Connect with us

ದಿನದ ಸುದ್ದಿ

ವಡಗೇರಾ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಕರವೇ ಪ್ರತಿಭಟನೆ

Published

on

  • ವರದಿ : ನಿಂಗಣ್ಣ

ಸುದ್ದಿದಿನ,ವಡಗೇರಾ : ವಡಗೇರಾ ನೂತನ ತಾಲೂಕು ಕೇಂದ್ರವಾಗಿ ಎರಡು ವರ್ಷ ಕಳೆದರೂ ಅಭಿವೃದ್ಧಿಮರೀಚಿಕೆಯಾಗಿದೆ. ತಹಶೀಲ್ದಾರ್ ಕಾರ್ಯಲಯ ಬಿಟ್ಟು ಇನ್ನುಳಿದ ಇಲಾಖೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಇಂದು ಕರವೇ ಜಿಲ್ಲಾ ಘಟಕ ಸೋಮವಾರ ಪ್ರತಿಭಟನೆ ನಡೆಸಿತು.

ವಡಗೇರಾ ಬಂದ್ ಹಿನ್ನಲೆ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಮತ್ತು ಅಂಗಡಿ ಮುಂಗಟ್ಟುಗಳು ಮತ್ತುಮುಚ್ಚಲಾಗಿತ್ತು. ಸ್ಥಳೀಯ ವ್ಯಾಪಾರಿಗಳು ಭಾರಿ ಗಾತ್ರದ ಖಾಸಗಿ ವಾಹನಗಳನ್ನು ರಸ್ತೆಗೆ ಇಳಿಯದಂತೆ ರಸ್ತೆ ತಡೆದು ಕ.ರ.ವೇ ವತಿಯಿಂದ ಬೃಹತ್ ಪತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸರ್ಕಾರಿ ಸಮುದಾಯ ಆಸ್ಪತ್ರೆಯಿಂದ ವಾಲ್ಮೀಕಿ ಚೌಕದವರೆಗೋ ರಾಜ್ಯ ಸರ್ಕಾರ ದ ವಿರುದ್ಧ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಘೋಷಣೆ ಕೋಗುತ್ತಾ
ವಾಲ್ಮೀಕಿ ಚೌಕದಲ್ಲಿ ಧರಣಿ ಕೂತು
ವಡಗೇರಾ ತಾಲೂಕಿನ ಜನರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ದಿನ ನಿತ್ಯದ ಕೆಲಸಕ್ಕಾಗಿ ವಡಗೇರಾ ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಬಡ ಕಾರ್ಮಿಕರು, ವಿದ್ಯಾರ್ಥಿಗಳು,ಮಹಿಳೆಯರು, ವೃದ್ಧರು,ಅಂಗವಿಕಲರು, ಒಂದು ಸಣ್ಣ ಕೆಲಸಕ್ಕಾಗಿ ಹಳೆ ತಾಲೂಕಾದ ಶಹಾಪುರ ಪಟ್ಟಣಕ್ಕೆ ಹೋಗಬೇಕಾದ ದುಃಸ್ಥಿತಿ ಬಂದಿದೆ ಎಂದು ವಾಸ್ತವ ತೆರೆದಿಟ್ಟರು.

ವಡಗೇರಾ ತಾಲೂಕ ಹಿಂದುಳಿದ ಸಾಮಾನ್ಯ ಬಡ ಜನರ ತಾಲೂಕು ಆಗಿದ್ದು ತಮ್ಮ ಕೆಲಸ ಕಾರ್ಯಗಳು ಬಿಟ್ಟು ಹೋಗುವುದರಿಂದ ಒಂದು ದಿನ ವ್ಯರ್ಥವಾಗುತ್ತದೆ ಇದಕ್ಕೆ ನೇರ ಕಾರಣ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯ ಶಾಸಕರು ಎಂದು ಆರೋಪಿಸಿದರು.

ಜನಪ್ರತಿನಿಧಿಗಳು ಜಿಲ್ಲಾಡಳಿತದ ನಿಷ್ಕಾಳಜಿ ತನ ದಿವ್ಯ ನಿರ್ಲಕ್ಷತನ ತೋರಿಸುತ್ತದೆ ಹಿಂದುಳಿದ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಮತ್ತು ತಕ್ಷಣದಿಂದಲೇ ಎಲ್ಲ ಇಲಾಖೆಗಳು ಪ್ರಾರಂಭಮಾಡಿ ಈ ಭಾಗದ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತೆ ಅನುಕೂಲ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಟಿ. ನಾರಾಯಣಗೌಡ ಬಣ ಪ್ರತಿಭಟನೆ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿತು.

ಬೇಡಿಕೆಗಳು ಈ ರೀತಿಯಾಗಿವೆ

  1. ವಡಗೇರಾ ತಾಲ್ಲೂಕು ಎಲ್ಲಾ ಸರ್ಕಾರ ಕಚೇರಿಗಳು ಪೂರ್ಣಪ್ರಮಾಣದಲ್ಲಿ ಪ್ರಾರಂಭವಾಗಬೇಕು.
  2. ಉಪಖಜಾನೆ ಮತ್ತು ಮುದ್ರಾಂಕ ಹಾಗೂ ನೋಂದಣಿ ಇಲಾಖೆ ಪ್ರಾರಂಭಿಸಬೇಕು.
  3. ತಾಲೂಕಿಗೆ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ತಾಲೂಕು ನ್ಯಾಯಾಲಯ ಸ್ಥಾಪಿಸಬೇಕು.
  4. ತಾಲೂಕು ಕೇಂದ್ರದಿಂದ ಹೋಗುವ ಎಲ್ಲಾ ಗ್ರಾಮಗಳಿಗೆ ರಸ್ತೆ ಸುಧಾರಣೆ ಮಾಡಬೇಕು.
  5. ಈ ಭಾಗದ ರೈತರಿಗೆ ಪದವಿಪೂರ್ವ ಕಾಲೇಜು ಮಹಾವಿದ್ಯಾಲಯ ಡಿಪ್ಲೋಮ್ ಡಿ.ಇ.ಡಿ. ಬಿ.ಇ.ಡಿ ಕಾಲೇಜು ಸ್ಥಾಪನೆ ಮಾಡಬೇಕು.
  6. ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರ ವಸತಿ ನಿಲಯವನ್ನು ಮಂಜೂರು ಮಾಡಬೇಕು.
  7. ವಡಗೇರಾ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಬೇಕು.
  8. ತಾಲೂಕು ಕೇಂದ್ರದಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದು ಅದನ್ನು ತಾಲೂಕ ಆಸ್ಪತ್ರೆಯಾಗಿ ಮಾಡಬೇಕು.
  9. ಕದ್ರಾಪುರ ವಡಗೇರಾ ಕೃಷ್ಣ ಬ್ಯಾರೇಜ್ ನಿಂದ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.
  10. ಕೃಷ್ಣ ಭಾಗ್ಯ ಜಲ ನಿಗಮದಿಂದ
    ಕೈಗೆತ್ತಿಕೊಂಡಿರುವ ಕೊನೆಯ ಭಾಗದ ಕಾಲುವೆ ಕಾಮಗಾರಿಗಳು ಹಾಗೂ ನವೀಕರಣ ಕಾಮಗಾರಿಗಳು ಸಮರ್ಪಕವಾಗಿ ಮಾಡಿ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಿ ಅನುಕೂಲ ಮಾಡಿಕೊಡಬೇಕು.

ಭೀಮ ನಾಯಕ್ ಕ.ರ.ವೇ ಜಿಲ್ಲಾಧ್ಯಕ್ಷರು ಯಾದಗಿರಿ ಅಫರ ಜಿಲ್ಲಾಧಿಕಾರಿಗಳಿಗೆ ಹಾಗೂ ವಡಗೇರಾ ತಹಶೀಲ್ದಾರ್ ಸಂತೋಷಿ ರಾಣಿ ಹಾಗೂ ವಡಗೇರಾ ಪಿ.ಎಸ್.ಐ.ಸಿದ್ದಾರಾಯ ಬೂಳರ್ಗಿ ಅವರಿಗೆ ಮನವಿ ಪತ್ರ ನೀಡುವ ಮುಖಾಂತರ ಪ್ರತಿಭಟನೆಯನ್ನು
ಮುಟುಕುಗೊಳಿಸಿದರು.

ಈ ಸಂದರ್ಭದಲ್ಲಿ ಶಿವಕುಮಾರ್ ಕೊಂಕಲ್ ತಾಲೂಕ್ ಅಧ್ಯಕ್ಷರು ವಡಗೇರಾ, ಅಬ್ದುಲ್ ಚಿಗನೂರ್ ಜಿಲ್ಲಾ ಉಪಾಧ್ಯಕ್ಷರು,ಚೌಡಯ್ಯ ಬಾವೂರ ಜಿಲ್ಲಾ ಗೌರವಾಧ್ಯಕ್ಷ, ಹನುಮಂತರಾಯ ತೇಕರಾಳ ಜಿಲ್ಲಾ ಸಂಚಾಲಕರು, ಮಲ್ಲು ಕಲ್ಮನಿ ಹಾಲಗೇರ ತಾ.ಯು.ಘ.ಅಧ್ಯಕ್ಷರು, ಬಸವರೆಡ್ಡಿ ಅಭಿಶಾಳ್ ತಾ.ಪ್ರ.ಕಾರ್ಯದರ್ಶಿ, ಶಿವರಾಜ್ ಗೋನಲ್ ವಲಯ ಅಧ್ಯಕ್ಷರು ವಡಗೇರಾ,ದೇವರಾಜ್ ಕುರುಕುಂದಿ ತಾ.ಯು.ಘ.ಪ್ರ.ಕಾರ್ಯದರ್ಶಿ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending