Connect with us

ದಿನದ ಸುದ್ದಿ

ವಡಗೇರಾ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಕರವೇ ಪ್ರತಿಭಟನೆ

Published

on

  • ವರದಿ : ನಿಂಗಣ್ಣ

ಸುದ್ದಿದಿನ,ವಡಗೇರಾ : ವಡಗೇರಾ ನೂತನ ತಾಲೂಕು ಕೇಂದ್ರವಾಗಿ ಎರಡು ವರ್ಷ ಕಳೆದರೂ ಅಭಿವೃದ್ಧಿಮರೀಚಿಕೆಯಾಗಿದೆ. ತಹಶೀಲ್ದಾರ್ ಕಾರ್ಯಲಯ ಬಿಟ್ಟು ಇನ್ನುಳಿದ ಇಲಾಖೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಇಂದು ಕರವೇ ಜಿಲ್ಲಾ ಘಟಕ ಸೋಮವಾರ ಪ್ರತಿಭಟನೆ ನಡೆಸಿತು.

ವಡಗೇರಾ ಬಂದ್ ಹಿನ್ನಲೆ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಮತ್ತು ಅಂಗಡಿ ಮುಂಗಟ್ಟುಗಳು ಮತ್ತುಮುಚ್ಚಲಾಗಿತ್ತು. ಸ್ಥಳೀಯ ವ್ಯಾಪಾರಿಗಳು ಭಾರಿ ಗಾತ್ರದ ಖಾಸಗಿ ವಾಹನಗಳನ್ನು ರಸ್ತೆಗೆ ಇಳಿಯದಂತೆ ರಸ್ತೆ ತಡೆದು ಕ.ರ.ವೇ ವತಿಯಿಂದ ಬೃಹತ್ ಪತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸರ್ಕಾರಿ ಸಮುದಾಯ ಆಸ್ಪತ್ರೆಯಿಂದ ವಾಲ್ಮೀಕಿ ಚೌಕದವರೆಗೋ ರಾಜ್ಯ ಸರ್ಕಾರ ದ ವಿರುದ್ಧ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಘೋಷಣೆ ಕೋಗುತ್ತಾ
ವಾಲ್ಮೀಕಿ ಚೌಕದಲ್ಲಿ ಧರಣಿ ಕೂತು
ವಡಗೇರಾ ತಾಲೂಕಿನ ಜನರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ದಿನ ನಿತ್ಯದ ಕೆಲಸಕ್ಕಾಗಿ ವಡಗೇರಾ ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಬಡ ಕಾರ್ಮಿಕರು, ವಿದ್ಯಾರ್ಥಿಗಳು,ಮಹಿಳೆಯರು, ವೃದ್ಧರು,ಅಂಗವಿಕಲರು, ಒಂದು ಸಣ್ಣ ಕೆಲಸಕ್ಕಾಗಿ ಹಳೆ ತಾಲೂಕಾದ ಶಹಾಪುರ ಪಟ್ಟಣಕ್ಕೆ ಹೋಗಬೇಕಾದ ದುಃಸ್ಥಿತಿ ಬಂದಿದೆ ಎಂದು ವಾಸ್ತವ ತೆರೆದಿಟ್ಟರು.

ವಡಗೇರಾ ತಾಲೂಕ ಹಿಂದುಳಿದ ಸಾಮಾನ್ಯ ಬಡ ಜನರ ತಾಲೂಕು ಆಗಿದ್ದು ತಮ್ಮ ಕೆಲಸ ಕಾರ್ಯಗಳು ಬಿಟ್ಟು ಹೋಗುವುದರಿಂದ ಒಂದು ದಿನ ವ್ಯರ್ಥವಾಗುತ್ತದೆ ಇದಕ್ಕೆ ನೇರ ಕಾರಣ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯ ಶಾಸಕರು ಎಂದು ಆರೋಪಿಸಿದರು.

ಜನಪ್ರತಿನಿಧಿಗಳು ಜಿಲ್ಲಾಡಳಿತದ ನಿಷ್ಕಾಳಜಿ ತನ ದಿವ್ಯ ನಿರ್ಲಕ್ಷತನ ತೋರಿಸುತ್ತದೆ ಹಿಂದುಳಿದ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಮತ್ತು ತಕ್ಷಣದಿಂದಲೇ ಎಲ್ಲ ಇಲಾಖೆಗಳು ಪ್ರಾರಂಭಮಾಡಿ ಈ ಭಾಗದ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಸೌಲಭ್ಯಗಳು ಸಿಗುವಂತೆ ಅನುಕೂಲ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಟಿ. ನಾರಾಯಣಗೌಡ ಬಣ ಪ್ರತಿಭಟನೆ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿತು.

ಬೇಡಿಕೆಗಳು ಈ ರೀತಿಯಾಗಿವೆ

  1. ವಡಗೇರಾ ತಾಲ್ಲೂಕು ಎಲ್ಲಾ ಸರ್ಕಾರ ಕಚೇರಿಗಳು ಪೂರ್ಣಪ್ರಮಾಣದಲ್ಲಿ ಪ್ರಾರಂಭವಾಗಬೇಕು.
  2. ಉಪಖಜಾನೆ ಮತ್ತು ಮುದ್ರಾಂಕ ಹಾಗೂ ನೋಂದಣಿ ಇಲಾಖೆ ಪ್ರಾರಂಭಿಸಬೇಕು.
  3. ತಾಲೂಕಿಗೆ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ತಾಲೂಕು ನ್ಯಾಯಾಲಯ ಸ್ಥಾಪಿಸಬೇಕು.
  4. ತಾಲೂಕು ಕೇಂದ್ರದಿಂದ ಹೋಗುವ ಎಲ್ಲಾ ಗ್ರಾಮಗಳಿಗೆ ರಸ್ತೆ ಸುಧಾರಣೆ ಮಾಡಬೇಕು.
  5. ಈ ಭಾಗದ ರೈತರಿಗೆ ಪದವಿಪೂರ್ವ ಕಾಲೇಜು ಮಹಾವಿದ್ಯಾಲಯ ಡಿಪ್ಲೋಮ್ ಡಿ.ಇ.ಡಿ. ಬಿ.ಇ.ಡಿ ಕಾಲೇಜು ಸ್ಥಾಪನೆ ಮಾಡಬೇಕು.
  6. ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರ ವಸತಿ ನಿಲಯವನ್ನು ಮಂಜೂರು ಮಾಡಬೇಕು.
  7. ವಡಗೇರಾ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಬೇಕು.
  8. ತಾಲೂಕು ಕೇಂದ್ರದಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದು ಅದನ್ನು ತಾಲೂಕ ಆಸ್ಪತ್ರೆಯಾಗಿ ಮಾಡಬೇಕು.
  9. ಕದ್ರಾಪುರ ವಡಗೇರಾ ಕೃಷ್ಣ ಬ್ಯಾರೇಜ್ ನಿಂದ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.
  10. ಕೃಷ್ಣ ಭಾಗ್ಯ ಜಲ ನಿಗಮದಿಂದ
    ಕೈಗೆತ್ತಿಕೊಂಡಿರುವ ಕೊನೆಯ ಭಾಗದ ಕಾಲುವೆ ಕಾಮಗಾರಿಗಳು ಹಾಗೂ ನವೀಕರಣ ಕಾಮಗಾರಿಗಳು ಸಮರ್ಪಕವಾಗಿ ಮಾಡಿ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಿ ಅನುಕೂಲ ಮಾಡಿಕೊಡಬೇಕು.

ಭೀಮ ನಾಯಕ್ ಕ.ರ.ವೇ ಜಿಲ್ಲಾಧ್ಯಕ್ಷರು ಯಾದಗಿರಿ ಅಫರ ಜಿಲ್ಲಾಧಿಕಾರಿಗಳಿಗೆ ಹಾಗೂ ವಡಗೇರಾ ತಹಶೀಲ್ದಾರ್ ಸಂತೋಷಿ ರಾಣಿ ಹಾಗೂ ವಡಗೇರಾ ಪಿ.ಎಸ್.ಐ.ಸಿದ್ದಾರಾಯ ಬೂಳರ್ಗಿ ಅವರಿಗೆ ಮನವಿ ಪತ್ರ ನೀಡುವ ಮುಖಾಂತರ ಪ್ರತಿಭಟನೆಯನ್ನು
ಮುಟುಕುಗೊಳಿಸಿದರು.

ಈ ಸಂದರ್ಭದಲ್ಲಿ ಶಿವಕುಮಾರ್ ಕೊಂಕಲ್ ತಾಲೂಕ್ ಅಧ್ಯಕ್ಷರು ವಡಗೇರಾ, ಅಬ್ದುಲ್ ಚಿಗನೂರ್ ಜಿಲ್ಲಾ ಉಪಾಧ್ಯಕ್ಷರು,ಚೌಡಯ್ಯ ಬಾವೂರ ಜಿಲ್ಲಾ ಗೌರವಾಧ್ಯಕ್ಷ, ಹನುಮಂತರಾಯ ತೇಕರಾಳ ಜಿಲ್ಲಾ ಸಂಚಾಲಕರು, ಮಲ್ಲು ಕಲ್ಮನಿ ಹಾಲಗೇರ ತಾ.ಯು.ಘ.ಅಧ್ಯಕ್ಷರು, ಬಸವರೆಡ್ಡಿ ಅಭಿಶಾಳ್ ತಾ.ಪ್ರ.ಕಾರ್ಯದರ್ಶಿ, ಶಿವರಾಜ್ ಗೋನಲ್ ವಲಯ ಅಧ್ಯಕ್ಷರು ವಡಗೇರಾ,ದೇವರಾಜ್ ಕುರುಕುಂದಿ ತಾ.ಯು.ಘ.ಪ್ರ.ಕಾರ್ಯದರ್ಶಿ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending