ದಿನದ ಸುದ್ದಿ
ಪೌರತ್ವ ತಿದ್ದುಪಡಿ ಮಸೂದೆ (CAB) 2019 ತಿರಸ್ಕರಿಸಲು ಎಸ್ಎಫ್ಐ-ಡಿವೈಎಫ್ಐ ಒತ್ತಾಯ
ಸುದ್ದಿದಿನ, ಸುರಪುರ್ : ಲೋಕಸಭೆ, ರಾಜ್ಯಸಭೆಗಳಲ್ಲಿ ಮಂಜೂರು ಮಾಡಿದ ಪೌರತ್ವ (ತಿದ್ದುಪಡಿ) ಮಸೂದೆ 2019 (Citizens (Amendment) Bill-2019 CAB) ನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಮತ್ತು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) ಸಂಘಟನೆಗಳು ಬಲವಾಗಿ ವಿರೋಧಿಸಿವೆ.
ಈ ಮಸೂದೆ ದೇಶದ ಪೌರತ್ವ (ಅಥವಾ ನಾಗರಿಕತ್ವ) ವನ್ನು ಮತಧರ್ಮದ ಆಧಾರದ ಮೇಲೆ ನಿರ್ಧರಿಸುತ್ತಿರುವುದು ಖಂಡನೀಯ.
ಭಾರತ ಸಮಾನವಾಗಿ ಎಲ್ಲಾ ಮತಧರ್ಮಗಳ ಮತ್ತು ಎಲ್ಲಾ ಪ್ರದೇಶಗಳ ಜನರ ದೇಶ. ಆದ್ದರಿಂದ ಭಾರತ ಅವರೆಲ್ಲರನ್ನೂ ಸಮಾನವಾಗಿ ಕಾಣಬೇಕು.
ವಿಪರೀತ ತಾರತಮ್ಯ ತೋರುವ ಈ ಮಸೂದೆಯನ್ನು ಲೋಕಸಭೆ ಭಾರೀ ಬಹುಮತದಿಂದ ಹಾಗೂ ರಾಜ್ಯ ಸಭೆಯಲ್ಲಿಯೂ ಕೂಡ ಮಂಜೂರು ಮಾಡಿವೆ.
ಆದರೆ, ಇದರ ವಿರುದ್ಧ ತೀವ್ರ ಅತೃಪ್ತಿ ಹೊಗೆಯಾಡುತ್ತಿದೆ. ಈ ಮಸೂದೆಯನ್ನು ಲೋಕಸಭೆ, ರಾಜ್ಯ ಸಭೆಯಲ್ಲಿ ಮಂಜೂರು ಮಾಡುತ್ತಿರುವಾಗ, ಈಶಾನ್ಯ ಭಾರತದ ವಿದ್ಯಾರ್ಥಿಗಳು 11 ಗಂಟೆಗಳ ಬಂದ್ ಆಚರಿಸುತ್ತಿದ್ದರು. ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಮಸೂದೆಯು ನೆರೆಯ ಮೂರು ದೇಶಗಳ ಮುಸ್ಲಿಮರನ್ನು ನಮ್ಮ ದೇಶದ ಪೌರತ್ವಕ್ಕೆ ಅರ್ಜಿ ಸಲ್ಲಿಸುವುದರಿಂದ ಹೊರಗಿಡುತ್ತದೆ ಮಾತ್ರವಲ್ಲ, ಪೌರತ್ವದ ದಾಖಲೆಗಳನ್ನು ಒದಗಿಸಲಾಗದ ಭಾರತೀಯ ಮುಸ್ಲಿಮರ ಪೌರತ್ವವನ್ನು ರದ್ದುಗೊಳಿಸಿ ಕ್ಯಾಂಪ್ ಗಳಿಗೆ ತಳ್ಳುತ್ತದೆ. ಭಾರತದ ಪೌರತ್ವಕ್ಕೆ ಮತಧರ್ಮದ ಪರೀಕ್ಷೆ ಒಡ್ಡಿರುವುದರಿಂದ ಈ ಮಸೂದೆ, ನಮ್ಮ ದೇಶದ ಸಂವಿಧಾನದಲ್ಲಿ ಪ್ರತಿಷ್ಟಾಪಿಸಲಾಗಿರುವ ಸಮಾನತೆ ಮತ್ತು ಸೆಕ್ಯುಲರಿಸಂ ಗಳ ನೀತಿಗಳನ್ನು ಉಲ್ಲಂಘಿಸುತ್ತದೆ.
ಪೌರತ್ವ ದಾಖಲಾತಿಯನ್ನು (NRC) ದೇಶದಾದ್ಯಂತ ನಡೆಸುವುದೆ ರಾಜಕೀಯ ದುರುದ್ದೇಶಕ್ಕಾಗಿ. ಈಗ ಅದಕ್ಕೆ ತಿದ್ದುಪಡಿ ಮಸೂದೆಯ ಮೂಲಕ ಮತ್ತಷ್ಟು ಕೋರೆ ಹಲ್ಲುಗಳನ್ನು ಒದಗಿಸಿದೆ. ಇದು ಮುಸಲ್ಮಾನರಲ್ಲಿ ದಾಖಲೆ ಒದಗಿಸಲಾಗದಿದ್ದರೆ ನಾಗರಿಕ ಹಕ್ಕುಗಳನ್ನು ಕಳೆದುಕೊಳ್ಳುವ ಭೀತಿಯನ್ನು ಸೃಷ್ಟಿಸಿದರೆ, ಕೇಂದ್ರ ಸರಕಾರ ಕೇಳುವ ದಾಖಲೆ ಒದಗಿಸಲು ನೂರ ಮೂವತ್ತು ಕೋಟಿ ನಾಗರಿಕರೂ ಧರ್ಮ ಭೇದವಿಲ್ಲದೆ ತೀವ್ರ ಸಂಕಷ್ಟಗಳಿಗೆ ಗುರಿಯಾಗ ಬೇಕಾಗುತ್ತದೆ. ದಾಖಲೆಗಳು ಹೊಂದಿಲ್ಲದ ಆದಿವಾಸಿಗಳು, ಅಲೆಮಾರಿಗಳು, ಬಡವರು ಪೌರತ್ವ ಪಡೆಯಲು ಅಪಾರ ವೇದನೆಗೆ ಗುರಿಯಾಗಬೇಕಾಗುತ್ತದೆ. ಒಟ್ಟಾರೆ ಬಿಜೆಪಿ ಸರ್ಕಾರ ತನ್ನ ಆಡಳಿತ ವೈಫಲ್ಯಗಳಿಂದ ಸೃಷ್ಟಿಯಾಗುತ್ತಿರುವ ಜನಾಕ್ರೋಶದ ದಿಕ್ಕನ್ನು ತಪ್ಪಿಸಲು ಈ ಕಾಯ್ದೆಯನ್ನು ಮುಂದಕ್ಕೆ ತಂದಿದೆ. ಇದು ಬಿಜೆಪಿಯ ಒಡೆದಾಳುವ ನೀತಿಯ ಮುಂದುವರಿದ ಭಾಗ.
ಭಾರತವು, ಮ್ಯಾನ್ಮಾರ್ ನಲ್ಲಿ ತೀವ್ರ ಕಿರುಕುಳ ಮತ್ತು ದಮನಕಾರಿ ಹಿಂಸೆಗಳನ್ನು ಎದುರಿಸುತ್ತಿರುವ ರೊಹಿಂಗ್ಯನ್ ಮುಸ್ಲಿಂ ನಿರಾಶ್ರಿತರ ಆಗಮನವನ್ನು ಎದುರಿಸುತ್ತಿದೆ. ಅವರ ಬಳಿ ವಿಶ್ವಸಂಸ್ಥೆಯ ಮಾನ್ಯತೆ ಪಡೆದ ನಿರಾಶ್ರಿತ ಕಾರ್ಡು ಇದ್ದರೂ ಭಾರತ ಸರಕಾರ ಅವರನ್ನು ದೇಶದಿಂದ ಹೊರದಬ್ಬಲು ಪ್ರಯತ್ನಿಸುತ್ತಿದೆ. ಈ ಕ್ರಮವನ್ನು ಈ ಮಸೂದೆ ಕಾನೂನುಬದ್ಧಗೊಳಿಸುತ್ತದೆ.
ಮತ, ಧರ್ಮದ ಮೇಲೆ ದೇಶವನ್ನು ವಿಭಜಿಸುವುದನ್ನು ಎಸ್ಎಫ್ಐ-ಡಿವೈಎಫ್ಐ ಸಂಘಟನೆಗಳು ಒಪ್ಪುವುದಿಲ್ಲ. ಅಲ್ಲದೇ ಪಾರ್ಲಿಮೆಂಟು ಮಂಜೂರು ಮಾಡಿದ ಈ ಭೀಕರ ಮಸೂದೆಯನ್ನು ತಿರಸ್ಕರಿಸಲು ಹಾಗೂ ಅದನ್ನು ವಾಪಸು ಪಡೆಯಬೇಕೆಂದು ಒತ್ತಾಯಿಸುತ್ತವೆ.
ಈ ಸಂದರ್ಭದಲ್ಲಿ SFI ಜಿಲ್ಲಾ ಕಾರ್ಯದರ್ಶಿ ರಮೇಶ್ ವೀರಾಪುರ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯ ಶಿವಪ್ಪ ಬ್ಯಾಗವಾಟ್, ಎಸ್ಎಫ್ಐ ಜಿಲ್ಲಾ ಸಮಿತಿ ಸದಸ್ಯ ತಿಪ್ಪಣ್ಣ ನಿಲೋಗಲ್, ಬಸವಂತ ಹಿರೆ ಕಡಬೂರ್, ಎಸ್ಎಫ್ಐ ತಾಲೂಕ ಮುಖಂಡರಾದ ಅಮರೇಗೌಡ, ಬಸಲಿಂಗ, ಮುತ್ತುರಾಜ್, ನಾಗರಾಜ್, ವೆಂಕಟೇಶ್, ಯಮನೂರ್, ಅಮರೇಶ್ ನಾಯಕ್, ಮಲ್ಲಪ್ಪ, ಬಸವರಾಜ, ಅಮರಯ್ಯ, ಅವಿನಾಶ್, ನಾಗರಾಜ್ ಅಂಚಿನಾಳ್, ಡಿವೈಎಫ್ಐ ತಾಲೂಕ ಮುಖಂಡರಾದ ಬಸವರಾಜ ಸಿರೋಟಿ, ಕಂಟೆಪ್ಪ, ಕೆ ಪಿ ಆರ್ ಎಸ್ ಮುಖಂಡರಾದ ಸದ್ದಾಮ್ ಹುಸೇನ್, ಮಹಮ್ಮದ್ ಸಾಬ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980436243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ4 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ1 day agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

