಮತ್ತು ಅವರ ಸಹಪಾಠಿಗಳನ್ನು ಸೇರಿದಂತೆ ಟ್ರಸ್ಟ್ ಸದಸ್ಯರ ಹೆಸರುಗಳನ್ನು ಅಂತಿಮಗೊಳಿಸಿದೆವು.
ನಾನು ಮತ್ತು ಇಂದಿರಾ ಮ್ಯಾನೇಜಿಂಗ್ ಟ್ರಸ್ಟಿಗಳು. ಕೃಷ್ಣಪ್ಪನವರ ಸಹಪಾಠಿಗಳಾಗಿದ್ದ ಆರ್. ನಾಗರಾಜ್ ಮತ್ತು ಕೃಷ್ಣಪ್ಪನವರ ಕಿರಿಯ ಸಹೋದರ ಬಿ. ಮಾರುತಿ, ನಮ್ಮ ಸಹೋದರ ಸಿ. ತಿಪ್ಪಣ್ಣ ಮತ್ತು ಉಳಿದಂತೆ ಡಿಎಸ್ಎಸ್ನಲ್ಲ್ಲಿದ್ದ ಕೃಷ್ಣಪ್ಪನವರ ಅನುಯಾಯಿಗಳಾದ ಚಿತ್ರದುರ್ಗದ ಜಯಣ್ಣ, ಶ್ರೀಧರ ಕಲಿವೀರ, ಮಾವಳ್ಳಿ ಶಂಕರ್, ಬಿಎಸ್ಪಿಯಲ್ಲಿದ್ದ ಮಾರಸಂದ್ರದ ಮುನಿಯಪ್ಪನವರ ಹೆಸರುಗಳನ್ನು ಅಂತಿಮಗೊಳಿಸಿದ್ದೆವು. ಎರಡು ಬಾರಿ ಎಲ್ಲರೂ ಸೇರಿ ನೋಂದಾಯಿಸಲು ಸಬ್ ರಿಜಿಸ್ಟಾçರ್ ಆಫೀಸಿಗೆ ಬರುವಂತೆ ದಿನಾಂಕ ನಿಗದಿ ಮಾಡಿದ್ದರೂ ಕೆಲವರು ಕೊನೆಯವರೆಗೂ ಬಾರದ ಕಾರಣ ಬಂದವರಲ್ಲಿ ಏಳು ಜನರಿರುವ ಟ್ರಸ್ಟ್ವೊಂದನ್ನು ದಿನಾಂಕ 28-11-97ರಲ್ಲಿ ಸ್ಥಾಪಿಸಿದೆವು. ಕೃಷ್ಣಪ್ಪನವರ ಆಶಯಗಳನ್ನು ಟ್ರಸ್ಟಿನ ಧ್ಯೇಯೋದ್ದೇಶಗಳಲ್ಲಿ ಉಲ್ಲೇಖಿಸಿ ನೊಂದಾಯಿಸಿದೆವು. ಅಂದಿನಿಂದ ಇಂದಿನವರೆಗೆ ಸುಮಾರು 24 ವರ್ಷಗಳಲ್ಲಿ ರಾಜ್ಯದಾದ್ಯಂತ ದಲಿತ ಹೋರಾಟಗಳಿಗೆ ಒತ್ತಾಸೆಯಾಗಿ, ಸಮಾನತೆ ಸಹೋದರತೆ ಸಾರುವ ಮಾನವೀಯ ಹೋರಾಟಗಳಲ್ಲಿ ಭಾಗವಹಿಸುತ್ತಾ, ಅಂತರ್ಜಾತಿ-ಅಂತರ್ಮತೀಯ ಮತ್ತು ಸರಳ ಮದುವೆಗಳನ್ನು ಮಾಡುತ್ತಾ ಜೊತೆಗೆ, ಕೃಷ್ಣಪ್ಪನವರು ಬರೆದಿದ್ದ ಹೋರಾಟದ ಕವನ ಮತ್ತು ವೈಚಾರಿಕ ಲೇಖನಗಳನ್ನು ಪ್ರಕಟಿಸಿ ಜನರಿಗೆ ತಲುಪಿಸುತ್ತಾ ಇಂದಿಗೂ ಜನಪರ ಚಳುವಳಿಗಳಲ್ಲಿ ಕೃಷ್ಣಪ್ಪ ಟ್ರಸ್ಟ್ ಸಕ್ರಿಯವಾಗಿದೆ. ಟ್ರಸ್ಟ್ನ ಕರ್ಯಕ್ರಮಗಳ ಭಾಗವಾದ ಕೃಷ್ಣಪ್ಪ ಸಮಾಧಿ ಸ್ಥಳ ಉದ್ಘಾಟನೆಗೆ ಬಿಎಸ್ಪಿಯ ಕಾನ್ಷಿರಾಮ್ ಅವರು ಹಿರಿಯ ನ್ಯಾಯವಾದಿ ಮತ್ತು ಮಾಜಿಮಂತ್ರಿಗಳಾಗಿದ್ದ ಎಲ್.ಜಿ. ಹಾವನೂರ ಅವರು, ಮಾಜಿಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪ ಅವರು 1997ರಲ್ಲಿ ಬಂದು ಉದ್ಘಾಟಿಸಿದ್ದರು. ಅಂದಿನಿಂದ ಇಂದಿನವರೆಗೆ ನೂರಾರು ಸಾಹಿತ್ಯ, ಸಂಸ್ಕೃತಿ, ನಾಟಕ, ಹೋರಾಟಗಳ ಸಭೆ ಸಮಾರಂಭಗಳನ್ನು ಕೃಷ್ಣಪ್ಪ ಸಮಾಧಿ ಸ್ಥಳದಲ್ಲಿ ಸಂಘಟಿಸುತ್ತಾ ಬಂದಿದೆ. ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರಾದಿಯಾಗಿ ಜೊತೆಗೆ ನೂರಾರು ದಲಿತ ಹೋರಾಟಗಾರರು, ರಾಜಕಾರಣಿಗಳು ಅನೇಕ ಪ್ರಗತಿಪರರು, ರೈತ ಹೋರಾಟಗಾರರು ಗ್ರಾಮೀಣ ಜನರು ಸಮಾಧಿ ಸ್ಥಳದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುತ್ತಾರೆ.
2017ರಲ್ಲಿ ಸಮಾಧಿ ಸ್ಥಳದಲ್ಲಿ ಸರ್ಕಾರದ ಸಹಾಯದಿಂದ ಕೃಷ್ಣಪ್ಪ ಸ್ಮಾರಕ ಭವನ ನಿರ್ಮಿಸಿದ್ದು, ಅಲ್ಲಿ ಲೈಬ್ರರಿ ಮತ್ತು ಸ್ಮರಣಲೋಕವನ್ನು ಕೃಷ್ಣಪ್ಪನವರ ಹೋರಾಟದ ವಿವರಗಳನ್ನು ಒಳಗೊಂಡಂತೆ ಕಲೆ ಹಾಕಿದೆ. ಅನೇಕ ಪ್ರಗತಿಪರ ಕರ್ಯಕ್ರಮಗಳು ಜನಪರ ಗ್ರಾಮೀಣ ಜನರು ಅದರ ಸದುಪಯೋಗ ಪಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ.
ಕೃಷ್ಣಪ್ಪನವರು ತೀರಿದ ಎರಡು ತಿಂಗಳಲ್ಲಿ ಯಲಹಂಕದಲ್ಲಿನ ಪ್ರಗತಿಪರರೊಡನೆ ಜೊತೆಗೂಡಿ ಕೃಷ್ಣಪ್ಪನವರ ಸ್ಮರಣ ಕರ್ಯಕ್ರಮ ಆಯೋಜಿಸಿದ್ದೆವು. ಆ ಸಭೆಗೆ ನಮ್ಮ ನಗರಸಭೆಯ ಸದಸ್ಯರು ಮತ್ತು ಅನೇಕ ಪ್ರಗತಿಪರರು ಕೈಜೋಡಿಸಿದ್ದರು. ಸಭೆಗೆ ಡಿಎಸ್ಎಸ್ ನಾಯಕರು ಮತ್ತು ಅಂದಿನ ವಿಧಾನಸಭಾ ಅಧ್ಯಕ್ಷರಾಗಿದ್ದ ಡಿ. ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕೃಷ್ಣಪ್ಪನವರ ಹೋರಾಟ ಮತ್ತು ತ್ಯಾಗಗಳ ಬಗ್ಗೆ ನುಡಿನಮನ ಸಲ್ಲಿಸಿದ್ದರು.
ನಮ್ಮ ಊರಿನಿಂದ ಒಂದು ದೊಡ್ಡ ದಂಡೇ ಬ್ಯಾಂಡ್ಸೆಟ್ ಜೊತೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಬಸವಲಿಂಗಪ್ಪನವರ ಸಮಾಧಿ ಸ್ಥಳದಿಂದ ಯಲಹಂಕದಲ್ಲಿ ನಡೆಸುತ್ತಿದ್ದ ಕೃಷ್ಣಪ್ಪನವರ ಸ್ಮರಣ ಸಮಾರಂಭದವರೆಗೆ ಮೆರವಣಿಗೆ ಮಾಡಿಕೊಂಡು ಬಂದು ಕೃಷ್ಣಪ್ಪನವರ ಬದುಕು, ಹೋರಾಟ, ಡಿಎಸ್ಎಸ್ ಸಂಘಟನೆಯನ್ನು ಸ್ಥಾಪಿಸಿ ಹೋರಾಟ ಮಾಡಿದ ವಿವಿಧ ವಿಷಯಗಳ ಬಗ್ಗೆ ಅಂದಿನ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಮಾತನಾಡಿ ಕೃಷ್ಣಪ್ಪನವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243



