Connect with us

ದಿನದ ಸುದ್ದಿ

ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರೀಡಂ ಪಾರ್ಕಿನಲ್ಲಿ ಪಿಂಚಣಿ ವಂಚಿತ ನೌಕರರ ಪ್ರತಿಭಟನೆ

Published

on

ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎನ್ನುವ ಕೂಗು ಒಂದು ಕಡೆಯಾದರೆ ಅದೇ ಶಾಲೆಗಳಲ್ಲಿ ದುಡಿಯುತ್ತಿರುವ ಸುಮಾರು ನಾಲವತ್ತು ಸಾವಿರಕ್ಕೂ ಅಧಿಕ ಶಿಕ್ಷಕರು,ಹಾಗೂ ನೌಕರರಿಗೆ ನಿವೃತ್ತಿ ಜೀವನದ ನಂತರ ದೊರೆಯಬೇಕಾದ ಪಿಂಚಣಿ ಹಾಗೂ ಮತ್ತಿತರ ಪ್ರಮುಖ ಸೌಲಭ್ಯಗಳನ್ನು ನೀಡದೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇತ್ತೀಚೆಗಷ್ಟೇ ವೇತನಾನುದಾನಕ್ಕೊಳಪಟ್ಟಿರುವ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಅನುದಾನ ರಹಿತ ಅವಧಿಯಲ್ಲಿ ಅನೇಕ ವರ್ಷಗಳ ಕಾಲ ವೇತನವಿಲ್ಲದೆ ದುಡಿದ ಸೇವಾವಧಿಯನ್ನು ಪರಿಗಣಿಸಿ ವೇತನ ನಿಗದಿಗೊಳಿಸುವ ಸಲುವಾಗಿ ವಿಧಾನ ಪರಿಷತ್ತಿನ ಈಗಿನ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ಸಮೀತಿ ನೀಡಿರುವ ಕಾಲ್ಪನಿಕ ವೇತನ ವರದಿಯನ್ನು ಯಥಾವತ್ತಾಗಿ ಜಾರಿ ಹಾಗೂ ನಿಶ್ಚಿತ ಪಿಂಚಣಿ ಯೋಜನೆ ಜಾರಿಗಾಗಿ ಆಗ್ರಹಿಸಿ ನಗರದ ಪ್ರೀಡಂ ಪಾರ್ಕಿನಲ್ಲಿ ಅನುದಾನಿತ ಪಿಂಚಣಿ ವಂಚಿತ ನೌಕರರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿರಿಸಿದೆ.
ಆದರೆ ಸರಕಾರ ಮಾತ್ರ ಇವರ ಕೂಗನ್ನು ಕೇಳಿಯೂ ಕೇಳದಂತೆ ವರ್ತಿಸುತ್ತಿರುವದಕ್ಕೆ ಹೋರಾಟಗಾರರು ತೀವೃ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರತಿಭಟನೆಯ ನೇತೃತ್ವ ವಹಿಸಿರುವ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ.ಹನುಮಂತಪ್ಪ ಮಾತನಾಡಿ 1-4-2006 ನಂತರ ಅನುದಾನಕ್ಕೊಳ್ಪಟ್ಟು ವೇತನ ಪಡೆಯುತ್ತಿರುವ ಅನುದಾನಿತ ವಿದ್ಯಾ ಸಂಸ್ಥೆಗಳ ಸುಮಾರು ನಾಲವತ್ತು ಸಾವಿರಕ್ಕೂ ಹೆಚ್ಚು ನೌಕರರಿರಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ಜಾರಿಯಾಗಬೇಕು. ವೇತನಾನುದಾನಕ್ಕೊಳಪಟ್ಟು ಕೇವಲ ಬೆರಳೆಣಿಕೆಯಷ್ಟು ವರ್ಷ ಮಾತ್ರ ವೇತನ ಪಡೆದು ಈಗ ಕೊನೆ ತಿಂಗಳ ಸಂಬಳವನ್ನಷ್ಟೇ ಪಡೆದ ಸಾವಿರಾರು ನೌಕರರು ಬರಿಗೈಲಿ ನಿವೃತ್ತರಾಗಿದ್ದು ಅವರ ಸಂಧ್ಯಾಕಾಲದ ಆಸರಗೆ ಬಿಡಿಗಾಸು ಇಲ್ಲದೇ ಪರದಾಡುತ್ತಿದ್ದಾರೆ.ಅವರ ನಿವೃತ್ತಿ ಜೀವನ ನೆಮ್ಮದಿಯಾಗಿರಬೇಕೆಂದರೆ ಸರ್ಕಾರ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.
ನ್ಯಾಯಯುತವಾಗಿರುವ ನಮ್ಮ ಈ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಗುರುವಾರ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕವರೆಗೆ ರಾಜ್ಯದ ಸುಮಾರು 20000 ಸಾವಿರ ಅನುದಾನಿತ ಪಿಂಚಣಿ ವಂಚಿತ ನೌಕರರು ಬೃಹತ್ ರ್ಯಾಲಿ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದೇವೆ. ಆದರೂ ಸರ್ಕಾರ ನಮ್ಮನ್ನು ನಿರ್ಲಕ್ಷಿಸುತ್ತಿದೆ ಈ ಕಾರಣದಿಂದ ಈಗಾಗಲೇ ಸಾಕಷ್ಟು ಹೋರಾಟಗಳನ್ನು ಮಾಡಿ ರೋಸಿ ಹೋಗಿರುವ ನಾವು ಅ.15ರಿಂದ ಅನುದಾನಿತ ವಿದ್ಯಾ ಸಂಸ್ಥೆಗಳ ಸಾವಿರಾರು ಶಿಕ್ಷಕರು,ನೌಕರರು ಇದೇ ಪ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹದ ಮಾಡುವುದರ ಜತೆ ಹೋರಾಟವನ್ನು ತೀವೃಗೊಳಿಸಲು ತೀರ್ಮಾನಿಸಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಅನುದಾನಿತ ಪಿಂಚಣಿ ವಂಚಿತ ಸಂಘದ ಪಾದಾಧಿಕಾರಿಗಳು, ಪಿಂಚಣಿ ಹಾಗೂ ಕಾಲ್ಪನಿಕ ವೇತನ ವಂಚಿತ ಸಾವಿರಾರು ಶಿಕ್ಷಕರು,ನೌಕರರು ಪಾಲ್ಗೊಂಡಿದ್ದರು. ನೌಕರರ ಈ ಹೋರಾಟಕ್ಕೆ ರಾಜ್ಯದ ಎನ್‍ಪಿಎಸ್ ನೌಕರರ ಸಂಘಟನೆಯೂ ಸೇರಿದಂತೆ ನಾನಾ ಶಿಕ್ಷಕ,ಹಾಗೂ ನೌಕರರ ಸಂಘಟನೆಗಳು ಬೆಂಬಲ ಸೂಚಿಸಿವೆ.

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending