ದಿನದ ಸುದ್ದಿ
ಪಿ ಯು ಕಾಲೇಜು ಉಪನ್ಯಾಸಕರು ಕರ್ತವ್ಯಕ್ಕೆ ಹಾಜರಾಗಿ : ಶಿಕ್ಷಣ ಇಲಾಖೆ ಅದೇಶ
ಸುದ್ದಿದಿನ ದಾವಣಗೆರೆ: ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ಮತ್ತು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2020 ದಿನಾಂಕ 7.9. 2020 ರಿಂದ 16. 9. 2020 ರ ವರೆಗೆ ನಡೆಯಲಿರುವುದರಿಂದ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೋವಿಡ್ ಕಾರ್ಯದಲ್ಲಿ ನಿಯೋಜಿತಗೊಂಡಿರುವ ಸಿಬ್ಬಂದಿಗಳು ಹೊರತಾಗಿ, ಎಲ್ಲಾ ಸಿಬ್ಬಂದಿಗಳು ಇಂದಿನಿಂದ ಕಾಲೇಜಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.
ಎಸ್ ಎಸ್ ಎಲ್ ಸಿ ಫಲಿತಾಂಶ ಈಗಾಗಲೇ ಪ್ರಕಟಗೊಂಡಿರುವುದರಿಂದ ಪ್ರಥಮ ಪಿಯು ತರಗತಿಗಳನ್ನು ಪ್ರಾರಂಭಿಸುವುದಕ್ಕಿಂತ ಮುಂಚಿತವಾಗಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸಬೇಕಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಸುವ ಸಂಬಂಧ ಕಾಲೇಜುಗಳಲ್ಲಿ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿರುವುದರಿಂದ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುವುದನ್ನು ಮಾತ್ರ ಬಿಟ್ಟು, ಉಳಿದೆಲ್ಲಾ ದಾಖಲಾತಿಯನ್ನೊಳಗೊಂಡಂತೆ ಪೂರಕವಾದ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ದಿನಾಂಕ 13-08-2020ರಿಂದ ಕಾಲೇಜಿಗೆ ಹಾಜರಾಗಲು ಸೂಚಿಸಿದೆ.
ಕಾಲೇಜಿಗೆ ಹಾಜರಾಗುವ ಸಂದರ್ಭದಲ್ಲಿ ಕೋವಿಡ್-19ರ ಹಿನ್ನಲೆಯಲ್ಲಿ ಸಾಮಾಜಿಕ ಅಂತರವನ್ನೊಳಗೊಂಡಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆಯೂ ಅದೇಶಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243